ಮತ್ತೆ ಹೊಂದಾಣಿಕೆ ರಾಜಕಾರಣ ಸದ್ದು-ಆರೋಪ ಸಾಬೀತಾದ್ರೆ ರಾಜಕೀಯ ನಿವೃತ್ತಿ ಘೋಷಣೆ: CM ಸಿದ್ದು


Team Udayavani, Jul 13, 2023, 7:59 AM IST

SIDDA IMP

ಬೆಂಗಳೂರು: ಹೊಂದಾಣಿಕೆ ರಾಜಕೀಯದ ವಿಚಾರ ವಿಧಾನಸಭೆಯಲ್ಲೂ ಸದ್ದು ಮಾಡಿದ್ದು, ನನ್ನ ಸುದೀರ್ಘ‌ ರಾಜಕೀಯ ಜೀವನದಲ್ಲಿ ಯಾರೊಂದಿಗೂ ಹೊಂದಾಣಿಕೆ ರಾಜಕಾರಣ ಮಾಡಿಲ್ಲ. ಒಂದು ವೇಳೆ ಈ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ ಘೋಷಿಸುತ್ತೇನೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.
ವಿಪಕ್ಷ ನಾಯಕನ ಆಯ್ಕೆ ವಿಚಾರಕ್ಕೆ ಸಂಬಂಧಪಟ್ಟಂತೆ, ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಜತೆಗೆ ಜಟಾಪಟಿ ನಡೆಸುವ ಸಂದರ್ಭದಲ್ಲಿ ಸಿದ್ದರಾಮಯ್ಯ ಈ ಮಾತು ಹೇಳಿದ್ದಾರೆ.

ನಾನು ವಿಪಕ್ಷ ನಾಯಕನಾಗಬಾರದು ಎನ್ನುವ ರೀತಿಯಲ್ಲಿ ಸಿದ್ದರಾಮಯ್ಯ ಮಾತನಾಡಿದ್ದಾರೆ. ಹೀಗಾಗಿ ಅವರು ಯಾರಧ್ದೋ ಜತೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ ಎಂದೆನಿಸುತ್ತದೆ’ ಎಂದು ಯತ್ನಾಳ್‌ ಮಾತಿನಲ್ಲಿ ತಿವಿದಾಗ ಸಿಟ್ಟಿಗೆದ್ದ ಸಿದ್ದರಾಮಯ್ಯ, ನಾನು ವಿಪಕ್ಷದಲ್ಲಿ ಇದ್ದಾಗ ಯಾವುದೇ ಸಚಿವರ ಮನೆಗೆ ಹೋಗಿದ್ದಾಗಲಿ, ಹೊಂದಾಣಿಕೆ ಮಾಡಿಕೊಂಡಿದ್ದಾಗಲಿ ಸಾಬೀತು ಮಾಡಿದರೆ ರಾಜಕೀಯದಿಂದ ನಿವೃತ್ತಿ ಹೊಂದುತ್ತೇನೆ. ಈ ಸದನದಲ್ಲಿ 1983ರಿಂದ ಇದ್ದೇನೆ. ನನ್ನ ಜತೆ ಸದನಕ್ಕೆ ಬಂದವರಲ್ಲಿ ಬಿ.ಆರ್‌.ಪಾಟೀಲ್‌ ದೇಶಪಾಂಡೆ ಬಿಟ್ಟು ಬೇರೆ ಯಾರೂ ಇಲ್ಲ. ಅಂದಿನಿಂದ ಇಲ್ಲಿಯವರೆಗೆ ಎಂದಿಗೂ ಹೊಂದಾಣಿಕೆ ರಾಜಕಾರಣ ಮಾಡಿಲ್ಲ’ ಎಂದು ಸ್ಪಷ್ಟಪಡಿಸಿದರು.
ಈ ವೇಳೆ ಮಧ್ಯಪ್ರವೇಶಿಸಿದ ಕೆಲವು ಬಿಜೆಪಿ ಶಾಸಕರು, ವಿಪಕ್ಷದಲ್ಲಿದ್ದಾಗ ಅಭಿವೃದ್ಧಿ ವಿಷಯದ ಬಗ್ಗೆ ಮಾತನಾಡುವುದಕ್ಕೆ ಸಚಿವರ ಮನೆಗೆ ಹೋಗಬೇಕು ಎಂದಿಲ್ಲ. ಫೋನ್‌ ಮಾಡಿದರೂ ಸಾಕು ಎಂದು ಕಾಲೆಳೆದರು.

ನಾನೇ ವಿಪಕ್ಷ ನಾಯಕ
ಕಲಾಪ ಆರಂಭಗೊಂಡಾಗಿನಿಂದ ಚರ್ಚೆಗೆ ಬರುತ್ತಿರುವ ವಿಪಕ್ಷ ನಾಯಕನ ವಿಚಾರ ಬುಧವಾರವೂ ಪ್ರಸ್ತಾವವಾಯಿತು. ಪದೇಪದೆ ಎದ್ದು ನಿಂತು ಸರಕಾರವನ್ನು ಟೀಕಿಸುತ್ತಿದ್ದ ಯತ್ನಾಳ್‌ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಸಿದ್ದರಾಮಯ್ಯ, ನೀವು ಪದೇಪದೆ ಎದ್ದು ನಿಂತ ಮಾತ್ರಕ್ಕೆ ನಿಮ್ಮನ್ನು ವಿಪಕ್ಷ ನಾಯಕರನ್ನಾಗಿ ಮಾಡಲ್ಲ. ನನಗಿರೋ ಮಾಹಿತಿ ಪ್ರಕಾರ ಏನೇ ಆದರೂ ನೀವು ಆಗಲ್ಲ’ ಎಂದು ಟಾಂಗ್‌ ಕೊಟ್ಟರು.

ಇದಕ್ಕೆ ತಿರುಗೇಟು ನೀಡದ ಯತ್ನಾಳ್‌, ನೀವು ಏನಾದ್ರೂ ಅನ್ಕೊಳ್ಳಿ; ನಾನೇ 100 ಪರ್ಸೆಂಟ್‌ ವಿಪಕ್ಷ ನಾಯಕ’ ಎಂದು ಯತ್ನಾಳ್‌ ಹೇಳಿದರೆ ಅದಕ್ಕೆ ಪ್ರತಿಯಾಗಿ ಇಲ್ಲ.. ಇಲ್ಲ.. ನನಗೆ ಇರೋ ಪಕ್ಕಾ ಮಾಹಿತಿ ಪ್ರಕಾರ ನಿನ್ನನ್ನು ಮಾಡಲ್ವಂತೆ. ಸುಮ್ನೆ ಕೂತ್ಕೊ’ ಎಂದು ಸಿದ್ದರಾಮಯ್ಯ ಹೇಳಿದರು. ಆರಂಭದಲ್ಲಿ ನಾನು ವಿಪಕ್ಷ ನಾಯಕನ ಸ್ಥಾನದ ಮೇಲೆ ಕಣ್ಣಿಟ್ಟಿಲ್ಲ ಎಂದ ಯತ್ನಾಳ್‌, ಬಳಿಕ ನೀವು ಇಲ್ಲಿಯವರೆಗೆ ಹೇಳಿರುವ ಭವಿಷ್ಯವೆಲ್ಲ ಸುಳ್ಳಾಗಿದೆ. ನಾನು ವಿಪಕ್ಷ ನಾಯಕನಾಗಲ್ಲ ಎಂದು ನೀವು ಇಷ್ಟು ದೃಢವಾಗಿ ಹೇಳುತ್ತಿರುವುದು ನೋಡಿದರೆ ನಾನು ಆಗೋದು ಫಿಕ್ಸ್‌’ ಎಂದರು.

ಅಶೋಕ, ಅಶ್ವತ್ಥನಾರಾಯಣ ಆಕಾಂಕ್ಷಿಗಳು: ಮಾತು ಮುಂದುವರಿಸಿದ ಸಿದ್ದರಾಮಯ್ಯ ಅವರು, ನೀವು ಆಕಾಂಕ್ಷಿಯಿರಬಹುದು. ಆದರೆ ನಿಮ್ಮೊಂದಿಗೆ ಅಶ್ವತ್ಥನಾರಾಯಣ, ಅಶೋಕ ಅವರೆಲ್ಲ ಆಕಾಂಕ್ಷಿಗಳಿದ್ದಾರೆ ಎಂದು ಕೈತೋರಿಸಿದರು. ಇದಕ್ಕೆ ಅಶೋಕ್‌ ಹಾಗೂ ಅಶ್ವತ್ಥನಾರಾಯಣ ನಾವು ರೇಸ್‌ನಲ್ಲಿಲ್ಲ ಎಂದು ಸ್ಪಷ್ಟಪಡಿಸಿದರು. ಈ ವೇಳೆ ಆರಗ ಎದ್ದುನಿಂತು ಮಾತನಾಡಲು ನಿಂತಾಗ ನೀವೇನು ರೇಸ್‌ನಲ್ಲಿಲ್ಲ ಸುಮ್ನೆ ಕೂರಿ ಎಂದು ಸಿದ್ದರಾಮಯ್ಯ ಗದರಿದರು. ಆಗ ಬಿಜೆಪಿಯ ಹಲವು ಶಾಸಕರು, ಇಲ್ಲ.. ಇಲ್ಲ ನಿಮಗೆ ವಿಷಯ ಗೊತ್ತಿಲ್ಲ; ಆರಗ ಜ್ಞಾನೇಂದ್ರ ಅವರೂ ಈಗ ರೇಸ್‌ನಲ್ಲಿದ್ದಾರೆ ಎಂದರು.

ಭ್ರಷ್ಟಾಚಾರ ಯಾರದ್ದು?: ಕೈ-ಕಮಲ ಜಟಾಪಟಿ
ರಾಜ್ಯಪಾಲರ ವಂದನಾ ನಿರ್ಣಯದ ವೇಳೆ ಮಾಜಿ ಸಿಎಂ ಕುಮಾರಸ್ವಾಮಿ ಹೊತ್ತಿಸಿದ ಕಿಡಿ ಸ್ವಲ್ಪ ಹೊತ್ತು ವಿಧಾನಸಭೆಯಲ್ಲಿ ಕಾಂಗ್ರೆಸ್‌ ಮತ್ತು ಬಿಜೆಪಿ ಮಧ್ಯದ ಜಟಾಪಟಿಗೆ ಕಾರಣವಾಯಿತು. ಪತ್ರಿಕೆಗಳಲ್ಲಿ ಒಂದೂವರೆ ಲಕ್ಷ ಕೋಟಿ ರೂ.ಭ್ರಷ್ಟಾಚಾರವಾಗಿದೆ ಎಂದು ಕಾಂಗ್ರೆಸ್‌ನವರು ಜಾಹೀರಾತು ನೀಡಿದ್ದಾರೆ ಎಂದು ಕುಮಾರಸ್ವಾಮಿ ಪ್ರಸ್ತಾಪಿಸುತ್ತಿದ್ದಂತೆಯೇ ಕಾಂಗ್ರೆಸ್‌ನ ಪ್ರಿಯಾಂಕ ಖರ್ಗೆ ಮಧ್ಯ ಪ್ರವೇಶಿಸಿ, ನಾವು ನೀಡಿದ ಜಾಹೀರಾತು ನಿಜ. ಆದರೆ ಅದನ್ನು ಬಿಜೆಪಿಯ ಶಾಸಕರು ಮತ್ತು ಸಂಸದರೇ ನೀಡಿದ ಹೇಳಿಕೆ ಆಧರಿಸಿ ನೀಡಿದ್ದೇವೆ ಎಂದರು.

ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಬಿಜೆಪಿಯ ಡಾ| ಅಶ್ವತ್ಥ ನಾರಾಯಣ, ದಾಖಲೆ ಇಲ್ಲದೇ ಆರೋಪ ಮಾಡುವುದು ಸರಿಯಲ್ಲ. ಇದು ಕಾಂಗ್ರೆಸ್‌ನ ತಳಬುಡವಿಲ್ಲದ ಆರೋಪ ಎಂದರು.

ಟಾಪ್ ನ್ಯೂಸ್

1-satya

Maharashtra; ಬಿಜೆಪಿಯನ್ನು ಅಳಿಸಿ ಹಾಕುತ್ತೇವೆ: ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್

Bollywood: ಪಾಕ್‌ ನಟ ಫವಾದ್‌ ಜತೆ ರಿಧಿ ರೊಮ್ಯಾನ್ಸ್? 8 ವರ್ಷದ ಬಳಿಕ ಬಾಲಿವುಡ್‌ ಕಂಬ್ಯಾಕ್

Bollywood: ಪಾಕ್‌ ನಟ ಫವಾದ್‌ ಜತೆ ರಿಧಿ ರೊಮ್ಯಾನ್ಸ್? 8 ವರ್ಷದ ಬಳಿಕ ಬಾಲಿವುಡ್‌ ಕಂಬ್ಯಾಕ್

1-aap

Sisodia; ಯಾವ ರಾವಣನಿಂದಲೂ ರಾಮ-ಲಕ್ಷ್ಮಣರನ್ನು ಬೇರ್ಪಡಿಸಲು ಸಾಧ್ಯವಿಲ್ಲ

1-asdsad

Tirupati laddu ಅಪವಿತ್ರ: ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಜಗನ್ ರೆಡ್ಡಿ

Thirupathi-Laddu

Tirupati Laddu Row: ತಿರುಪತಿ ಶ್ರೀವಾರಿ ಲಡ್ಡು ಈಗ ಪರಿಶುದ್ಧ: ದೇವಸ್ಥಾನ ಸಮಿತಿ

1-siddu-aa

TB Dam; ಮೈತುಂಬಿಕೊಂಡ ತುಂಗಭದ್ರೆಗೆ ಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ

Parvati Nair: ಮನೆ ಕೆಲಸದವನ ಮೇಲೆ ಹಲ್ಲೆ ಆರೋಪ; ನಟಿ ಪಾರ್ವತಿ ನಾಯರ್‌ ವಿರುದ್ಧ ಕೇಸ್‌

Parvati Nair: ಮನೆ ಕೆಲಸದವನ ಮೇಲೆ ಹಲ್ಲೆ ಆರೋಪ; ನಟಿ ಪಾರ್ವತಿ ನಾಯರ್‌ ವಿರುದ್ಧ ಕೇಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-siddu-aa

TB Dam; ಮೈತುಂಬಿಕೊಂಡ ತುಂಗಭದ್ರೆಗೆ ಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ

ಟಿಟಿಡಿಯಿಂದ ನಂದಿನಿ ತುಪ್ಪಕ್ಕೆ ಮತ್ತೆ ಬೇಡಿಕೆ:‌ ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್

LadduCase; ಟಿಟಿಡಿಯಿಂದ ನಂದಿನಿ ತುಪ್ಪಕ್ಕೆ ಮತ್ತೆಬೇಡಿಕೆ:‌ ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್

Kadur: ಅಪ್ರಾಪ್ತ ವಯಸ್ಕ ಬಾಲಕಿಗೆ ಸಲೂನ್‌ ನಲ್ಲಿ ಲೈಂಗಿಕ ಕಿರುಕುಳ ಆರೋಪ

Kadur: ಅಪ್ರಾಪ್ತ ವಯಸ್ಕ ಬಾಲಕಿಗೆ ಸಲೂನ್‌ ನಲ್ಲಿ ಲೈಂಗಿಕ ಕಿರುಕುಳ ಆರೋಪ

ಹಿಂದೂ ಕಾರ್ಯಕ್ರಮಗಳಿಗೆ ಹಿಂದೂ ಕಾರ್ಯಕರ್ತರಿಂದ ಕತ್ತಿ ಹಿಡಿದು ಕಾವಲು: ಶ್ರೀರಾಮಸೇನೆ

ಹಿಂದೂ ಕಾರ್ಯಕ್ರಮಗಳಿಗೆ ಹಿಂದೂ ಕಾರ್ಯಕರ್ತರಿಂದಲೇ ಕತ್ತಿ ಹಿಡಿದು ಕಾವಲು: ಶ್ರೀರಾಮಸೇನೆ

11

KS Eshwarappa: ಸಿದ್ದರಾಮಯ್ಯ ರಾಜೀನಾಮೆ ಕೊಡುತ್ತಾರೋ,ಇಲ್ಲ ಜೈಲಿಗೆ ಹೋಗುತ್ತಾರೋ ಗೊತ್ತಿಲ್ಲ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-satya

Maharashtra; ಬಿಜೆಪಿಯನ್ನು ಅಳಿಸಿ ಹಾಕುತ್ತೇವೆ: ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್

DhruvaThare Movie Review: ಕಹಿ ಅನುಭವದಲ್ಲಿ ಸಿಹಿ ಹುಡುಕಿ ಹೊರಟವರು..

DhruvaThare Movie Review: ಕಹಿ ಅನುಭವದಲ್ಲಿ ಸಿಹಿ ಹುಡುಕಿ ಹೊರಟವರು..

Bollywood: ಪಾಕ್‌ ನಟ ಫವಾದ್‌ ಜತೆ ರಿಧಿ ರೊಮ್ಯಾನ್ಸ್? 8 ವರ್ಷದ ಬಳಿಕ ಬಾಲಿವುಡ್‌ ಕಂಬ್ಯಾಕ್

Bollywood: ಪಾಕ್‌ ನಟ ಫವಾದ್‌ ಜತೆ ರಿಧಿ ರೊಮ್ಯಾನ್ಸ್? 8 ವರ್ಷದ ಬಳಿಕ ಬಾಲಿವುಡ್‌ ಕಂಬ್ಯಾಕ್

1-aap

Sisodia; ಯಾವ ರಾವಣನಿಂದಲೂ ರಾಮ-ಲಕ್ಷ್ಮಣರನ್ನು ಬೇರ್ಪಡಿಸಲು ಸಾಧ್ಯವಿಲ್ಲ

12

Manipal: ಪಾರ್ಕಿಂಗ್‌ ತಾಣವಾಗುತ್ತಿರುವ ಬಸ್‌ ನಿಲ್ದಾಣಗಳು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.