Yatnal..,ನಿಮ್ಮನ್ನಂತೂ ವಿಪಕ್ಷ ನಾಯಕ ಮಾಡುವುದಿಲ್ಲ: ಮಾಹಿತಿ ಇದೆ ಎಂದ ಸಿದ್ದರಾಮಯ್ಯ!
''Adjustment'' ಮಾಡಿಕೊಂಡಿದ್ದೀರಿ...!, ಸಾಬೀತಾದರೆ ''ರಾಜಕೀಯ ನಿವೃತ್ತಿ'' ಸಿಎಂ ಸವಾಲು..!
Team Udayavani, Jul 12, 2023, 4:09 PM IST
ವಿಧಾನಸಭೆ : ಬುಧವಾರ ನಡೆದ ವಿಧಾನಸಭಾ ಕಲಾಪದಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನಡುವೆ ತೀವ್ರ ವಾಕ್ಸಮರ ನಡೆಯಿತು. ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ”ಯತ್ನಾಳ್ ಅವರೇ ನಿಮ್ಮನ್ನಂತೂ ಯಾವುದೇ ಕಾರಣಕ್ಕೂ ವಿಪಕ್ಷ ನಾಯಕ ಮಾಡುವುದಿಲ್ಲ” ಎಂದು ವ್ಯಂಗ್ಯವಾಡಿದ್ದಾರೆ.
ಯತ್ನಾಳ್ ಅವರು ಉಚಿತಗಳ ಕುರಿತಾಗಿ ಸರಕಾರದ ವಿರುದ್ಧ ನಿರಂತರ ವಾಗ್ದಾಳಿ ನಡೆಸುತ್ತಿದ್ದ ವೇಳೆ ಮಧ್ಯಪ್ರವೇಶಿಸಿ ಮಾತನಾಡಿದ ಸಿಎಂ, ಯತ್ನಾಳ್ , ಸ್ವಲ್ಪ ಸುಮ್ಮನ್ನಿರ್ರೀ.. ನೀವು ಸಂಸದೀಯ ಪಟ್ಟು ಅಂದುಕೊಂಡಿದ್ದೇನೆ ಮಧ್ಯ ಮಧ್ಯ ಎದ್ದು ನಿಂತು ಮಾತನಾಡಿದರೆ ಇನ್ನೂ ಉತ್ತಮ ಸಂಸದೀಯ ಪಟು ಅನ್ನಿಸಿಕೊಳ್ಳುವುದಿಲ್ಲ. ನನಗಿರುವ ಮಾಹಿತಿ ಪ್ರಕಾರ ನಿಮ್ಮನ್ನು ವಿಪಕ್ಷ ನಾಯಕ ಮಾಡುವುದಿಲ್ಲ ಎಂದರು.
ಈ ವೇಳೆ ಬಿಜೆಪಿ ಶಾಸಕರು, ಮುಖ್ಯಮಂತ್ರಿಗಳೇ ಯಾಕೆ ಪದೇ ಪದೇ ಕಿಂಡಲ್ ಮಾಡುತ್ತೀರಿ? ನೀವು ಈ ಹಿಂದೆ ಅಪ್ಪನಾಣೆ ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಆಗುವುದಿಲ್ಲ ಅಂದಿದ್ದಿರಿ. ಅವರು ಮುಖ್ಯಮಂತ್ರಿ ಆಗಲಿಲ್ಲವೇ ಎಂದರು.
ಆರಗ ಜ್ಞಾನೇಂದ್ರ ಮಾತನಾಡಲು ಮುಂದಾದಾಗ, ”ನೀವಂತು ಆಕಾಂಕ್ಷಿ ಅಲ್ಲ, ಅಶೋಕ್ ಹೆಸರೂ ಇದೆ , ಇಲ್ಲವೇ? ” ಎಂದು ಸಿಎಂ ಪ್ರಶ್ನಿಸಿದರು.
”ಯತ್ನಾಳ್, ಎಷ್ಟೇ ಎದ್ದು ನಿಂತರೂ, ಕೂಗಾಡಿದರೂ, ಕಿರುಚಾಡಿದರೂ ನಿಮ್ಮನ್ನು ವಿಪಕ್ಷ ನಾಯಕ ಮಾಡುವುದಿಲ್ಲ ಎನ್ನುವ ಮಾಹಿತಿ ನನಗಿದೆ” ಎಂದು ಸಿಎಂ ಹೇಳಿದರು. ಈ ವೇಳೆ ಪ್ರತಿಕ್ರಿಯಿಸಿದ ಯತ್ನಾಳ್, ”ನೀವು ಅಡ್ಜೆಸ್ಟ್ ಮೆಂಟ್ ರಾಜಕೀಯ ಮಾಡಿದ್ದೀರಿ” ಎಂದು ಕಾಲೆಳೆಯುವ ಪ್ರಯತ್ನ ಮಾಡಿದರು.
ಕೆರಳಿದ ಸಿಎಂ ಸಿಎಂ ಸಿದ್ದರಾಮಯ್ಯ, ‘ನನ್ನ ರಾಜಕೀಯ ಜೇವನದಲ್ಲಿ ಎಂದೂ ಅಡ್ಜೆಸ್ಟ್ ಮೆಂಟ್ ರಾಜಕೀಯ ಮಾಡಲಿಲ್ಲ. ನಾನು ವಿಪಕ್ಷದಲ್ಲಿರುವಾಗ ಇಲ್ಲಿ ಸಚಿವರಾದವರು ಕೆಲವರು ಇದ್ದಾರೆ, ಅವರ ಮನೆಗೆ ಹೋಗಿದ್ದೆನಾ ಕೇಳಿ, ನನ್ನ ರಾಜಕೀಯ ಜೀವನದಲ್ಲಿ ಹೊಂದಾಣಿಕೆ ರಾಜಕಾರಣ ಎನ್ನುವ ಪದವೇ ಇಲ್ಲ’ ಎಂದು ಕಿಡಿ ಕಾರಿದರು. ಇದಕ್ಕೆ ಉತ್ತರ ನೀಡಿದ ಬಿಜೆಪಿ ಸದಸ್ಯರು, ‘ಮನೆಗೆ ಹೋಗುವುದು ಬೇಡ ಫೋನ್ ನಲ್ಲಿ ಮಾತನಾಡಿದರೆ ಆಗುತ್ತದೆ’ ಎಂದರು.
ರಾಜಕೀಯ ನಿವೃತ್ತಿ
‘ಯತ್ನಾಳ್ ಅವರೇ ನೀವು ಎಷ್ಟು ಬಾರಿ ವಿಧಾನಸಭೆಗೆ ಬಂದಿದ್ದೀರಿ’ ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು. ಉತ್ತರಿಸಿದ ಯತ್ನಾಳ್, ‘ಎರಡು ಬಾರಿ ಲೋಕಸಭಾ ಸಂಸದ, ಎರಡು ಬಾರಿ ವಿಧಾನಸಭೆ ಮತ್ತು ಒಂದು ಬಾರಿ ವಿಧಾನ ಪರಿಷತ್ ಸದಸ್ಯನಾಗಿದ್ದೇನೆ’ಎಂದರು. ಆ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, ‘ನಾನು ವಿಧಾನಸಭೆಗೆ ೧೯೮೩ ರಲ್ಲಿ ಪ್ರವೇಶ ಮಾಡಿದ್ದೇನೆ, ಯಡಿಯೂರಪ್ಪ, ಆರ್.ವಿ.ದೇಶಪಾಂಡೆ, ಬಿ.ಆರ್.ಪಾಟೀಲ್ ಅವರೊಂದಿಗೆ ಬಂದಿದ್ದೆ. ಎಂದಾದರೂ ಹೊಂದಾಣಿಕೆ ರಾಜಕೀಯ ಮಾಡಿದ್ದೇನೆ ಅನ್ನುವುದು ಸಾಬೀತಾದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ’ ಎಂದು ಸವಾಲು ಹಾಕಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ
ತಿಮ್ಮಾಪುರ ಮಾತಿಗೆ ಯತ್ನಾಳ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ
Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ
Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ
Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.