‘ಎಲೆಕ್ಟ್ರಾನಿಕ್ ಸಿಟಿ’ಯಲ್ಲಿ ಟೆಕ್ಕಿ ಲೈಫ್: ತೆರೆಗೆ ಸಿದ್ದ
Team Udayavani, Jul 15, 2023, 6:56 PM IST
ಎಲ್ಲರನ್ನು ಕೈ ಬೀಸಿ ಕರೆಯುವ ಕ್ಷೇತ್ರವೆಂದರೆ ಅದು ಸಿನಿಮಾ ಕ್ಷೇತ್ರ. ಪ್ರತಿಭೆ ಮತ್ತು ಅದೃಷ್ಟವನ್ನು ನಂಬಿಕೊಂಡು ಇಲ್ಲಿ ಯಾರು ಬೇಕಾದರೂ ಬರಬಹುದು. ಇದೇ ರೀತಿ ತಮ್ಮ ಕನಸಿನೊಂದಿಗೆ ಟೆಕ್ಕಿಯೊಬ್ಬರು ಬಂದಿದ್ದಾರೆ. ಅವರೇ ಆರ್. ಚಿಕ್ಕಣ್ಣ. 15 ವರ್ಷಗಳ ಕಾಲ ಸಾಫ್ಟ್ವೇರ್ ಕ್ಷೇತ್ರದಲ್ಲಿ ಅನುಭವ ಪಡೆದಿರುವ ಚಿಕ್ಕಣ್ಣ ಅವರು “ಎಲೆಕ್ಟ್ರಾನಿಕ್ ಸಿಟಿ’ ಎಂಬ ಸಿನಿಮಾ ಮಾಡಿದ್ದಾರೆ. ನಿರ್ದೇಶನದ ಜೊತೆಗೆ ನಿರ್ಮಾಣ ಕೂಡಾ ಇವರದ್ದೇ.
ಈಗಾಗಲೇ ಸೆನ್ಸಾರ್ ಆಗಿ, ಅನೇಕ ಅಂತರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ಪ್ರದರ್ಶನಗೊಂಡು ಮೆಚ್ಚುಗೆ ಪಡೆದಿರುವ ಈ ಚಿತ್ರವನ್ನು ಈಗ ಬಿಡುಗಡೆ ಮಾಡಲು ಮುಂದಾಗಿದ್ದಾರೆ.
ಚಿತ್ರದ ಹೆಸರೇ ಹೇಳುವಂತೆ ಇದು ಟೆಕ್ಕಿಗಳ ಕುರಿತಾದ ಸಿನಿಮಾ. ಸಾಫ್ಟ್ವೇರ್ ಕಂಪೆನಿಗಳಿಗೆ ಎಲೆಕ್ಟ್ರಾನಿಕ್ ಸಿಟಿ ಫೇಮಸ್. ಅದೇ ಕಾರಣದಿಂದ ಸಿನಿಮಾಕ್ಕೆ ಅದೇ ಟೈಟಲ್ನ್ನಾಗಿಸಿದ್ದಾರೆ. ಸಿನಿಮಾದಲ್ಲಿ ಟೆಕ್ಕಿಗಳ ಲೈಫ್, ಸಾಫ್ಟ್ವೇರ್ ಕಂಪೆನಿಯೊಳಗೆ ನಡೆಯುವ ಒಳ್ಳೆಯ ಹಾಗೂ ಕೆಟ್ಟ ಘಟನೆಗಳು, ಇದು ಟೆಕ್ಕಿಗಳ ಸಂಸಾರದ, ವೈಯಕ್ತಿಕ ಜೀವನದ ಮೇಲೆ ಬೀರುವ ಪ್ರಭಾವ ಸೇರಿದಂತೆ ಹಲವು
ಅಂಶಗಳನ್ನು ಹೇಳಲಾಗಿದೆ. ಅದೇ ಕ್ಷೇತ್ರದಲ್ಲಿ ಅನುಭವವಿರುವ ಚಿಕ್ಕಣ್ಣ ಚಿತ್ರವನ್ನು ಸಾಕಷ್ಟು ನೈಜವಾಗಿ ಕಟ್ಟಿಕೊಟ್ಟಿದ್ದಾರಂತೆ. “ಸಿನಿಮಾ ತುಂಬಾ ನೈಜವಾಗಿ ಮೂಡಿಬಂದಿದೆ. ಈಗಾಗಲೇ ಚಿತ್ರೋತ್ಸವಗಳಲ್ಲಿ ನೋಡಿದವರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ’ ಎನ್ನುತ್ತಾರೆ ಚಿಕ್ಕಣ್ಣ.
ಚಿತ್ರದಲ್ಲಿ ಆರ್ಯನ್ ಹರ್ಷ, ದಿವ್ಯಾ ಆಶ್ಲೇಷ್, ರಕ್ಷಿತಾ ಕೆರೆಮನೆ, ರಶ್ಮಿ ಶೆಟ್ಟಿ, ಭವ್ಯಾ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಚಿತ್ರಕ್ಕೆ ವಿನು ಮನಸು ಸಂಗೀತವಿದ್ದು, ಅನುರಾಧಾ ಭಟ್ ಹಾಗೂ ಗಿರೀಶ್ ಹಾಡಿದ್ದಾರೆ. ಶೀಘ್ರದಲ್ಲೇ ಚಿತ್ರ ಬಿಡುಗಡೆ ಮಾಡಲು ಚಿಕ್ಕಣ್ಣ ಮುಂದಾಗಿದ್ದಾ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Renukaswamy Case: ದರ್ಶನ್ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ
Royal; ಟಾಂಗ್ ಕೊಡಲು ವಿರಾಟ್ ರೆಡಿ: ದಿನಕರ್ ನಿರ್ದೇಶನದ ಸಿನಿಮಾ
Billa Ranga Baashaa: ಬಿಆರ್ಬಿಗೆ ಕಿಚ್ಚ ರೆಡಿ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ…
Anish Tejeshwar: ‘ಮುಂದೆ ಹೇಗೋ ಏನೋ..’: ಆರಾಮ್ ಅರವಿಂದ ಸ್ವಾಮಿ ಹಾಡು ಹಬ್ಬ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Prophet Hate Speech; ಯತಿ ನರಸಿಂಹಾನಂದ ಸರಸ್ವತಿ ಯುಪಿ ಪೊಲೀಸರ ವಶಕ್ಕೆ
Theft Case: ಬ್ಯಾಂಕಿನಿಂದ ಹಣದ ಬ್ಯಾಗ್ ಕಳವು ಪ್ರಕರಣ
Exit poll results; ಹರಿಯಾಣದಲ್ಲಿ ಕೈಗೆ ಅಧಿಕಾರ, ಜಮ್ಮು ಮತ್ತು ಕಾಶ್ಮೀರ ಅತಂತ್ರ?
Manvi: ವಿಪಕ್ಷಗಳ ಬೆದರಿಕೆಗಳಿಗೆ ಜಗ್ಗಲ್ಲ, ಜನರಿಗಾಗಿ ಹೋರಾಟ ಮುಂದುವರಿಸುವೆ: ಸಿದ್ದರಾಮಯ್ಯ
ನಾಡೋಜ ಜಿ. ಶಂಕರ್ 69ನೇ ಹುಟ್ಟು ಹಬ್ಬ: ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ವಿಶೇಷ ಪೂಜೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.