ಐಷಾರಾಮಿ ಲೈಫಿಗೆ ಹೆಣ್ಣು ವೇಷ
Team Udayavani, Jul 16, 2023, 3:40 PM IST
ಬೆಂಗಳೂರು: ಪತ್ನಿ, ಮಕ್ಕಳ ಜತೆ ಐಷಾರಾಮಿ ಜೀವನ ನಡೆಸಲು ಹೆಣ್ಣಿನ ವೇಷ ಧರಿಸಿ ಮಂಗಳಮುಖೀಯರ ಜತೆ ಸೇರಿ ಭಿಕ್ಷಾಟನೆ ಮಾಡುತ್ತಿದಲ್ಲದೆ, ಸ್ಥಳೀಯ ಅಂಗಡಿ ಮಾಲೀಕರಿಗೆ ತೊಂದರೆ ಕೊಡುತ್ತಿದ್ದ ಚೇತನ್ ಎಂಬಾತನನ್ನು ಬಾಗಲಗುಂಟೆ ಪೊಲೀಸರು ಬಂಧಿಸಿದ್ದಾರೆ.
ಆರೋಪಿ ಐಷಾರಾಮಿ ಜೀವನಕ್ಕೆ ಮಾರು ಹೋಗಿದ್ದು, ಯಾವುದೇ ಕೆಲಸಕ್ಕೆ ಹೋಗದೆ ನಿತ್ಯ ಹೆಣ್ಣಿನ ವೇಷ ಧರಿಸಿ, ಮಂಗಳಮುಖಿಯರ ಜತೆ ಸೇರಿ ನಾಲ್ಕೈದು ವರ್ಷಗಳಿಂದ ಭಿಕ್ಷಾಟನೆ ಮಾಡುತ್ತಿದ್ದ. ಆರೋಪಿ ಬಂದ ಹಣದಲ್ಲಿ ಕುಟುಂಬ ನಿರ್ವಹಿಸುತ್ತಿದ್ದ. ಅಲ್ಲದೆ, ಇತ್ತೀಚೆಗೆ ತುಮಕೂರು ರಸ್ತೆಯ ಮಂಜು ನಾಥನಗರದಲ್ಲಿ ಬಾಡಿಗೆಗೆ ಕೋಣೆ ಪಡೆದು ಆಗಾಗ್ಗೆ ಅಲ್ಲಿಯೇ ಉಳಿದುಕೊಳ್ಳುತ್ತಿದ್ದ. ಮಂಗಳಮುಖಿಯರ ಜತೆ ಸ್ನೇಹ ಬೆಳೆಸಿದ್ದ ಆರೋಪಿ, ಅವರಿಗೂ ತನ್ನ ಬಗ್ಗೆ ಯಾವುದೇ ವಿಚಾರ ಹೇಳಿಕೊಂಡಿರಲಿಲ್ಲ. ಮತ್ತೂಂದೆಡೆ ಆತ ಗಂಡು ಎಂಬುದು ಆತನ ಜತೆಗಿದ್ದ ಮಂಗಳಮುಖೀಯರಿಗೂ ತಿಳಿದಿರಲಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದರು.
ಮನೆಯಲ್ಲಿ ಗಂಡು, ಹೊರಗೆ ಹೆಣ್ಣು: ಪತ್ನಿ, ಮಕ್ಕಳ ಜತೆ ವಾಸವಾಗಿದ್ದ ಚೇತನ್ ಮನೆಯಲ್ಲಿ ಗಂಡಿನ ವೇಷದಲ್ಲಿ ಇರುತ್ತಿದ್ದ. ಮನೆಯಿಂದ ಹೊರಗಡೆ ಬರುತ್ತಿದ್ದಂತೆ ಸೀರೆ, ಚೂಡಿದಾರ ಧರಿಸಿ ರಸ್ತೆ ಬದಿಯಲ್ಲಿ ನಿಂತು ಭಿಕ್ಷಾಟನೆ ಮಾಡುತ್ತಿದ್ದ. ಹಣ ಕೊಡದಿದ್ದರೆ ಸುಲಿಗೆ ರೀತಿಯಲ್ಲಿ ಕಸಿದುಕೊಳ್ಳುತ್ತಿದ್ದ. ಅದನ್ನು ಪ್ರಶ್ನಿಸಿದರೆ ಮಂಗಳಮುಖಿಯರನ್ನು ಕರೆಸಿ ದಾಂಧಲೆ ಮಾಡುತ್ತಿದ್ದ. ಜತೆಗೆ ಮಂಜುನಾಥನಗರದಲ್ಲಿ ಬಿಎಂಆರ್ಸಿಎಲ್ ನಿರ್ಮಿಸುತ್ತಿರುವ ಮೆಟ್ರೋ ಕಾಮಗಾರಿ ಸಮೀಪದಲ್ಲಿ ಶೆಡ್ ನಿರ್ಮಿಸಿ, ಅದನ್ನು ತನ್ನದೆಂದು ಹೇಳಿಕೊಂಡು, ಮುಂದಿನ ದಿನಗಳಲ್ಲಿ ಅದನ್ನು ಬಾಡಿಗೆಗೆ ನೀಡುವ ಉದ್ದೇಶವಿತ್ತು ಎಂದು ಹೇಳಲಾಗಿದೆ.
ಈತನ ವರ್ತನೆಯಿಂದ ಅನುಮಾನಗೊಂಡ ಸ್ಥಳೀಯ ಮಹಿಳೆಯರು ಆರೋಪಿಯನ್ನು ಪ್ರಶ್ನಿಸಿದಾಗ, ಅವರ ಸೀರೆಯನ್ನು ಎಳೆದಾಡಿ ದೌರ್ಜನ್ಯ ಎಸಗಿದ್ದ. ಹೀಗಾಗಿ ಸ್ಥಳೀಯ ಮಹಿಳೆಯರು ನೀಡಿದ ದೂರಿನ ಮೇರೆಗೆ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!
Bengaluru: ಮೆಜೆಸ್ಟಿಕ್ ಬಳಿ ಬಿಎಂಟಿಸಿ ಬಸ್ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು
Bengaluru: ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಮತ್ತೆ 9 ಮೊಬೈಲ್ ಫೋನ್ಗಳು ಪತ್ತೆ!
Leopard: ಎಲೆಕ್ಟ್ರಾನಿಕ್ ಸಿಟಿ ಎನ್ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ
Anekal: ಶಾಲಾ ಬಸ್ ಅಡ್ಡಗಟ್ಟಿ ಚಾಲಕನಿಗೆ ತೀವ್ರ ಹಲ್ಲೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
ನಟಿಯಾಗುವ ಕನಸು ಕಂಡಿದ್ದ ಧ್ರುವಿ ಪಟೇಲ್ ಗೆ ‘Miss India Worldwide 2024’ ಕಿರೀಟ
Langoti Man: ಫ್ಯಾಮಿಲಿ ಡ್ರಾಮಾ ʼಲಂಗೋಟಿ ಮ್ಯಾನ್ʼ ಇಂದು ತೆರೆಗೆ
Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್
Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ
ತಿಮ್ಮಾಪುರ ಮಾತಿಗೆ ಯತ್ನಾಳ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.