Mysore: ಅಧಿಕಾರ ಹಂಚಿಕೆ ಪ್ರಶ್ನೆ ‘ಅಪ್ರಸ್ತುತ’: ಸಚಿವ ಈಶ್ವರ ಖಂಡ್ರೆ


Team Udayavani, Jul 15, 2023, 2:49 PM IST

eshwar khandre

ಮೈಸೂರು: ಅಧಿಕಾರ ಹಂಚಿಕೆ ಪ್ರಶ್ನೆ ಈಗ ಅಪ್ರಸ್ತುತ ಎಂದು ಸಚಿವ ಈಶ್ವರ್ ಖಂಡ್ರೆ ಹೇಳಿದರು. ಶಾಸಕ ಆರ್ ವಿ ದೇಶಪಾಂಡೆ ಅವರು ಖಾಸಗಿ ವಾಹಿನಿಯಲ್ಲಿ ನೀಡಿರುವ ಅಧಿಕಾರ ಹಂಚಿಕೆ ಹೇಳಿಕೆ ವಿಚಾರಕ್ಕೆ ಸಂಬಂಧಿಸಿ ಪತ್ರಕರ್ತರ ಪ್ರಶ್ನೆಗೆ ಅವರು ಉತ್ತರಿಸಿದರು.

ಮೈಸೂರಿನ ಸುತ್ತೂರು ಮಠದಲ್ಲಿ ಮಾತನಾಡಿದ ಅವರು, “ಈ ಪ್ರಶ್ನೆ ಅಪ್ರಸ್ತುತ. ಕಾಂಗ್ರೆಸ್ ಸರ್ಕಾರ ಬಡವರಿಗೆ ಏನು ಮಾಡ್ತಾ ಇದೆ ಇದರ ಬಗ್ಗೆ ಚರ್ಚೆ ಮಾಡಿ. ನಮ್ಮ ಸರ್ಕಾರ ಭದ್ರವಾಗಿದೆ, ಉತ್ತಮ ಮತ್ತು ಒಳ್ಳೆಯ ಆಡಳಿತ ನಡೆಸುತ್ತಿದೆ, ಕೊಟ್ಟ ಭರವಸೆ ಈಡೇರಿಸುತ್ತಿದ್ದೇವೆ. ಎಲ್ಲ ಯೋಜನೆಗಳು ಮತ್ತು ಗ್ಯಾರಂಟಿ ಅನುಷ್ಟಾನಕ್ಕೆ ಬರ್ತಾ ಇದೆ, ಈಗಾಗಲೇ 3 ಗ್ಯಾರೆಂಟಿ ಕಾರ್ಯಗತವಾಗಿದೆ ಎಂದರು.

ಶಕ್ತಿ ಯೋಜನೆ ಬಂದಿದೆ, ದಿನ ನಿತ್ಯ 50 ಲಕ್ಷ ಮಹಿಳೆಯರು ಅದನ್ನು ಉಪಯೋಗಿಸುತ್ತಿದ್ದಾರೆ. ನಾವು 52 ಸಾವಿರ ಕೋಟಿ ರೂಪಾಯಿ ಮೀಸಲಿಟ್ಟು ನಾವು ಕೋಟಂತಹ ಗ್ಯಾರಂಟಿ ಅನುಷ್ಠಾನಕ್ಕೆ ತಂದಿದ್ದೇವೆ ಎಂದು ಹೇಳಿದರು.

ಮೈಸೂರಿನ ಸುತ್ತೂರು ಶಾಖಾ ಮಠಕ್ಕೆ ಮಂತ್ರಿ ಆದ ನಂತರ ಮೊದಲನೇ ಬಾರಿ ಭೇಟಿ ನೀಡಿದ್ದೇನೆ. ಶ್ರೀ ಸುತ್ತೂರು ದೇಶಿ ಕೇಂದ್ರ ಸ್ವಾಮಿಗಳ ಆಶೀರ್ವಾದವನ್ನು ಸಹ ನಾನಿವತ್ತು ಪಡೆದಿದ್ದೇನೆ. ಮೈಸೂರು ಮತ್ತು ಚಾಮರಾಜನಗರದಲ್ಲಿ ಸಾಕಷ್ಟು ಅರಣ್ಯ ಸಂಪತ್ತನ್ನ ನಾವು ಹೊಂದಿದ್ದೇವೆ. ಹುಲಿ ಸಂರಕ್ಷಣಾ ಘಟಕವನ್ನು ಸಹ ನಾವು ಹೊಂದಿದ್ದೇವೆ. ಪರಿಸರ ಸಂರಕ್ಷಣೆ ಪ್ರಾಣಿ ಸಂರಕ್ಷಣೆ ಪಶುಗಳ ಸಂರಕ್ಷಣೆ ವಿಶೇಷವಾಗಿ ಪ್ರಾಣಿ ಮತ್ತು ಮಾನವ ಸಂಘರ್ಷಗಳನ್ನು ತಡೆಗಟ್ಟುವುದು ಮುಖ್ಯ ಕರ್ತವ್ಯವಾಗಿದೆ. ಸುಶೀಲಾ ಎಂಬ ಬಾಲಕಿಯ ಮೇಲೆ ಆದಂತ ಚಿರತೆ ದಾಳಿಯ ವಿಚಾರ ಕೇಳಿ ಬೇಸರವಾಗಿದೆ ಮತ್ತು ಅದಕ್ಕೆ ವಿಷಾದ ವ್ಯಕ್ತಪಡಿಸುತ್ತೇವೆ. ಸರ್ಕಾರದ ವತಿಯಿಂದ 15 ಲಕ್ಷ ರೂಪಾಯಿ ಪರಿಹಾರವನ್ನು ನೀಡಬೇಕೆಂದು ತಿಳಿಸಿದ್ದೇನೆ. ತಿಂಗಳಿಗೆ 4,000 ಮಾಸಾಶನ ಬರುವಂತೆ ಸರ್ಕಾರಕ್ಕೆ ಬೇಡಿಕೆ ಇಟ್ಟು ಜಾರಿಗೊಳಿಸಲು ಪ್ರಯತ್ನ ಪಡುತ್ತೇನೆ ಎಂದರು.

ಪ್ರತಿಯೊಂದು ಸಮಸ್ಯೆಗೂ ಪರಿಹಾರ ಇದ್ದೇ ಇರುತ್ತೆ ಎಂಬಂತೆ ಪ್ಲಾಸ್ಟಿಕ್ ಬಳಕೆಗೂ ಪರಿಹಾರ ಇದೆ. ಪ್ಲಾಸ್ಟಿಕನ್ನು ಹೆಚ್ಚು ಬಳಕೆ ಮಾಡುವುದರ ಬದಲು ಪ್ಲಾಸ್ಟಿಕ್ ಚೀಲದ ಬದಲಾಗಿ ಬಟ್ಟೆ ಚೀಲವನ್ನು ಉಪಯೋಗಿಸುವುದು ಉತ್ತಮ. ಬಟ್ಟೆ ಚೀಲಗಳ ಬಳಕೆಗೆ ಮತ್ತು ಇದರ ಉತ್ಪಾದನೆಗೆ ಸರ್ಕಾರ ಅನುದಾನವನ್ನು ನೀಡಿದರೆ ಇದೆಲ್ಲದಕ್ಕೂ ಸಹ ಪರಿಹಾರ ಸಿಗುತ್ತದೆ. ಬೀದರ್, ಕಲ್ಬುರ್ಗಿ, ಮೈಸೂರು. ಧರ್ಮಸ್ಥಳ ಮತ್ತೊಂದು ಯಾವುದಾದರೂ ಪ್ರಮುಖ ನಗರವನ್ನು ಆಯ್ಕೆ ಮಾಡಿಕೊಂಡು ಪ್ಲಾಸ್ಟಿಕ್ ಮುಕ್ತ ನಗರವನ್ನಾಗಿ ಮಾಡುವ ಯೋಚನೆ ನಮಗಿದೆ ಎಂದರು.

ಕಾಡಿನ ಪ್ರಾಣಿಗಳು ನಾಡಿಗೆ ಬರುವ ವಿಚಾರವಾಗಿ ಮಾತನಾಡಿದ ಅವರು, ಅನೆ ತುಳಿತಕ್ಕೆ ಸಾವು ಆಗಿರುವ ವಿಚಾರ ಕುರಿತು ಕರ್ಮ ಕೈಗೊಂಡಿದ್ದೇವೆ. ಆನೆ ಚಲಿಸುತ್ತವೇ ಇರುತ್ತದೆ ಅದನ್ನು ನಾವು ತಡೆಯಲು ಆಗಲ್ಲ, ಇಲ್ಲವೆಂದರೆ ಅದಕ್ಕೆ ಉಳಿಗಾಲ ಇಲ್ಲ. ರಾಜ್ಯದಲ್ಲಿ 640 ಕಿಮೀ ರೈಲ್ವೆ ಬ್ಯಾರಿಕೇಡ್ ಮಾಡಬೇಕು ಎನ್ನುವ ಪ್ರಸ್ತಾವನೆ ಇದೆ, ಈಗಾಗಲೇ 312.5 ಕಿಮೀ ರೈಲ್ವೆ ಬ್ಯಾರಿಕೇಡ್ ಮಾಡಿದ್ದೇವೆ, ಇನ್ನು 330 ಕಿಮೀ ಬ್ಯಾರಿಕೆಡ್ ಇಡಬೇಕು. ಈಗಾಗಲೇ ಸೋಲಾರ್ ವ್ಯವಸ್ಥೆ, ಕಂದಕಗಳ ವ್ಯವಸ್ಥೆ ಮಾಡಲಾಗಿದೆ. 1 ಕಿಮೀ ರೈಲ್ವೆ ಬ್ಯಾರಿಕೇಡ್ ಮಾಡೋದಕ್ಕೆ 1.5 ಕೋಟಿ ರೂಪಾಯಿ ಬೇಕಾಗುತ್ತದೆ, ಈ ಮಟ್ಟದ ಅನುದಾನ ಒಂದೇ ಬಾರಿಗೆ ಸಿಗುವುದಿಲ್ಲ. ಈಗಾಗಲೇ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದೇನೆ ಎಂದು ಈಶ್ವರ್ ಖಂಡ್ರೆ ಹೇಳಿದರು.

ಟಾಪ್ ನ್ಯೂಸ್

9

Kerala Kannadigas: ಕೇರಳಿಗರಿಗೆ ಕನ್ನಡ ಕಲಿಸಲು ವಿಶೇಷ ತರಗತಿ

Pakistanಕ್ಕೆ ದೊಡ್ಡ‌ ಮೊತ್ತದ ಆರ್ಥಿಕ ನೆರವು … ರಾಜನಾಥ್‌ ಸಿಂಗ್‌ ಭರ್ಜರಿ ಆಫರ್‌, ಆದರೆ…

Pakistanಕ್ಕೆ ದೊಡ್ಡ‌ ಮೊತ್ತದ ಆರ್ಥಿಕ ನೆರವು …ರಾಜನಾಥ್‌ ಸಿಂಗ್‌ ಭರ್ಜರಿ ಆಫರ್‌, ಆದರೆ…

Fake Currency: 500 ರೂ. ನಕಲಿ ನೋಟುಗಳಲ್ಲಿ ಗಾಂಧಿ ಬದಲು ಅನುಪಮ್‌ ಖೇರ್‌ ಫೋಟೊ!

Fake Currency: 500 ರೂ. ನಕಲಿ ನೋಟುಗಳಲ್ಲಿ ಗಾಂಧಿ ಬದಲು ಅನುಪಮ್‌ ಖೇರ್‌ ಫೋಟೊ!

Sirsi: ಕಸ್ತೂರಿ ರಂಗನ್ ವರದಿಯ ಸಮೀಕ್ಷೆಯೇ ಸಮರ್ಪಕವಾಗಿಲ್ಲ: ಶಾಸಕ ಭೀಮಣ್ಣ‌ ನಾಯ್ಕ

Sirsi: ಕಸ್ತೂರಿ ರಂಗನ್ ವರದಿಯ ಸಮೀಕ್ಷೆಯೇ ಸಮರ್ಪಕವಾಗಿಲ್ಲ: ಶಾಸಕ ಭೀಮಣ್ಣ‌ ನಾಯ್ಕ

Gadag: ನೀರಿನಲ್ಲಿ ಕೊಚ್ಚಿಹೋದ ಯುವಕರು; ಓರ್ವನ ಶವ ಪತ್ತೆ, ಮತ್ತೋರ್ವನಿಗೆ ಶೋಧ

Gadag: ನೀರಿನಲ್ಲಿ ಕೊಚ್ಚಿಹೋದ ಯುವಕರು; ಓರ್ವನ ಶವ ಪತ್ತೆ, ಮತ್ತೋರ್ವನಿಗೆ ಶೋಧ

Mudhol: ಸಭೆಗೆ ತಡವಾಗಿ ಬಂದ ಉಸ್ತುವಾರಿ ಸಚಿವರು… ಸಭೆ ಬಹಿಷ್ಕರಿಸಿದ ಬಿಜೆಪಿ ಸದಸ್ಯರು

Mudhol: ಸಭೆಗೆ ತಡವಾಗಿ ಬಂದ ಉಸ್ತುವಾರಿ ಸಚಿವರು… ಸಭೆ ಬಹಿಷ್ಕರಿಸಿದ ಬಿಜೆಪಿ ಸದಸ್ಯರು

Udupi: ಸರಕಾರಿ ವಸತಿ ಗ್ರಹಕ್ಕೆ ನುಗ್ಗಿದ ಕಳ್ಳರು… ಲಕ್ಷಾಂತರ ಮೌಲ್ಯದ ನಗನಗದು ದೋಚಿ ಪರಾರಿ

Udupi: ಸರಕಾರಿ ವಸತಿ ಗೃಹಕ್ಕೆ ನುಗ್ಗಿದ ಕಳ್ಳರು… ಲಕ್ಷಾಂತರ ಮೌಲ್ಯದ ನಗನಗದು ದೋಚಿ ಪರಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಕಸ್ತೂರಿ ರಂಗನ್ ವರದಿಯ ಸಮೀಕ್ಷೆಯೇ ಸಮರ್ಪಕವಾಗಿಲ್ಲ: ಶಾಸಕ ಭೀಮಣ್ಣ‌ ನಾಯ್ಕ

Sirsi: ಕಸ್ತೂರಿ ರಂಗನ್ ವರದಿಯ ಸಮೀಕ್ಷೆಯೇ ಸಮರ್ಪಕವಾಗಿಲ್ಲ: ಶಾಸಕ ಭೀಮಣ್ಣ‌ ನಾಯ್ಕ

Mudhol: ಸಭೆಗೆ ತಡವಾಗಿ ಬಂದ ಉಸ್ತುವಾರಿ ಸಚಿವರು… ಸಭೆ ಬಹಿಷ್ಕರಿಸಿದ ಬಿಜೆಪಿ ಸದಸ್ಯರು

Mudhol: ಸಭೆಗೆ ತಡವಾಗಿ ಬಂದ ಉಸ್ತುವಾರಿ ಸಚಿವರು… ಸಭೆ ಬಹಿಷ್ಕರಿಸಿದ ಬಿಜೆಪಿ ಸದಸ್ಯರು

Bellary; ಜನಾರ್ದನ ರೆಡ್ಡಿ ಬಳ್ಳಾರಿ ವನವಾಸ ಅಂತ್ಯ

Bellary; ಜನಾರ್ದನ ರೆಡ್ಡಿ ಬಳ್ಳಾರಿ ವನವಾಸ ಅಂತ್ಯ

Mandya: ಕೆಎಸ್‌ಆರ್ ಟಿಸಿ ಬಸ್-‌ ಟೆಂಪೋ ಡಿಕ್ಕಿ; 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

Mandya: ಕೆಎಸ್‌ಆರ್ ಟಿಸಿ ಬಸ್-‌ ಟೆಂಪೋ ಡಿಕ್ಕಿ; 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

Chitradurga: ನಿಯಂತ್ರಣ ತಪ್ಪಿ KSRTC ಬಸ್ ಪಲ್ಟಿ… ವಿದ್ಯಾರ್ಥಿಗಳು ಸೇರಿ ಹಲವರಿಗೆ ಗಾಯ

Chitradurga: ನಿಯಂತ್ರಣ ತಪ್ಪಿ KSRTC ಬಸ್ ಪಲ್ಟಿ… ವಿದ್ಯಾರ್ಥಿಗಳು ಸೇರಿ ಹಲವರಿಗೆ ಗಾಯ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

9

Kerala Kannadigas: ಕೇರಳಿಗರಿಗೆ ಕನ್ನಡ ಕಲಿಸಲು ವಿಶೇಷ ತರಗತಿ

Pakistanಕ್ಕೆ ದೊಡ್ಡ‌ ಮೊತ್ತದ ಆರ್ಥಿಕ ನೆರವು … ರಾಜನಾಥ್‌ ಸಿಂಗ್‌ ಭರ್ಜರಿ ಆಫರ್‌, ಆದರೆ…

Pakistanಕ್ಕೆ ದೊಡ್ಡ‌ ಮೊತ್ತದ ಆರ್ಥಿಕ ನೆರವು …ರಾಜನಾಥ್‌ ಸಿಂಗ್‌ ಭರ್ಜರಿ ಆಫರ್‌, ಆದರೆ…

Clown Festival: ಮಂಗಳೂರಿನಲ್ಲಿ ಅಕ್ಟೋಬರ್ 4 ರಿಂದ ಅಂತರಾಷ್ಟ್ರೀಯ ವಿದೂಷಕ ಉತ್ಸವ

Clown Festival: ಮಂಗಳೂರಿನಲ್ಲಿ ಅಕ್ಟೋಬರ್ 4ರಿಂದ ಅಂತರಾಷ್ಟ್ರೀಯ ವಿದೂಷಕ ಉತ್ಸವ

8

Arrested: ಜಲಮಂಡಳಿಯ ಸೆಂಟ್ರಿಂಗ್‌ ಸಾಮಗ್ರಿ ಕಳವು ಮಾಡುತ್ತಿದ್ದ ಇಬ್ಬರ ಬಂಧನ 

Fraud: ಸರ್ಕಾರಿ ಕೆಲಸದ ಆಸೆ ತೋರಿಸಿ 28 ಲಕ್ಷ ವಂಚನೆ 

Fraud: ಸರ್ಕಾರಿ ಕೆಲಸದ ಆಸೆ ತೋರಿಸಿ 28 ಲಕ್ಷ ವಂಚನೆ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.