ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಲೆಲ್ಲ ಹಿಂದೂ ಕಾರ್ಯಕರ್ತರ ಹತ್ಯೆಯಾಗುತ್ತದೆ: ಶ್ರೀರಾಮುಲು
Team Udayavani, Jul 12, 2023, 11:00 AM IST
ಮೈಸೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಕಾನೂನನ್ನು ಗಂಟು ಮೂಟೆ ಕಟ್ಟಿ ಬಿಸಾಕಲಾಗಿದೆ, ಯಾವತ್ತು ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬರುತ್ತದೆ ಅವತ್ತಿನಿಂದ ಹಿಂದೂ ಕಾರ್ಯಕರ್ತರ ಹತ್ಯೆಯಾಗುತ್ತದೆ ಎಂದು ಮಾಜಿ ಸಚಿವ ಶ್ರೀರಾಮುಲು ಆಡಳಿತ ಪಕ್ಷದ ವಿರುದ್ಧ ಗುಡುಗಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು ರಾಜ್ಯದ ಎಲ್ಲಾ ಕಡೆಗಳಲ್ಲೂ ಕೊಲೆ, ಹತ್ಯೆ, ದೌರ್ಜನ್ಯ ನಡೆಯುತ್ತಿವೆ. ಸಿಎಂ ಕ್ಷೇತ್ರದಲ್ಲೇ ಕಾನೂನು ಸುವ್ಯವಸ್ಥೆ ಹದೆಗಟ್ಟಿದೆ ಅಂದ ಮೇಲೆ ರಾಜ್ಯದ ಬೇರೆ ಭಾಗಗಳ ಪರಿಸ್ಥಿತಿ ಹೇಗಿರಬೇಡ ಯೋಚಿಸಿ ಎಂದು ಹೇಳಿದರು.
ರಾಜ್ಯದಲ್ಲಿ ಹಿಂದೂ ಕಾರ್ಯಕರ್ತರಿಗೆ, ಸ್ವಾಮೀಜಿಗಳಿಗೆ, ಹಿರಿಯ ನಾಗರೀಕರಿಗೆ ರಕ್ಷಣೆಯೇ ಇಲ್ಲದಂತಾಗಿದೆ. ಕಾಂಗ್ರೆಸ್ ಸರಕಾರ ಬಂದಾಗಲೆಲ್ಲ ರಾಜ್ಯದ ಒಳಗಿನ ಜಿಹಾದಿ ಮನಃಸ್ಥಿತಿ ಇರೋ ಜನ ಎದ್ದು ಕೂರುತ್ತಾರೆ. ಹೀಗಾಗಿ ಕೊಲೆಗಳು ನಡೆಯುತ್ತವೆ ಎಂದು ಗುಡುಗಿದರು.
ವೇಣುಗೋಪಾಲ ನಾಯಕ ಕೊಲೆ ಪೂರ್ವ ನಿಯೋಜಿತ. ಜಿಹಾದಿ ಮನಃಸ್ಥಿತಿ ಜನ ಪ್ಲಾನ್ ಮಾಡಿಕೊಂಡು ಹಿಂದೂಗಳ ಕೊಲೆ ಮಾಡುತ್ತಿದ್ದಾರೆ. ಕಾಂಗ್ರೆಸ್ ಸರಕಾರಕ್ಕೆ ಈ ವಿಚಾರದಲ್ಲಿ ಗಂಭೀರತೆ ಇಲ್ಲ. ಕಾಂಗ್ರೆಸ್ ನವರಿಗೆ ಅಧಿಕಾರದ ಅಹಂ ಜಾಸ್ತಿಯಾಗಿದೆ ಎಂದರು.
ಸುಳ್ಳಿನ ಗ್ಯಾರಂಟಿ ಮೂಲಕ ಅಧಿಕಾರಕ್ಕೆ ಬಂದವರು ವೈಯಕ್ತಿಕ ವರ್ಚಸ್ಸಿನಿಂದ ಬಂದ ರೀತಿ ಮಾತಾನಾಡುತ್ತಿದ್ದಾರೆ. ವೇಣುಗೋಪಾಲ ನಾಯಕ ಹತ್ಯೆ ನಂತರ ಅವರ ಕುಟುಂಬಕ್ಕೆ ಸ್ಪಂದಿಸುವ ಕೆಲಸವನ್ನು ಜಿಲ್ಲಾ ಮಂತ್ರಿ ಮಾಡಿಲ್ಲ. ಸಿಎಂ ಸೇರಿದಂತೆ ಎಲ್ಲರು ಕಣ್ಣು ಮುಚ್ಚಿ ಕುಳಿತಿದ್ದಾರೆ ಎಂದಿದ್ದಾರೆ.
ಹಿಂದೂ ಕಾರ್ಯಕರ್ತರ ಮೇಲೆ ಈ ರೀತಿ ಘಟನಾವಳಿಗಳು ಮೇಲಿಂದ ಮೇಲೆ ನಡೆಯುತ್ತವೆ. ಸ್ವಲ್ಪ ಜಾಗರೂಕರಾಗಿರಿ. ಶವದ ಮೇಲೆ ಬಿಜೆಪಿ ಯಾವತ್ತೂ ರಾಜಕೀಯ ಮಾಡಿಲ್ಲ. ಹಿಂದೂ ಸಂಘಟನೆಯ ಕಾರ್ಯಕರ್ತರ ಹತ್ಯೆಯಾದಾಗ ಅವರ ವಿರುದ್ದ ಧ್ವನಿ ಎತ್ತುವುದು ನಮ್ಮ ಜವಾಬ್ದಾರಿ. ಪೋಲಿಸ್ ತನಿಖೆಗೆ ಒತ್ತಡಗಳು ಉಂಟಾಗುವ ಅನುಮಾನ ನಮಗೆ ಇದೆ. ಸಿಬಿಐ ತನಿಖೆ ಮಾಡಿದರೆ ಸತ್ಯ ಹೊರಬರುತ್ತದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: Vijay: ಅಭಿಮಾನಿಗಳ ಕಣ್ತಪ್ಪಿಸಲು ಹೋಗಿ ಟ್ರಾಫಿಕ್ ರೂಲ್ಸ್ ಬ್ರೇಕ್: ದಳಪತಿಗೆ ಬಿತ್ತು ದಂಡ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi: ಕಸ್ತೂರಿ ರಂಗನ್ ವರದಿಯ ಸಮೀಕ್ಷೆಯೇ ಸಮರ್ಪಕವಾಗಿಲ್ಲ: ಶಾಸಕ ಭೀಮಣ್ಣ ನಾಯ್ಕ
Mudhol: ಸಭೆಗೆ ತಡವಾಗಿ ಬಂದ ಉಸ್ತುವಾರಿ ಸಚಿವರು… ಸಭೆ ಬಹಿಷ್ಕರಿಸಿದ ಬಿಜೆಪಿ ಸದಸ್ಯರು
Bellary; ಜನಾರ್ದನ ರೆಡ್ಡಿ ಬಳ್ಳಾರಿ ವನವಾಸ ಅಂತ್ಯ
Mandya: ಕೆಎಸ್ಆರ್ ಟಿಸಿ ಬಸ್- ಟೆಂಪೋ ಡಿಕ್ಕಿ; 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ
Chitradurga: ನಿಯಂತ್ರಣ ತಪ್ಪಿ KSRTC ಬಸ್ ಪಲ್ಟಿ… ವಿದ್ಯಾರ್ಥಿಗಳು ಸೇರಿ ಹಲವರಿಗೆ ಗಾಯ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Kerala Kannadigas: ಕೇರಳಿಗರಿಗೆ ಕನ್ನಡ ಕಲಿಸಲು ವಿಶೇಷ ತರಗತಿ
Pakistanಕ್ಕೆ ದೊಡ್ಡ ಮೊತ್ತದ ಆರ್ಥಿಕ ನೆರವು …ರಾಜನಾಥ್ ಸಿಂಗ್ ಭರ್ಜರಿ ಆಫರ್, ಆದರೆ…
Clown Festival: ಮಂಗಳೂರಿನಲ್ಲಿ ಅಕ್ಟೋಬರ್ 4ರಿಂದ ಅಂತರಾಷ್ಟ್ರೀಯ ವಿದೂಷಕ ಉತ್ಸವ
Arrested: ಜಲಮಂಡಳಿಯ ಸೆಂಟ್ರಿಂಗ್ ಸಾಮಗ್ರಿ ಕಳವು ಮಾಡುತ್ತಿದ್ದ ಇಬ್ಬರ ಬಂಧನ
Fraud: ಸರ್ಕಾರಿ ಕೆಲಸದ ಆಸೆ ತೋರಿಸಿ 28 ಲಕ್ಷ ವಂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.