ಕೆಎಸ್‌ಆರ್‌ಟಿಸಿ ಹಳೆ ಬಸ್‌ಗಳಿಗೆ ಹೊಸ ಲುಕ್‌


Team Udayavani, Jul 17, 2023, 2:59 PM IST

ಕೆಎಸ್‌ಆರ್‌ಟಿಸಿ ಹಳೆ ಬಸ್‌ಗಳಿಗೆ ಹೊಸ ಲುಕ್‌

ಚಿಕ್ಕಬಳ್ಳಾಪುರ: ಹತ್ತಾರು ವರ್ಷಗಳ ಕಾಲ ಲಕ್ಷಾಂತರ ಕಿ.ಮೀ.ಗಟ್ಟಲೇ ಸಂಚರಿಸಿದ ಹಳೆಯ ಕೆಎಸ್‌ಆರ್‌ ಟಿಸಿ ಬಸ್‌ಗಳಿಗೆ ಈಗ ಚಿಕ್ಕಬಳ್ಳಾಪುರದ ಕೆಎಸ್‌ಆರ್‌ ಟಿಸಿ ಪ್ರಾದೇಶಿಕ ಉಪ ವಿಭಾಗದ ವರ್ಕ್‌ಶಾಪ್‌ನಲ್ಲಿ ಹೊಸ ರೂಪ ನೀಡಲಾಗುತ್ತಿದೆ.

ಹೌದು, ಕೆಎಸ್‌ಆರ್‌ಟಿಸಿ ಹಳೆ ಬಸ್‌ಗಳಿಗೆ ಹೊಸ ರೂಪ ನೀಡಲು ಸಂಪೂರ್ಣ ಕವಚ ನಿರ್ಮಾಣಕ್ಕಾಗಿ ಬೆಂಗಳೂರು ಅಥವಾ ಹಾಸನ ಪ್ರಾದೇಶಿಕ ಕಾರ್ಯಾಗಾರಕ್ಕೆ ಈ ಮೊದಲು ತೆರಳಬೇಕಿತ್ತು. ಆದರೆ, ಇದೇ ಮೊದಲ ಬಾರಿಗೆ ಚಿಕ್ಕಬಳ್ಳಾಪುರ ಉಪ ವಿಭಾಗದ ವರ್ಕ್‌ಶಾಪ್‌ನಲ್ಲೊಯೇ ಹಳೆ ಬಸ್‌ಗಳಿಗೆ ಹೊಸ ರೂಪ ನೀಡುವ ಮೂಲಕ ಹೊಸ ಲುಕ್‌ ಕೊಟ್ಟು ಪ್ರಯಾಣಿಕರನ್ನು ಆಕರ್ಷಿಸುವ ಕೆಲಸಕ್ಕೆ ಮುಂದಾಗಿದೆ.

ಹಳೆ ಬಸ್‌ಗಳಿಗೆ ಹೊಸ ರೂಪ: ಸಾಮಾನ್ಯವಾಗಿ ಕನಿಷ್ಠ 8 ರಿಂದ 9 ಲಕ್ಷ ಕಿ.ಮೀ. ಸಂಚಾರ ನಡೆಸಿದ ಕೆಎಸ್‌ಆರ್‌ಟಿಸಿ ಬಸ್‌ಗಳನ್ನು ನಿಯಮಾನುಸಾರ ಗುಜರಿಗೆ ಹಾಕಬೇಕು. ಆದರೆ, 8, 9 ಲಕ್ಷ ಕಿ.ಮೀ ದೂರ ಕ್ರಮಿಸುವ ಮುನ್ನವೇ ಕೆಲ ಬಸ್‌ಗಳ ಕವಚ ಕಿತ್ತು ಬಂದು ಪ್ರಯಾಣಿಕರಿಗೆ ನಿತ್ಯ ಕಿರಿಕಿರಿ ಉಂಟು ಮಾಡುತ್ತಿವೆ. ಅದರಲ್ಲೂ ಪ್ರಯಾಣಿಕರು ಕೂರುವ ಆಸನಗಳ ಸೀಟು ಕಿತ್ತು ಬಂದಿರುವುದು, ಡೋರ್‌ (ಬಾಗಿಲು) ಸಮರ್ಪಕವಾಗಿ ಇಲ್ಲದೇ ಇರುವುದು, ಸೈಡ್‌ ಮೀರರ್‌ನಿಂದ ಹಿಡಿದು ಬ್ರೇಕ್‌, ಚಾಲಕರ ಬಸ್‌ ಡೋರ್‌, ಬೋರ್ಡ್‌ಗಳು ಕಿತ್ತು ಸಕಾಲದಲ್ಲಿ ದುರಸ್ತಿಗೊಳ್ಳದೇ ಪ್ರಯಾಣಿಕರ ಹಾಗೂ ಸಾರ್ವಜನಿಕರ ಟೀಕೆಗೆ ಗುರಿ ಆಗುತ್ತಿತ್ತು. ಆದರೆ, ಈಗ ಹಳೆ ಬಸ್‌ಗಳಿಗೆ ಹೊಸ ರೂಪ ಕೊಡುವ ಕಾರ್ಯವನ್ನು ಕೆಎಸ್‌ಆರ್‌ಟಿಸಿ ಅಧಿಕಾರಿಗಳು ಚಿಕ್ಕಬಳ್ಳಾಪುರದಲ್ಲಿ ಕೈಗೆತ್ತಿಕೊಂಡಿದ್ದಾರೆ.

ಬೆಂಗಳೂರು, ಹಾಸನ ಹೋಗಬೇಕಿತ್ತು: ಕೆಎಸ್‌ ಆರ್‌ಟಿಸಿ ಬಸ್‌ಗಳ ಕವಚ ನಿರ್ಮಾಣದ ಕಾರ್ಯ ಏನೇ ಇದ್ದರೂ ಹಾಸನ ಅಥವಾ ಬೆಂಗಳೂರಿನ ಪ್ರಾದೇಶಿಕ ಕಾರ್ಯಾಗಾರಕ್ಕೆ ಕಳುಹಿಸಬೇಕಿತ್ತು. ಇದರಿಂದ ಸ್ಥಳೀಯ ಕೆಎಸ್‌ಆರ್‌ಟಿಸಿ ಉಪ ವಿಭಾಗಕಕ್ಕೆ ಆರ್ಥಿಕವಾಗಿ ಸಾಕಷ್ಟು ಹೊರೆ ಆಗುತ್ತಿತ್ತು. ಆದರೆ ಈಗ ಚಿಕ್ಕಬಳ್ಳಾಪುರ ಉಪ ವಿಭಾಗದ ವರ್ಕ್‌ಶಾಪ್‌ನಲ್ಲಿ ಹಳೆಯ ಕೆಎಸ್‌ಆರ್‌ಟಿಸಿ ಬಸ್‌ಗಳಿಗೆ ಕವಚ ನಿರ್ಮಾಣ ಕಾರ್ಯ ನಡೆಸುವ ಮೂಲಕ ಸ್ಥಳೀಯ ಕೆಎಸ್‌ಆರ್‌ಟಿಸಿ ತಾಂತ್ರಿಕ ಸಿಬ್ಬಂದಿ ಗಮನ ಸೆಳೆದಿದ್ದಾರೆ.

ಇಲ್ಲಿವರೆಗೂ 12 ಹಳೆ ಬಸ್‌ಗಳಿಗೆ ಹೊಸ ಕವಚ ನಿರ್ಮಾಣ: ಇಲ್ಲಿಯವರೆಗೂ ಚಿಕ್ಕಬಳ್ಳಾಪುರ ಉಪ ವಿಭಾಗದ ಕೆಎಸ್‌ಆರ್‌ಟಿಸಿ ವರ್ಕ್‌ಶಾಪ್‌ನಲ್ಲಿ ಹಳೆಯ 12 ಕೆಎಸ್‌ಆರ್‌ ಟಿಸಿ ಬಸ್‌ಗಳಿಗೆ ಹೊಸರೂಪದಲ್ಲಿ ಕವಚ ನಿರ್ಮಾಣ ಮಾಡುವ ಮೂಲಕ ಸಂಪೂರ್ಣ ಹೊಸ ಮಾದರಿಯಾಗಿ ಬಸ್‌ಗಳನ್ನು ಸಜ್ಜುಗೊಳಿಸಿ ಪ್ರಯಾಣಿಕರ ಸೇವೆಗೆ ಒದಗಿಸುತ್ತಿದೆ. ಹೊಸ ಬಸ್‌ ಖರೀದಿಸಬೇಕಾದರೆ ಕೆಎಸ್‌ ಆರ್‌ಟಿಸಿಗೆ ಕನಿಷ್ಠ 30 ಲಕ್ಷ ವೆಚ್ಚ ಆಗುತ್ತದೆ. ಆದರೆ ಕೇವಲ 3 ರಿಂದ 4 ಲಕ್ಷ ರೂ. ವೆಚ್ಚದಲ್ಲಿ ಮಾತ್ರ ಹೊಸ ಬಸ್‌ಗಳ ಮಾದರಿಯಲ್ಲಿ ಬಸ್‌ಗಳನ್ನು ತಾಂತ್ರಿಕವಾಗಿ ಗುಣಮಟ್ಟದಿಂದ ಸಿದ್ಧಪಡಿಸುವ ಕೆಲಸವನ್ನು ಸ್ಥಳೀಯವಾಗಿ ಕೈಗೊಳ್ಳುವ ಮೂಲಕ ಜಿಲ್ಲೆಯ ಕೆಎಸ್‌ಆರ್‌ಟಿಸಿ ಅಧಿಕಾರಿಗಳು ಗಮನ ಸೆಳೆಯುತ್ತಿದ್ದಾರೆ.

ಹಳೆ ಬಸ್‌ಗಳಿಗೆಸ್ವಯಂ ಚಾಲಿತ ಬಾಗಿಲು: ಮಹಾ ನಗರದ ಬಿಎಂಟಿಸಿ ಬಸ್‌ಗಳಿಗೆ ಇರುವ ಮಾದರಿಯಲ್ಲಿ ಹಳೆಯ ಕೆಎಸ್‌ಆರ್‌ಟಿಸಿ ಬಸ್‌ ಗಳಿಗೆ ಕವಚ ನಿರ್ಮಾಣದ ವೇಳೆ ಸ್ವಯಂ ಚಾಲಿತ ಬಾಗಿಲುಗಳನ್ನು ಅಳವಡಿಸುತ್ತಿದೆ. ಚಿಕ್ಕಬಳ್ಳಾಪುರದ ಪ್ರಾದೇಶಿಕ ವರ್ಕ್‌ಶಾಪ್‌ನಲ್ಲಿ ಇದೇ ಮೊದಲ ಬಾರಿಗೆ ಕವಚ ನಿರ್ಮಾಣಕ್ಕೆ ಅಧಿಕಾರಿಗಳು ಮುಂದಾಗುವ ಮೂಲಕ ಗಮನ ಸೆಳೆದಿದ್ದಾರೆ.

ಚಿಕ್ಕಬಳ್ಳಾಪುರ ಕೆಎಸ್‌ಆರ್‌ಟಿಸಿ ಉಪ ವಿಭಾಗದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಉಪ ವಿಭಾಗದ ವರ್ಕ್‌ಶಾಪ್‌ನಲ್ಲಿಯೇ ನಾವು ಹಳೆ ಬಸ್‌ ಹೊಸದಾಗಿ ಕವಚ ನಿರ್ಮಾಣ ಮಾಡುವ ಕಾರ್ಯವನ್ನು ಯಶಸ್ವಿಯಾಗಿ ನಡೆಸುತ್ತಿದ್ದೇವೆ. ಇಲ್ಲಿವರೆಗೂ 12 ಬಸ್‌ ಗಳಿಗೆ ಹೊಸರೂಪ ನೀಡಲಾಗಿದೆ. ಸರ್ವ ರೀತಿಯಲ್ಲಿ ಬಸ್‌ನ್ನು ಹೊಸದಾಗಿ ನಿರ್ಮಿಸುವ ಕಾರ್ಯ ಇಲ್ಲಿ ನಡೆಯುತ್ತಿದೆ. ನಾನು ಇಂಜಿನಿಯರ್‌ ಆಗಿರುವುದರಿಂದ ಈ ಕೆಲಸವನ್ನು ಇಲ್ಲಿ ಕೈಗೆತ್ತಿಕೊಂಡು ಯಶಸ್ವಿಯಾಗಿ ಮಾಡುತ್ತಿದ್ದೇವೆ. ● ಹಿಮವರ್ಧನ ನಾಯ್ಡು ಅಲ್ಲೂರಿ, ವಿಭಾಗೀಯ ನಿಯಂತ್ರಣಾಧಿಕಾರಿ, ಕೆಎಸ್‌ಆರ್‌ಟಿಸಿ ಚಿಕ್ಕಬಳ್ಳಾಪುರ

-ಕಾಗತಿ ನಾಗರಾಜಪ್ಪ

ಟಾಪ್ ನ್ಯೂಸ್

1-BCCI

BCCI ಸೆಂಟರ್‌ ಆಫ್ ಎಕ್ಸಲೆನ್ಸ್‌ ಕ್ರಿಕೆಟ್‌ ಅಕಾಡೆಮಿ ದಿಢೀರ್‌ ಉದ್ಘಾಟನೆ

UN-Assembly

UN General Assembly: ಕಾಶ್ಮೀರ ವಿಷಯ ಪ್ರಸ್ತಾವಿಸಿದ ಪಾಕಿಸ್ಥಾನಕ್ಕೆ ಭಾರತ ತಪರಾಕಿ

Kolar

Air Force Emergency: ಬಂಗಾರಪೇಟೆ ಬಳಿ ವಾಯುಪಡೆ ಹೆಲಿಕಾಪ್ಟರ್‌ ತುರ್ತು ಭೂ ಸ್ಪರ್ಶ

CM-letter

CM Siddramaiah: “ರಾಜೀನಾಮೆ ನೀಡಬೇಡಿ’ ರಕ್ತದಲ್ಲಿ ಪತ್ರ ಬರೆದ ಅಭಿಮಾನಿ

Kunigal

Rare occurrence: ಮಳೆಗಾಗಿ ಪ್ರಾರ್ಥಿಸಿ ಬಾಲಕರಿಬ್ಬರಿಗೆ ಮದುವೆ

Renukacharya

BJP: ರಾಜ್ಯಾಧ್ಯಕ್ಷ ವಿಜಯೇಂದ್ರ ರಾಜೀನಾಮೆ ನೀಡೋದಿಲ್ಲ: ಎಂ.ಪಿ.ರೇಣುಕಾಚಾರ್ಯ

yathnal

BJP Politics: ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆಗೆ ಪಟ್ಟು ಹಿಡಿದಿಲ್ಲ: ಶಾಸಕ ಯತ್ನಾಳ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

0421472757

Nandi Hills: ವಿಶ್ವ ವಿಖ್ಯಾತ ನಂದಿಬೆಟ್ಟಕ್ಕೆ ಪ್ರವಾಸಿಗರ ಪ್ರವಾಹ

Chikkaballapur: ಸ್ವಂತ ಕಟ್ಟಡ ಇಲ್ಲದೇ ಶಿಕ್ಷಣ ತರಬೇತಿಗೆ ಡಯಟ್‌ ಪರದಾಟ!

Chikkaballapur: ಸ್ವಂತ ಕಟ್ಟಡ ಇಲ್ಲದೇ ಶಿಕ್ಷಣ ತರಬೇತಿಗೆ ಡಯಟ್‌ ಪರದಾಟ!

Chikkaballapura; ಎಸ್ಎಫ್ ಐ ರಾಜ್ಯ ಸಮ್ಮೇಳನಕ್ಕೆ ಚಾಲನೆ

Chikkaballapura; ಎಸ್ಎಫ್ ಐ ರಾಜ್ಯ ಸಮ್ಮೇಳನಕ್ಕೆ ಚಾಲನೆ

Police

Government Order: ಪೊಲೀಸರಿಗೆ ಅರ್ಧ ಕೋಟಿ ರೂ. ಜೀವವಿಮೆ! ವಿಮಾ ಮೊತ್ತ ಇಲಾಖೆಯಿಂದಲೇ ಪಾವತಿ

Tragedy: ಕೆಟ್ಟು ನಿಂತಿದ್ದ ಟ್ರ್ಯಾಕ್ಟರ್ ಗೆ ಬೈಕ್ ಡಿಕ್ಕಿ: ಮೂವರು ವಿದ್ಯಾರ್ಥಿಗಳು ಮೃತ್ಯು

Tragedy: ಕೆಟ್ಟು ನಿಂತಿದ್ದ ಟ್ರ್ಯಾಕ್ಟರ್ ಗೆ ಬೈಕ್ ಡಿಕ್ಕಿ: ಮೂವರು ವಿದ್ಯಾರ್ಥಿಗಳು ಮೃತ್ಯು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-BCCI

BCCI ಸೆಂಟರ್‌ ಆಫ್ ಎಕ್ಸಲೆನ್ಸ್‌ ಕ್ರಿಕೆಟ್‌ ಅಕಾಡೆಮಿ ದಿಢೀರ್‌ ಉದ್ಘಾಟನೆ

Terror 2

Pakistan; ಬಲೂಚ್‌ನಲ್ಲಿ 7 ಕಾರ್ಮಿಕರ ಗುಂಡಿಟ್ಟು ಹ*ತ್ಯೆ ಮಾಡಿದ ಉಗ್ರರು

1-asaa

CPM ಪಾಲಿಟ್‌ಬ್ಯೂರೋಗೆ ಕಾರಟ್‌ ಮಧ್ಯಾಂತರ ಮುಖ್ಯಸ್ಥ

UN-Assembly

UN General Assembly: ಕಾಶ್ಮೀರ ವಿಷಯ ಪ್ರಸ್ತಾವಿಸಿದ ಪಾಕಿಸ್ಥಾನಕ್ಕೆ ಭಾರತ ತಪರಾಕಿ

Kolar

Air Force Emergency: ಬಂಗಾರಪೇಟೆ ಬಳಿ ವಾಯುಪಡೆ ಹೆಲಿಕಾಪ್ಟರ್‌ ತುರ್ತು ಭೂ ಸ್ಪರ್ಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.