Masala dosa: ಮಸಾಲೆ ದೋಸೆಯೊಂದಿಗೆ ಸಾಂಬಾರ್‌ ನೀಡದ್ದಕ್ಕೆ ರೆಸ್ಟೋರೆಂಟ್‌ ಗೆ 3,500 ರೂ ದಂಡ


Team Udayavani, Jul 13, 2023, 4:41 PM IST

TDY-17

ಪಾಟ್ನಾ: ಮಸಾಲೆ ದೋಸೆ ಜತೆ ಸಾಂಬಾರ್‌ ನೀಡದ ಕಾರಣಕ್ಕೆ ರೆಸ್ಟೋರೆಂಟ್ ವೊಂದಕ್ಕೆ ಗ್ರಾಹಕ ನ್ಯಾಯಾಲಯ 3,500 ರೂ.ಯ ದಂಡವನ್ನು ವಿಧಿಸಿರುವ ಘಟನೆ ಬಿಹಾರದ ಬಕ್ಸರ್ ನಲ್ಲಿ ನಡೆದಿದೆ.

ಎಲ್ಲಾ ಹೊಟೇಲ್‌ ನಲ್ಲಿ ಸಾಮಾನ್ಯವಾಗಿ ದೋಸೆಯೊಟ್ಟಿಗೆ ಸಾಂಬಾರ್‌ ಹಾಗೂ ಚಟ್ನಿ ಕೊಡುತ್ತಾರೆ. ಆದರೆ ಇಲ್ಲೊಂದು ಹೊಟೇಲ್‌ ಮಸಾಲೆ ದೋಸೆಯೊಂದಿಗೆ ಸಾಂಬಾರ್‌ ನೀಡದ್ದಕ್ಕೆ ದಂಡವನ್ನು ಕಟ್ಟುವ ಪಜೀತಿಗೆ ಸಿಲುಕಿದೆ.

ಘಟನೆ ವಿವರ:  2022 ರ ಆಗಸ್ಟ್‌ 15 ರಂದು  ವಕೀಲ ಮನೀಶ್ ಗುಪ್ತಾ ಎನ್ನುವವರು ತನ್ನ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳಲು ಬಿಹಾರದ ಬಕ್ಸರ್ ನಲ್ಲಿರುವ ನಮಕ್ ರೆಸ್ಟೋರೆಂಟ್ ಗೆ ತೆರಳಿದ್ದಾರೆ. ಈ ವೇಳೆ 140 ರೂಪಾಯಿಯ ಸ್ಪೆಷಲ್‌ ಮಸಲಾ ದೋಸವನ್ನು ಆರ್ಡರ್‌ ಮಾಡಿದ್ದಾರೆ. ಸಾಮಾನ್ಯವಾಗಿ ಹೊಟೇಲ್‌ ನಲ್ಲಿ ಮಸಲಾ ದೋಸೆ ಜತೆ ಸಾಂಬರ್‌ ನೀಡುತ್ತಾರೆ. ಆದರೆ ತಾವು ಆರ್ಡರ್‌ ಮಾಡಿದ ಮಸಾಲೆ ದೋಸೆಯೊಟ್ಟಿಗೆ ಸಾಂಬಾರ್‌ ಇಲ್ಲದಿರುವುದನ್ನು ಮನೀಶ್‌ ಗಮನಿಸಿದ್ದಾರೆ.

ಇದನ್ನೂ ಓದಿ: ಆನ್ಲೈನ್‌ ಸಾಲದ ಕಿರುಕುಳಕ್ಕೆ ಸಿಲುಕಿದ ಕುಟುಂಬ: ಮಕ್ಕಳಿಗೆ ವಿಷವಿಕ್ಕಿ, ದಂಪತಿ ಆತ್ಮಹತ್ಯೆ

ಇದರ ಬಗ್ಗೆ ಪ್ರಶ್ನೆ ಮಾಡಲು ಮಾಲಕರ ಬಳಿ ತೆರಳಿದ್ದಾರೆ. ಈ ವೇಳೆ ರೆಸ್ಟೋರೆಂಟ್‌ ಮಾಲಕ ಸರಿಯಾಗಿ ಪ್ರತಿಕ್ರಿಯೆ ನೀಡದೆ. “”ನೀವು 140 ರೂ.ಗೆ ಇಡೀ ರೆಸ್ಟೋರೆಂಟ್ ಖರೀದಿಸಲು ಬಯಸಿದ್ದೀರಾ?”ಎಂದು ಉಡಾಫೆಯಾಗಿ ಉತ್ತರಿಸಿದ್ದಾರೆ.

ಇದಾದ ಬಳಿಕ ಮನೀಶ್ ರೆಸ್ಟೋರೆಂಟ್ ಗೆ ಲೀಗಲ್ ನೋಟಿಸ್ ಜಾರಿ ಮಾಡಿದ್ದಾರೆ. ಮಾಲೀಕರಿಂದ ಯಾವುದೇ ಪ್ರತಿಕ್ರಿಯೆ ಬಾರದೆ ಇದ್ದಾಗ ಜಿಲ್ಲಾ ಗ್ರಾಹಕ ಆಯೋಗಕ್ಕೆ ದೂರನ್ನೂ ನೀಡಿದ್ದಾರೆ.

11 ತಿಂಗಳ ಬಳಿಕ ಗ್ರಾಹಕ ಆಯೋಗದ ಅಧ್ಯಕ್ಷ ವೇದ್ ಪ್ರಕಾಶ್ ಸಿಂಗ್ ಮತ್ತು ಸದಸ್ಯ ವರುಣ್ ಕುಮಾರ್ ಅವರ ವಿಭಾಗೀಯ ಪೀಠವು ರೆಸ್ಟೋರೆಂಟ್ ನ್ನು ತಪ್ಪಿತಸ್ಥ ಎಂದು ಪರಿಗಣಿಸಿ, ರೂ 3,500 ದಂಡವನ್ನು ವಿಧಿಸಿದೆ.

ಸರಿಯಾದ ರೀತಿಯಲ್ಲಿ ರೆಸ್ಟೋರೆಂಟ್‌ ಅವರು ಪ್ರತಿಕ್ರಿಯೆ ನೀಡದೆ ಇರುವುದರಿಂದ ಅರ್ಜಿದಾರ ಮನೀಶ್ ಗುಪ್ತಾ ಅವರಿಗೆ “ಮಾನಸಿಕ, ದೈಹಿಕ ಮತ್ತು ಆರ್ಥಿಕ” ನೋವು ಉಂಟಾಗಿದೆ. ರೂ 1,500 ವ್ಯಾಜ್ಯ ವೆಚ್ಚ ಮತ್ತು ರೂ 2,000 ಮೂಲ ದಂಡ ಎಂಬುದಾಗಿ ದಂಡವನ್ನು ಎರಡು ಭಾಗಗಳಲ್ಲಿ ವಿಧಿಸಲಾಗಿದೆ.

ದಂಡವನ್ನುನಿಗದಿತ ಸಮಯದಲ್ಲಿ ಪಾವತಿ ಮಾಡದಿದ್ದರೆ, ದಂಡದ ಮೊತ್ತಕ್ಕೆ ರೆಸ್ಟೋರೆಂಟ್‌ನಿಂದ ಶೇಕಡಾ 8 ರಷ್ಟು ಬಡ್ಡಿಯನ್ನು ಸಹ ಪಾವತಿಸಬೇಕಾಗುತ್ತದೆ ಎಂದು ನ್ಯಾಯಾಲಯ ಹೇಳಿದೆ.

 

ಟಾಪ್ ನ್ಯೂಸ್

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

NANGI-KADALKORETA

Nangi: ತೀವ್ರಗೊಂಡ ಕಡಲ್ಕೊರೆತ… ಬೀಚ್‌ ವ್ಯೂ ರೆಸಾರ್ಟ್‌ ಸಮುದ್ರ ಪಾಲಾಗುವ ಸಾಧ್ಯತೆ

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election: ಅಯೋಧ್ಯೇಲಿ ಸ್ಪರ್ಧಿಸಿದ್ರೆ ಮೋದಿ ಸೋಲು ಎಂದಿತ್ತು ಸಮೀಕ್ಷೆ: ರಾಗಾ

Election: ಅಯೋಧ್ಯೇಲಿ ಸ್ಪರ್ಧಿಸಿದ್ರೆ ಮೋದಿ ಸೋಲು ಎಂದಿತ್ತು ಸಮೀಕ್ಷೆ: ರಾಗಾ

Satyendar Jain: 7 ಕೋಟಿ ರೂ. ಲಂಚ ಆರೋಪ: ಆಪ್‌ ನಾಯಕ ಸತ್ಯೇಂದ್ರ ಜೈನ್‌ ವಿರುದ್ಧ ತನಿಖೆ

Satyendar Jain: 7 ಕೋಟಿ ರೂ. ಲಂಚ ಆರೋಪ: ಆಪ್‌ ನಾಯಕ ಸತ್ಯೇಂದ್ರ ಜೈನ್‌ ವಿರುದ್ಧ ತನಿಖೆ

Hathras Stampede: ಭೋಲೆ ಬಾಬಾ ವಿರುದ್ಧ ಮೊದಲ ಕೇಸು ದಾಖಲು…

Hathras Stampede: ಭೋಲೆ ಬಾಬಾ ವಿರುದ್ಧ ಮೊದಲ ಕೇಸು ದಾಖಲು…

Kuno National Park: ಕುನೋದಲ್ಲಿ ಮಳೆ ವೇಳೆ ಚೀತಾ ಮರಿಗಳ ಆಟದ ವಿಡಿಯೋ ವೈರಲ್‌

Kuno National Park: ಕುನೋದಲ್ಲಿ ಮಳೆ ವೇಳೆ ಚೀತಾ ಮರಿಗಳ ಆಟದ ವಿಡಿಯೋ ವೈರಲ್‌

army

Kulgam; ಭೀಕರ ಗುಂಡಿನ ಕಾಳಗದಲ್ಲಿ ನಾಲ್ವರು ಉಗ್ರರ ಹತ್ಯೆ: ಯೋಧ ಹುತಾತ್ಮ

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.