CBI ಕ್ರಮಕ್ಕೆ ಹೈಕೋರ್ಟ್ ಗರಂ
Team Udayavani, Jul 14, 2023, 6:10 AM IST
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಅಕ್ರಮ ಆಸ್ತಿಗಳ ಮಾಹಿತಿಗಳನ್ನು ತೆರೆದ ಕೋರ್ಟ್ನಲ್ಲಿ ಬಹಿರಂಗಪಡಿಸಲು ಮುಂದಾದ ಸಿಬಿಐ ಕ್ರಮಕ್ಕೆ ಹೈಕೋರ್ಟ್ ಗರಂ ಆದ ಪ್ರಸಂಗ ನಡೆಯಿತು.
ಆದಾಯಕ್ಕೂ ಹೆಚ್ಚು ಆಸ್ತಿ ಗಳಿಸಿದ ಆರೋಪಕ್ಕೆ ಸಂಬಂಧಿಸಿದ ಎಫ್ಐಆರ್ ರದ್ದುಪಡಿಸುವಂತೆ ಡಿಕೆಶಿ ಸಲ್ಲಿಸಿದ್ದ ಅರ್ಜಿ ನ್ಯಾ.ಕೆ.ನಟರಾಜನ್ ಅವರ ಏಕಸದಸ್ಯಪೀಠ ವಿಚಾರಣೆ ನಡೆಸುವ ಸಂದರ್ಭದಲ್ಲಿ ಸಿಬಿಐ ತೀವ್ರ ಮುಜುಗರಕ್ಕೆ ಒಳಗಾಗಬೇಕಾಯಿತು.
ವಿಚಾರಣೆ ವೇಳೆ ಹಾಜರಾಗಿದ್ದ ಸಿಬಿಐ ವಕೀಲ ಪ್ರಸನ್ನ ಕುಮಾರ್ ಅವರು ಡಿಕೆಶಿ ಎಷ್ಟೆಷ್ಟು ಆಸ್ತಿ ಸಂಪಾದಿಸಿದ್ದಾರೆ ಎಂಬುದರ ಬಗ್ಗೆ ಕೋರ್ಟ್ನಲ್ಲಿ ಮಾಹಿತಿ ನೀಡಲು ಮುಂದಾದರು. ಅದರೆ, ನ್ಯಾ. ನಟರಾಜನ್ ಅವರು ಈ ಬಗ್ಗೆ ಮುಚ್ಚಿದ ಲಕೋಟೆಯಲ್ಲಿ ಕೋರ್ಟ್ಗೆ ಮಾಹಿತಿ ನೀಡಿರುವಾಗ ಇದು ರಹಸ್ಯ ಅಲ್ಲವೇ ಎಂದು ಪ್ರಶ್ನಿಸಿದರು.
ಆ ಬಳಿಕ ದಾಖಲೆ ಪರಿಶಿಲನೆ ಹೊರತಾಗಿ 596 ದಾಖಲೆ ಸಂಗ್ರಹ ಮಾಡಿದ್ದೇವೆ. 84 ಜನ ಸಾಕ್ಷಿಗಳ ವಿಚಾರಣೆ ನಡೆಸಲಾಗಿದೆ ಎಂದು ವಿವರಿಸಿದರು. 2013 ರಿಂದ 2018ರ ಅವಧಿಯಲ್ಲಿ ನಿಗದಿತ ಆದಾಯಕ್ಕಿಂತ ಡಿಕೆಶಿ ಹೆಚ್ಚಿನ ಆದಾಯ ಸಂಪಾದಿಸಿದ್ದಾರೆ ಎಂದು ಆರೋಪಿಸಿ ಸಿಬಿಐ 2020 ರಲ್ಲಿ ಪ್ರಕರಣ ದಾಖಲಿಸಿಕೊಂಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ
PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ
Chaluvaraj ಕುಟುಂಬಕ್ಕೆ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
Talk Fight: ಯಾರು ಏನೇ ಅಂದ್ರೂ ಬಿಜೆಪಿ ಕಾರ್ಯಕರ್ತರು ನನ್ನ ಒಪ್ಪಿದ್ದಾರೆ: ವಿಜಯೇಂದ್ರ
Munirathna:ಒಕ್ಕಲಿಗ ಹೆಣ್ಣುಮಕ್ಕಳ ಬಗ್ಗೆ ಹೇಳಿಕೆ; ಸಮುದಾಯದ ಸಚಿವ, ಶಾಸಕರಿಂದ ಸಿಎಂಗೆ ಮನವಿ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.