ಎಳೆ ಅಡಿಕೆ ಪತನ ವಿಪರೀತ: ಔಷಧ ಸಿಂಪಡನೆಗೂ ಸಿಗದ ನಿಯಂತ್ರಣ; ಹವಾಮಾನ ವೈಪರೀತ್ಯ ಕಾರಣ?

 ಕರಾವಳಿಯ ಕೃಷಿಕರಿಗೆ ಹೊಸ ಸಂಕಷ್ಟ

Team Udayavani, Jul 17, 2023, 7:19 AM IST

ಎಳೆ ಅಡಿಕೆ ಪತನ ವಿಪರೀತ: ಔಷಧ ಸಿಂಪಡನೆಗೂ ಸಿಗದ ನಿಯಂತ್ರಣ; ಹವಾಮಾನ ವೈಪರೀತ್ಯ ಕಾರಣ?

ಸುಳ್ಯ: ಈ ಬಾರಿಯ ಹವಾಮಾನದ ಏರುಪೇರು ಅಡಿಕೆ ಬೆಳೆಯ ಮೇಲೆ ನೇರ ಪರಿಣಾಮ ಬೀರುತ್ತಿದ್ದು, ಅಧಿಕ ಪ್ರಮಾಣದಲ್ಲಿ ನಳ್ಳಿ (ಎಳೆ ಅಡಿಕೆ) ಉದುರುತ್ತಿರುವುದು ಕಂಡುಬರುತ್ತಿದೆ.

ಮಳೆಗಾಲದಲ್ಲಿ ಅಡಿಕೆ ಬೆಳೆಗೆ ರೋಗ ಬಾಧೆ ಸಾಮಾನ್ಯ ವಾಗಿದ್ದರೂ ಈ ಹಿಂದೆ ನಿಯಂ ತ್ರಣಕ್ಕೆ ಸಿಗುತ್ತಿತ್ತು. ಆದರೆ ಕೆಲವು ವರ್ಷ  ಗಳಿಂದ ಕಂಡುಬರುತ್ತಿರುವ ವಿವಿಧ ರೀತಿಯ ರೋಗಗಳು ಅಡಿಕೆ ಯನ್ನೇ ಅವ ಲಂಬಿ ಸಿರುವ ಕೃಷಿಕ ರನ್ನು ಆತಂಕ ಹಾಗೂ ನಷ್ಟಕ್ಕೆ ದೂಡಿವೆ. ಕೊಳೆರೋಗ, ಎಲೆಹಳದಿ ರೋಗ, ಎಲೆಚುಕ್ಕಿ ರೋಗ, ಕೆಂಪು ನುಸಿ ಬಾಧೆ, ಹಿಂಗಾರ ಒಣಗುವುದು ಮತ್ತಿತರ ಕಾಯಿಲೆಗಳು ಒಂದರ ಹಿಂದೆ ಒಂದರಂತೆ ಬಾಧಿಸಿ ಕೃಷಿಕರು ಹೈರಾಣಾಗಿದ್ದಾರೆ. ಅವುಗಳಿಗೆ ಇನ್ನೂ ಶಾಶ್ವತ ಪರಿಹಾರ ಸಿಕ್ಕಿಲ್ಲ.

ಮಳೆ-ಬಿಸಿಲಿನ ವಾತಾವರಣ
ಕರಾವಳಿ, ಮಲೆನಾಡು ಪ್ರದೇಶ ಗಳಲ್ಲಿ ಈ ಬಾರಿ ಬೇಸಗೆಯಲ್ಲಿ ನೀರಿನ ಕೊರತೆ ಕಾಡಿತ್ತು, ಜನವರಿಯಿಂದ ಜೂನ್‌ ವರೆಗೂ ಮಳೆ ಇರಲಿಲ್ಲ. ಹೀಗಾಗಿ ಕೊಳವೆಬಾವಿ, ಕೆರೆ ನೀರಿನ ಬಳಕೆ ಹೆಚ್ಚಾಗಿತ್ತು. ಹಲವು ಕೊಳವೆ ಬಾವಿಗಳ ನೀರಿನ ಮಟ್ಟ ಇಳಿಕೆಯಾಗಿತ್ತು. ವಾತಾವರಣದ ಉಷ್ಣತೆ ವಿಪರೀತ ಏರಿಕೆಯಾಗಿತ್ತು. ಪರಿಣಾಮವಾಗಿ ಹಲವು ತೋಟಗಳು ಒಣಗಿದವು. ಜೂನ್‌ನಲ್ಲಿ ಮಳೆ ವಿಳಂಬವಾಯಿತು. ಜುಲೈಯಲ್ಲೂ ಸಮರ್ಪಕವಾಗಿ ಸುರಿದಿಲ್ಲ. ಮಳೆ ಬಿಡುವು ನೀಡಿದ ಸಮಯದಲ್ಲಿ ಬಿಸಿಲಿನ ವಾತಾವರಣ ಇರುವುದರಿಂದ ಮಳೆ ಬಿಟ್ಟ ತತ್‌ಕ್ಷಣವೇ ಸೆಕೆಯ ಅನುಭವ ಆಗುತ್ತಿದ್ದು, ಅದು ಅಡಿಕೆ ಕೃಷಿಯ ಮೇಲೆ ಪರಿಣಾಮ ಬೀರುತ್ತಿದೆ. ಎಳೆ ಅಡಿಕೆ ಉದುರಲು ಇದುವೇ ಕಾರಣ ಇರಬಹುದು ಎನ್ನುವುದು ಸುಳ್ಯದ ಅಡಿಕೆ ಕೃಷಿಕ ಗಿರೀಶ್‌ ಎ. ಅವರ ಅಭಿಪ್ರಾಯ.

ಪ್ರತೀ ಜೂನ್‌ನಲ್ಲಿ ಬೋಡೋì ಸಿಂಪಡಣೆಯ ಬಳಿಕ ನಳ್ಳಿ ಉದುರುವಿಕೆ ಸಮಸ್ಯೆ ಕಡಿಮೆ ಯಾಗುತ್ತಿತ್ತು. ಈ ಬಾರಿ ಎರಡು ಬಾರಿ ಸಿಂಪಡಣೆ ಆದ ಹೆಚ್ಚಿನ ತೋಟಗಳಲ್ಲೂ ನಳ್ಳಿ ಉದುರುವಿಕೆ ನಿಂತಿಲ್ಲ. ಇದೇ ವೇಳೆ ಅಡಿಕೆ ಮರದ ಸೋಗೆಗಳು ಒಣಗಿದಂತೆ ಕಾಣುತ್ತಿವೆ.

ಸುಳ್ಯ, ಬಂಟ್ವಾಳ, ಪುತ್ತೂರು ತಾಲೂಕುಗಳ ಸಹಿತ ದ.ಕ. ಜಿಲ್ಲೆಯ ಹಲವೆಡೆ ಎಳೆ ಅಡಿಕೆ ಉದುರುವಿಕೆ ಪತ್ತೆಯಾಗಿದೆ. ಮಳೆ ಕಡಿಮೆಯಾದಾಗ ಎಳೆ ಅಡಿಕೆಯ ರಸವನ್ನು ಕೀಟ ಹೀರುತ್ತಿ ರುವುದರಿಂದ ಹೀಗಾಗುತ್ತಿದೆ ಎಂದು ಕೃಷಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ವಿವಿಧೆಡೆ ಎಳೆ ಅಡಿಕೆ ಉದುರುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ. ಇದಕ್ಕೆ ಹವಾಮಾನ ವೈಪರೀತ್ಯ, ಕೀಟ ಬಾಧೆ ಹಾಗೂ ಆಯಾ ಪ್ರದೇಶದ ವಾತಾ ವರಣ ಕಾರಣ. ಬಹುತೇಕ ಕಡೆ ನಿಯಂ ತ್ರಣಕ್ಕೆ ಬರುತ್ತಿದೆ. ಎಳೆ ಅಡಿಕೆ ಯಾವ ಕಾರಣದಿಂದ ಉದುರು ತ್ತದೆ ಎಂಬುದನ್ನು ಪತ್ತೆ ಹಚ್ಚಿ ಔಷಧ ಸಿಂಪಡಿ ಸುವುದು ಸೂಕ್ತ. ಈ ಪ್ರಕ ರಣ ಕಂಡು ಬಂದಲ್ಲಿಗೆ ತೆರಳಿ ಪರಿಶೀಲನೆ ನಡೆಸ ಲಾಗುತ್ತಿದೆ.
– ವಿನಾಯಕ ಹೆಗ್ಡೆ , ವಿಜ್ಞಾನಿ, ಸಿ.ಪಿ.ಸಿ.ಆರ್‌.ಐ., ಕಾಸರಗೋಡು

-ದಯಾನಂದ ಕಲ್ನಾರ್‌

ಟಾಪ್ ನ್ಯೂಸ್

The audio rights of 45 movie were sold for a whopping sum

Arjun Janya: ಭರ್ಜರಿ ಮೊತ್ತಕ್ಕೆ ಮಾರಾಟವಾಯ್ತು ʼ45ʼ ಆಡಿಯೋ ರೈಟ್ಸ್

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Jammu – Kashmir: ಸೇನಾ ವಾಹನದ ಮೇಲೆ ಗುಂಡಿನ ದಾಳಿ… ಮುಂದುವರೆದ ಶೋಧ ಕಾರ್ಯ

Jammu – Kashmir: ಸೇನಾ ವಾಹನದ ಮೇಲೆ ಗುಂಡಿನ ದಾಳಿ… ಮುಂದುವರೆದ ಶೋಧ ಕಾರ್ಯ

Mirzapur The Film : ಸಿನಿಮಾವಾಗಿ ಬರಲಿದೆ ಸೂಪರ್‌ ಹಿಟ್‌ ʼಮಿರ್ಜಾಪುರ್‌ʼ ಸರಣಿ

Mirzapur The Film : ಸಿನಿಮಾವಾಗಿ ಬರಲಿದೆ ಸೂಪರ್‌ ಹಿಟ್‌ ʼಮಿರ್ಜಾಪುರ್‌ʼ ಸರಣಿ

PCB: ನಾಲ್ಕೇ ತಿಂಗಳಿಗೆ ಪಾಕ್‌ ಕೋಚ್‌ ಸ್ಥಾನ ತ್ಯಜಿಸಿದ ಗ್ಯಾರಿ ಕರ್ಸ್ಟನ್;‌ ಕಾರಣ ಇಲ್ಲಿದೆ

PCB: ನಾಲ್ಕೇ ತಿಂಗಳಿಗೆ ಪಾಕ್‌ ಕೋಚ್‌ ಸ್ಥಾನ ತ್ಯಜಿಸಿದ ಗ್ಯಾರಿ ಕರ್ಸ್ಟನ್;‌ ಕಾರಣ ಇಲ್ಲಿದೆ

Gangavathi: ಕಾಲುಬಾಯಿ ರೋಗ… ಒಂದೇ ವಾರದಲ್ಲಿ 30ಕ್ಕೂ ಹೆಚ್ಚು ಕುರಿ-ಮೇಕೆಗಳ ಸಾವು

Gangavathi: ಕಾಲುಬಾಯಿ ರೋಗ… ಒಂದೇ ವಾರದಲ್ಲಿ 30ಕ್ಕೂ ಹೆಚ್ಚು ಕುರಿ-ಮೇಕೆಗಳ ಸಾವು

Bellary: ಕನ್ನಡಿಗರಿಗೆ, ಯಶ್‌ ಅಭಿಮಾನಿಗಳಿಗೆ ಅವಮಾನ ಮಾಡಿಲ್ಲ: ಪುಷ್ಪ 2 ವಿತರಕ

Bellary: ಕನ್ನಡಿಗರಿಗೆ, ಯಶ್‌ ಅಭಿಮಾನಿಗಳಿಗೆ ಅವಮಾನ ಮಾಡಿಲ್ಲ: ಪುಷ್ಪ 2 ವಿತರಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

courts

Puttur: ಲಾರಿ-ದೋಸ್ತ್ ವಾಹನ ನಡುವೆ ಢಿಕ್ಕಿ; ಆರೋಪಿಗೆ ಶಿಕ್ಷೆ ಪ್ರಕಟ

Ashok-Rai

Rai Estate: ಪುತ್ತೂರಿನಲ್ಲಿ ನ. 2ರಂದು “ಅಶೋಕ ಜನ- ಮನ’ ಕಾರ್ಯಕ್ರಮ

2

Puttur: ಬೀಡಿ ಕಳವು; ಆರೋಪಿ ಬಂಧನ

16

Kadaba: ಮರಳುಗಾರಿಕೆ ಅಡ್ಡೆಗೆ ದಾಳಿ; ಮರಳು ಸಹಿತ ವಾಹನ ವಶ

road-mishap-11

Puttur: ಬೈಕ್‌-ಸ್ಕೂಟರ್‌ ಅಪಘಾತ; ಗಾಯ

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Potholes: ಮೆಜೆಸ್ಟಿಕ್‌ ಬಸ್‌ ನಿಲ್ದಾಣದ ರಸ್ತೆಗಳಲ್ಲಿ ದೊಡ್ಡ ಗುಂಡಿಗಳು

Potholes: ಮೆಜೆಸ್ಟಿಕ್‌ ಬಸ್‌ ನಿಲ್ದಾಣದ ರಸ್ತೆಗಳಲ್ಲಿ ದೊಡ್ಡ ಗುಂಡಿಗಳು

7

Arrested: ವಿದ್ಯಾರ್ಥಿನಿಗೆ ಮುತ್ತು ನೀಡಿದ್ದ ಸೆಕ್ಯುರಿಟಿ ಗಾರ್ಡ್‌ ಬಂಧನ

The audio rights of 45 movie were sold for a whopping sum

Arjun Janya: ಭರ್ಜರಿ ಮೊತ್ತಕ್ಕೆ ಮಾರಾಟವಾಯ್ತು ʼ45ʼ ಆಡಿಯೋ ರೈಟ್ಸ್

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Jammu – Kashmir: ಸೇನಾ ವಾಹನದ ಮೇಲೆ ಗುಂಡಿನ ದಾಳಿ… ಮುಂದುವರೆದ ಶೋಧ ಕಾರ್ಯ

Jammu – Kashmir: ಸೇನಾ ವಾಹನದ ಮೇಲೆ ಗುಂಡಿನ ದಾಳಿ… ಮುಂದುವರೆದ ಶೋಧ ಕಾರ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.