Vijay: ಅಭಿಮಾನಿಗಳ ಕಣ್ತಪ್ಪಿಸಲು ಹೋಗಿ ಟ್ರಾಫಿಕ್ ರೂಲ್ಸ್ ಬ್ರೇಕ್: ದಳಪತಿಗೆ ಬಿತ್ತು ದಂಡ
Team Udayavani, Jul 12, 2023, 10:19 AM IST
ಚೆನ್ನೈ: ʼಲಿಯೋʼ ಹಾಗೂ ರಾಜಕೀಯ ಪ್ರವೇಶದ ವಿಚಾರವಾಗಿ ನಟ ದಳಪತಿ ವಿಜಯ್ ಕಳೆದ ಕೆಲ ದಿನಗಳಿಂದ ಸೋಶಿಯಲ್ ಮೀಡಿಯಾದಲ್ಲಿ ಟೌಕ್ ಆಫ್ ದಿ ಟೌನ್ ಆಗಿದ್ದಾರೆ.
ದಳಪತಿ ವಿಜಯ್ ಸದ್ಯ ʼಲಿಯೋʼ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಸಿನಿಮಾ ಚಟುವಟಿಕೆಯ ಜೊತೆ ನಿಧಾನವಾಗಿ ಅವರು ಚುನಾವಣಾ ರಂಗಕ್ಕೂ ಎಂಟ್ರಿ ಆಗಲಿದ್ದಾರೆ ಎನ್ನುವ ವಿಚಾರ ದಿನ ಕಳೆದಂತೆ ಕಾವು ಪಡೆದುಕೊಳ್ಳುತ್ತಿದೆ. ಇತ್ತೀಚಿಗೆ ಇದರ ಅಂಗವಾಗಿಯೇ ಅವರು ವಿದ್ಯಾರ್ಥಿಗಳಿಗೆ ಪುಸ್ತಕಗಳನ್ನು ನೀಡುವ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು. ಇದು ಅವರ 2026 ರ ರಾಜಕೀಯ ಪ್ರವೇಶದ ವಿಚಾರಕ್ಕೆ ಮತ್ತಷ್ಟು ಪುಷ್ಟಿ ನೀಡಿತ್ತು.
ಇದನ್ನೂ ಓದಿ: ನಿತ್ಯ 15 ಗಂಟೆ ಗೇಮ್: ನಿದ್ದೆಯಲ್ಲೂ “ಫೈಯರ್ ಫೈಯರ್..” ಕಿರುಚಾಟ: ಹದಗೆಟ್ಟ ಬಾಲಕನ ಆರೋಗ್ಯ
ಮಂಗಳವಾರ ( ಜು.11 ರಂದು) ʼಮಾಸ್ಟರ್ʼ ನಟ ವಿಜಯ್ ʼವಿಜಯ್ ಮಕ್ಕಳ್ ಇಯಕ್ಕಂʼ ಕಾರ್ಯಕರ್ತರ ಜೊತೆ ಚುನಾವಣಾ ವಿಚಾರವಾಗಿ ಚರ್ಚಿಸಲು ಪನೈಯೂರ್ ತಲುಪಿದ್ದರು. ಸಭೆ ಮುಗಿಸಿ ಪನೈಯೂರ್ ನಿಂದ ನೀಲಂಗರೈಗೆ ವಾಪಾಸ್ ಆಗುವ ವೇಳೆ ನಟ ಸಂಚಾರ ನಿಯಮವನ್ನು ಉಲ್ಲಂಘಿಸಿದ್ದಾರೆ ಎನ್ನಲಾಗಿದೆ. ವಿಜಯ್ ವಾಪಾಸ್ ಆಗುವ ವೇಳೆ ಅವರ ಹಿಂದೆ ಅಭಿಮಾನಿಗಳ ದಂಡೇ ಬಂದಿದೆ. ಅವರಿಂದ ತಪ್ಪಿಸಿಕೊಳ್ಳಲು ವಿಜಯ್ ಅವರ ಸಲಹೆ ಮೇರೆಗೆ ಚಾಲಕ ಎರಡು ಕಡೆ ಸಿಗ್ನಲ್ ಜಂಪ್ ಮಾಡಿಕೊಂಡೇ ಬಂದಿದ್ದಾರೆ. ಈ ಕುರಿತ ವಿಡಿಯೋ ಹಾಗೂ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ನಟನ ಮೇಲೆ ಪೊಲೀಸರು ಟ್ರಾಫಿಕ್ ನಿಯಮ ಉಲ್ಲಂಘನೆ ಮಾಡಿದ್ದಕ್ಕಾಗಿ 500 ರೂ. ದಂಡ ಹಾಕಿದ್ದಾರೆ.
ಇತ್ತೀಚೆಗಷ್ಟೇ ವಿಜಯ್ ಲೋಕೇಶ್ ಕನಕರಾಜ್ ಅವರ ʼಲಿಯೋʼ ಸಿನಿಮಾದ ಚಿತ್ರೀಕರಣವನ್ನು ಮುಗಿಸಿದ್ದಾರೆ. ಎಲ್ಲವೂ ಅಂದುಕೊಂಡಂತೆ ಆದರೆ ʼಲಿಯೋʼ ಅಕ್ಟೋಬರ್ ವೇಳೆ ತೆರೆಗೆ ಬರಲಿದೆ. ಸಂಜಯ್ ದತ್ , ತ್ರಿಶಾ ಪ್ರಮುಖ ಪಾತ್ರಗಳಲ್ಲಿದ್ದು,ಮಿಸ್ಕಿನ್, ಗೌತಮ್ ಮೆನನ್, ಅನುರಾಗ್ ಕಶ್ಯಪ್, ಪ್ರಿಯಾ ಆನಂದ್, ಅರ್ಜುನ್ ಸರ್ಜಾ, ಮನ್ಸೂರ್ ಅಲಿ ಖಾನ್ ಮುಂತಾದ ಕಲಾವಿದರು ನಟಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Actor Govinda: ಕಾಲಿಗೆ ಗುಂಡು ತಗುಲಿ ಆಸ್ಪತ್ರೆಗೆ ದಾಖಲಾಗಿದ್ದ ನಟ ಗೋವಿಂದ ಡಿಸ್ಚಾರ್ಜ್
Border 2: ಸನ್ನಿ ಡಿಯೋಲ್ ʼಬಾರ್ಡರ್-2ʼಗೆ ʼಫೌಜಿʼಯಾಗಿ ಬಂದ ಸುನಿಲ್ ಶೆಟ್ಟಿ ಪುತ್ರ
Bollywood Actor Govinda: ಬಾಲಿವುಡ್ ನಟ ಗೋವಿಂದ ಕಾಲಿಗೆ ಆಕಸ್ಮಿಕವಾಗಿ ತಗುಲಿದ ಗುಂಡು
‘Emergency’ ದೃಶ್ಯ ಕಡಿತಕ್ಕೆ ಕಂಗನಾ ಸಮ್ಮತಿ: CBFC
Tusshar Kapoor: ʼಗೋಲ್ ಮಾಲ್ʼ ನಟ ತುಷಾರ್ ಕಪೂರ್ ಫೇಸ್ಬುಕ್ ಖಾತೆ ಹ್ಯಾಕ್
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
IFFI: ನವೆಂಬರ್ 20ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ
Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್ ಹಾದಿ ಹೀಗಿದೆ
Bengaluru: ಕೆಎಸ್ಆರ್ಟಿಸಿಯಿಂದ ದಸರಾಗೆ 2000 ಹೆಚ್ಚುವರಿ ಬಸ್ ಸಂಚಾರ
Women’s T20 World Cup: ಮತ್ತೆ ವಿವಾದಕ್ಕೆ ಸಿಲುಕಿದ ಕಾಮೆಂಟೇಟರ್ ಸಂಜಯ್ ಮಾಂಜ್ರೇಕರ್
Bengaluru: ಆನ್ಲೈನ್ನಲ್ಲೇ ಆಸ್ತಿ ಇ-ಖಾತಾ ಪಡೆಯಿರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.