ಅಪಾಯದ ಹಾದಿಯಲ್ಲಿ ಅಪಘಾತಕ್ಕೆ ಆಹ್ವಾನ: ಚಾರ್ಮಾಡಿ ಹೆದ್ದಾರಿ ಬದಿಯಲ್ಲಿ ತಳ್ಳುಗಾಡಿಗಳ ಠಿಕಾಣಿ


Team Udayavani, Jul 17, 2023, 7:55 AM IST

ಅಪಾಯದ ಹಾದಿಯಲ್ಲಿ ಅಪಘಾತಕ್ಕೆ ಆಹ್ವಾನ: ಚಾರ್ಮಾಡಿ ಹೆದ್ದಾರಿ ಬದಿಯಲ್ಲಿ ತಳ್ಳುಗಾಡಿಗಳ ಠಿಕಾಣಿ

ಬೆಳ್ತಂಗಡಿ: ಮಂಜು ಮುಸುಕಿದ ರಾಷ್ಟ್ರೀಯ ಹೆದ್ದಾರಿ 73ರ ಚಾರ್ಮಾಡಿ ಘಾಟಿ ಹಾದಿಯಲ್ಲಿ ವಾಹನ ಸವಾರರು ಸಾಹಸಮಯವಾಗಿ ವಾಹನ ಚಾಲನೆ ಮಾಡುವ ಮಧ್ಯೆ ಇದೀಗ ಅಲ್ಲಲ್ಲಿ ಟೆಂಟ್‌ನಂತೆ ತಳ್ಳುಗಾಡಿಗಳಲ್ಲಿ ವ್ಯಾಪಾರ ಆರಂಭಿಸಿರುವುದು ಮತ್ತಷ್ಟು ಅಪಘಾತಕ್ಕೆ ದಾರಿ ಮಾಡಿ ಕೊಡುವಂತಾಗಿದೆ.

ಚಾರ್ಮಾಡಿಯಲ್ಲಿ ವಾಹನ ಚಾಲನೆ ಅಪಾಯಕಾರಿಯಾಗಿದ್ದು, ಈಗಾಗಲೇ ಪ್ರತಿದಿನವೂ ಸಣ್ಣಪುಟ್ಟ ಅಪಘಾತಗಳು ಸಂಭವಿಸುತ್ತಿರುತ್ತಿವೆ. ಕಳೆದ ಎರಡು ವಾರಗಳಲ್ಲಿ ಸಾರಿಗೆ ಬಸ್‌ಗಳು, ಸರಕು ಸಾಗಾಟದ ವಾಹನಗಳು ಪಲ್ಟಿಯಾಗಿವೆ. ಅದಕ್ಕಾಗಿ ಹೆದ್ದಾರಿ ಇಲಾಖೆಯು ಜಾರುವ ರಸ್ತೆಗೆ ಜೆಸಿಬಿ ಮೂಲಕ ಅಲ್ಲಲ್ಲಿ ಬರೆ ಎಳೆಯುವ ಮೂಲಕ ಒರಟು ಮಾಡಿದೆ. ಈ ಮಧ್ಯೆ ಇದೀಗ ಬೆಳ್ತಂಗಡಿ ಹಾಗೂ ಚಿಕ್ಕಮಗಳೂರು ಗಡಿ ಭಾಗದಲ್ಲಿ ತಳ್ಳು ಗಾಡಿಗಳನ್ನಿರಿಸಿ ಸಣ್ಣಪುಟ್ಟ ವ್ಯಾಪಾರ ಆರಂಭಿಸಿರುವುದು ಕಂಡುಬಂದಿದೆ.

ಅಪಘಾತಕ್ಕೆ ಆಹ್ವಾನ
ರಾಷ್ಟ್ರೀಯ ಹೆದ್ದಾರಿ ಬದಿ ಯಾವುದೇ ಈರೀತಿ ಮಾರಾಟ ನಿಷೇಧವಾಗಿದೆ. ಅದರಲ್ಲೂ ರಸ್ತೆ ಅಂಚಿನಲ್ಲೇ ಈ ರೀತಿ ಜೋಳ, ಸೋಡಾ ಶರಬತ್ತು ಸಹಿತ ಇತರ ವಸ್ತುಗಳನಿಟ್ಟು ಮಾರುವುದು ಕಂಡುಬಂದಿದೆ. ಹೆದ್ದಾರಿಯಲ್ಲಿ ಪ್ರಯಾಣಿಸುವವರು ಇದರ ಖರೀದಿಗೆ ಮುಗಿಬೀಳುತ್ತಾರೆ. ಪರಿಣಾಮ ಮೊದಲೇ ಕಿರಿದಾದ ರಸ್ತೆಯಲ್ಲಿ ಸಂಚಾರ ದಟ್ಟಣೆ ಸಮಸ್ಯೆ ತಲೆದೋರಲಿದೆ. ಇದಕ್ಕೂ ಹೆಚ್ಚಾಗಿ ಮಂಜು ಮುಸುಕಿದ ಹಾದಿಯಲ್ಲಿ
ರಸ್ತೆ ಬದಿ ದಾಟುವುದರಿಂದ ಅಪಘಾತ ಸಂಭವಿಸುವ ಸಾಧ್ಯತೆ ಹೆಚ್ಚಿದೆ.

ಇದೇ ರೀತಿ ಈ ಹಿಂದೆ ಧರ್ಮಸ್ಥಳ ಕೊಕ್ಕಡ-ಸುಬ್ರಹ್ಮಣ್ಯ ರಸ್ತೆಯಲ್ಲೂ ತಾತ್ಕಾಲಿಕವಾಗಿ ಚಪ್ಪರ ಅಳವಡಿಸಿ ಹಣ್ಣು-ತಿಂಡಿ ತಿನಿಸು ಮಾರಾಟ ನಡೆಸುತ್ತಿದ್ದರು. ಪ್ರವಾಸಿಗರು ವಾಹನ ನಿಲ್ಲಿಸಿ ರಸ್ತೆ ದಾಟುವಾಗ ಬಸ್‌ನಡಿ ಸಿಲುಕಿ ಜೀವ ಕಳೆದುಕೊಂಡ ಘಟನೆ ಸಂಭವಿಸಿತ್ತು. ಬಳಿಕ ಹಿಂದಿನ ಜಿಲ್ಲಾಧಿಕಾರಿಗಳ ಸೂಚನೆ ಮೇರೆಗೆ ಅಂಗಡಿ ಮುಂಗಟ್ಟು ತೆರವುಗೊಳಿಸಲಾಗಿತ್ತು. ಈಗ ಮತ್ತೆ ಅದೇ ಪರಿಸ್ಥಿತಿ ತಲೆದೋರಿದೆ.

ಮಂಜುಮುಸುಕಿದ ವಾತಾವರಣ
ರಾಷ್ಟ್ರೀಯ ಹೆದ್ದಾರಿ 73ರ ಚಾರ್ಮಾಡಿ ಘಾಟಿಯಲ್ಲಿ ಬಹಳಷ್ಟು ಮಂಜು ಕವಿದ ವಾತಾವರಣವಿರುತ್ತದೆ. ಮಳೆ ಸುರಿದರೆ ಎದುರು ಬದಿಯಿಂದ ಬರುವ ವಾಹನ ಗೋಚರಿಸದಷ್ಟು ಮಂಜು ಕವಿದಿರುತ್ತದೆ. ಹೆಚ್ಚಿನ ತಿರುವು ರಸ್ತೆಯಾಗಿರುವುದರಿಂದ ಪ್ರಯಾಣಿಕರು ಮುನ್ನೆಚ್ಚರಿಕೆ ವಹಿಸಬೇಕಿದೆ. ಅತೀ ವೇಗ ಅಪಘಾತಕ್ಕೆ ಕಾರಣವಾಗಲಿದೆ. ರಾತ್ರಿ ಸಮಯದಲ್ಲಿ ಪ್ರಯಾಣ ಬೆಳೆಸುವವರು ಮುಂಜಾನೆಯ ಪ್ರಯಾಣಕ್ಕೆ ಅದ್ಯತೆ ನೀಡುವುದು ಅಗತ್ಯ.

ಪ್ರವಾಸಿಗರ ಮೋಜು ಮಸ್ತಿ
ಚಾರ್ಮಾಡಿ ಘಾಟಿ ಸರಹದ್ದಿನಲ್ಲಿ ಚಿಕ್ಕಮಗಳೂರು, ಬೆಳ್ತಂಗಡಿ ಭಾಗದ ಪೊಲೀಸರು ಗಸ್ತು ನಡೆಸುತ್ತಿದ್ದರೂ ಅವರ ಕಣ್ತಪ್ಪಿಸಿ ಬಿದಿರ್ತಳ ಸಹಿತ ಅಣ್ಣಪ್ಪ ಬೆಟ್ಟದಿಂದ ಮುಂದೆ ರಸ್ತೆ ಬದಿಯಿರುವ ಕಿರು ಜಲಪಾತದ ಸಮೀಪ ವಾಹನ ನಿಲುಗಡೆಗೊಳಿಸಿ ನೂರಾರು ಮಂದಿ ಪ್ರವಾಸಿಗರು ನೃತ್ಯ ಮಾಡುವ ದೃಶ್ಯ ಇತೀ¤ಚೆಗೆ ಕಂಡುಬಂದಿತ್ತು. ಎರಡು ವರ್ಷಗಳ ಹಿಂದೆ ಇದೇ ಸ್ಥಳದಲ್ಲಿ ಬೃಹತ್‌ ಗಾತ್ರದ ಬಂಡೆಯೊಂದು ಉರುಳಿ ರಸ್ತೆಗೆ ಅಪ್ಪಳಿಸಿದ್ದರಿಂದ ರಸ್ತೆ ಛಿದ್ರವಾಗಿತ್ತು. ಹೀಗಾಗಿ ರಾಷ್ಟ್ರೀಯ ಹೆದ್ದಾರಿಯ ಅಪಾಯಕಾರಿ ಸ್ಥಳದಲ್ಲಿ ಮಳೆಗಾಲದ ಸಂದರ್ಭ ವಾಹನ ನಿಲುಗಡೆಗೊಳಿಸದಂತೆ ಸೂಚನಾ ಫಲಕ ಅಳವಡಿಸಬೇಕಿದೆ. ಜತೆಗೆ ರಸ್ತೆ ಬದಿ ವ್ಯಾಪಾರ ನಡೆಸದಂತೆ ಕಟ್ಟುನಿಟ್ಟಿನ ಕ್ರಮ ಅಗತ್ಯವಾಗಿದೆ.

ಟಾಪ್ ನ್ಯೂಸ್

Cap-Brijesh-Chowta

Mangaluru: ಇಂಧನ ಸ್ಥಾಯಿ ಸಮಿತಿ ಸದಸ್ಯರಾಗಿ ಸಂಸದ ಕ್ಯಾ.ಬ್ರಿಜೇಶ್ ಚೌಟ ನೇಮಕ

1-kkk

PM Modi ನಾನು ಹೇಳಿದ್ದನ್ನು ಮಾಡಿ ತೋರಿಸಿದರೆ ಬಿಜೆಪಿ ಪರ ಪ್ರಚಾರ ಮಾಡುತ್ತೇನೆ: ಕೇಜ್ರಿವಾಲ್

Jaladurga-Puuturu

Putturu: ಭಾರೀ ಮಳೆಗೆ ಪೆರುವಾಜೆ ದೇವಾಲಯ ಜಲಾವೃತ

1-jagga

R. Ashoka ಪ್ರಕರಣವನ್ನು ಮುಡಾಕ್ಕೆ ಹೋಲಿಸಿದ್ದು ಸರಿಯಲ್ಲ:ಜಗದೀಶ ಶೆಟ್ಟರ್

1-rain-hebri

Heavy Rain: ಹೆಬ್ರಿಯಲ್ಲಿ ಮೇಘಸ್ಫೋಟ: ನೀರಲ್ಲಿ ಕೊಚ್ಚಿ ಹೋದ ಕಾರು!

1-deee

Bidar; ತೊಗರಿ ಹೊಲದಲ್ಲಿ 700ಕ್ಕೂ ಹೆಚ್ಚು ಗಾಂಜಾ ಗಿಡಗಳು!; ಪೊಲೀಸ್ ದಾಳಿ

1-ind-a

ICC Womens T20 World Cup; ಪಾಕಿಸ್ಥಾನ ವಿರುದ್ಧ ಗೆಲುವಿನ ನಗೆ ಬೀರಿದ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

Bantwala: ಕೇಪು, ಅಳಿಕೆಯಲ್ಲಿ ಸಿಡಿಲು ಬಡಿದು ಮನೆಗೆ ಹಾನಿ

Jaladurga-Puuturu

Putturu: ಭಾರೀ ಮಳೆಗೆ ಪೆರುವಾಜೆ ದೇವಾಲಯ ಜಲಾವೃತ

1(2)

Puttur: ಮೊದಲ ಕಿನ್ನಿಪಿಲಿಗೆ 48 ವರ್ಷ!; 15ರಿಂದ 75ಕ್ಕೇರಿದ ಟೀಮ್‌

5-belthanagdy

Belthanagdy:ಹಿರಿಯ ಸಹಕಾರಿ,ಉಜಿರೆ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸೇವಾಸಂಘದ ಅಧ್ಯಕ್ಷ ನಿಧನ

Kumara-Parvatha

New Guideline For Trekkers: ಇಂದಿನಿಂದ ಕುಮಾರ ಪರ್ವತ ಚಾರಣಕ್ಕೆ ಅವಕಾಶ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1

Bantwala: ಕೇಪು, ಅಳಿಕೆಯಲ್ಲಿ ಸಿಡಿಲು ಬಡಿದು ಮನೆಗೆ ಹಾನಿ

Railway-min-Ashiwini

Railway: ಶೀಘ್ರವೇ ಬೆಂಗಳೂರು-ಮೈಸೂರು, ತುಮಕೂರು ನಮೋ ರ್‍ಯಾಪಿಡ್‌ ರೈಲು: ರೈಲ್ವೆ ಸಚಿವ

dw

Padubidri: ರಸ್ತೆ ಅಪಘಾತ; ಗಾಯಾಳು ಸಾವು

Cap-Brijesh-Chowta

Mangaluru: ಇಂಧನ ಸ್ಥಾಯಿ ಸಮಿತಿ ಸದಸ್ಯರಾಗಿ ಸಂಸದ ಕ್ಯಾ.ಬ್ರಿಜೇಶ್ ಚೌಟ ನೇಮಕ

1-kkk

PM Modi ನಾನು ಹೇಳಿದ್ದನ್ನು ಮಾಡಿ ತೋರಿಸಿದರೆ ಬಿಜೆಪಿ ಪರ ಪ್ರಚಾರ ಮಾಡುತ್ತೇನೆ: ಕೇಜ್ರಿವಾಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.