![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Jul 17, 2023, 7:42 AM IST
ಮಂಗಳೂರು/ ಉಡುಪಿ: ಕರಾವಳಿ ಭಾಗದಲ್ಲಿ ಮುಂದಿನ ನಾಲ್ಕು ದಿನಗಳ ವರೆಗೆ ಮಳೆ ಮತ್ತಷ್ಟು ಮಳೆ ಬಿರುಸು ಪಡೆಯುವ ಸಾಧ್ಯತೆ ಇದೆ. ಭಾರತೀಯ ಹವಾಮಾನ ಇಲಾಖೆ (ಐಎಂಡಿ)ಯ ಮುನ್ಸೂಚನೆ ಯಂತೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಜು. 17ರಿಂದ 20ರ ವರೆಗೆ ಎಲ್ಲೋ ಅಲರ್ಟ್ ಘೋಷಿಸಲಾಗಿದೆ.
ಈ ವೇಳೆ ಬಿರುಸಿನಿಂದ ಕೂಡಿದ ಮಳೆಯಾಗಲಿದ್ದು, ಗಾಳಿ, ಸಮುದ್ರದ ಅಬ್ಬರ ಕೂಡ ಹೆಚ್ಚಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
ಮಂಗಳೂರು, ಧರ್ಮಸ್ಥಳ, ಬೆಳ್ತಂಗಡಿ, ವೇಣೂರು, ಚಾರ್ಮಾಡಿ, ಕಲ್ಲೇರಿ, ಮಡಂತ್ಯಾರು, ಬಂಟ್ವಾಳ, ಬಿ.ಸಿ.ರೋಡು, ಸುಳ್ಯ, ಸುಬ್ರಹ್ಮಣ್ಯ, ಕಡಬ, ಉಪ್ಪಿನಂಗಡಿ, ವಿಟ್ಲ, ಕನ್ಯಾನ, ಮಂಜೇಶ್ವರ, ಜಾಲೂÕರು, ಹರಿಹರ ಪಳ್ಳತ್ತಡ್ಕ, ಉಜಿರೆ, ಪುತ್ತೂರು, ಮೂಡು ಬಿದಿರೆ, ಸುರತ್ಕಲ್, ಶಿಬಾಜೆ ಸೇರಿದಂತೆ ಜಿಲ್ಲೆಯಾದ್ಯಂತ ಮಳೆ ಸುರಿದಿದೆ.
ಉಡುಪಿಯಲ್ಲಿ ಉತ್ತಮ ಮಳೆ
ಉಡುಪಿ ಜಿಲ್ಲೆಯಾದ್ಯಂತ ರವಿವಾರ ಉತ್ತಮ ಮಳೆಯಾಗಿದೆ. ಸಿದ್ದಾಪುರ, ಶಿರೂರು, ಬ್ರಹ್ಮಾವರ, ಪಡುಬಿದ್ರಿ, ಬೆಳ್ಮಣ್, ಬೈಂದೂರು, ಶಂಕರನಾರಾಯಣ, ಅಜೆಕಾರು, ಕುಂದಾಪುರ, ಹೆಬ್ರಿ, ಕಾರ್ಕಳ, ಮಾಳ ಸಹಿತ ಹಲವೆಡೆ ಬಿಟ್ಟುಬಿಟ್ಟು ಮಳೆ ಸುರಿದಿದೆ. ಉಡುಪಿ, ಮಣಿಪಾಲ, ಪರ್ಕಳ, ಮಲ್ಪೆ ಭಾಗದಲ್ಲಿ ಶನಿವಾರ ತಡರಾತ್ರಿ, ರವಿವಾರ ಮುಂಜಾನೆ ಸಾಧಾರಣ, ಬೆಳಗ್ಗೆ 11ರ ಅನಂತರ ಹಲವೆಡೆ ಧಾರಾಕಾರ ಮಳೆಯಾಗಿದೆ.
ಮನೆಗಳಿಗೆ ಹಾನಿ: ಕಾಪು ಪಡುವಿ ನಲ್ಲಿ ಗಣೇಶ್, ಏಣಗುಡ್ಡೆ ಆಸಿಫ್ ಅವರ ಮನೆಗೆ ಹಾನಿ ಸಂಭವಿಸಿದೆ.
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
Kasaragod: ಹಲ್ಲೆ ಪ್ರಕರಣ; ಕೇಸು ದಾಖಲು
You seem to have an Ad Blocker on.
To continue reading, please turn it off or whitelist Udayavani.