ಇಂದಿನಿಂದ ಅಗ್ನಿಪಥ್‌ ಸೇನಾ ನೇಮಕಾತಿ: ಮೊದಲ ಬಾರಿ ಉಡುಪಿ ಆತಿಥ್ಯ


Team Udayavani, Jul 17, 2023, 5:58 AM IST

ಇಂದಿನಿಂದ ಅಗ್ನಿಪಥ್‌ ಸೇನಾ ನೇಮಕಾತಿ: ಮೊದಲ ಬಾರಿ ಉಡುಪಿ ಆತಿಥ್ಯ

ಉಡುಪಿ: ಕೃಷ್ಣನಗರಿಯಲ್ಲಿ ಇಂದಿನಿಂದ ಜು. 25ರ ವರೆಗೆ ನಡೆಯಲಿರುವ ಅಗ್ನಿಪಥ್‌ ರ‍್ಯಾಲಿಗೆ ಜಿಲ್ಲಾಡಳಿತ ಮೊದಲ ಬಾರಿಗೆ ಆತಿಥ್ಯ ವಹಿಸುತ್ತಿದೆ.

ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣ ಇದಕ್ಕಾಗಿ ಸಜ್ಜುಗೊಂಡಿದ್ದು, ಉಡುಪಿಯ ಯುವಕರು ಇದರಲ್ಲಿ ಪಾಲ್ಗೊಳ್ಳುತ್ತಿರುವುದು ವಿಶೇಷ. ಉಡುಪಿಯಲ್ಲಿ ಇದು ಮೂರನೇ ಬಾರಿಗೆ ನಡೆಯುತ್ತಿರುವ ಸೇನಾ ನೇಮಕಾತಿ ರ್ಯಾಲಿಯಾಗಿದ್ದು, 2013, 2020 ಇದೀಗ ಅಗ್ನಿಪಥ್‌ ರ‍್ಯಾಲಿ ಸೇರಿ ಮೂರನೇ ಸೇನೆ ನೇಮಕ ರ‍್ಯಾಲಿ ಉಡುಪಿಯಲ್ಲಿ ನಡೆಯುತ್ತಿದೆ. ಅಗ್ನಿಪಥ್‌ ರ‍್ಯಾಲಿ ಮೊದಲ ಬಾರಿಗೆ ನಡೆಯುತ್ತಿದ್ದು, ಉಡುಪಿ, ದ.ಕ. ಸಹಿತ 11 ಜಿಲ್ಲೆಗಳ ಅಭ್ಯರ್ಥಿಗಳು ಭಾಗವಹಿಸಲಿದ್ದಾರೆ. ಜಿಲ್ಲಾಡಳಿತದಿಂದ ಸಂಪೂರ್ಣ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.

ದಿನಕ್ಕೆ 600ರಿಂದ ಸಾವಿರ ಮಂದಿಗೆ ಪರೀಕ್ಷೆ ನಡೆಯಲಿದೆ. ಈ ವರ್ಷ ಲಿಖಿತ ಪರೀಕ್ಷೆಯಲ್ಲಿ 6,800 ಅಭ್ಯರ್ಥಿಗಳು ಉತ್ತೀರ್ಣರಾಗಿದ್ದರು. 6,800 ಅಭ್ಯರ್ಥಿಗಳ ಪೈಕಿ ಜಿಲ್ಲೆಯಿಂದ ಭಾಗವಹಿಸುತ್ತಿರುವುದು 59 ಮಂದಿ ಮಾತ್ರ. ಈ ಭಾಗದ ಯುವಕರನ್ನು ರಕ್ಷಣ ಪಡೆಗಳಿಗೆ ಸೇರುವಂತೆ ಶಾಲಾ-ಕಾಲೇಜುಗಳಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ಕರಾವಳಿಯ ಯುವಕರು ಈ ಬಗ್ಗೆ ಹೆಚ್ಚು ಆಸಕ್ತಿ ವಹಿಸುವಂತಾಗಬೇಕು ಎಂದು ಸೇನೆಯ ಅಧಿಕಾರಿಗಳು ತಿಳಿಸಿದ್ದಾರೆ.

ಅಜ್ಜರಕಾಡು ಕ್ರೀಡಾಂಗಣ ಸೇನೆ, ಪೊಲೀಸ್‌ ನೇಮಕಾತಿ ರ‍್ಯಾಲಿಗೆ ಪೂರಕವಾಗುವಂತ ಮೂಲಸೌಕರ್ಯ ಉತ್ತಮ ವ್ಯವಸ್ಥೆ ಹೊಂದಿದೆ. ಈಗಾಗಲೇ ಸೇನೆಯ ಅಧಿಕಾರಿಗಳ ತಂಡ ಅಜ್ಜರಕಾಡು ಕ್ರೀಡಾಂಗಣಕ್ಕೆ ಆಗಮಿಸಿ ಸಿದ್ಧತೆ ಕೆಲಸ ಪೂರ್ಣಗೊಳಿಸಿದ್ದಾರೆ. ನಗರಸಭೆ ವತಿಯಿಂದ ಕುಡಿಯುವ ನೀರಿನ ವ್ಯವಸ್ಥೆ, ಮೊಬೈಲ್‌ ಟಾಯ್ಲೆಟ್‌ಗಳ ವ್ಯವಸ್ಥೆ ಮಾಡಲಾಗಿದೆ.

ಟೀಮ್‌ ನೇಷನ್‌ ಫ‌ಸ್ಟ್‌ ಜಾಗೃತಿ
ಜಿಲ್ಲೆಯಲ್ಲಿ ರಕ್ಷಣ ಪಡೆಗಳಿಗೆ ಯುವಕರ ನಿರುತ್ಸಾಹ ಗಮನಿಸಿದ ಟೀಮ್‌ ನೇಶನ್‌ ಫ‌ಸ್ಟ್‌ ಸಂಘಟನೆ ಜಾಗೃತಿ, ಮಾರ್ಗದರ್ಶನ ತರಬೇತಿ ಮೂಲಕ ಯುವಕರನ್ನು ಸೇನೆ ಸೇರಲು ಪ್ರೋತಾಹಿಸುತ್ತಿದೆ. 11 ವರ್ಷಗಳಿಂದ ತರಬೇತಿ, ಮಾರ್ಗದರ್ಶನ ನೀಡುತ್ತಿರುವ ಟೀಮ್‌ ನೇಶನ್‌ ಫ‌ಸ್ಟ್‌ ಸೇನೆ ನೇಮಕಾತಿ ಸಂದರ್ಭ ಯುವಕರನ್ನು ಸಜ್ಜುಗೊಳಿಸುತ್ತಿದೆ. ನೇಶನ್‌ ಫ‌ಸ್ಟ್‌ ನಿಂದ ತರಬೇತಿ ಪಡೆದ 8 ಯುವಕರು ರ್ಯಾಲಿಯಲ್ಲಿ ಭಾಗವಹಿಸಲಿದ್ದಾರೆ ಎಂದು ಅಧ್ಯಕ್ಷ ಸೂರಜ್‌ ಕಿದಿಯೂರು ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಯುವಕರು ಜಾಗೃತಿ, ಸರಿಯಾದ ಮಾರ್ಗದರ್ಶನ ಇಲ್ಲದೆ ಸೇನೆ ಸೇರ್ಪಡೆ ತರಬೇತಿ ಪಡೆಯಲು ನಿರೀಕ್ಷಿತ ಮಟ್ಟದಲ್ಲಿ ಬರುತ್ತಿಲ್ಲ. ಕೆಲವು ವರ್ಷಗಳಿಂದ ನಿರಂತರ ಜಾಗೃತಿ ಮೂಡಿಸುತ್ತಿರುವ ಪರಿಣಾಮ ಯುವಕರು ಹೆಚ್ಚಿನ ಆಸಕ್ತಿ ತೋರಿ ಮುಂದೆ ಬರುತ್ತಿದ್ದಾರೆ. ಸೇನೆ ಸೇರುವ ಯುವಕರಿಗೆ ಸಂಪನ್ಮೂಲ ವ್ಯಕ್ತಿಗಳಿಂದ ಅಗತ್ಯ ತರಬೇತಿ ನೀಡುತ್ತೇವೆ ಎಂದು ಸೂರಜ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ತೃತೀಯ ಬಹುಮಾನ ಗಳಿಸಿದ ರೀಲ್ಸ್

ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು

Sep.20: ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು ಘಟಿಕೋತ್ಸವ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

ಮಲ್ಪೆ ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವತ್ಛತೆ

Malpe ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವಚ್ಛತೆ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.