Chandrayaan-3; ಗಗನಯಾನದತ್ತ ತಿರುಗಿದ ವಿಜ್ಞಾನಿಗಳು

ಚಂದ್ರಯಾನ-3ರ ಉಡ್ಡಯನದ ಬಳಿಕ ಇಸ್ರೋ ಚಿತ್ತ ಮಾನವಸಹಿತ ಯೋಜನೆಯತ್ತ

Team Udayavani, Jul 16, 2023, 7:30 AM IST

isroChandrayaan-3; ಗಗನಯಾನದತ್ತ ತಿರುಗಿದ ವಿಜ್ಞಾನಿಗಳು

ಶ್ರೀಹರಿಕೋಟಾ:ಚಂದ್ರಯಾನ-3ರ ಯಶಸ್ವಿ ಉಡಾವಣೆಯ ಬಳಿಕ ಈಗ ಇಸ್ರೋದ ಗಮನ “ಗಗನಯಾನ’ದತ್ತ ನೆಟ್ಟಿದೆ. ಚಂದ್ರಯಾನ-3 ಅನ್ನು ಹೊತ್ತ ಎಲ್‌ವಿಎಂ3-ಎಂ4 ರಾಕೆಟ್‌ ಚಂದಿರನತ್ತ ಪ್ರಯಾಣ ಬೆಳೆಸಿರುವುದು ಭಾರತದ ಮೊದಲ ಮಾನವಸಹಿತ ಬಾಹ್ಯಾಕಾಶ ಯೋಜನೆಗೆ ಹೊಸ ಶಕ್ತಿ ತುಂಬಿದೆ. ಇದೇ ಬಾಹ್ಯಾಕಾಶ ನೌಕೆಯನ್ನು ತನ್ನ ಮಹತ್ವಾಕಾಂಕ್ಷಿ ಗಗನಯಾನ ಯೋಜನೆಗೂ ಬಳಸಲು ಇಸ್ರೋ ಸಜ್ಜಾಗುತ್ತಿದೆ.

400 ಕಿ.ಮೀ.ಗಳ ಕಕ್ಷೆಗೆ ಮೂವರು ಮಾನವರನ್ನು 3 ದಿನಗಳ ಕಾಲ ಕಳುಹಿಸಿ, ನಂತರ ಅವರನ್ನು ಸುರಕ್ಷಿತವಾಗಿ ವಾಪಸ್‌ ಭೂಮಿಗೆ ಕರೆತರುವ ಗಗನಯಾನ ಯೋಜನೆಯನ್ನು ಯಶಸ್ವಿಯಾಗಿಸಲು ಈಗ ವಿಜ್ಞಾನಿಗಳು ಶ್ರಮಿಸತೊಡಗಿದ್ದಾರೆ.

ಗಗನಯಾನಕ್ಕಾಗಿ ಎಲ್‌ವಿಎಂ3 ರಾಕೆಟ್‌ ಅನ್ನು ಮರುವಿನ್ಯಾಸಗೊಳಿಸಿ, ಗಗನಯಾತ್ರಿಗಳ ಸುರಕ್ಷಿತ ಸಾಗಣೆಗೆ ಬೇಕಾದ ಅಗತ್ಯತೆಗಳನ್ನು (ಹ್ಯೂಮನ್‌ ರೇಟಿಂಗ್‌ ರಿಕ್ವಾರ್‌ಮೆಂಟ್ಸ್‌) ಪೂರೈಸಲಾಗುತ್ತದೆ. ನಂತರ ಇದನ್ನು “ಹ್ಯೂಮನ್‌ ರೇಟೆಡ್‌ ಎಲ್‌ವಿಎಂ3′ ಎಂದು ಕರೆಯಲಾಗುತ್ತದೆ. ಆಗಸ್ಟ್‌ ತಿಂಗಳ ಅಂತ್ಯದಲ್ಲಿ ಗಗನಯಾನದ ಮೊದಲ ಅಬಾರ್ಟ್‌ ಮಿಷನ್‌ ನಡೆಸಲಾಗುತ್ತದೆ. ಮುಂದಿನ ವರ್ಷಾಂತ್ಯದಲ್ಲಿ ಮಾನವರಹಿತ ಉಡಾವಣೆ ನಡೆಸಲು ಯೋಜಿಸಲಾಗಿದೆ ಎಂದು ಇಸ್ರೋ ತಿಳಿಸಿದೆ.

ಭಾರತ ಮೂಲದವರಿಗೆ ಹೆಮ್ಮೆ:
ಇತ್ತ ಚಂದ್ರಯಾನ-3ರ ಉಡಾವಣೆ ಯಶಸ್ವಿಯಾಗುತ್ತಿದ್ದಂತೆ, ಅತ್ತ ಅಮೆರಿಕದಲ್ಲಿರುವ ಭಾರತೀಯ ಮೂಲದವರ ದೊಡ್ಡ ದೊಡ್ಡ ಕಂಪನಿಗಳು ಹಾಗೂ ಸ್ಟಾರ್ಟಪ್‌ಗಳ ಪ್ರತಿನಿಧಿಗಳು ಸಂಭ್ರಮಿಸಿದ್ದಾರೆ. ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತವು ಜಾಗತಿಕ ನಾಯಕನಾಗಿ ಹೊರಹೊಮ್ಮುತ್ತಿರುವುದನ್ನು ಈ ಉಡಾವಣೆಯು ಸಾಬೀತುಪಡಿಸಿದೆ ಎಂದಿದ್ದಾರೆ.

ಚಂದಿರನೆಂಬ ಕುತೂಹಲದೊಳಗೆ ಶೋಧನೆ
ಚಂದ್ರನ ಬಗ್ಗೆ ಮಾಹಿತಿ ಸಂಗ್ರಹಿಸುವುದು, ಚಂದ್ರನಲ್ಲಿ ಲಭ್ಯವಿರುವ ವಸ್ತುಗಳು ಮತ್ತು ಅವುಗಳ ಗುಣವಿಶೇಷಗಳನ್ನು ಅರಿಯುವುದು ಇಸ್ರೋದ ಉದ್ದೇಶವಾಗಿದೆ ಎಂದು ಇಸ್ರೋದ ಯುಆರ್‌ ರಾವ್‌ ಉಪಗ್ರಹ ಕೇಂದ್ರದ ನಿರ್ದೇಶಕರಾದ ಡಾ. ಶಂಕರನ್‌ ಹೇಳಿದ್ದಾರೆ.

“ನ್ಯೂಸ್‌ 18′ ಚಾನೆಲ್‌ಗೆ  ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, “ಚಂದ್ರನಲ್ಲಿ ಕೆಲವು ಅಮೂಲ್ಯ ರಾಸಾಯನಿಕಗಳು ಮತ್ತು ಖನಿಜಗಳು ಇವೆ ಎಂದು ಹೇಳಲಾಗುತ್ತಿದೆ. ಅವುಗಳನ್ನು ಅನ್ವೇಷಿಸಿ, ಬಳಸಿಕೊಳ್ಳಬಹುದೇ ಎಂಬುದನ್ನು ತಿಳಿಯಬೇಕು. ಅಲ್ಲದೇ, ಇಡೀ ಜಗತ್ತೇ ಭವಿಷ್ಯದ ಅಂತರ್‌ಗ್ರಹೀಯ ಪರಿಶೋಧನೆಗೆ ಚಂದ್ರನನ್ನೇ ಆಧಾರವಾಗಿಟ್ಟುಕೊಳ್ಳಬಹುದೇ? ಚಂದ್ರನ ಮೇಲ್ಮೈನಲ್ಲೇ ಕೆಲವೊಂದು ಪ್ರಾಪೆಲ್ಲೆಂಟ್‌ಗಳು ಮತ್ತು ಇತರೆ ಉಪಕರಣಗಳನ್ನು ಸಿದ್ಧಪಡಿಸಲು ಸಾಧ್ಯವೇ ಎಂಬ ಪ್ರಶ್ನೆಗೆ ಉತ್ತರ ಕಂಡುಕೊಳ್ಳಲು ಪ್ರಯತ್ನಿಸುತ್ತಿದೆ ಎಂದರು.

 

ಟಾಪ್ ನ್ಯೂಸ್

8

Mallika Sherawat: ಮೀಟೂ ವಿವಾದಕ್ಕೆ ನಟಿ ಮಲ್ಲಿಕಾ ಶೆರಾವತ್‌ ಧ್ವನಿ; ಹೀರೋ ಮೇಲೆ ಆರೋಪ

1-qweeqw

Shimla: ವಿವಾದಿತ ಮಸೀದಿಯ 3 ಅನಧಿಕೃತ ಮಹಡಿಗಳನ್ನು ಕೆಡವಲು ಆದೇಶ

Jaishankar

Jaishankar; ಭಾರತ-ಪಾಕ್ ಸಂಬಂಧದ ಕುರಿತ ಚರ್ಚೆಗೆ ಇಸ್ಲಾಮಾಬಾದ್‌ಗೆ ಹೋಗುತ್ತಿಲ್ಲ

1-yati

Prophet Hate Speech; ಯತಿ ನರಸಿಂಹಾನಂದ ಸರಸ್ವತಿ ಯುಪಿ ಪೊಲೀಸರ ವಶಕ್ಕೆ

congress

Exit poll results; ಹರಿಯಾಣದಲ್ಲಿ ಕೈಗೆ ಅಧಿಕಾರ, ಜಮ್ಮು ಮತ್ತು ಕಾಶ್ಮೀರ ಅತಂತ್ರ?

CM-Sidda-Raichuru

Manvi: ವಿಪಕ್ಷಗಳ ಬೆದರಿಕೆಗಳಿಗೆ ಜಗ್ಗಲ್ಲ, ಜನರಿಗಾಗಿ ಹೋರಾಟ ಮುಂದುವರಿಸುವೆ: ಸಿದ್ದರಾಮಯ್ಯ

01

ನಾಡೋಜ‌ ಜಿ. ಶಂಕರ್ 69ನೇ ಹುಟ್ಟು ಹಬ್ಬ: ಉಚ್ಚಿಲ‌ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ವಿಶೇಷ ಪೂಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweeqw

Shimla: ವಿವಾದಿತ ಮಸೀದಿಯ 3 ಅನಧಿಕೃತ ಮಹಡಿಗಳನ್ನು ಕೆಡವಲು ಆದೇಶ

Jaishankar

Jaishankar; ಭಾರತ-ಪಾಕ್ ಸಂಬಂಧದ ಕುರಿತ ಚರ್ಚೆಗೆ ಇಸ್ಲಾಮಾಬಾದ್‌ಗೆ ಹೋಗುತ್ತಿಲ್ಲ

1-yati

Prophet Hate Speech; ಯತಿ ನರಸಿಂಹಾನಂದ ಸರಸ್ವತಿ ಯುಪಿ ಪೊಲೀಸರ ವಶಕ್ಕೆ

congress

Exit poll results; ಹರಿಯಾಣದಲ್ಲಿ ಕೈಗೆ ಅಧಿಕಾರ, ಜಮ್ಮು ಮತ್ತು ಕಾಶ್ಮೀರ ಅತಂತ್ರ?

1-deee

Haryana Polls; ಕೈ ಕಾರ್ಯಕರ್ತರು ಮತ್ತು ಪಕ್ಷೇತರನ ಬೆಂಬಲಿಗರ ಮಾರಾಮಾರಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

8

Mallika Sherawat: ಮೀಟೂ ವಿವಾದಕ್ಕೆ ನಟಿ ಮಲ್ಲಿಕಾ ಶೆರಾವತ್‌ ಧ್ವನಿ; ಹೀರೋ ಮೇಲೆ ಆರೋಪ

JDS: ಎಡಿಜಿಪಿ ವಿರುದ್ಧ ಜೆಡಿಎಸ್‌ ಪ್ರತಿಭಟನೆ

JDS: ಎಡಿಜಿಪಿ ವಿರುದ್ಧ ಜೆಡಿಎಸ್‌ ಪ್ರತಿಭಟನೆ

1-qweeqw

Shimla: ವಿವಾದಿತ ಮಸೀದಿಯ 3 ಅನಧಿಕೃತ ಮಹಡಿಗಳನ್ನು ಕೆಡವಲು ಆದೇಶ

5

ಅಮೆಜಾನ್‌ನಲ್ಲಿ ಶೀಘ್ರ 14,000 ಉದ್ಯೋಗ ಕಡಿತ: ವರದಿ

4

Dr G Parameshwar: ಸೆನ್‌ ಠಾಣೆಗಳಿಗೂ ಎಸ್ಪಿ ಕೇಡರ್‌: ಗೃಹ ಸಚಿವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.