ಭರ್ಜರಿಯಾಗಿ ನಡೆಯುತ್ತಿದೆ ರಾಧಿಕಾ ಕುಮಾರಸ್ವಾಮಿ ‘ಅಜಾಗೃತ’ ಶೂಟಿಂಗ್
Team Udayavani, Jul 15, 2023, 6:14 PM IST
ರಾಧಿಕಾ ಕುಮಾರಸ್ವಾಮಿ ನಾಯಕಿಯಾಗಿ ನಟಿಸುತ್ತಿರುವ “ಅಜಾಗ್ರತ’ ಸಿನಿಮಾದ ಚಿತ್ರೀಕರಣ ಭರ್ಜರಿಯಾಗಿ ನಡೆಯುತ್ತಿದೆ. ಅಂದ ಹಾಗೆ, ಈ ಚಿತ್ರ ಕನ್ನಡ ಸೇರಿದಂತೆ ಏಳು ಭಾಷೆಗಳಲ್ಲಿ ತಯಾರಾಗುತ್ತಿದೆ.
“ಅಜಾಗ್ರತ’ ಒಂದು ಔಟ್ ಆ್ಯಂಡ್ ಔಟ್ ಸೈಕಾಲಜಿಕಲ್ ಕ್ರೈಂ-ಥ್ರಿಲ್ಲರ್ ಕಥೆ ಹೊಂದಿರುವ ಸಿನಿಮಾವಾಗಿದೆ. ಕನ್ನಡದ ಜೊತೆಗೆ ತೆಲುಗು, ತಮಿಳು, ಮಲೆಯಾಳಂ, ಹಿಂದಿ ಸೇರಿದಂತೆ ಸುಮಾರು ಏಳು ಭಾಷೆಗಳಲ್ಲಿ ಈ ಸಿನಿಮಾ ತೆರೆಗೆ ತರುವ ಯೋಚನೆಯಲ್ಲಿದೆ ಚಿತ್ರತಂಡ. ಎಲ್ಲ ಭಾಷೆಗಳಿಗೂ ಒಪ್ಪುವಂತಹ ಕಥಾಹಂದ “ಅಜಾಗ್ರತ’ ಸಿನಿಮಾದಲ್ಲಿ ಇರುವುದರಿಂದ ಕನ್ನಡ ಜೊತೆಗೆ ಬೇರೆ ಭಾಷೆಗಳಲ್ಲೂ ಸಿನಿಮಾವನ್ನು ಬಿಡುಗಡೆ ಮಾಡಲು ಯೋಚನೆ ಇದೆ ಎಂಬುದು ಚಿತ್ರತಂಡದ ಮಾತು.
ಚಿತ್ರತಂಡ ನೀಡಿರುವ ಮಾಹಿತಿಯ ಪ್ರಕಾರ, “ಅಜಾಗ್ರತ’ ಒಂದು ಮಹಿಳಾ ಪ್ರಧಾನ ಕಥಾಹಂದರದ ಸಿನಿಮಾ. ಇಡೀ ಸಿನಿಮಾ ನಾಯಕಿ ರಾಧಿಕಾ ಕುಮಾರಸ್ವಾಮಿ ಅವರ ಸುತ್ತ ನಡೆಯಲಿದ್ದು, ರಾಧಿಕಾ ಕಾಣಿಸಿಕೊಳ್ಳಲಿರುವ ಪಾತ್ರಕ್ಕೂ ಕೂಡ ಅದರದ್ದೇ ಆದ ಮಹತ್ವವಿರಲಿದೆ ಎಂಬುದು ಚಿತ್ರತಂಡದ ಮಾತು.
ರವಿರಾಜ್ ಈ ಸಿನಿಮಾಕ್ಕೆ ಬಂಡವಾಳ ಹೂಡಿ ನಿರ್ಮಾಣ ಮಾಡುತ್ತಿದ್ದಾರೆ. ಈಗಾಗಲೇ ಅಶ್ವಿನಿ ರಾಮ್ ಪ್ರಸಾದ್ ಅವರ ಪುತ್ರ ಅರುಣ್ ರಾಮ್ ಪ್ರಸಾದ್ ಅಭಿನಯದ “ಘಾರ್ಗ’ ಸಿನಿಮಾವನ್ನು ನಿರ್ದೇಶಿಸಿರುವ, ಫಿಲಂ ಮೇಕಿಂಗ್ನಲ್ಲಿ ಎಂ. ಎಸ್ಸಿ ಪದವಿಧರರಾಗಿರುವ ಜೊತೆಗೆ ವಿಎಫ್ಎಕ್ಸ್ನಲ್ಲೂ ಪರಿಣತಿ ಹೊಂದಿರುವ ಯುವ ನಿರ್ದೇಶಕ ಎಂ. ಶಶಿಧರ್, “ಅಜಾಗ್ರತ’ ಸಿನಿಮಾಕ್ಕೆ ಆ್ಯಕ್ಷನ್-ಕಟ್ ಹೇಳುತ್ತಿದ್ದಾರೆ.
ಅಂದಹಾಗೆ, ಮಹಿಳಾ ಪ್ರಧಾನ ಕಥಾಹಂದರದ ಈ ಸಿನಿಮಾದಲ್ಲಿ ನಾಯಕ ನಟಿ ರಾಧಿಕಾ ಕುಮಾರಸ್ವಾಮಿ ಅವರೊಂದಿಗೆ ಸ್ಪರ್ಶ ರೇಖಾ, ದೇವರಾಜ್, ಸುಚೇಂದ್ರ ಪ್ರಸಾದ್, ವಿನಯಾ ಪ್ರಸಾದ್, ಚಿತ್ರಾ ಶೆಣೈ ಸೇರಿದಂತೆ ಕನ್ನಡದ ಹಲವು ಕಲಾವಿದರು “ಅಜಾಗ್ರತ’ ಸಿನಿಮಾದ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಇವರೊಂದಿಗೆ ತೆಲುಗು ಚಿತ್ರರಂಗದ ರಾವ್ ರಮೇಶ್, ಪುಷ್ಪ ಸುನಿಲ್, ರಾಘವೇಂದ್ರ ಶ್ರವಣ್, ಮಲೆಯಾಳಂನ ಆದಿತ್ಯ ಮೆನನ್, ತಮಿಳಿನ ಸಮುದ್ರ ಕಣಿ, ಜಯ್ ಪ್ರಕಾಶ್ ಮತ್ತು ಬಾಲಿವುಡ್ನ ಶ್ರೇಯಸ್ ತಲಪಾಡೆ ಮೊದಲಾದವರು ಕೂಡ ಈ ಸಿನಿಮಾದಲ್ಲಿ ಅಭಿನಯಿಸುತ್ತಿದ್ದಾರೆ ಎಂಬುದು ಚಿತ್ರತಂಡದ ಮಾಹಿತಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Renukaswamy Case: ದರ್ಶನ್ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ
Royal; ಟಾಂಗ್ ಕೊಡಲು ವಿರಾಟ್ ರೆಡಿ: ದಿನಕರ್ ನಿರ್ದೇಶನದ ಸಿನಿಮಾ
Billa Ranga Baashaa: ಬಿಆರ್ಬಿಗೆ ಕಿಚ್ಚ ರೆಡಿ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ…
Anish Tejeshwar: ‘ಮುಂದೆ ಹೇಗೋ ಏನೋ..’: ಆರಾಮ್ ಅರವಿಂದ ಸ್ವಾಮಿ ಹಾಡು ಹಬ್ಬ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Goa ದಲ್ಲಿ ನಡೆದ ಘಟನೆ ಅಲ್ಲ; ವಿದೇಶಿ ಕಡಲಿನಲ್ಲಿ ಬೋಟ್ ದುರಂತ: ವೈರಲ್ ವಿಡಿಯೋ ನೋಡಿ
Bellary: ನೀರಿನ ರಭಸಕ್ಕೆ ಕೊಚ್ಚಿಹೋಗಿ ವ್ಯಕ್ತಿ ಮೃತ
Renukaswamy Case: ದರ್ಶನ್ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ
Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ
IFFI: ಗೋವಾದಲ್ಲಿ 55ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ನ.20ರಿಂದ ಆರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.