Karnataka: ಹಾಲಿನ ಪ್ರೋತ್ಸಾಹ ಧನ ಬಾಕಿ: ಸಚಿವ ಕೆ.ವೆಂಕಟೇಶ್ ಒಪ್ಪಿಗೆ
Team Udayavani, Jul 15, 2023, 7:50 AM IST
ಬೆಂಗಳೂರು: ಹಾಲಿನ ದರ ಹೆಚ್ಚಳಕ್ಕೆ ಆತುರ ತೋರುತ್ತಿರುವ ಸರಕಾರ, ರೈತರಿಗೆ ನೀಡಬೇಕಾದ ಹಾಲಿನ ಪ್ರೋತ್ಸಾಹ ಧನಕ್ಕೆ ಅನುದಾನ ಬಿಡುಗಡೆ ಮಾಡಲು ಹಿಂದು ಮುಂದು ನೋಡುತ್ತಿದೆ.
ಮಾಲೂರು ಶಾಸಕ ಕೆ.ವೈ. ನಂಜೇಗೌಡ ಅವರ ಪ್ರಶ್ನೆಗೆ ಲಿಖಿತ ಉತ್ತರ ನೀಡಿರುವ ಪಶುಸಂಗೋಪನೆ ಸಚಿವ ಕೆ.ವೆಂಕಟೇಶ್ ಅವರು ಈ ಸತ್ಯವನ್ನು ಒಪ್ಪಿಕೊಂಡಿದ್ದು, ಮಾರ್ಚ್ ತಿಂಗಳ ಪ್ರೋತ್ಸಾಹ ಧನ ಇದುವರೆಗೆ ಬಿಡುಗಡೆ ಆಗಿಲ್ಲ. ಆಗಸ್ಟ್ ತಿಂಗಳಲ್ಲಿ ಎರಡನೇ ಕಂತಿನ ಅನುದಾನ ಬಿಡುಗಡೆಯಾದ ಬಳಿಕ ಮಾರ್ಚ್ ತಿಂಗಳ ಪ್ರೋತ್ಸಾಹಧನ ಕೊಡುವುದಾಗಿ ಹೇಳಿದ್ದಾರೆ.
ರಾಜ್ಯದ 15,515 ಹಾಲು ಉತ್ಪಾದಕರ ಸಂಘಗಳಿಂದ ಪ್ರತಿ ತಿಂಗಳ 30ನೇ ತಾರೀಕಿನವರೆಗೆ ಪೂರೈಕೆಯಾದ ಹಾಲಿನ ಪ್ರಮಾಣ ಮತ್ತಿತರ ವಿವರಗಳು ಮುಂದಿನ ತಿಂಗಳ 20ರ ವೇಳೆಗೆ ಕ್ಷೀರಸಿರಿ ಮೂಲಕ ಕೆಎಂಎಫ್ಗೆ ತಲುಪುತ್ತದೆ. ಬಳಿಕ ಖಜಾನೆ-2ಕ್ಕೆ ಬಿಲ್ಗಳನ್ನು ಕಳುಹಿಸಿದ ಮಂಜೂರಾತಿ ಆದೇಶ ಪಡೆದು ಪಾವತಿಗೆ ಕ್ರಮ ವಹಿಸುವುದರಿಂದ ವಿಳಂಬವಾಗುತ್ತದೆ. ಪ್ರಸಕ್ತ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆಂದು ಸರಕಾರ ಮೊದಲ ಕಂತಿನಲ್ಲಿ ಬಿಡುಗಡೆ ಮಾಡಿದ್ದ ಹಣ ಖರ್ಚಾಗಿದ್ದು, ಎರಡನೇ ಕಂತಿನ ಅನುದಾನಕ್ಕಾಗಿ ಕಾಯುತ್ತಿದ್ದೇವೆ. ಇದು ಆಗಸ್ಟ್ನಲ್ಲಿ ಬಿಡುಗಡೆಯಾಗಲಿದ್ದು, ಬಾಕಿ ಪ್ರೋತ್ಸಾಹಧನವನ್ನು ಪಾವತಿಸಲಾಗುತ್ತದೆ ಎಂದು ಭರವಸೆ ನೀಡಿದ್ದಾರೆ.
ಬೇಕಿದೆ 10 ಕೋಟಿ ರೂ. ಹೆಚ್ಚುವರಿ ಅನುದಾನ
ತಿಂಗಳಿಗೆ 7.56 ಲಕ್ಷ ಹಾಲು ಉತ್ಪಾದಕರು 1,900 ಲಕ್ಷ ಲೀಟರ್ನಷ್ಟು ಹಾಲನ್ನು ಕೆಎಂಎಫ್ಗೆ ಪೂರೈಸುತ್ತಿದ್ದಾರೆ. ಇಷ್ಟು ರೈತರಿಗೆ ಪ್ರೋತ್ಸಾಹಧನ ನೀಡಲು ಮಾಸಿಕ ಕನಿಷ್ಠ 90 ಕೋಟಿ ರೂ. ಬೇಕಾಗುತ್ತದೆ. 2023-24 ನೇ ಸಾಲಿಗೆ ಸಾಮಾನ್ಯ ವರ್ಗದಡಿ ರೈತರಿಗೆ ಪ್ರೋತ್ಸಾಹಧನ ನೀಡಲು 1080 ಕೋಟಿ ರೂ.ಗಳನ್ನು ನಿಗದಿಪಡಿಸಿದೆ. ಆದರೆ, ಸಾಮಾನ್ಯ ವರ್ಗದಡಿ ಫಲಾನುಭವಿಗಳ ಸಂಖ್ಯೆ ಹೆಚ್ಚಾಗಿದ್ದು, ಮಾಸಿಕ ಪ್ರೋತ್ಸಾಹ ಧನವು 100 ಕೋಟಿ ರೂ.ವರೆಗೆ ಏರುತ್ತಿದೆ. ಅನುದಾನದ ಕೊರತೆ ಇರುವುದರಿಂದ ಹೆಚ್ಚುವರಿ ಅನುದಾನ ಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
TB Dam; ಮೈತುಂಬಿಕೊಂಡ ತುಂಗಭದ್ರೆಗೆ ಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ
LadduCase; ಟಿಟಿಡಿಯಿಂದ ನಂದಿನಿ ತುಪ್ಪಕ್ಕೆ ಮತ್ತೆಬೇಡಿಕೆ: ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್
Kadur: ಅಪ್ರಾಪ್ತ ವಯಸ್ಕ ಬಾಲಕಿಗೆ ಸಲೂನ್ ನಲ್ಲಿ ಲೈಂಗಿಕ ಕಿರುಕುಳ ಆರೋಪ
ಹಿಂದೂ ಕಾರ್ಯಕ್ರಮಗಳಿಗೆ ಹಿಂದೂ ಕಾರ್ಯಕರ್ತರಿಂದಲೇ ಕತ್ತಿ ಹಿಡಿದು ಕಾವಲು: ಶ್ರೀರಾಮಸೇನೆ
KS Eshwarappa: ಸಿದ್ದರಾಮಯ್ಯ ರಾಜೀನಾಮೆ ಕೊಡುತ್ತಾರೋ,ಇಲ್ಲ ಜೈಲಿಗೆ ಹೋಗುತ್ತಾರೋ ಗೊತ್ತಿಲ್ಲ
MUST WATCH
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಹೊಸ ಸೇರ್ಪಡೆ
TB Dam; ಮೈತುಂಬಿಕೊಂಡ ತುಂಗಭದ್ರೆಗೆ ಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ
Parvati Nair: ಮನೆ ಕೆಲಸದವನ ಮೇಲೆ ಹಲ್ಲೆ ಆರೋಪ; ನಟಿ ಪಾರ್ವತಿ ನಾಯರ್ ವಿರುದ್ಧ ಕೇಸ್
Paris; ಸಂಗೀತ ಕಾರ್ಯಕ್ರಮದಲ್ಲಿ ಭಾರತೀಯ ಗಾಯಕನ ಮೇಲೆ ಮೊಬೈಲ್ ಎಸೆತ!
Huvina Hadagali: ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪ; ಪ್ರಕರಣ ದಾಖಲು
Tirupati laddu ಅಪವಿತ್ರ: ಎಸ್ ಐಟಿ ತನಿಖೆಗೆ ಆಗ್ರಹಿಸಿ ಸುಪ್ರೀಂನಲ್ಲಿ ಪಿಐಎಲ್ ಸಲ್ಲಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.