ಕ್ರಷರ್‌ ವಿರುದ್ಧ ರೇವಣ್ಣ ದಾಳಿ: ಶಿವಲಿಂಗೇಗೌಡ ಆಕ್ರೋಶ


Team Udayavani, Jul 15, 2023, 7:58 AM IST

shivalingegowda

ಬೆಂಗಳೂರು: ಸಣ್ಣ ವ್ಯಾಪಾರಿಗಳನ್ನು ಜಿಎಸ್‌ಟಿ ವ್ಯಾಪ್ತಿಗೆ ತರಲು ಆಗ್ರಹಿಸಿದ್ದ ಕಾಂಗ್ರೆಸ್‌ನ ಶಿವಲಿಂಗೇಗೌಡ, ಚಿಕ್ಕಪೇಟೆ, ಬಿವಿಕೆ ಅಯ್ಯಂಗಾರ್‌ ರಸ್ತೆಯ ಮೇಲೆ ಸರಕಾರ ಕಣ್ಣು ಬಿಡಲಿ ಎನ್ನುವ ಮೂಲಕ ವರ್ತಕರಿಗೆ ತೆರಿಗೆ ವಿಧಿಸುವಂತೆ ಸಲಹೆ ನೀಡಿದ್ದರು. ಜಿಎಸ್‌ಟಿ ವ್ಯಾಪ್ತಿಯಿಂದ ಹೊರಗುಳಿದ ವಹಿವಾಟುಗಳ ಮೇಲೆ ಚರ್ಚೆ ನಡೆಯುತ್ತಿರುವಾಗ ಕ್ರಷರ್‌ಗಳನ್ನೂ ಜಿಎಸ್‌ಟಿ ಅಡಿ ತರಬೇಕೆಂದು ಜೆಡಿಎಸ್‌ನ ಎಚ್‌.ಡಿ.ರೇವಣ್ಣ ಆಗ್ರಹಿಸಿದರು.

ಕ್ರಷರನ್ನು ಜಿಎಸ್‌ಟಿ ವ್ಯಾಪ್ತಿಗೆೆ ಸೇರಿಸುವ ಬಗ್ಗೆ ಸಚಿವ ಎಚ್‌.ಕೆ. ಪಾಟೀಲ್‌ ತಮ್ಮ ಉತ್ತರದಲ್ಲಿ ತಿಳಿಸಿರಲಿಲ್ಲ. ಮತ್ತೆ ಸರಕಾರದ ಗಮನ ಸೆಳೆದ ರೇವಣ್ಣ, ರಾಜ್ಯ ಹೆದ್ದಾರಿ ಕಾಮಗಾರಿಗೆ ಕಲ್ಲು ಪೂರೈಸಿದ್ದಕ್ಕೆ ಬಿಲ್‌ ಕೊಡುವುದೇ ಇಲ್ಲ. ನಮ್ಮ ಜಿಲ್ಲೆಯಲ್ಲಿ ಕ್ರಷರ್‌ ಹಾವಳಿ ಜಾಸ್ತಿಯಾಗಿದೆ. ಜಿಎಸ್‌ಟಿ ವ್ಯಾಪ್ತಿಗೆ ಸೇರಿಸುವುದಾದರೆ ಸೇರಿಸಿ, ಲೂಟಿ ನಡೆಯುವುದಕ್ಕಾದರೆ ಬಿಟ್ಟು ಬಿಡಿ ಎಂದು ಒತ್ತಿ ಹೇಳಿದರು. ಇದರಿಂದ ಅಸಮಾಧಾನಗೊಂಡ ಕಾಂಗ್ರೆಸ್‌ ಶಾಸಕ ಶಿವಲಿಂಗೇಗೌಡ ಅವರು ರೇವಣ್ಣ ವಿರುದ್ಧ ಹರಿಹಾಯ್ದರು.

ರೇವಣ್ಣ ಪದೇಪದೆ ಕ್ರಷರ್‌ ಎನ್ನುತ್ತಿದ್ದಾರೆ. ನಂದೂ ಕ್ರಷರ್‌ ಇದೆ. ಅದಕ್ಕೇ ಹೇಳುತ್ತಿದ್ದಾರೆಂಬುದು ನನಗೂ ಗೊತ್ತಿದೆ. ಲೋಕೋಪಯೋಗಿ ಇಲಾಖೆಯವರು ಎಷ್ಟು ರಾಯಧನ ಸಂಗ್ರಹಿಸುತ್ತಾರೆ ಗೊತ್ತಿದೆಯೇ ಎಂದು ಪ್ರಶ್ನಿಸಿದರು. ರೇವಣ್ಣ ಮಾತನಾಡುತ್ತಾ, ನಾನೇನು ಕ್ರಷರ್‌ ಮಾಲಕನಲ್ಲ, ನಿಮಗಿರುವಷ್ಟು ಅನುಭವ ನನಗಿಲ್ಲ. ನಾವು ರೈತರ ಮಕ್ಕಳು ಎನ್ನುತ್ತಿದ್ದಂತೆ ನಂದೂ 1,500 ತೆಂಗಿನ ಗಿಡ ಇದೆ, ಕ್ರಷರೂ ಇದೆ ಎಂದು ಶಿವಲಿಂಗೇಗೌಡ ಪ್ರತ್ಯುತ್ತರ ನೀಡಿದರು.

ಇಷ್ಟಕ್ಕೇ ಸುಮ್ಮನಾಗದ ರೇವಣ್ಣ, ಕ್ರಷರ್‌ಗೆ ಎಷ್ಟು ಖರ್ಚು ಮಾಡಿದ್ದಾರೆ ಕೇಳಿ? ಡ್ರೋನ್‌ ಸರ್ವೇ ಮಾಡಬಾರದೇಕೆ ಎಂದು ಪ್ರಶ್ನಿಸಿದರು. ಸಿಟ್ಟಾದ ಶಿವಲಿಂಗೇಗೌಡ, ನೀವೆಷ್ಟು ಖರ್ಚು ಮಾಡಿದ್ದೀರಿ ಹೇಳಿ. ನನ್ನದಾದರೂ ಒಬ್ಬನ ಖರ್ಚು. ನಿಮಗೆ ಕುಟುಂಬದ 5 ಜನರ ಖರ್ಚಿದೆಯಲ್ಲ ಎಂದು ಏರಿದ ಧ್ವನಿಯಲ್ಲಿ ಹೇಳಿದರು. ಮತ್ತೆ ಮಾತಿಗಿಳಿದ ರೇವಣ್ಣ, ನೀವು ಪ್ರಾಮಾಣಿಕರೇ ಗೌಡರೇ, ನಿಮಗೆ ನಾನು ಹೇಳಿರಲೇ ಇಲ್ಲ. ಕ್ರಷರ್‌ಗಳ ಬಗ್ಗೆ ಮಾತನಾಡಿದ್ದೆ. ಹೇಳುವುದು ಹೇಳಿದ್ದೇನೆ. ಲೂಟಿ ಹೊಡೆಯಲು ಬಿಡುವುದಾದರೆ ಬಿಡಿ ಎನ್ನುತ್ತಾ ಎಚ್‌.ಕೆ. ಪಾಟೀಲರತ್ತ ತಿರುಗಿದರು. ಯಾಕಿಗೆ ಹೊಟ್ಟೆಕಿಚ್ಚು ಪಟ್ಟು ಸಾಯ್ತಿರ್ರೀ ಎಂದ ಶಿವಲಿಂಗೇಗೌಡರನ್ನು ಸಮಾಧಾನಪಡಿಸಿದ ಸಚಿವ ಪಾಟೀಲ್‌, ಕ್ರಷರ್‌ಗಳನ್ನೂ ಜಿಎಸ್‌ಟಿ ವ್ಯಾಪ್ತಿಗೆ ತರುವ ಬಗ್ಗೆ ಚಿಂತಿಸುತ್ತೇವೆ ಎಂದು ಚರ್ಚೆಗೆ ತೆರೆ ಎಳೆದರು.

 

ಟಾಪ್ ನ್ಯೂಸ್

1-siddu-aa

TB Dam; ಮೈತುಂಬಿಕೊಂಡ ತುಂಗಭದ್ರೆಗೆ ಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ

Parvati Nair: ಮನೆ ಕೆಲಸದವನ ಮೇಲೆ ಹಲ್ಲೆ ಆರೋಪ; ನಟಿ ಪಾರ್ವತಿ ನಾಯರ್‌ ವಿರುದ್ಧ ಕೇಸ್‌

Parvati Nair: ಮನೆ ಕೆಲಸದವನ ಮೇಲೆ ಹಲ್ಲೆ ಆರೋಪ; ನಟಿ ಪಾರ್ವತಿ ನಾಯರ್‌ ವಿರುದ್ಧ ಕೇಸ್‌

1-tirupati-laddu

Tirupati laddu ಅಪವಿತ್ರ: ಎಸ್ ಐಟಿ ತನಿಖೆಗೆ ಆಗ್ರಹಿಸಿ ಸುಪ್ರೀಂನಲ್ಲಿ ಪಿಐಎಲ್ ಸಲ್ಲಿಕೆ

1-pavan

Tirupati laddu; ಪ್ರಾಯಶ್ಚಿತ ಎಂಬಂತೆ 11 ದಿನಗಳ ಉಪವಾಸ ಕೈಗೊಳ್ಳಲಿರುವ ಪವನ್ ಕಲ್ಯಾಣ್

Pushpa 2: ಅಲ್ಲು ಅರ್ಜುನ್‌ ʼಪುಷ್ಪ-2ʼನಲ್ಲಿ ಕ್ರಿಕೆಟಿಗ ಡೇವಿಡ್‌ ವಾರ್ನರ್?‌- ಫೋಟೋ ವೈರಲ್

Pushpa 2: ಅಲ್ಲು ಅರ್ಜುನ್‌ ʼಪುಷ್ಪ-2ʼನಲ್ಲಿ ಕ್ರಿಕೆಟಿಗ ಡೇವಿಡ್‌ ವಾರ್ನರ್?‌- ಫೋಟೋ ವೈರಲ್

ಟಿಟಿಡಿಯಿಂದ ನಂದಿನಿ ತುಪ್ಪಕ್ಕೆ ಮತ್ತೆ ಬೇಡಿಕೆ:‌ ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್

LadduCase; ಟಿಟಿಡಿಯಿಂದ ನಂದಿನಿ ತುಪ್ಪಕ್ಕೆ ಮತ್ತೆಬೇಡಿಕೆ:‌ ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್

Kadur: ಅಪ್ರಾಪ್ತ ವಯಸ್ಕ ಬಾಲಕಿಗೆ ಸಲೂನ್‌ ನಲ್ಲಿ ಲೈಂಗಿಕ ಕಿರುಕುಳ ಆರೋಪ

Kadur: ಅಪ್ರಾಪ್ತ ವಯಸ್ಕ ಬಾಲಕಿಗೆ ಸಲೂನ್‌ ನಲ್ಲಿ ಲೈಂಗಿಕ ಕಿರುಕುಳ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-siddu-aa

TB Dam; ಮೈತುಂಬಿಕೊಂಡ ತುಂಗಭದ್ರೆಗೆ ಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ

ಟಿಟಿಡಿಯಿಂದ ನಂದಿನಿ ತುಪ್ಪಕ್ಕೆ ಮತ್ತೆ ಬೇಡಿಕೆ:‌ ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್

LadduCase; ಟಿಟಿಡಿಯಿಂದ ನಂದಿನಿ ತುಪ್ಪಕ್ಕೆ ಮತ್ತೆಬೇಡಿಕೆ:‌ ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್

Kadur: ಅಪ್ರಾಪ್ತ ವಯಸ್ಕ ಬಾಲಕಿಗೆ ಸಲೂನ್‌ ನಲ್ಲಿ ಲೈಂಗಿಕ ಕಿರುಕುಳ ಆರೋಪ

Kadur: ಅಪ್ರಾಪ್ತ ವಯಸ್ಕ ಬಾಲಕಿಗೆ ಸಲೂನ್‌ ನಲ್ಲಿ ಲೈಂಗಿಕ ಕಿರುಕುಳ ಆರೋಪ

ಹಿಂದೂ ಕಾರ್ಯಕ್ರಮಗಳಿಗೆ ಹಿಂದೂ ಕಾರ್ಯಕರ್ತರಿಂದ ಕತ್ತಿ ಹಿಡಿದು ಕಾವಲು: ಶ್ರೀರಾಮಸೇನೆ

ಹಿಂದೂ ಕಾರ್ಯಕ್ರಮಗಳಿಗೆ ಹಿಂದೂ ಕಾರ್ಯಕರ್ತರಿಂದಲೇ ಕತ್ತಿ ಹಿಡಿದು ಕಾವಲು: ಶ್ರೀರಾಮಸೇನೆ

11

KS Eshwarappa: ಸಿದ್ದರಾಮಯ್ಯ ರಾಜೀನಾಮೆ ಕೊಡುತ್ತಾರೋ,ಇಲ್ಲ ಜೈಲಿಗೆ ಹೋಗುತ್ತಾರೋ ಗೊತ್ತಿಲ್ಲ

MUST WATCH

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

ಹೊಸ ಸೇರ್ಪಡೆ

1-siddu-aa

TB Dam; ಮೈತುಂಬಿಕೊಂಡ ತುಂಗಭದ್ರೆಗೆ ಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ

Parvati Nair: ಮನೆ ಕೆಲಸದವನ ಮೇಲೆ ಹಲ್ಲೆ ಆರೋಪ; ನಟಿ ಪಾರ್ವತಿ ನಾಯರ್‌ ವಿರುದ್ಧ ಕೇಸ್‌

Parvati Nair: ಮನೆ ಕೆಲಸದವನ ಮೇಲೆ ಹಲ್ಲೆ ಆರೋಪ; ನಟಿ ಪಾರ್ವತಿ ನಾಯರ್‌ ವಿರುದ್ಧ ಕೇಸ್‌

1-dddasasa

Paris; ಸಂಗೀತ ಕಾರ್ಯಕ್ರಮದಲ್ಲಿ ಭಾರತೀಯ ಗಾಯಕನ ಮೇಲೆ ಮೊಬೈಲ್ ಎಸೆತ!

POlice

Huvina Hadagali: ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪ; ಪ್ರಕರಣ ದಾಖಲು

1-tirupati-laddu

Tirupati laddu ಅಪವಿತ್ರ: ಎಸ್ ಐಟಿ ತನಿಖೆಗೆ ಆಗ್ರಹಿಸಿ ಸುಪ್ರೀಂನಲ್ಲಿ ಪಿಐಎಲ್ ಸಲ್ಲಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.