ಮಣಿಪುರ: ಮನೆಯೊಳಗೆ ಅಕ್ರಮ ಪ್ರವೇಶಿಸಿ ದಾಂಧಲೆ; ದೂರು
Team Udayavani, Jul 15, 2023, 6:50 AM IST
ಕಾಪು: ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಯೊಳಗೆ ಪ್ರವೇಶಿಸಿದ ತಂಡವೊಂದು ಸಾಮಗ್ರಿಗಳನ್ನು ಪುಡಿಗೈದಿರುವ ಘಟನೆ ಕಾಪು ತಾಲೂಕಿನ ಮಣಿಪುರದಲ್ಲಿ ಜು. 13ರಂದು ನಡೆದಿದೆ.
ಮಣಿಪುರದ ರಂಜಿತ್ ಕುಮಾರ್ ಶೆಟ್ಟಿ ಅವರು ತಮಗೆ ಸೇರಿದ ಮಣಿಪುರ ಗ್ರಾಮದ ಸ್ಥಿರಾಸ್ಥಿಯಲ್ಲಿ ಆದಮ್ ಕ್ಲಿಫಾಮ್ ಎಂಬವರಿಗೆ 2012ರಲ್ಲಿ ವಾಸ್ತವ್ಯವಿರಲು ಲೀಸ್ ಡೀಡ್ ಮೂಲಕ ಜೀವನ ಪರ್ಯಂತ ಮಾತ್ರ ಇರಲು ಕರಾರು ಮಾಡಿಕೊಂಡಿದ್ದರು.
ಆದಮ್ ಕ್ಲಿಫಾಮ್ ಅವರು ಕೆಲವು ಸಮಯದ ಹಿಂದೆ ಮೃತಪಟ್ಟಿದ್ದು ಜು. 12ರಂದು ಈ ಮನೆಗೆ ಅಕ್ರಮವಾಗಿ ಪ್ರವೇಶಿಸಿದ ಮಂಗಳೂರಿನ ನವೀನ್, ಮಣಿಪುರದ ಪ್ರೀಧಾ ಲವೀನಾ ಮೊಂಥೆರೋ ಹಾಗೂ ಇತರ 3 ಜನರು ಮನೆಯ ಬಾಗಿಲನ್ನು ಒಡೆದು, ಅಲ್ಲಿದ್ದ ರಂಜಿತ್ ಅವರನ್ನು ದೂಡಿ ಅವಾಚ್ಯ ಶಬ್ದಗಳಿಂದ ಬೈದು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದರು. ಈ ವೇಳೆ ಅವರು ಜೋರಾಗಿ ಬೊಬ್ಬೆ ಹಾಕಿದ್ದು ಮನೆಯ ಎದುರಿನ ರಸ್ತೆಯಲ್ಲಿ ಹೋಗುತ್ತಿದ್ದ ವ್ಯಕ್ತಿಗಳು ಮನೆಯ ಬಳಿ ಬಂದಿದ್ದನ್ನು ನೋಡಿ ಕಾರಿನಲ್ಲಿ ಪರಾರಿಯಾಗಿದ್ದರು.
ಎರಡನೇ ಬಾರಿ ದಾಳಿ
ರಂಜಿತ್ ಕುಮಾರ್ ಶೆಟ್ಟಿ ಅವರು ಜು. 13ರಂದು ವೈಯಕ್ತಿಕ ಕೆಲಸದ ನಿಮಿತ್ತ ಹೊರಗೆ ಹೋಗಿದ್ದು ವಾಪಸು ಮನೆಗೆ ಬಂದು ನೋಡಿದಾಗ ಮನೆಯ ಗೇಟಿನ ಬೀಗವನ್ನು ಒಡೆದು, ಮನೆಯ ಮುಂದಿನ ಮತ್ತು ಹಿಂದಿನ ಬಾಗಿಲಿನ ಬೀಗವನ್ನು ಒಡೆದಿರುವುದು ಕಂಡುಬಂದಿತ್ತು.
ಮಂಗಳೂರಿನ ನವೀನ್, ಮಣಿಪುರದ ಪ್ರೀಧಾ ಲವೀನಾ ಮೊಂಥೆರೋ ಹಾಗೂ 3 ಮಂದಿಯೇ ಈ ಕೃತ್ಯ ನಡೆಸಿರುವ ಬಗ್ಗೆ ಅನುಮಾನವಿದೆ ಎಂದು ಕಾಪು ಪೊಲೀಸ್ ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ISPRL Programme: ಪಾದೂರು ಜಲ್ಲಿ ಕ್ರಷರ್: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ
MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ
Konkani Movie: “ತರ್ಪಣ’ ಚಲನಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ
Chaturmasya: ವಿಶ್ವಕರ್ಮ ಮ್ಯೂಸಿಯಂ ಸ್ಥಾಪನೆ ಗುರಿ: ಶ್ರೀ ಕಾಳಹಸ್ತೇಂದ್ರ ಸ್ವಾಮೀಜಿ
Child safety: ಮಕ್ಕಳ ರಕ್ಷಣ ಕಾಯ್ದೆಗಳ ಪರಿಣಾಮಕಾರಿ ಅನುಷ್ಠಾನ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.