Kundapura;ಮಲ ತಂದೆಯಿಂದ ಲೈಂಗಿಕ ದೌರ್ಜನ್ಯ; ಆರೋಪಿ ಬಂಧನ


Team Udayavani, Jul 13, 2023, 7:35 AM IST

crKundapura;ಮಲ ತಂದೆಯಿಂದ ಲೈಂಗಿಕ ದೌರ್ಜನ್ಯ; ಆರೋಪಿ ಬಂಧನ

ಕುಂದಾಪುರ: ಹೊರ ರಾಜ್ಯದ ಮಹಿಳೆಯನ್ನು ಪ್ರೀತಿಸಿ, ಮದುವೆಯಾಗಿ ಕುಂದಾಪುರ ನಗರ ಠಾಣಾ ವ್ಯಾಪ್ತಿಯಲ್ಲಿ ವಾಸವಿದ್ದ ವ್ಯಕ್ತಿಯೋರ್ವ ಮಹಿಳೆಯ ಅಪ್ರಾಪ್ತ ಮಗಳ ಮೇಲೆ ನಿರಂತರ ಲೈಂಗಿಕ ದೌರ್ಜನ್ಯವೆಸಗಿದ ಘಟನೆ ಬೆಳಕಿಗೆ ಬಂದಿದೆ.

ಈ ಬಗ್ಗೆ ದೂರು ದಾಖಲಾದ ಹಿನ್ನೆಲೆಯಲ್ಲಿ ತನಿಖೆ ಕೈಗೊಂಡ ಕುಂದಾಪುರ ವೃತ್ತ ನಿರೀಕ್ಷಕರ ನೇತೃತ್ವದ ಪೊಲೀಸರ ತಂಡ ಆರೋಪಿ ಸೊಹೇಲ್‌ ಎಂಬಾತನನ್ನು ಬಂಧಿಸಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಆರೋಪಿಗೆ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.

ಇಬ್ಬರು ಮಕ್ಕಳಿದ್ದ ಹೊರ ರಾಜ್ಯದ ಮಹಿಳೆಯೊಬ್ಬರು ಪತಿಯನ್ನು ತ್ಯಜಿಸಿದ್ದು, ಕೂಲಿ ಕೆಲಸ ಮಾಡಿಕೊಂಡಿದ್ದರು. ಕಳೆದ 11 ವರ್ಷಗಳ ಹಿಂದೆ ಬೈಂದೂರಿನ ನಿವಾಸಿಯೆಂದು ಪರಿಚಿತನಾದ ಸೊಹೇಲ್‌ ಆಕೆಯನ್ನು ಪ್ರೀತಿಸಿ, ಮದುವೆಯಾಗಿ ಕುಂದಾಪುರಕ್ಕೆ ಕರೆತಂದಿದ್ದ. ಬಳಿಕ ಮಹಿಳೆಯ ಮಗಳಿಗೆ ಸೊಹೇಲ್‌ ಲೈಂಗಿಕ ಕಿರುಕುಳ ನೀಡಲು ಆರಂಭಿಸಿದ್ದು, ಆಕೆ ಆತನಿಂದ ದೂರ ಹೋಗಿ ಬೇರೆಡೆ ಬಾಡಿಗೆ ಮನೆಯಲ್ಲಿ ತನ್ನ ಮಕ್ಕಳೊಂದಿಗೆ ವಾಸವಾಗಿದ್ದರು.

ಜೂ.10ರಂದು ಬಾಡಿಗೆ ಮನೆಯಲ್ಲಿದ್ದ ಆಕೆ ಹಾಗೂ ಅವಳ ಮಗಳನ್ನು ಕರೆದುಕೊಂಡು ಆತನ ಮನೆಗೆ ಕರೆದೊಯ್ದು ಇಬ್ಬರನ್ನು ಕೋಣೆಯಲ್ಲಿ ಕೂಡಿ ಹಾಕಿ, ಅಪ್ರಾಪ್ತ ಬಾಲಕಿಯಾದ ಮಲ ಮಗಳ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾನೆ. ಮಹಿಳೆಯು ತನ್ನ ಮಗಳನ್ನು ಆತನಿಂದ ಬಿಡಿಸಲು ಹೋದಾಗ ಆರೋಪಿ ಸೊಹೇಲ್‌ ಆಕೆ ಕುತ್ತಿಗೆಯನ್ನು ಒತ್ತಿ ಹೊಡಿದು ಅವಾಚ್ಯವಾಗಿ ನಿಂದಿಸಿ ಜೀವ ಬೆದರಿಕೆ ಹಾಕಿದ್ದ. ಬಳಿಕ ಮಹಿಳೆ ಆರೋಪಿ ಪತಿಯನ್ನು ದೂಡಿ ತನ್ನ ಮಗಳನ್ನು ಆತನಿಂದ ತಪ್ಪಿಸಿಕೊಂಡು ಬಂದಿದ್ದಳು.

ತಾಯಿ, ಮಗಳನ್ನು ಕೊಲ್ಲುವುದಾಗಿ ಬೆದರಿಸಿ ಆರೋಪಿ ಸೊಹೇಲ್‌ ಈ ಹಿಂದೆಯು ಮಲ ಮಗಳಿಗೆ ಲೈಂಗಿಕ ದೌರ್ಜನ್ಯವೆಸಗಿದ್ದ ಎಂದು ಸಂತ್ರಸ್ತ ಬಾಲಕಿ ವಿಚಾರಣೆ ವೇಳೆ ತಿಳಿಸಿದ್ದಾಳೆ.

ಕುಂದಾಪುರ ನಗರ ಠಾಣೆಯಲ್ಲಿ ಆರೋಪಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Maharashtra rains: ಉತ್ತರ ಕರ್ನಾಟಕದಲ್ಲಿ ನೆರೆ ಭೀತಿ

Maharashtra rains: ಉತ್ತರ ಕರ್ನಾಟಕದಲ್ಲಿ ನೆರೆ ಭೀತಿ

ASF

ASF; ಕೇರಳದಲ್ಲಿ ಹಂದಿ ಜ್ವರ ಉಲ್ಬಣ: 310 ಹಂದಿಗಳ ಹತ್ಯೆಗೈದ ಸರ್ಕಾರ!

Jammu-ಕಾಶ್ಮೀರದಲ್ಲಿ ಬಂದೂಕಲ್ಲ; ಬಾಡಿಕ್ಯಾಮ್‌ ಅಸ್ತ್ರ

Jammu-ಕಾಶ್ಮೀರದಲ್ಲಿ ಬಂದೂಕಲ್ಲ; ಬಾಡಿಕ್ಯಾಮ್‌ ಅಸ್ತ್ರ

1-frsasasas

Stag Beetle; ಆಡಿ ಕಾರಿಗಿಂತಲೂ ದುಬಾರಿ ಈ ಕೀಟ!

C-V-Anand

Governor ವಿರುದ್ಧ ಸುಳ್ಳು: ಕೋಲ್ಕತಾ ಕಮಿಷನರ್‌ ವಿರುದ್ಧ ಶಿಸ್ತು ಕ್ರಮ?

1-qwewewqe

Report; ನಿಧಾನವಾಗಿ ಹಿಮ್ಮುಖವಾಗಿ ತಿರುಗುತ್ತಿದೆ ಭೂ ತಿರುಳು!

Bantwal ತಾಲೂಕಿನಲ್ಲಿ 6 ತಿಂಗಳಲ್ಲಿ 35 ಮಂದಿಗೆ ಡೆಂಗ್ಯೂ

Bantwal ತಾಲೂಕಿನಲ್ಲಿ 6 ತಿಂಗಳಲ್ಲಿ 35 ಮಂದಿಗೆ ಡೆಂಗ್ಯೂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಆಗಸ್ಟ್‌ನಲ್ಲಿ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ

Augustನಲ್ಲಿ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ

Udupi ಜ್ಞಾನ, ಭಕ್ತಿಯ ಶರಣಾಗತಿಯಿಂದ ಶ್ರೇಯಸ್ಸು: ಚಿತ್ರಾಪುರ ಶ್ರೀ

Udupi ಜ್ಞಾನ, ಭಕ್ತಿಯ ಶರಣಾಗತಿಯಿಂದ ಶ್ರೇಯಸ್ಸು: ಚಿತ್ರಾಪುರ ಶ್ರೀ

Uchila ದಸರಾ ಉತ್ಸವಕ್ಕೆ ಇನ್ನಷ್ಟು ಮೆರುಗು

Uchila ದಸರಾ ಉತ್ಸವಕ್ಕೆ ಇನ್ನಷ್ಟು ಮೆರುಗು

Udupi ಅಪರಿಚಿತನಿಂದ ಮಹಿಳೆಗೆ ವಂಚನೆ

Udupi ಅಪರಿಚಿತನಿಂದ ಮಹಿಳೆಗೆ ವಂಚನೆ

Heavy Rain ಜನ್ನಾಡಿ: ಹೊಳೆಯಂತಾದ ಬಿದ್ಕಲ್‌ಕಟ್ಟೆ – ಹಾಲಾಡಿ ರಾಜ್ಯ ಹೆದ್ದಾರಿ !

Heavy Rain ಜನ್ನಾಡಿ: ಹೊಳೆಯಂತಾದ ಬಿದ್ಕಲ್‌ಕಟ್ಟೆ – ಹಾಲಾಡಿ ರಾಜ್ಯ ಹೆದ್ದಾರಿ !

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Maharashtra rains: ಉತ್ತರ ಕರ್ನಾಟಕದಲ್ಲಿ ನೆರೆ ಭೀತಿ

Maharashtra rains: ಉತ್ತರ ಕರ್ನಾಟಕದಲ್ಲಿ ನೆರೆ ಭೀತಿ

ASF

ASF; ಕೇರಳದಲ್ಲಿ ಹಂದಿ ಜ್ವರ ಉಲ್ಬಣ: 310 ಹಂದಿಗಳ ಹತ್ಯೆಗೈದ ಸರ್ಕಾರ!

Jammu-ಕಾಶ್ಮೀರದಲ್ಲಿ ಬಂದೂಕಲ್ಲ; ಬಾಡಿಕ್ಯಾಮ್‌ ಅಸ್ತ್ರ

Jammu-ಕಾಶ್ಮೀರದಲ್ಲಿ ಬಂದೂಕಲ್ಲ; ಬಾಡಿಕ್ಯಾಮ್‌ ಅಸ್ತ್ರ

1-frsasasas

Stag Beetle; ಆಡಿ ಕಾರಿಗಿಂತಲೂ ದುಬಾರಿ ಈ ಕೀಟ!

C-V-Anand

Governor ವಿರುದ್ಧ ಸುಳ್ಳು: ಕೋಲ್ಕತಾ ಕಮಿಷನರ್‌ ವಿರುದ್ಧ ಶಿಸ್ತು ಕ್ರಮ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.