Pawan Kalyan:1st Insta post ನಲ್ಲಿ ಚಿತ್ರರಂಗದ ಕಿರಿ-ಹಿರಿಯರನ್ನು ನೆನೆದ ಪವರ್ ಸ್ಟಾರ್
Team Udayavani, Jul 16, 2023, 6:43 PM IST
ಹೈದರಾಬಾದ್: ಟಾಲಿವುಡ್ ಪವರ್ ಸ್ಟಾರ್ ಪವನ್ ಕಲ್ಯಾಣ್ ʼಬ್ರೋʼ ಸಿನಿಮಾದ ಪ್ರಚಾರದಲ್ಲಿ ನಿರತರಾಗಿದ್ದಾರೆ. ಇತ್ತೀಚೆಗೆ ತನ್ನ ಪಕ್ಷದ ಜನಸೇನಾ ಪಕ್ಷದ ಯಾತ್ರೆಯನ್ನು ಮುಗಿಸಿದ್ದಾರೆ.
ಟಾಲಿವುಡ್ ಸಿನಿಮಾರಂಗದಲ್ಲಿ ತನ್ನದೇ ಆದ ಛಾಪನ್ನು ಮೂಡಿಸಿ ಪವರ್ ಸ್ಟಾರ್ ಆಗಿ ಅಪಾರ ಮನೆ ಮಂದಿಯ ಮನ ಗೆದ್ದಿರುವ ಪವನ್ ಕಲ್ಯಾಣ್ ರಾಜಕೀಯವಾಗಿ ಕಳೆದ ಕೆಲ ವರ್ಷಗಳಿಂದ ಸುದ್ದಿಯಲ್ಲಿದ್ದಾರೆ. ಇತ್ತೀಚೆಗಷ್ಟೇ ತನ್ನ ಜನಸೇನಾ ಪಕ್ಷದ ‘ವಾರಾಹಿ ವಿಜಯ’ ಯಾತ್ರೆಯ ಮೊದಲ ಹಂತವನ್ನು ಮುಗಿಸಿ ತನ್ನ ನಿವಾಸದಲ್ಲಿ ಪತ್ನಿಯ ಜೊತೆ ಪೂಜೆಯಲ್ಲಿ ಅವರು ಭಾಗಿಯಾಗಿದ್ದರು.
ಟ್ವಿಟರ್ ನಲ್ಲಿ ಸಕ್ರಿಯವಾಗಿರುವ ಅವರು ಜು.4 ರಂದು ಇನ್ಸ್ಟಾಗ್ರಾಮ್ ಖಾತೆಯನ್ನು ತೆರೆದಿದ್ದರು. ಯಾವುದೇ ಪೋಸ್ಟ್ ಗಳನ್ನು ಹಾಕದೆ ಮಿಲಿಯನ್ ಗೂ ಅಧಿಕ ಫಾಲೋವರ್ಸ್ ಗಳನ್ನು ಹೊಂದಿದ್ದರು. ಇದೀಗ ಪವರ್ ಸ್ಟಾರ್ ಮೊದಲ ಪೋಸ್ಟ್ ಹಾಕಿದ್ದು, ಈ ಪೋಸ್ಟ್ ನಲ್ಲಿ ಹಲವು ವಿಶೇಷಗಳಿವೆ.
ಇದನ್ನೂ ಓದಿ: SRK: ‘ಪಠಾಣ್ʼ ನಿಜವಾಗಿಯೂ ಗಳಿಸಿದ್ದೆಷ್ಟು? ಶಾರುಖ್ ಸಿನಿಮಾ ಬಗ್ಗೆ ವ್ಯಂಗ್ಯವಾಡಿದ ಕಾಜೋಲ್
ತಾನು ಚಿತ್ರರಂಗದಲ್ಲಿ ಸಾಗಿ ಬಂದ ವರ್ಷದಲ್ಲಿ ಪರಿಚಿತರಾದ ಸಹ ನಟರು, ಅವರೊಂದಿಗೆ ಕಳೆದ ಅಮೂಲ್ಯ ಕ್ಷಣಗಳ ಬಗ್ಗೆ ಪೋಸ್ಟ್ ನಲ್ಲಿ ವಿಡಿಯೋ ಮೂಲಕ ತೋರಿಸಿದ್ದಾರೆ. ಮುಖ್ಯವಾಗಿ ಹಿರಿಯ ನಟರಾಗಿರುವ ಚಿರಂಜೀವಿ, ಅಮಿತಾಬ್ ಬಚ್ಚನ್ ಸೇರಿದಂತೆ ಪ್ರಭಾಸ್, ರಾಮ್ ಚರಣ್, ಮಹೇಶ್ ಬಾಬು, ವಿಜಯ್, ಮತ್ತು ಕಾರ್ತಿ ಅವರೊಂದಿಗೆ ಕಳೆದ ಕ್ಷಣವನ್ನು ಹಂಚಿಕೊಂಡಿದ್ದಾರೆ. ಕಾಲಿವುಡ್, ಟಾಲಿವುಡ್ ಮಾತ್ರವಲ್ಲದೆ ಭಾರತೀಯ ಸಿನಿಮಾರಂಗದಲ್ಲಿನ ಪ್ರಮುಖ ಕಲಾವಿದರೊಂದಿಗೂ ಅವರು ಕ್ಲಿಕ್ಕಿಸಿಕೊಂಡಿರುವ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಸ್ಯಾಂಡಲ್ ವುಡ್ ನ ಕಿಚ್ಚ ಸುದೀಪ್, ಶಿವರಾಜ್ ಕುಮಾರ್ ಅವರೊಂದಿಗೆ ಫೋಟೋ ಸೇರಿದಂತೆ ನಿರ್ದೇಶಕ ರಾಜಮೌಳಿ, ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಸೇರಿದಂತೆ ನಟರು, ನಿರ್ದೇಶಕರು, ನಿರ್ಮಾಪಕರೊಂದಿಗಿರುವ ಫೋಟೋ ಹಾಗೂ ಶೂಟಿಂಗ್ ಸ್ಪಾಟ್ ನಲ್ಲಿನ ಫೋಟೋಗಳು ಇದರಲ್ಲಿವೆ.
ಇಲಿಯಾನಾ ಡಿ ಕ್ರೂಜ್, ಕಾಜಲ್ ಅಗರ್ವಾಲ್ ,ನಿತ್ಯಾ ಮೆನನ್,ಹಾಗೂ ಅವರೊಂದಿಗೆ ನಟಿಸಿರುವ ಖ್ಯಾತ ನಟರಾದ ಬ್ರಹ್ಮಾಜಿ, ಬ್ರಹ್ಮಾನಂದಂ ಮುಂತಾದ ಸಹ ನಟರ ಫೋಟೋಗಳು ವಿಡಿಯೋದಲ್ಲಿದೆ. ನಮ್ಮ ಬಂಧವು ಹೀಗೆಯೇ ಇರಬೇಕೆಂದು ನಾನು ಆಶಿಸುತ್ತೇನೆ ಎಂದು ಪವನ್ ಕಲ್ಯಾಣ್ ಬರೆದಿದ್ದಾರೆ.
ಸದ್ಯ ಈ ಪೋಸ್ಟ್ ಇನ್ಸ್ಟಾಗ್ರಾಮ್ ನಲ್ಲಿ ಭಾರೀ ವೈರಲ್ ಆಗಿದೆ. 72 ಸಾವಿರಕ್ಕೂ ಹೆಚ್ಚಿನ ಮಂದಿ ಕಮೆಂಟ್ ಮಾಡಿದ್ದಾರೆ.
ಸಾಯಿ ಧರಮ್ ತೇಜ್ ಅವರೊಂದಿಗೆ ನಟಿಸಿರುವ ʼಬ್ರೋʼ ಸಿನಿಮಾ ಜು.28 ರಂದು ತೆರೆಗೆ ಬರಲಿದೆ.
View this post on Instagram
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mallika Sherawat: ಮೀಟೂ ವಿವಾದಕ್ಕೆ ನಟಿ ಮಲ್ಲಿಕಾ ಶೆರಾವತ್ ಧ್ವನಿ; ಹೀರೋ ಮೇಲೆ ಆರೋಪ
Actor Govinda: ಕಾಲಿಗೆ ಗುಂಡು ತಗುಲಿ ಆಸ್ಪತ್ರೆಗೆ ದಾಖಲಾಗಿದ್ದ ನಟ ಗೋವಿಂದ ಡಿಸ್ಚಾರ್ಜ್
Border 2: ಸನ್ನಿ ಡಿಯೋಲ್ ʼಬಾರ್ಡರ್-2ʼಗೆ ʼಫೌಜಿʼಯಾಗಿ ಬಂದ ಸುನಿಲ್ ಶೆಟ್ಟಿ ಪುತ್ರ
Bollywood Actor Govinda: ಬಾಲಿವುಡ್ ನಟ ಗೋವಿಂದ ಕಾಲಿಗೆ ಆಕಸ್ಮಿಕವಾಗಿ ತಗುಲಿದ ಗುಂಡು
‘Emergency’ ದೃಶ್ಯ ಕಡಿತಕ್ಕೆ ಕಂಗನಾ ಸಮ್ಮತಿ: CBFC
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.