Kumta ಹಲ್ಲೆ ಮಾಡಿ ಪರಾರಿಯಾಗಿದ್ದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿ
Team Udayavani, Jul 16, 2023, 8:19 PM IST
ಕುಮಟಾ: ಪಟ್ಟಣದ ಹೋಟೆಲೊಂದರ ಕಾರ್ವಿುಕನನ್ನು ಬೆದರಿಸಿ ಹಲ್ಲೆ ಮಾಡಿ ಹಣ ಹಾಗೂ ಮೊಬೈಲ್ ದೋಚಿ ಪರಾರಿಯಾಗಿದ್ದ ಆರೋಪಿಯನ್ನು ಕುಮಟಾ ಪೊಲೀಸರು ತ್ವರಿತವಾಗಿ ಪತ್ತೆ ಮಾಡಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಶಿವಮೊಗ್ಗದ ತೀರ್ಥಹಳ್ಳಿ ತಾಲೂಕಿನ ಕಮ್ಮರಡಿ ನಿವಾಸಿ ಸುಬ್ರಹ್ಮಣ್ಯ ಪ್ರದೀಪ ತಿಪ್ಪೇಸ್ವಾಮಿ ಬಂಧಿತ ವ್ಯಕ್ತಿಯಾಗಿದ್ದು, ಈತ ಪಟ್ಟಣದ ಸುಖಸಾಗರ ಹೋಟೆಲ್ನಲ್ಲಿ ಕೆಲಸ ಮಾಡುತ್ತಿದ್ದ ಹೆಗಡೆಯ ಶಿವಪುರ ನಿವಾಸಿ ಕೃಷ್ಣ ಮಂಜಯ್ಯ ಶೆಟ್ಟಿ ಎಂಬವರ ಮೇಲೆ ಜುಲೈ14 ರ ಮಧ್ಯರಾತ್ರಿ ಹಲ್ಲೆ ಮಾಡಿದ್ದಾನೆ. ಬಳಿಕ ಕಿಸೆಯಲ್ಲಿ ಇದ್ದ 4500 ರೂ. ನಗದು ಮತ್ತು 2 ಮೊಬೈಲ್ ಫೋನ್ಗಳನ್ನು ದೋಚಿ ಪರಾರಿಯಾಗಿದ್ದ.ಈ ಕುರಿತು ಕೃಷ್ಣ ಶೆಟ್ಟಿ ಅವರ ದೂರಿನ ಅಧಾರದ ಮೇಲೆ ತನಿಖೆ ಕೈಗೊಂಡ ಪೋಲಿಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಸಿಪಿಐ ತಿಮ್ಮಪ್ಪ ನಾಯ್ಕ, ಪಿಎಸ್ಐ ನವೀನ ಎಸ್. ನಾಯ್ಕ, ಪಿಎಸ್ಐ ಪದ್ಮಾ ದೇವಳಿ, ಸಿಬ್ಬಂದಿ ಗಣೇಶ ನಾಯ್ಕ, ದಯಾನಂದ ನಾಯ್ಕ, ಗುರು ನಾಯಕ, ಪ್ರದೀಪ ನಾಯಕ, ಶಿವಾನಂದ ಜಾಡರ್ ತಂಡ ಆರೋಪಿಯನ್ನು ಕೃತ್ಯ ನಡೆದ 24 ಗಂಟೆಯಲ್ಲಿ ಪತ್ತೆ ಮಾಡಿ ಬಂಧಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.