Cinema Theater: ಆಹಾರ, ಪಾನೀಯದ ಜಿಎಸ್‌ಟಿ ಇಳಿಕೆ

ಶೇ. 18ರಿಂದ ಶೇ. 5ಕ್ಕೆ ತಗ್ಗಿಸಿ ಜಿಎಸ್‌ಟಿ ಮಂಡಳಿ ಘೋಷಣೆ

Team Udayavani, Jul 12, 2023, 8:25 AM IST

Cinema Theater: ಆಹಾರ, ಪಾನೀಯದ ಜಿಎಸ್‌ಟಿ ಇಳಿಕೆ

ಹೊಸದಿಲ್ಲಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ನೇತೃತ್ವದ ಜಿಎಸ್‌ಟಿ ಮಂಡಳಿಯ 50ನೇ ಸಭೆಯು ಚಿತ್ರಪ್ರೇಮಿಗಳಿಗೆ ಶುಭಸುದ್ದಿ ನೀಡಿದೆ. ಚಿತ್ರಮಂದಿರಗಳಲ್ಲಿ ಪೂರೈಸಲಾಗುವ ಆಹಾರ ಮತ್ತು ಪಾನೀಯಗಳ ಮೇಲಿನ ಜಿಎಸ್‌ಟಿ (ಸರಕು ಮತ್ತು ಸೇವಾ ತೆರಿಗೆ)ಯನ್ನು ಶೇ. 5ಕ್ಕೆ ಇಳಿಸಲು ಮಂಡಳಿ ನಿರ್ಧರಿಸಿದೆ.

ಈವರೆಗೆ ಇದಕ್ಕೆ ಶೇ. 18 ಜಿಎಸ್‌ಟಿ ವಿಧಿಸಲಾಗುತ್ತಿತ್ತು. ಇದಲ್ಲದೆ ತೆರಿಗೆ ಪದ್ಧತಿಯಲ್ಲಿ ಇನ್ನೂ ಕೆಲವು ಬದಲಾವಣೆಗಳನ್ನು ಮಂಗಳವಾರದ ಸಭೆಯಲ್ಲಿ ತರಲಾಗಿದೆ. ಫಿಶ್‌ ಸೊಲ್ಯೂಬಲ್‌ ಪೇಸ್ಟ್‌, ಎಲ್‌ಡಿ ಸ್ಲಾéಗ್‌ಗಳ ತೆರಿಗೆಯನ್ನು ಶೇ. 18ರಿಂದ ಶೇ. 5ಕ್ಕೆ ಇಳಿಸಲಾಗಿದೆ. ಆನ್‌ಲೈನ್‌ ಗೇಮಿಂಗ್‌ ಕಂಪೆನಿಗಳು, ಕುದುರೆ ರೇಸ್‌ ಮತ್ತು ಕ್ಯಾಸಿನೋಗಳ ವಹಿವಾಟಿನ ಮೇಲೆ ಶೇ. 28ರಷ್ಟು ತೆರಿಗೆ ವಿಧಿಸಲು ನಿರ್ಧರಿಸಲಾಗಿದೆ. ಇಷ್ಟು ತೆರಿಗೆ ವಿಧಿಸುವುದರಿಂದ ಇಡೀ ಉದ್ಯಮವೇ ನಾಶವಾಗಲಿದೆ ಎಂಬ ಗೇಮಿಂಗ್‌

ಉದ್ಯಮಗಳ ಕಳವಳಕ್ಕೆ ಪ್ರತಿಕ್ರಿಯಿಸಿರುವ ಸಚಿವೆ ನಿರ್ಮಲಾ, “ನಾವು ಯಾವ ಉದ್ಯಮವನ್ನೂ ನಾಶ ಮಾಡುತ್ತಿಲ್ಲ’ ಎಂದಿದ್ದಾರೆ.

ಕ್ಯಾನ್ಸರ್‌ ಮತ್ತು ಅಪರೂಪದ ಕಾಯಿಲೆಗಳಿಗೆ ಬಳಸುವ ಔಷಧಗಳಿಗೆ ಜಿಎಸ್‌ಟಿಯಿಂದ ವಿನಾಯಿತಿ ನೀಡಲಾಗಿದೆ. ಖಾಸಗಿ ಬಾಹ್ಯಾಕಾಶ ಕಂಪೆನಿಗಳು ನೀಡುವ ಉಪಗ್ರಹ ಸೇವೆಗಳಿಗೂ ತೆರಿಗೆ ವಿನಾಯಿತಿ ಒದಗಿಸಲಾಗಿದೆ.

ಇದೇ ವೇಳೆ, ಸೆಸ್‌ ಆಕರ್ಷಿಸುವ ನಿಟ್ಟಿನಲ್ಲಿ ಎಸ್‌ಯುವಿಗಳ ವ್ಯಾಖ್ಯಾನವನ್ನು ಬದಲಿಸಲಾಗಿದೆ. ಪ್ರಸ್ತುತ ಎಸ್‌ಯುವಿ ಎಂದು ಕರೆಸಿಕೊಳ್ಳಲು ನಾಲ್ಕು ಮಾನದಂಡಗಳಿದ್ದವು. ಆ ವಾಹನವು “ಎಸ್‌ಯುವಿ’ ಎಂದು ಕರೆಸಿಕೊಳ್ಳಬೇಕು, ನಾಲ್ಕು ಮೀ. ಅಥವಾ ಅದಕ್ಕಿಂತ ಹೆಚ್ಚು ಉದ್ದವಿರಬೇಕು, ಎಂಜಿನ್‌ ಸಾಮರ್ಥ್ಯ 1,500 ಸಿ.ಸಿ.ಗಿಂತ ಹೆಚ್ಚಿರಬೇಕು ಮತ್ತು ಗ್ರೌಂಡ್‌ ಕ್ಲಿಯರೆನ್ಸ್‌ ಕನಿಷ್ಠ 170 ಎಂ.ಎಂ. ಇರಬೇಕು. ಈ ವ್ಯಾಖ್ಯಾನವನ್ನು ಮಂಗಳವಾರದ ಸಭೆಯಲ್ಲಿ ಬದಲಾಯಿಸಲಾಗಿದ್ದು, ಇನ್ನು ಮುಂದೆ ಕೊನೆಯ 3 ಮಾನದಂಡಗಳಿದ್ದರೆ “ಎಸ್‌ಯುವಿ’ ಎಂದು ಪರಿಗಣಿಸಲಾಗುತ್ತದೆ.

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

1-tirupati-laddu

Tirupati ತಿರುಪತಿ ಲಡ್ದು ಪ್ರಸಾದದಲ್ಲಿ ಬೀಫ್ ಫ್ಯಾಟ್!:ಲ್ಯಾಬ್ ವರದಿಯಲ್ಲಿ ದೃಢ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

Haryana: Financial assistance to women, MSP promised; BJP manifesto released

Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್‌ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.