Karnataka: ಸದ್ಯ ಇಲ್ಲ ಬರ ಘೋಷಣೆ- ಮುಂದಿನ ತಿಂಗಳು ನಿರ್ಣಯ ಸಾಧ್ಯತೆ

ರಾಜ್ಯದಲ್ಲಿ ಶೇ. 45 ಮಳೆ ಕೊರತೆ- 81 ತಾಲೂಕುಗಳಲ್ಲಿ ಅತೀವ ಅಭಾವ

Team Udayavani, Jul 16, 2023, 7:44 AM IST

DROUGHT

ಬೆಂಗಳೂರು: ರಾಜ್ಯದಲ್ಲಿ ಶೇ. 45ರಷ್ಟು ಮಳೆ ಕೊರತೆಯಾಗಿದೆ. ಆದರೆ ಬರಪೀಡಿತ ಪ್ರದೇಶಗಳ ಘೋಷಣೆಗೆ ಹಿಂದೇಟು ಹಾಕಿರುವ ಸರಕಾರ ಆಗಸ್ಟ್‌ ತಿಂಗಳ ಪರಿಸ್ಥಿತಿ ನೋಡಿಕೊಂಡು ಮುಂದುವರಿಯಲು ನಿರ್ಧರಿಸಿದೆ.

ಈ ಬಾರಿ ಮುಂಗಾರು ಆರಂಭದಿಂದಲೂ ಮಳೆಯ ಪ್ರಮಾಣ ಕ್ಷೀಣಿಸಿದೆ. ಜೂನ್‌ನಲ್ಲಿ ವಾಡಿಕೆಯಂತೆ 199 ಮಿ.ಮೀ. ಆಗಬೇಕಿದ್ದರೂ 87 ಎಂ.ಎಂ. ಅಷ್ಟೇ ಮಳೆಯಾಗಿತ್ತು. ಜುಲೆ  ತಿಂಗಳಿನಲ್ಲೂ ನಿರೀಕ್ಷಿತ ಪ್ರಮಾಣದ ಮಳೆಯಾಗಿಲ್ಲ. ಒಟ್ಟು ಶೇ. 45ರಷ್ಟು ಮಳೆ ಕೊರತೆ ಉಂಟಾಗಿದೆ. ಅದರಲ್ಲೂ ಹಾಸನ, ಮಂಡ್ಯ, ಕೋಲಾರ ಜಿಲ್ಲೆಗಳಲ್ಲಿ ಮಳೆಯ ಅಭಾವವಿದ್ದರೆ ಹಾಸನ ಮತ್ತು ಧಾರವಾಡದಲ್ಲಿ ತೇವಾಂಶದ ಕೊರತೆಯೂ ಇದೆ.

ತಿಂಗಳಿಗಾಗುವಷ್ಟೇ ಕುಡಿಯುವ ನೀರು

ಒಟ್ಟು 114.57 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯದ ಕಾವೇರಿ ಕಣಿವೆಯ ಹಾರಂಗಿ, ಹೇಮಾವತಿ, ಕೆಆರ್‌ಎಸ್‌, ಕಬಿನಿ ಜಲಾಶಯಗಳಲ್ಲಿ 47.34 ಟಿಎಂಸಿ ನೀರಿದೆ. ಕಳೆದ ಬಾರಿ ಇದೇ ಸಮಯಕ್ಕೆ 108.12 ಟಿಎಂಸಿ ನೀರಿತ್ತು. 422.45 ಟಿಎಂಸಿ ಸಂಗ್ರಹ ಸಾಮರ್ಥ್ಯದ ಕೃಷ್ಣಾ ಜಲಾನಯನ ಪ್ರದೇಶದ ಜಲಾಶಯಗಳಲ್ಲಿ 87.74 ಟಿಎಂಸಿ ಮಾತ್ರ ನೀರಿದೆ. ರಾಜ್ಯಾದ್ಯಂತ ಜಲಾಶಯಗಳಲ್ಲಿ 30 ದಿನಗಳ ತನಕ ಕುಡಿಯುವ ಉದ್ದೇಶಕ್ಕೆ ಪೂರೈಸಬಹುದಾದಷ್ಟು ನೀರು ಇದೆ. ಸಣ್ಣ ನೀರಾವರಿ ಇಲಾಖೆಗೆ ಸೇರಿದ 3,673 ಕೆರೆಗಳ ಪೈಕಿ ಶೇ. 18ರಷ್ಟು ಕೆರೆಗಳು ಅರೆವಾಸಿ ತುಂಬಿದ್ದರೆ, ಶೇ. 64ರಷ್ಟು ಕೆರೆಗಳಲ್ಲಿ ಕಾಲು ಭಾಗವಷ್ಟೇ ನೀರಿದೆ. ಇನ್ನುಳಿದ ಶೇ. 18ರಷ್ಟು ಕೆರೆಗಳು ಬತ್ತಿದ್ದು, ಅಂತರ್ಜಲದ ಮಟ್ಟವೂ ಕುಸಿತವಾಗಿದೆ.

ಮಳೆ ಕೊರತೆ ಎದುರಿಸುತ್ತಿರುವ ಪ್ರದೇಶಗಳು

ಬೀದರ್‌, ಕಲಬುರಗಿ, ವಿಜಯಪುರ, ಯಾದಗಿರಿ, ಕೋಲಾರ ಜಿಲ್ಲೆಗಳಲ್ಲಿ ಮಳೆಯ ಅತೀವ ಕೊರತೆಯಿದ್ದರೆ ಬಾಗಲಕೋಟೆ, ಕೊಪ್ಪಳ, ರಾಯಚೂರು, ರಾಮನಗರ ಜಿಲ್ಲೆಗಳಲ್ಲೂ ಸಾಕಷ್ಟು ಮಳೆ ಕೊರತೆ ಇದೆ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ಚಾಮರಾಜನಗರ ಜಿಲ್ಲೆಗಳ ಮೇಲೂ ಮಳೆ ಕೊರತೆಯ ಛಾಯೆ ಆವರಿಸಿದೆ. 80 ತಾಲೂಕಿನ 286 ಹೋಬಳಿಗಳಲ್ಲಿ ಮಳೆ ಕೊರತೆ ಇದೆ. ಆಳಂದ, ಅಫ‌ಜಲ್‌ಪುರ, ಬಬಲೇಶ್ವರ, ನಿಡಗುಂದಿ, ಮುದ್ದೇಬಿಹಾಳ, ಟಿ.ನರಸೀಪುರ, ಕೆಜಿಎಫ್ ಸೇರಿ 7 ತಾಲೂಕಿನ 81 ಹೋಬಳಿಗಳಲ್ಲಿ ಮಳೆ ಕೊರತೆ ಅತಿಯಾಗಿ ಕಾಡುತ್ತಿದೆ.

ಮುಂದಿವೆ ಮಳೆಯ ದಿನಗಳು?

ಮುಂಗಾರು ಹಂಗಾಮಿನಲ್ಲಿ 82.351 ಲಕ್ಷ ಹೆಕ್ಟೇರ್‌ ಬಿತ್ತನೆ ಗುರಿ ಇತ್ತು. ಆದರೆ ಮಳೆ ಕೊರತೆಯಿಂದಾಗಿ 26.819 ಲಕ್ಷ ಹೆಕ್ಟೇರ್‌ನಲ್ಲಷ್ಟೇ ಬಿತ್ತನೆ ಆಗಿದೆ. ಆರಂಭದಲ್ಲಿ ಮಳೆ ಕೊರತೆ ಎದುರಿಸುತ್ತಿದ್ದ ಕರಾವಳಿ, ಮಲೆನಾಡಿನ ಕೆಲವೆಡೆ ಉತ್ತಮ ಮಳೆಯಾಗುತ್ತಿದ್ದು, ಮುಂದಿನ ದಿನಗಳಲ್ಲಿ ಕೊಡಗು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಉತ್ತಮ ಮಳೆ ನಿರೀಕ್ಷಿಸಲಾಗಿದೆ. ಇದರಿಂದ ಮಳೆ ಕೊರತೆ ಹಾಗೂ ತೇವಾಂಶ ಕೊರತೆಯಲ್ಲಿ ಇಳಿಕೆಯಾಗಲಿದೆ.

ಪರಿಸ್ಥಿತಿ ಪರಿಶೀಲಿಸಿ ನಿರ್ಧಾರ

ಮುಂಗಾರು ಆರಂಭದಿಂದ ಎರಡು ತಿಂಗಳು ಪೂರ್ಣಗೊಂಡ ಅನಂತರದ ಹವಾಮಾನ ಪರಿಸ್ಥಿತಿ ಅವಲೋಕಿಸಿ ತೀರ್ಮಾನ ಕೈಗೊಳ್ಳಬೇಕಾಗುತ್ತದೆ. ಕೇಂದ್ರ ಸರಕಾರದ ಬರ ಕೈಪಿಡಿ 2016ರ ಅನ್ವಯ ಬರಪೀಡಿತ ಪ್ರದೇಶಗಳ ಘೋಷಣೆಗೆ ಕೇವಲ ಮಳೆ ಕೊರತೆಯಷ್ಟೇ ಮಾನದಂಡವಾಗಿರುವುದಿಲ್ಲ. ಹೀಗಾಗಿ ಆಗಸ್ಟ್‌ ತಿಂಗಳ ಅನಂತರದ ಹವಾಮಾನ ಪರಿಸ್ಥಿತಿ ಗಮನಿಸಿಕೊಂಡು ಸಚಿವ ಸಂಪುಟ ಉಪಸಮಿತಿಯಲ್ಲಿ ನಿರ್ಣಯ ಕೈಗೊಂಡು, ಸಂಪುಟ ಸಭೆಯ ಮುಂದೆ ಮಂಡಿಸಿ, ಕೇಂದ್ರ ಸರಕಾರಕ್ಕೆ ಶಿಫಾರಸು ಮಾಡಲಾಗುತ್ತದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ.

ಕೆಲವು ವಾರಗಳಿಂದ ಮಳೆಗಾಲ ಚುರುಕು – ಕರಾವಳಿಯಲ್ಲಿ ಮಳೆ ಕೊರತೆ ಇಳಿಕೆ

ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಾದ್ಯಂತ ಕೆಲವು ವಾರಗಳಿಂದ ಉತ್ತಮ ಮಳೆಯಾಗುತ್ತಿದ್ದು, ಮುಂದಿನ ಕೆಲವು ದಿನಗಳಲ್ಲಿ ಮಳೆ ಮತ್ತಷ್ಟು ಬಿರುಸು ಪಡೆಯುವ ನಿರೀಕ್ಷೆ ಇದೆ. ಜುಲೈ ತಿಂಗಳ ಆರಂಭದ ದಿನಗಳ ತನಕ ಉಭಯ ಜಿಲ್ಲೆಗಳಲ್ಲಿ ಇದ್ದ ಮಳೆ ಕೊರತೆ ಸದ್ಯ ಕಡಿಮೆಯಾಗಿದೆ. ಕರಾವಳಿ ಭಾಗದಲ್ಲಿದ್ದ ಮಳೆ ಕೊರತೆ ಸದ್ಯ ಶೇ. 24ಕ್ಕೆ ತಗ್ಗಿದೆ. ಉಭಯ ಜಿಲ್ಲೆಗಳ ಪೈಕಿ ಮೊದಲ ಬಾರಿಗೆ ಕಾಪು ತಾಲೂಕಿನಲ್ಲಿ ವಾಡಿಕೆಗಿಂತ ತುಸು ಹೆಚ್ಚಿನ ಮಳೆಯಾಗಿದೆ.

ಹವಾಮಾನ ಇಲಾಖೆಯ ಅಂಕಿ ಅಂಶದಂತೆ ದ.ಕ. ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ, ಉಡುಪಿ ಜಿಲ್ಲೆಯಲ್ಲಿ ಒಂದನ್ನು ಹೊರತುಪಡಿಸಿ ಉಳಿದ ಎಲ್ಲ ತಾಲೂಕುಗಳಲ್ಲಿ ಮಳೆ ಕೊರತೆ ಇದೆ. ದ.ಕ. ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿ ಶೇ. -41, ಬಂಟ್ವಾಳದಲ್ಲಿ -19, ಮಂಗಳೂರಿನಲ್ಲಿ -14, ಪುತ್ತೂರಿನಲ್ಲಿ -32, ಸುಳ್ಯದಲ್ಲಿ -18, ಮೂಡುಬಿದಿರೆಯಲ್ಲಿ -5, ಕಡಬದಲ್ಲಿ -44ರಷ್ಟು ಮಳೆ ಕೊರತೆ ಇದೆ. ಅದೇ ರೀತಿ ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ -24, ಕುಂದಾಪುರದಲ್ಲಿ -5, ಉಡುಪಿಯಲ್ಲಿ -10, ಬೈಂದೂರಿನಲ್ಲಿ-9, ಬ್ರಹ್ಮಾವರದಲ್ಲಿ -12, ಕಾಪುವಿನಲ್ಲಿ 2 ಮತ್ತು ಹೆಬ್ರಿಯಲ್ಲಿ -38 ರಷ್ಟು ಮಳೆ ಕೊರತೆ ಇದೆ.

ನಾಲ್ಕು ದಿನ “ಎಲ್ಲೋ ಅಲರ್ಟ್‌”

ಕರಾವಳಿ ಭಾಗದಲ್ಲಿ ಮುಂದಿನ ದಿನಗಳಲ್ಲಿ ಮತ್ತಷ್ಟು ಮಳೆ ಸುರಿಯುವ ಸಾಧ್ಯತೆ ಇದೆ. ಭಾರತೀಯ ಹವಾಮಾನ ಇಲಾಖೆ (ಐಎಂಡಿ)ಯ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಜು. 16ರಿಂದ 19ರ ವರೆಗೆ ಎಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಈ ವೇಳೆ ಬಿರುಸಿನಿಂದ ಕೂಡಿದ ಮಳೆಯಾಗಲಿದ್ದು, ಗಾಳಿ, ಸಮುದ್ರದ ಅಬ್ಬರ ಕೂಡ ಹೆಚ್ಚಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಜೂ. 1ರಿಂದ ಮಳೆ ವಿವರ (ಮಿ.ಮೀ.)

ಜಿಲ್ಲೆ    ವಾಡಿಕೆ ಮಳೆ    ಸುರಿದ ಮಳೆ     ಶೇ.

ದಕ್ಷಿಣ ಕನ್ನಡ  1,523   1,088   -29

ಉಡುಪಿ           1,162   892      -19

ಉತ್ತರ ಕನ್ನಡ  1,162   892      -23

ಕರಾವಳಿ          1,378   1,053   -24

ಟಾಪ್ ನ್ಯೂಸ್

Irani Cup: Tanush Kotyan puts up a brave fight; Mumbai won the Irani Cup after 27 years

Irani Cup: ತನುಷ್‌ ಕೋಟ್ಯಾನ್‌ ದಿಟ್ಟ ಹೋರಾಟ; 27 ವರ್ಷದ ಬಳಿಕ ಇರಾನಿ ಕಪ್‌ ಗೆದ್ದ ಮುಂಬೈ

1-aaaa

Goa ದಲ್ಲಿ ನಡೆದ ಘಟನೆ ಅಲ್ಲ; ವಿದೇಶಿ ಕಡಲಿನಲ್ಲಿ ಬೋಟ್ ದುರಂತ: ವೈರಲ್ ವಿಡಿಯೋ ನೋಡಿ

1

Renukaswamy Case: ದರ್ಶನ್‌ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ

Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ

Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ

PM: ಕಾಂಗ್ರೆಸ್ ಡ್ರಗ್ಸ್‌ ದಂಧೆ ಹಣ ಚುನಾವಣೆ ಗೆಲ್ಲಲು ಬಳಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ

PM: ಕಾಂಗ್ರೆಸ್ ಡ್ರಗ್ಸ್‌ ದಂಧೆ ಹಣ ಚುನಾವಣೆ ಗೆಲ್ಲಲು ಬಳಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ

Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು

Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು

IFFI: ನವೆಂಬರ್ 20 ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ

IFFI: ನವೆಂಬರ್ 20ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

Renukaswamy Case: ದರ್ಶನ್‌ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ

Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ

Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ

Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು

Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು

ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಸಿಗುವ ವಿಶ್ವಾಸವಿದೆ ಇಲ್ಲದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ

ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಸಿಗುವ ವಿಶ್ವಾಸವಿದೆ ಇಲ್ಲದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ

ನನ್ನಂತ ದಲಿತರಿಗೆ ಒಳ್ಳೆಯದಾಗದಿದ್ದರೆ ಮುಂದೆ ಯಾವ ದಲಿತರಿಗೂ ಒಳ್ಳೆದಾಗಲ್ಲ: ಜಿಗಜಿಣಗಿ ಭಾವುಕ

ನನ್ನಂತ ದಲಿತರಿಗೆ ಒಳ್ಳೆಯದಾಗದಿದ್ದರೆ ಮುಂದೆ ಯಾವ ದಲಿತರಿಗೂ ಒಳ್ಳೆದಾಗಲ್ಲ: ಜಿಗಜಿಣಗಿ ಭಾವುಕ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Irani Cup: Tanush Kotyan puts up a brave fight; Mumbai won the Irani Cup after 27 years

Irani Cup: ತನುಷ್‌ ಕೋಟ್ಯಾನ್‌ ದಿಟ್ಟ ಹೋರಾಟ; 27 ವರ್ಷದ ಬಳಿಕ ಇರಾನಿ ಕಪ್‌ ಗೆದ್ದ ಮುಂಬೈ

1-aaaa

Goa ದಲ್ಲಿ ನಡೆದ ಘಟನೆ ಅಲ್ಲ; ವಿದೇಶಿ ಕಡಲಿನಲ್ಲಿ ಬೋಟ್ ದುರಂತ: ವೈರಲ್ ವಿಡಿಯೋ ನೋಡಿ

Bellary: ನೀರಿನ ರಭಸಕ್ಕೆ ಕೊಚ್ಚಿಹೋಗಿ ವ್ಯಕ್ತಿ ಮೃತ

Bellary: ನೀರಿನ ರಭಸಕ್ಕೆ ಕೊಚ್ಚಿಹೋಗಿ ವ್ಯಕ್ತಿ ಮೃತ

1

Renukaswamy Case: ದರ್ಶನ್‌ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ

Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ

Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.