ನಿರ್ವಹಣೆಯಿಲ್ಲದೆ ಪಾಳುಬಿದ್ದಿರುವ ಇ-ಶೌಚಾಲಯ!


Team Udayavani, Jul 13, 2023, 2:30 PM IST

ನಿರ್ವಹಣೆಯಿಲ್ಲದೆ ಪಾಳುಬಿದ್ದಿರುವ ಇ-ಶೌಚಾಲಯ!

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರನ್ನು ಶೌಚಮುಕ್ತ ನಗರವನ್ನಾಗಿಸುವ ಉದ್ದೇಶದಿಂದ ನಿರ್ಮಿಸಲಾಗಿದ್ದ ಹೈಟೆಕ್‌ ಇ-ಶೌಚಾಲಯಗಳಿಗೆ ಸಮರ್ಪಕ ನಿರ್ವಹಣೆಯಿಲ್ಲದೇ, ದುರ್ವಾಸನೆ ಬೀರುತ್ತಿವೆ.

ಹೌದು! ನಗರದಲ್ಲಿ ಎಲ್ಲೆಂದರಲ್ಲೇ ಮೂತ್ರವಿಸರ್ಜನೆ ಮಾಡುವುದನ್ನು ತಪ್ಪಿಸುವ ಉದ್ದೇಶದಿಂದ ಮಹಾನಗರ ಪಾಲಿಕೆಯು ನಗರಾದ್ಯಂತ ಒಟ್ಟು 100 ಸ್ಥಳಗಳಲ್ಲಿ ಮೊದಲು 169, ನಂತರದ ದಿನಗಳಲ್ಲಿ 74, ಸರಿಸುಮಾರು 241 ಇ-ಶೌಚಾಲಯಗಳನ್ನು ನಿರ್ಮಿಸಿದೆ. ಈ ಪೈಕಿ ಹೆಚ್ಚಿನವು ಬಳಕೆ ಆಗುತ್ತಿಲ್ಲ. ಕೆಲವು ತಾಂತ್ರಿಕ ಸಮಸ್ಯೆಯಿಂದ ಕೆಟ್ಟು ನಿಂತಿದ್ದು, ಇನ್ನೂ ಕೆಲವು ಅಸಮರ್ಪಕ ನಿರ್ವಹಣೆಯಿಂದ ಹಾಳಾಗಿ ಹೋಗಿವೆ.

ಕೋಟ್ಯಂತರ ರೂ.ಗಳ ವೆಚ್ಚದಲ್ಲಿ ನಿರ್ಮಿಸಿರುವ ಈ ಯೋಜನೆಗೆ ನಿರ್ವಹಣೆ ಮತ್ತು ವಿದ್ಯುತ್‌ ಕೊರತೆಯಿಂದಾಗಿ ಸಾರ್ವಜನಿಕರ ಬಳಕೆಗೆ ಸಾಧ್ಯವಾಗುತ್ತಿಲ್ಲ. ಇ-ಶೌಚಾಲಯಗಳ ಸ್ವಚ್ಛತೆ ಸೇರಿದಂತೆ ಸಂಪೂರ್ಣ ನಿರ್ವಹಣೆಗಾಗಿ ಈ ಹಿಂದೆ ನೀಡಿದ್ದ ಟೆಂಡರ್‌ನ ಕಾಲಾವಧಿ ಮುಕ್ತಾಯಗೊಂಡು ಐದಾರು ತಿಂಗಳು ಕಳೆದಿದೆ. ಬಿಬಿಎಂಪಿ ಟೆಂಡರ್‌ ಕರೆದಿದ್ದರೂ ಯಾರೂ ಈ ಟೆಂಡರ್‌ ತೆಗೆದುಕೊಳ್ಳಲು ಮುಂದಾಗುತ್ತಿಲ್ಲ. ಇದರ ಪರಿಣಾಮವಾಗಿ ನಗರದಲ್ಲಿನ ನೂರಾರು ಇ-ಟಾಯ್ಲೆಟ್‌ ಗಳಿಗೆ ನಿರ್ವಹಣೆಯ ಕೊರತೆಯಿಂದ ಬಳಕೆಗೆ ಬಾರದ ಸ್ಥಿತಿಯನ್ನು ತಲುಪಿವೆ.

ಸದ್ಯ, ಕೇವಲ 74 ಇ-ಶೌಚಾಲಯಗಳ ನಿರ್ವಹಣೆ ಮಾತ್ರ ಚಾಲ್ತಿಯಲ್ಲಿವೆ. ಕೆಲ ಇ-ಟಾಯ್ಲೆಟ್‌ಗಳಿಗೆ ಲಾಕ್‌ ವ್ಯವಸ್ಥೆ ಇಲ್ಲದೇ ಮುರಿದು ಬಿದ್ದಿರುವ ಬಾಗಿಲುಗಳು, ಸರಿಯಾದ ನೀರು, ವಿದ್ಯುತ್‌ ಸಂಪರ್ಕವಿಲ್ಲ. ಇನ್ನೂ ಕೆಲವೆಡೆ ಬೀಗ ಹಾಕಲಾಗಿದ್ದು, ಸುಸ್ಥಿತಿಯಲ್ಲಿರುವ ಶೌಚಾಲಯಗಳು ಗಬ್ಬು ನಾರುತ್ತಿವೆ. ಸಾರ್ವಜನಿಕರು ಮೊದಲು ಎರಡು ರೂ.ಗಳ ನಾಣ್ಯಗಳನ್ನು ಬಳಸಿ ಇ-ಶೌಚಾಲಯಗಳನ್ನು ಬಳಸಬೇಕಿತ್ತು. ಈ ಕಾರಣದಿಂದಾಗಿ ಬಹುತೇಕರು ಇ-ಶೌಚಾಲಯಗಳ ಬಳಕೆಯೇ ಮಾಡಿಲ್ಲ. ಈ ಅಸಮರ್ಪಕ ಬಳಕೆಯೂ ಅವು ಹಾಳಾಗಲು ಒಂದು ಕಾರಣವಾಗಿದೆ. ಆದ್ದರಿಂದಾಗಿ ಕೋಟ್ಯಂತರ ರೂ. ವೆಚ್ಚದಲ್ಲಿ ನಿರ್ಮಿಸಿರುವ ಇ-ಶೌಚಾಲಯಗಳನ್ನು ಸಾರ್ವಜನಿಕರು ಸಮರ್ಪಕ ಬಳಕೆ ಮಾಡುವ ಉದ್ದೇಶದಿಂದಾಗಿ ಉಚಿತ ಬಳಕೆಗೆ ಅವಕಾಶ ಮಾಡಿಕೊಡಲಾಯಿತು ಎನ್ನುತ್ತಾರೆ ಬಿಬಿಎಂಪಿ ಅಧಿಕಾರಿಗಳು.

SHE ಶೌಚಾಲಯ : ಕೆಲವು ಪ್ರದೇಶಗಳಲ್ಲಿ ಮಹಿಳೆಯರಿಗೆ ಮತ್ತು ಪುರುಷರಿಗೆ ಒಂದೇ ಇ-ಶೌಚಾಲಯ ಇರುವ ಕಾರಣ, ಮುಜುಗರದಿಂದ ಮಹಿಳೆಯರು ಆ ಶೌಚಾಲಯದ ಬಳಕೆಯನ್ನೇ ಮಾಡುವುದಿಲ್ಲ. ಆದ್ದರಿಂದಾಗಿ ಬಿಬಿಎಂಪಿ ಮಹಿಳೆಯರ ಬಳಕೆಗೆ ಮಾತ್ರ ನೂತನ ಯೋಜನೆ “ಶಿ ಶೌಚಾಲಯ’ ನಿರ್ಮಿಸಲು ಮುಂದಾಗಿದೆ. ಬಿಬಿಎಂಪಿ ವ್ಯಾಪ್ತಿಯಡಿ 100 “ಶಿ’ ಶೌಚಾಲಯಗಳನ್ನು ನಿರ್ಮಿಸಲು ಪ್ರಸ್ತಾವನೆ ಇಡಲಾಗಿದೆ.

ಇ-ಶೌಚಾಲಯಗಳ ನಿರ್ವಹಣೆಗೆಂದು ಟೆಂಡರ್‌ ಕರೆಯಲಾಗಿದೆ. ಆದರೆ, ಯಾರೂ ಟೆಂಡರ್‌ನಲ್ಲಿ ಭಾಗವಹಿಸಲು ಮುಂದೆ ಬಂದಿಲ್ಲ. ಇದರಿಂದಾಗಿ ಇ-ಶೌಚಾಲಯಗಳ ನಿರ್ವಹಣೆ ಇಲ್ಲದಂತಾಗಿದೆ. ಆದ್ದರಿಂದ ಶೀಘ್ರದಲ್ಲೇ ಮರುಟೆಂಡರ್‌ ಕರೆಯಲಾಗುತ್ತದೆ. ● ಪ್ರವೀಣ್‌ ಲಿಂಗಯ್ಯ, ಬಿಬಿಎಂಪಿ ಮುಖ್ಯ ಎಂಜಿನಿಯರ್‌

ವಿ.ವಿ. ಪುರಂ ವೃತ್ತದ ಬಳಿಯಿರುವ ಇ-ಟಾಯ್ಲೆಟ್‌ ಅನ್ನು ಹೆಚ್ಚಾಗಿ ಪುರುಷರೇ ಬಳಸುವುದರಿಂದಾಗಿ, ಮಹಿಳೆಯರು ಅದನ್ನು ಉಪಯೋಗಿಸಲು ಹಿಂಜರಿಯುತ್ತಾರೆ. ಅಲ್ಲದೇ, ಅಲ್ಲಿ ಸರಿಯಾದ ನಿರ್ವಹಣೆಯೂ ಇಲ್ಲವಾಗಿದ್ದು, ಸಮೀಪಿಸುತ್ತಿದ್ದೆಂತೆ ಕೆಟ್ಟವಾಸನೆ ಬರುತ್ತದೆ. ● ಜ್ಯೋತಿ, ಸ್ಥಳೀಯರು

ಭಾರತಿ ಸಜ್ಜನ್‌

ಟಾಪ್ ನ್ಯೂಸ್

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Nirashritha

Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ

1-horoscope

Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

6

Anekal: ಶಾಲಾ ಬಸ್‌ ಅಡ್ಡಗಟ್ಟಿ ಚಾಲಕನಿಗೆ ತೀವ್ರ ಹಲ್ಲೆ

Road rage case: ರೋಡ್‌ ರೇಜ್‌ ಕೇಸ್‌ ಬಗ್ಗೆ ದೂರು ನೀಡಿ; ಕಮಿಷನರ್‌

Road rage case: ರೋಡ್‌ ರೇಜ್‌ ಕೇಸ್‌ ಬಗ್ಗೆ ದೂರು ನೀಡಿ; ಕಮಿಷನರ್‌

Namma Metro: ಮೆಟ್ರೋ ಹಳಿ ಮೇಲೆ ಜಿಗಿದು ಆತ್ಮಹತ್ಯೆಗೆ ಯತ್ನ

Namma Metro: ಮೆಟ್ರೋ ಹಳಿ ಮೇಲೆ ಜಿಗಿದು ಆತ್ಮಹತ್ಯೆಗೆ ಯತ್ನ

Laptop theft: ಕೆಲಸಕ್ಕಿದ್ದ ಕಂಪನಿಯಲ್ಲೇ 55 ಲ್ಯಾಪ್‌ಟಾಪ್‌ ಕದ್ದ ಟೆಕಿ!

Laptop theft: ಕೆಲಸಕ್ಕಿದ್ದ ಕಂಪನಿಯಲ್ಲೇ 55 ಲ್ಯಾಪ್‌ಟಾಪ್‌ ಕದ್ದ ಟೆಕ್ಕಿ!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Nirashritha

Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ

1-horoscope

Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.