ಅಮ್ಟಾಡಿ ಕೆಂಪುಗುಡ್ಡೆ: ಗುಡ್ಡದಲ್ಲಿ ಬಿರುಕು :ಸಂಪರ್ಕ ಕಡಿತ ಭೀತಿ ; ಮುನ್ನೆಚ್ಚರಿಕೆ
Team Udayavani, Jul 17, 2023, 5:32 AM IST
ಬಂಟ್ವಾಳ: ಅಮ್ಟಾಡಿ ಗ್ರಾಮದ ಕೆಂಪುಗುಡ್ಡೆ ಸಮೀಪ ಗುಡ್ಡ ವೊಂದು ಬಿರುಕು ಬಿಟ್ಟು ಸ್ಥಳೀಯರನ್ನು ಆಂತಕಕ್ಕೀಡು ಮಾಡಿದೆ. ಬಂಟ್ವಾಳದ ಅಜೆಕಲ- ಕೆಂಪುಗುಡ್ಡೆ -ಕಲ್ಪನೆ ರಸ್ತೆಯೂ ಸಂಪರ್ಕ ಕಡಿತಗೊಳ್ಳುವ ಆತಂಕ ಎದುರಾಗಿದೆ. ಅಮಾrಡಿ ಗ್ರಾಮ ಪಂಚಾಯತ್ ವತಿಯಿಂದ ರಸ್ತೆಯ ಎರಡೂ ಬದಿಗಳಲ್ಲೂ ಸೂಚನ ಫಲಕವನ್ನು ಅಳವಡಿಸಿ ಪ್ರಯಾಣಿ ಕರನ್ನು ಎಚ್ಚರಿಸಲಾಗುತ್ತಿದೆ.
ಅಮ್ಟಾಡಿಗ್ರಾಮದ ಶ್ರೀ ಜಗದಂಬಿಕಾ ಭಜನ ಮಂದಿರದ ಸಮೀಪದ ಗುಡ್ಡ ಬಿರುಕು ಬಿಟ್ಟಿದ್ದು, ರಸ್ತೆಯಲ್ಲಿ ನಿಂತು ನೋಡಿದರೆ ಸುಮಾರು 500 ಮೀ. ಉದ್ದಕ್ಕೆ ಬಿರುಕು ಕಂಡುಬರುತ್ತದೆ. ಇದರಿಂದ ರಸ್ತೆಯಲ್ಲಿ ಸಂಚರಿಸುವವರಿಗೆ ಅಪಾಯದ ಜತೆಗೆ ರಸ್ತೆಯ ಕೆಳ ಭಾಗದ ಇಳಿಜಾರು ಪ್ರದೇಶದಲ್ಲಿ ಇರುವ ಮನೆಗಳು, ಕೃಷಿಭೂಮಿಯೂ ನಾಶವಾಗುವ ಆತಂಕ ಎದುರಾಗಿದೆ.
ಹಲವು ವರ್ಷಗಳ ಹಿಂದೆ ಗುಡ್ಡದ ಮೇಲ್ಭಾಗದಲ್ಲಿ ಸಮತಟ್ಟು ಮಾಡಿದ ಪರಿಣಾಮ ಬಿರುಕು ಕಾಣಿಸಿಕೊಂಡಿದೆ ಎನ್ನಲಾಗಿದ್ದು, ನಿರಂತರ ಮಳೆಯ ಪರಿಣಾಮ ಗುಡ್ಡ ಕುಸಿತದ ಭೀತಿ ಎದುರಾಗಿದೆ. ಪ್ರಸ್ತುತ ಮಳೆಯ ತೀವ್ರತೆ ಕಡಿಮೆಯಾಗಿರುವುದರಿಂದ ಕುಸಿತದ ಭೀತಿ ಕಡಿಮೆಯಿದೆ.
ಲೋಕೋಪಯೋಗಿ ಇಲಾಖೆಯ ಮೂಲಕ ಸುಮಾರು 4 ಕೋ.ರೂ. ವೆಚ್ಚದಲ್ಲಿ ರಸ್ತೆ ಅಭಿವೃದ್ಧಿಗೊಂಡಿದ್ದು, ಒಂದು ವೇಳೆ ಗುಡ್ಡ ಕುಸಿದರೆ ರಸ್ತೆಗೆ ಹಾನಿಯಾಗಲಿದೆ. ಬಂಟ್ವಾಳದಿಂದ ಕಲ್ಪನೆ ಭಾಗಕ್ಕೆ ಸಂಚರಿಸಲು ಇದು ಸಮೀಪದ ರಸ್ತೆಯಾಗಿದ್ದು, ಸಂಪರ್ಕ ಕಡಿತಗೊಂಡಲ್ಲಿ, ಗ್ರಾಮಸ್ಥರು ಸುತ್ತು ಬಳಸುವ ಸ್ಥಿತಿ ನಿರ್ಮಾಣವಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ
Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು
Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ
Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್ ಇಸ್ರೇಲ್ ದಾಳಿಯಲ್ಲಿ ಸಾವು
Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.