ಮೂಡಿಗೆರೆ: ಶಾಲೆಯಲ್ಲಿ ಪಾಠ ಕೇಳಬೇಕಾದ ಮಕ್ಕಳು ಬಿಸಿಯೂಟಕ್ಕೆ ನೀರು ತರಲು ಹೋದರೆ?
ಶಾಲೆಗೆ ನೀರಿನ ಸಂಪರ್ಕ ಕಲ್ಪಿಸುವ ಪೈಪ್ ಲೈನ್ ದುರಸ್ತಿ
Team Udayavani, Jul 13, 2023, 1:23 PM IST
ಮೂಡಿಗೆರೆ: ಪ್ರೌಢ ಶಾಲೆಯ ಮಕ್ಕಳು ಶಾಲೆಯಲ್ಲಿ ಪಾಠ ಕೇಳುವುದು ಬಿಟ್ಟು ಬಿಸಿಯೂಟಕ್ಕೆ ನೀರು ಹೊರುತ್ತಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಗೌಡಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದಿದೆ. ಹಾಗಾದರೆ, ಶಾಲೆಯಲ್ಲಿ ಶಾಲಾ ಆಡಳಿತ ಮಂಡಳಿ ಇಲ್ವಾ ಎಂದು ಪ್ರಶ್ನಿಸಬೇಡಿ.
ಇದೆ. ಆದರೆ, ದೊಡ್ಡವರ ಹಗ್ಗಜಗ್ಗಾಟದಲ್ಲಿ ಮಕ್ಕಳು ಪಾಠ ಕೇಳೋದು ಬಿಟ್ಟು ನೀರು ತರುವಂತಾಗಿದೆ. ಶಾಲೆಯ ಮುಖ್ಯೋಪಾಧ್ಯರು ಕಳೆದೊಂದು ವಾರದಿಂದ ರಜೆ ಇದ್ದಾರೆ. ಶಾಲೆಗೆ ನೀರಿನ ಸಂಪರ್ಕ ಕಲ್ಪಿಸುವ ಪೈಪ್ ಲೈನ್ ಕೂಡ ಹಾಳಾಗಿದೆ. ಆದರೆ, ಪೈಪ್ ಲೈನ್ ಹಾಳಾಗಿದೆ ಎಂದು ಶಾಲೆಯವರು ಗ್ರಾಮ ಪಂಚಾಯಿತಿಗೆ ಹೇಳಿದ್ದಾರೋ… ಇಲ್ಲವೋ… ಗೊತ್ತಿಲ್ಲ. ಆದರೆ, ಈಗ ಒಬ್ಬರ ಮೇಲೋಬ್ಬರು ಗೂಬೆ ಕೂರಿಸಿತ್ತಾ ಮಕ್ಕಳ ಕೈಯಲ್ಲಿ ಬಿಸಿಯೂಟಕ್ಕೆ ನೀರು ಹೋರಿಸುತ್ತಿದ್ದಾರೆ. ಇತ್ತ ಪಂಚಾಯಿತಿಯವರು ಶಾಲೆಯವರು ನಮಗೆ ಈ ವಿಷಯವನ್ನೇ ಹೇಳಿಲ್ಲ ಅಂತಿದ್ದಾರೆ.
ಆದರೆ, ಶಾಲೆಯವರು ನಾವು ಪಂಚಾಯಿತಿಯವರಿಗೆ ಹೇಳಿದ್ದೇವೆ ಅವರು ರಿಪೇರಿ ಮಾಡಿಲ್ಲ ಎಂದು ಪಂಚಾಯಿತಿಯವರ ಮೇಲೆ ದೂರು ಹೇಳುತ್ತಿದ್ದಾರೆ. ಯಾರು ಯಾರಿಗೆ ಹೇಳಿದ್ದಾರೋ.. ಇಲ್ವೋ… ಆದರೆ, ಈಗ ಮಕ್ಕಳು ಪಾಠ ಕೇಳೋದು ಬಿಟ್ಟು ಶಾಲೆಯ ಬಿಸಿಯೂಟಕ್ಕೆ ನೀರು ಹೊರುತ್ತಿದ್ದಾರೆ. ನೀರು ಹೊತ್ತು ಸುಸ್ತಾದ ಮಕ್ಕಳೆ ಪೈಪ್ ಲೈನ್ ದುರಸ್ಥಿ ಮಾಡಲು ಮುಂದಾಗಿದ್ದಾರೆ. ಆದರೆ, ಸಾಧ್ಯವಾಗಿಲ್ಲ. ಹಾಗಾಗಿ, ಕೊನೆಗೆ ಅನಿವಾರ್ಯವಾಗಿ ಮಕ್ಕಳು ನೀರು ಹೊತ್ತಿದ್ದಾರೆ.
ಕಲಿಯಲೆಂದು ದೂರದಿಂದ ಬರುವ ಮಕ್ಕಳು ಕಲಿಕೆ ಬಿಟ್ಟು ನೀರು ತರುವುದು ವಿಪರ್ಯಾಸವೇ ಸರಿ ಇದಕ್ಕೆ ಸಂಬಂಧಪಟ್ಟವರೆ ಉತ್ತರಿಸಬೇಕಿದೆ.
ಇದನ್ನೂ ಓದಿ: ಕೃಷಿ ಕಾರ್ಯದಲ್ಲಿ ತೊಡಗಿದ್ದವರ ಮೇಲೆ ಹಲ್ಲೆ ಪ್ರಕರಣ; ತಾ.ಪಂ. ಮಾಜಿ ಅಧ್ಯಕ್ಷರ ವಿರುದ್ಧ ದೂರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shri Rama Sena;ನ. 4ರಿಂದ ದತ್ತಮಾಲಾ ಅಭಿಯಾನ
Black-mail; ಮಾಜಿ ಪ್ರಿಯಕರನ ಕೊ*ಲೆಗೆ ಪ್ರೇಯಸಿಗೆ ಸಾಥ್ ನೀಡಿದ ಹಾಲಿ ಪ್ರಿಯಕರ!
Cast Census: ಜಾತಿಗಣತಿ ವರದಿ ಕುರಿತು ಅ.18ರ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸುವೆವು: ಸಿಎಂ
Israel ಮಾದರಿಯಲ್ಲಿ ಹೊರ ಮತ್ತು ಆಂತರಿಕ ಶತ್ರುಗಳ ವಿರುದ್ಧ ಹೋರಾಡಬೇಕು : ಮುತಾಲಿಕ್
Davanagere: ಜಾತಿಗಣತಿಗೆ ವೀರಶೈವ ಲಿಂಗಾಯತ ಮಹಾಸಭಾದ ವಿರೋಧ: ಶಾಮನೂರು ಶಿವಶಂಕರಪ್ಪ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Heavy Rain: ಅನಿರೀಕ್ಷಿತ ಸಿಡಿಲು ಮಳೆಗೆ ದಂಗಾದ ಉಡುಪಿ
Shri Rama Sena;ನ. 4ರಿಂದ ದತ್ತಮಾಲಾ ಅಭಿಯಾನ
PDO Strikes: ಉಭಯ ಜಿಲ್ಲೆಗಳಲ್ಲಿ ಪಿಡಿಒ, ನೌಕರರಿಂದ ಅನಿರ್ದಿಷ್ಟಾವಧಿ ಮುಷ್ಕರ
Udupi: ʼಯಕ್ಷಗಾನ ಕಲಾವಿದನಾಗಿ ಪ್ರತಿಹಂತದಲ್ಲಿ ಕಲಿವ ಮನಸ್ಥಿತಿಯಲ್ಲಿ ಕಾರ್ಯನಿರ್ವಹಿಸಿದೆʼ
Udupi; ಗೀತಾರ್ಥ ಚಿಂತನೆ 58-ಒಳ್ಳೆಯ ಕೆಲಸ, ಕೆಟ್ಟ ಕೆಲಸ: ಸಜ್ಜನ, ದುರ್ಜನ ಲಕ್ಷಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.