ಜಿಲ್ಲಾದ್ಯಂತ ಕಾವೇರುತ್ತಿದೆ ನದಿಗಳ ಉಳಿಸಿ ಅಭಿಯಾನ
Team Udayavani, Jul 17, 2023, 3:07 PM IST
ಚಿಕ್ಕಬಳ್ಳಾಪುರ: ಹಲವು ದಶಕಗಳ ಕಾಲ ಹನಿ ಹನಿ ನೀರಿಗೂ ಪರದಾಡಿ ಮಳೆ ಕೊರತೆಯಿಂದ ಬರದ ಬವಣೆ ಅನುಭವಿಸಿರುವ ಜಿಲ್ಲೆಯ ಜನತೆ ಇದೀಗ ಈ ಹಿಂದೆ ಜಿಲ್ಲೆಯಲ್ಲಿ ಜೀವ ನದಿಗಳಾಗಿ ಹರಿದು ಸದ್ಯ ಬತ್ತಿ ಹೋಗಿರುವ ಚಿತ್ರಾವತಿ, ಪಿನಾಕಿನಿ ನದಿ ಉಳಿಸಿಕೊಳ್ಳುವ ಅಭಿಯಾನಕ್ಕೆ ಕೊನೆಗೂ ಮುಂದಾಗಿದ್ದಾರೆ.
ಹೌದು, ಜಿಲ್ಲೆಯಲ್ಲಿ ಮುಂಗಾರು ಕೈಕೊಟ್ಟು ಈ ಬಾರಿ ಬರದ ಛಾಯೆ ಒಂದೆಡೆ ಕಾಣಿಸಿಕೊಳ್ಳುತ್ತಿದ್ದು, ಮತ್ತೂಂದೆಡೆ ಜೀವ ಜಲಕ್ಕಾಗಿ ನದಿ ಉಳಿಸಿ ಅಭಿಯಾನ ಜಿಲ್ಲಾದ್ಯಂತ ಕಾವೇರುತ್ತಿದ್ದು, ವಿಶೇಷವಾಗಿ ಚಿಕ್ಕಬಳ್ಳಾಪುರದಲ್ಲಿ ಚಿತ್ರಾವತಿ ಉಳಿಸಿ ಅಭಿಯಾನ ಶುರುವಾದ ಬೆನ್ನಲ್ಲೇ ಗೌರಿಬಿದನೂರಲ್ಲಿ ಪಿನಾಕಿನಿ ಉಳಿಸೋಣ ಬನ್ನಿ ಅಭಿಯಾನ ಶುರುವಾಗಿದೆ.
ಜಿಲ್ಲೆಗೆ ಬರಲಿಲ್ಲ ಶಾಶ್ವತ ನೀರಾವರಿ: ಹೇಳಿ ಕೇಳಿ ಚಿಕ್ಕಬಳ್ಳಾಪುರ ಜಿಲ್ಲೆಯು ನತದೃಷ್ಟ ಜಿಲ್ಲೆಯಾಗಿದ್ದು, ಯಾವುದೇ ಶಾಶ್ವತ ನದಿ ನಾಲೆಗಳು ಇಲ್ಲದೆ ಮಳೆಯನ್ನು ಆಶ್ರಯಿಸಿಕೊಂಡಿರುವ ಬಯಲು ಸೀಮೆ ಪ್ರದೇಶವಾಗಿದೆ. ಆದರೆ, ಜಿಲ್ಲೆಯ ರಾಜಕಾರಣಿಗಳ ಅದರಲ್ಲೂ ಅಧಿಕಾರ ಅನುಭವಿಸಿದ ಜನಪ್ರತಿನಿಧಿಗಳ ದೌರ್ಬಲ್ಯ, ಇಚ್ಛಾಶಕ್ತಿ ಕೊರತೆ ಪರಿಣಾಮ ದಶಕಗಳ ಕಂಡರೂ ಜಿಲ್ಲೆಗೆ ಶಾಶ್ವತ ನೀರಾವರಿ ಬರಲಿಲ್ಲ.
ಅಭಿಯಾನಕ್ಕೆ ಸಜ್ಜು: ಎತ್ತಿನಹೊಳೆ ಹೆಸರಲ್ಲಿ ಎರಡು ಚುನಾವಣೆಗಳು ಎದುರಿಸಿದ ಜನಪ್ರತಿನಿಧಿಗಳಿಗೆ, ರಾಜಕಾರಣಿ ಗಳಿಗೆ ಈಗ ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಮತ್ತೆ ಎತ್ತಿನಹೊಳೆ ನೆನಪು ಆಗುತ್ತಿದೆ. ಸತತ 2, 3 ದಶಕಗಳ ಕಾಲ ನೀರಾವರಿ ವಿಚಾರದಲ್ಲಿ ಜಿಲ್ಲೆಗೆ ಆಗಿರುವ ಮೋಸ, ಅನ್ಯಾಯದಿಂದ ರೋಸಿ ಹೋಗಿರುವ ಜಿಲ್ಲೆಯ ಜನತೆ ಸದ್ದಿಲ್ಲದೆ ನದಿ ಉಳಿಸಿಕೊಳ್ಳುವ ಅಭಿಯಾನಕ್ಕೆ ಸಜ್ಜಾಗುತ್ತಿದ್ದಾರೆ.
ಎಲ್ಲ ವರ್ಗದವರ ಬೆಂಬಲ: ಜಿಲ್ಲೆಗೆ ಬೆಂಗಳೂರಿನ ಸಂಸ್ಕರಿತ ತ್ಯಾಜ್ಯ ನೀರನ್ನು ಎಚ್ಎನ್ ವ್ಯಾಲಿ ಯೋಜನೆಯಡಿ ಹರಿಸಿ ಜಿಲ್ಲೆಯ ಕೆರೆಗಳಿಗೆ ಹರಿಸಿದ ಬಳಿಕ ನೀರಿನ ಗುಣಮಟ್ಟದ ಬಗ್ಗೆ ಜನರಲ್ಲಿ ಆತಂಕ ಮರೆಯಾಗಿಲ್ಲ. ಮೂರನೇ ಹಂತದ ಶುದ್ಧೀಕರಣ ಬಗ್ಗೆಯೂ ಸರ್ಕಾರ ಗಂಭೀರವಾಗಿ ಕಾಳಜಿ ವಹಿಸುತ್ತಿಲ್ಲ. ಈ ದಿಸೆಯಲ್ಲಿ ಜಿಲ್ಲೆಯಲ್ಲಿಯೇ ದಶಕಗಳ ಹಿಂದೆ ಜೀವ ನದಿಗಳಾಗಿ ಹರಿಯುತ್ತಿದ್ದ ಚಿತ್ರಾವತಿ ಹಾಗೂ ಪಿನಾಕಿನಿ ನದಿ ಉಳಿಸಲು ಹಲವು ಜನಪರ ಸಂಘಟನೆಗಳು, ಪರಿಸರವಾದಿಗಳು, ನೀರಾವರಿ ಹೋರಾಟಗಾರರು, ನಿವೃತ್ತ ಸರ್ಕಾರಿ ಅಧಿಕಾರಿಗಳು, ಚಿಂತಕರು ಕೈ ಜೋಡಿಸಿರುವ ಹಿನ್ನೆಲೆಯಲ್ಲಿ ಜಿಲ್ಲಾದ್ಯಂತ ಈಗ ನದಿಗಳ ಉಳಿಸಿ ಅಭಿಯಾನ ಕಾವೇರುತ್ತಿದೆ.
ಇತ್ತೀಚೆಗೆ ಚಿತ್ರಾವತಿ ನದಿ ಉಳಿಸಿ ಅಭಿಯಾನದ ಭಾಗವಾಗಿ ಸಮಗ್ರ ನೀಲನಕ್ಷೆಯನ್ನು ಹಲವು ಜನಪರ ಸಂಘಟನೆಗಳು, ನೀರಾವರಿ ಹೋರಾಟಗಾರರ ಸಮ್ಮುಖದಲ್ಲಿ ಮಂಡಿಸಿ ಚಿತ್ರಾವತಿ ಹೇಗೆಲ್ಲಾ ಕಲುಷಿತ ಆಗಿದೆ, ಗಣಿಗಾರಿಕೆ ಹೇಗೆಲ್ಲಾ ಪ್ರಭಾವ ನೀರಿದೆ, ಅಂತರ್ಜಲದ ದುಸ್ಥಿತಿ ಏನು?, ಚಿತ್ರಾವತಿ ಅಚ್ಚುಕಟ್ಟು ಒತ್ತುವರಿದಾರರಿಂದ ಹೇಗೆ ಮಾಯವಾಗಿದೆ ಎಂಬುದರ ಪಕ್ಷಿನೋಟವನ್ನು ಜನರ ಮುಂದೆ ಇಟ್ಟು ಚಿತ್ರಾವತಿ ನದಿ ಉಳಿಸಿ ಅಭಿಯಾನದ ಮಾದರಿಯಲ್ಲಿ ಈಗ ಪಿನಾಕಿನಿ ನದಿ ಉಳಿಸಿ ಅಭಿಯಾನ ಸದ್ದು ಮಾಡುತ್ತಿದೆ.
ಪಿನಾಕಿನಿ ನದಿ ಉಳಿಸಿ ಅಭಿಯಾನದ ಬೇಡಿಕೆಗಳೇನು?: ಪಿನಾಕಿನಿ ನದಿಗಳಿಂದ ನೂರಾರು ಕೆರೆಗಳಿಗೆ ನೀರು ಪೂರೈಸುವ ಕೆರೆಗಳ ಪೋಷಕ ಕಾಲುವೆಗಳ ಒತ್ತುವರಿ ತೆರವುಗೊಳ್ಳಬೇಕು, ಪಿನಾಕಿನಿ ನದಿ ಸುತ್ತ ಶೇ.33 ರಷ್ಟು ಅರಣ್ಯ, ತೋಟಗಾರಿಕೆ, ಸಾಮಾಜಿಕ ಅರಣ್ಯ ಬೆಳೆಸಬೇಕಿದೆ. ಪಿನಾಕಿನಿ ನದಿಗೆ ಕೃಷ್ಣೆಯನ್ನು ಜೋಡಿಸಬೇಕು, ಉತ್ತರ ಪಿನಾಕಿನಿ ನದಿಗೆ ಬೆಂಗಳೂರು ಪಾಯಿಖಾನೆ-ಕೊಳಚೆ ನೀರಾದ ಎಚ್ಎನ್ ವ್ಯಾಲಿ ನೀರು ಹರಿಸಬಾರದು. ಜಿಲ್ಲೆಯಲ್ಲಿ ಎಲ್ಲಿದೆ ಪಿನಾಕಿನಿ ನದಿ? ಜಿಲ್ಲೆಯ ಗೌರಿಬಿದನೂರು ತಾಲೂಕಿನಲ್ಲಿ ಹುಟ್ಟಿ ಆಂಧ್ರಕ್ಕೆ ಹರಿದು ಹೋಗುವ ಪಿನಾಕಿನಿ ನದಿ ಜಿಲ್ಲೆಯ ಜೀವ ನದಿಗಳಲ್ಲಿ ಅತ್ಯಂತ ಮಹತ್ವದಾಗಿದೆ. ಇದರ ಜಲಾಯನದ ವ್ಯಾಪ್ತಿ ಗೌರಿಬಿದನೂರಲ್ಲಿದ್ದು ಹಲವು ದಶಕಗಳ ಹಿಂದೆ ಎಗ್ಗಿಲ್ಲದೇ ನಡೆದ ಮರಳು ದಂಧೆ ಇಂದು ಪಿನಾಕಿನಿ ನದಿಯನ್ನು ಆಹುತಿ ಪಡೆದಿದೆ. ಮಳೆಗಾಲದಲ್ಲಿ ಸುಮಾರು 35 ಟಿಎಂಸಿ ನೀರು ಸಂಗ್ರಹವಾಗುತ್ತದೆಯೆಂದು ಜಲತಜ್ಞರು ಅಂದಾಜಿಸಿದ್ದು, ಈ ನೀರು ಮಳೆಗಾಲದಲ್ಲಿ ವ್ಯರ್ಥವಾಗಿ ಆಂಧ್ರಕ್ಕೆ ಹರಿದು ಹೋಗುತ್ತಿದೆ. ಆದ್ದರಿಂದ ಪಿನಾಕಿನಿ ನದಿಯನ್ನು ಸಮಗ್ರವಾಗಿ ಪುನಶ್ಚೇತನಗೊಳಿಸಬೇಕು, ಜಲಾನಯನ ಪ್ರದೇಶವನ್ನು ಅಭಿವೃದ್ಧಿಪಡಿಸಿ ಜಿಲ್ಲೆಯ ಕುಡಿಯುವ, ನೀರಾವರಿ, ಕೃಷಿ, ಅರಣ್ಯ ಅಭಿವೃದ್ದಿ, ಉದ್ಯೋಗ ಸೃಷ್ಠಿಗೆ ಅವಕಾಶ ಇರುವ ಪಿನಾಕಿನಿ ನದಿ ಉಳಿಯಬೇಕೆಂಬ ಅಭಿಯಾನ ಈಗ ಜಿಲ್ಲೆಯಲ್ಲಿ ಶುರುವಾಗಿದೆ.
ಸಭೆ ಆಯೋಜನೆಗೆ ಜಿಲ್ಲಾಡಳಿತಕ್ಕೆ ಆಗಸ್ಟ್ ಗಡುವು: ಜಿಲ್ಲಾಡಳಿತ ಕೂಡಲೇ ಆಗಸ್ಟ್ ವೇಳೆಗೆ ಜಲ ಸಂಪನ್ಮೂಲ ಅಧಿಕಾರಿಗಳ ಜೊತೆ ಜಲ ಸಂವಾದವನ್ನು ಏರ್ಪಡಿಸಿ ಚುನಾಯಿತ ಜನಪ್ರತಿನಿಧಿಗಳು, ಜಲತಜ್ಞರು, ಪರಿಸರ ವಾದಿ ಗಳು, ಆಸಕ್ತ ಸಂಘ, ಸಂಸ್ಥೆಗಳು, ಪ್ರಗತಿಪರ ರೈತರನ್ನು ಸಮಾಲೋಚನಾ ಸಭೆಗೆ ಆಹ್ವಾನಿಸಿ ಪಿನಾಕಿನಿ ನದಿ ಪುನಶ್ಚೇನಕ್ಕೆ ಸೂಕ್ತ ನಿರ್ಧಾರ ತೆಗೆದುಕೊಂಡು ಯೋಜನೆ ಅನುಷ್ಠಾನಕ್ಕೆ ಮುಂದಾಗಬೇಕು. ಆಗಸ್ಟ್ ತಿಂಗಳ ಕೊನೆಯ ವಾರದೊಳಗೆ ಸಭೆ ಆಯೋಜಿಸಬೇಕೆಂಬ ಆಗ್ರಹ ಈಗ ಪಿನಾಕಿನಿ ನದಿ ಉಳಿಸಿ ಅಭಿಯಾನದ ಪ್ರಮುಖ ಬೇಡಿಕೆ ಆಗಿದೆ.
ಪಿನಾಕಿನಿಯ ಸಂಸ್ಕೃತಿ, ಸಂಪತ್ತು ಹಾಗೂ ಸಮೃದ್ಧಿಯನ್ನು ಸಂರಕ್ಷಿಸಿಕೊಳ್ಳುವುದು ನಮ್ಮೆಲ್ಲರ ಆದ್ಯ ಕರ್ತವ್ಯ. ಈ ನಿಟ್ಟಿನಲ್ಲಿ ಪಿನಾಕಿನ ನೀರಾವರಿ ಹೋರಾಟ ಸಮಿತಿಯನ್ನು ರೂಪಿಸಲಾಗಿದೆ. ಜಿಲ್ಲೆಗೆ ಎತ್ತಿನಹೊಳೆಯಿಂದ ನೀರಿನ ನ್ಯಾಯ ಸಿಗುವುದಿಲ್ಲ, ಮಳೆ ನೀರು ಸಂರಕ್ಷಿಸಿ ಕೆರೆಗಳಿಗೆ ಹರಿಸುವ ಕೆಲಸವನ್ನು ಸರ್ಕಾರ ಮಾಡಬೇಕು, ಮುಖ್ಯವಾಗಿ ಕೆರೆಗಳ ಹೂಳು ತೆಗೆಸಬೇಕು. ●ಪರಿಸರವಾದಿ ಚೌಡಪ್ಪ, ಪಿನಾಕಿನಿ ನದಿ ಉಳಿಸಿ ಅಭಿಯಾನದ ಪ್ರಮುಖರು
-ಕಾಗತಿ ನಾಗರಾಜಪ್ಪ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nandi Hills: ವಿಶ್ವ ವಿಖ್ಯಾತ ನಂದಿಬೆಟ್ಟಕ್ಕೆ ಪ್ರವಾಸಿಗರ ಪ್ರವಾಹ
Chikkaballapur: ಸ್ವಂತ ಕಟ್ಟಡ ಇಲ್ಲದೇ ಶಿಕ್ಷಣ ತರಬೇತಿಗೆ ಡಯಟ್ ಪರದಾಟ!
Chikkaballapura; ಎಸ್ಎಫ್ ಐ ರಾಜ್ಯ ಸಮ್ಮೇಳನಕ್ಕೆ ಚಾಲನೆ
Government Order: ಪೊಲೀಸರಿಗೆ ಅರ್ಧ ಕೋಟಿ ರೂ. ಜೀವವಿಮೆ! ವಿಮಾ ಮೊತ್ತ ಇಲಾಖೆಯಿಂದಲೇ ಪಾವತಿ
Tragedy: ಕೆಟ್ಟು ನಿಂತಿದ್ದ ಟ್ರ್ಯಾಕ್ಟರ್ ಗೆ ಬೈಕ್ ಡಿಕ್ಕಿ: ಮೂವರು ವಿದ್ಯಾರ್ಥಿಗಳು ಮೃತ್ಯು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
CM Siddramaiah: “ರಾಜೀನಾಮೆ ನೀಡಬೇಡಿ’ ರಕ್ತದಲ್ಲಿ ಪತ್ರ ಬರೆದ ಅಭಿಮಾನಿ
Rare occurrence: ಮಳೆಗಾಗಿ ಪ್ರಾರ್ಥಿಸಿ ಬಾಲಕರಿಬ್ಬರಿಗೆ ಮದುವೆ
BJP: ರಾಜ್ಯಾಧ್ಯಕ್ಷ ವಿಜಯೇಂದ್ರ ರಾಜೀನಾಮೆ ನೀಡೋದಿಲ್ಲ: ಎಂ.ಪಿ.ರೇಣುಕಾಚಾರ್ಯ
BJP Politics: ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆಗೆ ಪಟ್ಟು ಹಿಡಿದಿಲ್ಲ: ಶಾಸಕ ಯತ್ನಾಳ್
Udupi: ಗೀತಾರ್ಥ ಚಿಂತನೆ 50: ಧೃತರಾಷ್ಟ್ರನನ್ನು ಬಂಧಿಸಿದ ಮಮಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.