ಗೋವಾ ಕನ್ನಡ ಸಂಘ: ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ
Team Udayavani, Jul 16, 2023, 4:31 PM IST
ಪಣಜಿ: ಹೆಚ್ಚು ಹೆಚ್ಚು ವಿದ್ಯಾವಂತನಾಗುತ್ತ ಮನುಷ್ಯ ಮಾನವೀಯ ಮೌಲ್ಯಗಳನ್ನು ಕಡೆಗಣಿಸುತ್ತಿದ್ದಾನೆ. ಇಂದಿನ ಯುವಜನಾಂಗಕ್ಕೆ ಜೀವನದ ಪ್ರಾಥಮಿಕ ತಿಳುವಳಿಕೆಯೂ ಇಲ್ಲದ ಶಿಕ್ಷಣ ದೊರೆಯುತ್ತಿದೆ. ನಾವೂ ಬದುಕಿ ಇತರರನ್ನೂ ಬದುಕಿಸುವಂತಹ ಮನಸ್ಥಿತಿ ಎಲ್ಲರದಾಗಬೇಕು ಎಂದು ನಿವೃತ್ತ ಉಪನ್ಯಾಸಕರಾದ ಮಲ್ಲಿಕಾರ್ಜುನ ಹೂಗಾರ ನುಡಿದರು.
ಗೋವಾದ ಮಡಗಾಂವ ವೀರಶೈವ ಲಿಂಗಾಯತ ಸಭಾಗೃಹದಲ್ಲಿ ಶನಿವಾರ ಸಂಜೆ ಗೋವಾ ಕನ್ನಡ ಸಂಘ (ರಿ) ಮಡಗಾಂವ ಆಯೋಜಿಸಿದ್ದ 2022-23 ನೇಯ ಸಾಲಿನ ಸಾಲಿನ ಎಸ್.ಎಸ್.ಎಲ್.ಸಿಯಲ್ಲಿ ಹೆಚ್ಚಿನ ಅಂಕ ಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದು ಅವರು ಮಾತನಾಡುತ್ತಿದ್ದರು.
ಕೇವಲ ಅಂಕ ಗಳಿಕೆಗಾಗಿ ಅಲ್ಲದೆಯೇ ಜ್ಞಾನ ಗಳಿಕೆಗಾಗಿ ಓದಬೇಕು, ಈ ಮೂಲಕ ವಿದ್ಯಾರ್ಥಿಗಳು ವಿದ್ಯಾವಂತರಾಗಿಯೂ ಜ್ಞಾನವಂತರಾಗಿಯೂ ಸಾಧನೆಗೈಯ್ಯುವಂತಾಗಬೇಕು ಎಂದು ಮಲ್ಲಿಕಾರ್ಜುನ ಹೂಗಾರ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ವೇದಿಕೆಯ ಮೇಲೆ ಗೋವಾ ಕನ್ನಡ ಸಂಗ ಮಡಗಾಂವ ಅಧ್ಯಕ್ಷ ಕೆ.ಮಲ್ಲಿಕಾರ್ಜುನಪ್ಪ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಕುಮಾರಿ ಪೂರ್ವಿ ಹೆಗಡೆ ರವರ ಗಣಪತಿ ಸ್ತುತಿಯೊಂದಿಗೆ ಕಾರ್ಯಕ್ರಮ ಆರಂಭವಾಯಿತು. ವಿಜಯಾ ಹೆಗಡೆ ಕಾರ್ಯಕ್ರಮ ನಿರೂಪಿಸಿದರು. ಸಂಘದ ಕಾರ್ಯದರ್ಶಿ ಮೋಹನ್ ಕಾಂಬ್ಳಿ ಕೊನೆಯಲ್ಲಿ ವಂದನಾರ್ಪಣೆಗೈದರು. ಸಭಾ ಕಾರ್ಯಕ್ರಮದ ನಂತರ ನಡೆ ಸಂಗೀತ ಕಾರ್ಯಕ್ರಮದಲ್ಲಿ ಚನ್ನು ಪಡಗದ ಮತ್ತು ಸ್ಮೀತಾ ಬಗಲಿ ತಂಡ ಹಾಡಿದ ಕನ್ನಡ ಚಲನಚಿತ್ರ ಗೀತೆಗಳ ಹಾಡು ಪ್ರೇಕ್ಷಕರ ಗಮನ ಸೆಳೆಯಿತು. ಪ್ರಸಕ್ತ ವರ್ಷ ಹತ್ತನೇಯ ತರಗತಿಯಲ್ಲಿ ಹೆಚ್ಚಿನ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
BBK-11: ಬಿಗ್ ಬಾಸ್ ಮನೆಗೆ ನಾಲ್ವರು ಎಂಟ್ರಿ; ಉಳಿದ ಸ್ಪರ್ಧಿಗಳು ಇವರೇನಾ?
Iron Deficiency: ರಕ್ತಹೀನತೆ ಇಲ್ಲದ ಕಬ್ಬಿಣದಂಶ ಕೊರತೆ
Delhi: ಬೈಕ್ ನಲ್ಲಿದ್ದ ಪೊಲೀಸ್ ಗೆ ಡಿಕ್ಕಿ ಹೊಡೆದ ಕಾರು; ಅಕ್ರಮ ಮದ್ಯ ದಂಧೆ ಶಂಕೆ
Social Media: ಮಾನಸಿಕ ಆರೋಗ್ಯದ ಮೇಲೆ ಸಾಮಾಜಿಕ ಮಾಧ್ಯಮಗಳ ಪರಿಣಾಮ
Ibbani Tabbida Ileyali 50 ಸ್ಕ್ರೀನ್ನಿಂದ 200 ಸ್ಕ್ರೀನ್ವರೆಗೆ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.