ಆರು ವರ್ಷದಲ್ಲಿ 562 ಮಂದಿ ರೌಡಿ ಪಟ್ಟಿಯಿಂದ ಹೊರಕ್ಕೆ


Team Udayavani, Jul 15, 2023, 4:41 PM IST

ಆರು ವರ್ಷದಲ್ಲಿ 562 ಮಂದಿ ರೌಡಿ ಪಟ್ಟಿಯಿಂದ ಹೊರಕ್ಕೆ

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಕಳೆದ 2018ರಿಂದ 2023ರ ವರೆಗೂ 6 ವರ್ಷದಲ್ಲಿ ಬರೋಬ್ಬರಿ ಒಟ್ಟು 562 ರೌಡಿಗಳನ್ನು ಪೊಲೀಸ್‌ ಇಲಾಖೆ ರೌಡಿಶೀಟರ್‌ ಪಟ್ಟಿಯಿಂದ ಮುಕ್ತಿಗೊಳಿಸಿದೆ. ಹೌದು, ರಾಜ್ಯದಲ್ಲಿ ಕಳೆದ 6 ವರ್ಷ ದಲ್ಲಿ ರೌಡಿಪಟ್ಟಿಯಿಂದ ಕೈ ಬಿಟ್ಟವರ ಮಾಹಿತಿ ಉದಯವಾಣಿಗೆ ಲಭ್ಯವಾಗಿದ್ದು, ಜಿಲ್ಲೆಯಲ್ಲಿ 562 ಮಂದಿಯನ್ನು ರೌಡಿ ಶೀಟರ್‌ ಪಟ್ಟಿಯಿಂದ ವಿವಿಧ ಕಾರಣಗಳಿಗೆ ಕೈ ಬಿಟ್ಟಿದೆ.

ರಾಜ್ಯದಲ್ಲಿ 6 ವರ್ಷದಲ್ಲಿ ಬರೋಬ್ಬರಿ 27,294 ಮಂದಿಯನ್ನು ರೌಡಿಶೀಟರ್‌ ಪಟ್ಟಿಯಿಂದ ಬಿಡುಗಡೆ ಗೊಳಿಸಿದ್ದು, ಜಿಲ್ಲೆಯಲ್ಲಿ ಕಳೆದ 2018 ರಲ್ಲಿ 4, 2019 ರಲ್ಲಿ 24, 2020 ರಲ್ಲಿ 46, 2021ರಲ್ಲಿ 294, 2022ರಲ್ಲಿ 180, 2023ರಲ್ಲಿ ಇಲ್ಲಿವರೆಗೂ ಒಟ್ಟು 14 ಮಂದಿ ಯನ್ನು ಜಿಲ್ಲೆಯ ಪೊಲೀಸ್‌ ಇಲಾಖೆ ರೌಡಿಪಟ್ಟಿಯಿಂದ ಬಿಡುಗಡೆ ಮಾಡಿದೆ.

ಮಾನದಂಡಗಳೇನು?: ರೌಡಿ ಪಟ್ಟಿ ಯಲ್ಲಿದ್ದವರ ಪೈಕಿ ಮೃತಪಟ್ಟಿರುವರನ್ನು, 65 ವರ್ಷ ವಯಸ್ಸಾದವರನ್ನು ಹಾಗೂ ರೌಡಿ ಅಸಾಮಿಯು ಸಂಪೂರ್ಣ ಮಾನಸಿಕ ಅಸ್ವಸ್ಥನಾಗಿದ್ದರೆ ಅಥವಾ ಅಂಗವಿಕಲನಾಗಿದ್ದರಲ್ಲಿ ಹಾಗೂ ಸುಮಾರು 10 ವರ್ಷದಿಂದ ಯಾವುದೇ ಪ್ರಕರಣದಲ್ಲಿ ಭಾಗಿ ಆಗದೇ ಕಾನೂನು ಸುವ್ಯವಸ್ಥೆ ಪಾಲಿಸುತ್ತಿರುವವರನ್ನು ಗುರುತಿಸಿಕೊಂಡು ಜಿಲ್ಲೆಯ ಪೊಲೀಸರು ಒಟ್ಟು 562 ಮಂದಿಗೆ ರೌಡಿಪಟ್ಟಿಯಿಂದ ಗೇಟ್‌ಪಾಸ್‌ ನೀಡಿದ್ದಾರೆ.

ಗೌರಿಬಿದನೂರು ಭಾಗದಲ್ಲಿ ರೌಡಿಗಳ ಉಪಟಳ!: ಆಂಧ್ರದ ಗಡಿಗೆ ಹೊಂದಿಕೊಂಡಿರುವ ಜಿಲ್ಲೆಯ ಗೌರಿಬಿದನೂರಲ್ಲಿ ಇಂದಿಗೂ ರೌಡಿಗಳ ಉಪಟಳ ಹೆಚ್ಚಾಗಿದೆ. ಗೌರಿಬಿದನೂರು ನಗರ, ಗ್ರಾಮಾಂತರ ಹಾಗೂ ಮಂಚೇನಹಳ್ಳಿ ವ್ಯಾಪ್ತಿಯಲ್ಲಿ ಜೊತೆಗೆ ಹೊಸೂರು ಭಾಗದಲ್ಲಿ ನೂರಾರು ರೌಡಿಗಳಿದ್ದು, ಕಾನೂನು ಸುವ್ಯವಸ್ಥೆಗೆ ಆಗಾಗ ಭಂಗ ತರುವ ಕೆಲಸವನ್ನು ಮಾಡುತ್ತಿರುತ್ತಾರೆ.ಆಂಧ್ರದ ಹಿಂದೂಪುರ, ಅನಂತಪುರ ಭಾಗ ಗೌರಿಬಿದನೂರಿಗೆ ಅಂಟಿಕೊಂಡಿದ್ದು, ಇಲ್ಲಿ ಅಕ್ರಮ, ಅನೈತಿಕ ಚಟುವಟಿಕೆಗಳಲ್ಲಿ ರೌಡಿಗಳು ಭಾಗಿ ಇದ್ದೇ ಇರುತ್ತದೆ. ಇನ್ನೂ ಚಿಂತಾಮಣಿ, ಚಿಕ್ಕಬಳ್ಳಾಪುರ, ಶಿಡ್ಲಘಟ್ಟದಲ್ಲಿ ಕೂಡ ರೌಡಿ ಅಸಾಮಿಗಳು ಕಿರಿಕಿರಿ ಇದ್ದೇ ಇದೆ.

ಪರೇಡ್‌ ಮರೆತ ಪೊಲೀಸ್‌ ಇಲಾಖೆ!: ಜಿಲ್ಲೆಯಲ್ಲಿ ರೌಡಿ ಅಸಾಮಿಗಳ ಚಲನವಲನಗಳ ಮೇಲೆ ಪೊಲೀಸ್‌ ಇಲಾಖೆ ನಿಗಾ ವಹಿಸುತ್ತಿದ್ದರೂ ಕಾಲಕಾಲಕ್ಕೆ ಅಸಾಮಿಗಳನ್ನು ಠಾಣೆಗೆ ಕರೆಸಿ ಸೂಕ್ತ ಎಚ್ಚರಿಕೆ ನೀಡುವ ಪರೇಡ್‌ ಸಮರ್ಪಕವಾಗಿ ನಡೆಯುತ್ತಿಲ್ಲ ಎನ್ನುವ ಮಾತು ಕೇಳಿ ಬರುತ್ತಿದೆ. ಆದರೆ, ಪ್ರತಿ ವಿಧಾನಸಭೆ ಹಾಗೂ ಲೋಕಸಭಾ ಚುನಾವಣೆ ವೇಳೆಯಲ್ಲಿ ರೌಡಿಗಳನ್ನು ಪೊಲೀಸರು ಕಡ್ಡಾಯವಾಗಿ ಠಾಣೆಗೆ ಅಥವಾ ತಾಲೂಕು ದಂಡಾಧಿಕಾರಿ ಮುಂದೆ ಹಾಜರುಪಡಿಸಿ ಮುಚ್ಚಳಿಕೆ ಪತ್ರ ಬರೆಸಿಕೊಳ್ಳುವುದು ನಡೆಯುತ್ತಿದೆ.

-ಕಾಗತಿ ನಾಗರಾಜಪ್ಪ

ಟಾಪ್ ನ್ಯೂಸ್

Shivamogga: ಮಾರುಕಟ್ಟೆಯಲ್ಲಿ ಚೀನಾ ಬೆಳ್ಳುಳ್ಳಿ ಮಾರಾಟ… ಅಧಿಕಾರಿಗಳಿಂದ ದಾಳಿ

Shivamogga: ಮಾರುಕಟ್ಟೆಯಲ್ಲಿ ಚೀನಾ ಬೆಳ್ಳುಳ್ಳಿ ಮಾರಾಟ… ಅಧಿಕಾರಿಗಳಿಂದ ದಾಳಿ

BBK-11: ಮೊದಲ ದಿನವೇ ಬಿಗ್ ಮನೆಯಲ್ಲಿ ಚಿನ್ನಾಭರಣ ಕಳಚಿಟ್ಟ ‘ಗೋಲ್ಡ್ ಸುರೇಶ್’

BBK-11: ಮೊದಲ ದಿನವೇ ಬಿಗ್ ಮನೆಯಲ್ಲಿ ಚಿನ್ನಾಭರಣ ಕಳಚಿಟ್ಟ ‘ಗೋಲ್ಡ್ ಸುರೇಶ್’

Israel: ಹಮಾಸ್, ಹೆಜ್ಬುಲ್ಲಾ ದಾಳಿ ಬಳಿಕ ಯೆಮೆನ್ ಹೌಥಿ ನೆಲೆಗಳ ಮೇಲೆ ಇಸ್ರೇಲ್ ವಾಯು ದಾಳಿ

Israel: ಹಮಾಸ್,ಹೆಜ್ಬುಲ್ಲಾ, ಸಿರಿಯಾ ಜೊತೆಗೆ ಯೆಮೆನ್ ಹೌತಿ ನೆಲೆಗಳ ಮೇಲೆ ಇಸ್ರೇಲ್ ದಾಳಿ

Horoscope: ಉದ್ಯೋಗ ಸ್ಥಾನದಲ್ಲಿ ಹೊಸ ಸವಾಲುಗಳು ಇರಲಿದೆ

Horoscope: ಉದ್ಯೋಗ ಸ್ಥಾನದಲ್ಲಿ ಹೊಸ ಸವಾಲುಗಳು ಇರಲಿದೆ

ಸರಕಾರಿ ಕಾಲೇಜಿನಲ್ಲಿ 50 ದಿನಗಳಿಂದ “ತರಗತಿ ನಷ್ಟ’!

Government: ಕಾಲೇಜಿನಲ್ಲಿ 50 ದಿನಗಳಿಂದ “ತರಗತಿ ನಷ್ಟ’!

Social-Media

Social Networks Use: ಸಾಮಾಜಿಕ ಜಾಲತಾಣ: ಮಕ್ಕಳ ಭವಿಷ್ಯದ ದೃಷ್ಟಿಯಿಂದ ಕಡಿವಾಣ!

State Govt: ಮಾದಕ ನೋವು ನಿವಾರಕ ಮಾತ್ರೆ ಮಾರಾಟದ ಮೇಲೆ ಆನ್‌ಲೈನ್‌ ಕಣ್ಣು !

State Govt: ಮಾದಕ ನೋವು ನಿವಾರಕ ಮಾತ್ರೆ ಮಾರಾಟದ ಮೇಲೆ ಆನ್‌ಲೈನ್‌ ಕಣ್ಣು !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

0421472757

Nandi Hills: ವಿಶ್ವ ವಿಖ್ಯಾತ ನಂದಿಬೆಟ್ಟಕ್ಕೆ ಪ್ರವಾಸಿಗರ ಪ್ರವಾಹ

Chikkaballapur: ಸ್ವಂತ ಕಟ್ಟಡ ಇಲ್ಲದೇ ಶಿಕ್ಷಣ ತರಬೇತಿಗೆ ಡಯಟ್‌ ಪರದಾಟ!

Chikkaballapur: ಸ್ವಂತ ಕಟ್ಟಡ ಇಲ್ಲದೇ ಶಿಕ್ಷಣ ತರಬೇತಿಗೆ ಡಯಟ್‌ ಪರದಾಟ!

Chikkaballapura; ಎಸ್ಎಫ್ ಐ ರಾಜ್ಯ ಸಮ್ಮೇಳನಕ್ಕೆ ಚಾಲನೆ

Chikkaballapura; ಎಸ್ಎಫ್ ಐ ರಾಜ್ಯ ಸಮ್ಮೇಳನಕ್ಕೆ ಚಾಲನೆ

Police

Government Order: ಪೊಲೀಸರಿಗೆ ಅರ್ಧ ಕೋಟಿ ರೂ. ಜೀವವಿಮೆ! ವಿಮಾ ಮೊತ್ತ ಇಲಾಖೆಯಿಂದಲೇ ಪಾವತಿ

Tragedy: ಕೆಟ್ಟು ನಿಂತಿದ್ದ ಟ್ರ್ಯಾಕ್ಟರ್ ಗೆ ಬೈಕ್ ಡಿಕ್ಕಿ: ಮೂವರು ವಿದ್ಯಾರ್ಥಿಗಳು ಮೃತ್ಯು

Tragedy: ಕೆಟ್ಟು ನಿಂತಿದ್ದ ಟ್ರ್ಯಾಕ್ಟರ್ ಗೆ ಬೈಕ್ ಡಿಕ್ಕಿ: ಮೂವರು ವಿದ್ಯಾರ್ಥಿಗಳು ಮೃತ್ಯು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Shivamogga: ಮಾರುಕಟ್ಟೆಯಲ್ಲಿ ಚೀನಾ ಬೆಳ್ಳುಳ್ಳಿ ಮಾರಾಟ… ಅಧಿಕಾರಿಗಳಿಂದ ದಾಳಿ

Shivamogga: ಮಾರುಕಟ್ಟೆಯಲ್ಲಿ ಚೀನಾ ಬೆಳ್ಳುಳ್ಳಿ ಮಾರಾಟ… ಅಧಿಕಾರಿಗಳಿಂದ ದಾಳಿ

BBK-11: ಮೊದಲ ದಿನವೇ ಬಿಗ್ ಮನೆಯಲ್ಲಿ ಚಿನ್ನಾಭರಣ ಕಳಚಿಟ್ಟ ‘ಗೋಲ್ಡ್ ಸುರೇಶ್’

BBK-11: ಮೊದಲ ದಿನವೇ ಬಿಗ್ ಮನೆಯಲ್ಲಿ ಚಿನ್ನಾಭರಣ ಕಳಚಿಟ್ಟ ‘ಗೋಲ್ಡ್ ಸುರೇಶ್’

Israel: ಹಮಾಸ್, ಹೆಜ್ಬುಲ್ಲಾ ದಾಳಿ ಬಳಿಕ ಯೆಮೆನ್ ಹೌಥಿ ನೆಲೆಗಳ ಮೇಲೆ ಇಸ್ರೇಲ್ ವಾಯು ದಾಳಿ

Israel: ಹಮಾಸ್,ಹೆಜ್ಬುಲ್ಲಾ, ಸಿರಿಯಾ ಜೊತೆಗೆ ಯೆಮೆನ್ ಹೌತಿ ನೆಲೆಗಳ ಮೇಲೆ ಇಸ್ರೇಲ್ ದಾಳಿ

Horoscope: ಉದ್ಯೋಗ ಸ್ಥಾನದಲ್ಲಿ ಹೊಸ ಸವಾಲುಗಳು ಇರಲಿದೆ

Horoscope: ಉದ್ಯೋಗ ಸ್ಥಾನದಲ್ಲಿ ಹೊಸ ಸವಾಲುಗಳು ಇರಲಿದೆ

ಸರಕಾರಿ ಕಾಲೇಜಿನಲ್ಲಿ 50 ದಿನಗಳಿಂದ “ತರಗತಿ ನಷ್ಟ’!

Government: ಕಾಲೇಜಿನಲ್ಲಿ 50 ದಿನಗಳಿಂದ “ತರಗತಿ ನಷ್ಟ’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.