Bengaluru ಬೇರೆ ಭಾಷೆಯವರ ಕೈಗೆ ಹೋಗಿದೆ: ಕಣ್ಣೀರಿನ ಕಥೆ ಎಂದ ವಾಟಾಳ್
ಸುರಂಗ ಬಹಳ ಕೆಟ್ಟದ್ದು....ಡಿ.ಕೆ.ಶಿವಕುಮಾರ್ ಅವರೇ ಸುರಂಗ ಮಾಡಕೂಡದು!
Team Udayavani, Jul 17, 2023, 7:23 PM IST
ಬೆಂಗಳೂರು: ”ನಗರದಲ್ಲಿ ಕೊಲೆ ಸುಲಿಗೆಗಳು ನಿರಂತರವಾಗಿ ಹೆಚ್ಚುತ್ತಿದ್ದು ಭೀತಿಯ ವಾತಾವರಣ ನಿರ್ಮಾಣವಾಗಿದೆ. ನಗರ ಬೇರೆ ಭಾಷೆಯವರ ಕೈಗೆ ಹೋಗಿದೆ. ಇದು ಕಣ್ಣೀರಿನ ಕಥೆ” ಎಂದು ಕನ್ನಡ ಚಳವಳಿಯ ನಾಯಕ ವಾಟಾಳ್ ನಾಗರಾಜ್ ಸೋಮವಾರ ಹೇಳಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ”ಬೆಂಗಳೂರು ನಗರದಲ್ಲಿ ಕೊಲೆ, ಬೆದರಿಕೆ ಲೂಟಿ ಆತ್ಮಹತ್ಯೆ ನಿರಂತರವಾಗಿ ನಡೆಯುತ್ತಿದೆ. ಕಾಂಗ್ರೆಸ್ ಸರಕಾರ ಬಂದ ಮೇಲೆ ಆಗಿದೆ ಎಂದು ಹೇಳುತ್ತಿಲ್ಲ. ಹತ್ತು ವರ್ಷಗಳಿಂದ ಬೆಂಗಳೂರು ಹಾಳಾಗುತ್ತಿದೆ. ಬೆಂಗಳೂರಿಗೆ ಬಹಳ ಜನ ವಲಸೆ ಬಂದಿದ್ದಾರೆ. ಬೆಂಗಳೂರು ಬೇರೆ ಭಾಷೆಯವರ ಕೈಯಲ್ಲಿ ಹೋಗಿದೆ. ಕನ್ನಡಿಗರು ಕಡಿಮೆಯಾಗುತ್ತಿದ್ದಾರೆ. ಎಲ್ಲೆಲ್ಲೂ ಹೊರಗಡೆಯವರೇ ಇದ್ದಾರೆ. ಅಂಗಡಿ, ಹೋಟೆಲ್, ರಸ್ತೆಯಲ್ಲಿ ಪಾನಿಪೂರಿ ಮಾರುವವರು, ಕಡ್ಲೆ ಕಾಯಿ ಮಾರುವವರು ಕೂಡ ಹೊರಗಿನವರು” ಎಂದು ಅಸಮಾಧಾನ ಹೊರ ಹಾಕಿದ್ದಾರೆ.
”ಮೊನ್ನೆ ದಿನ ಒಂದೇ ಕಚೇರಿಯಲ್ಲಿ ಜೋಡಿ ಕೊಲೆ ಆಗಿದೆ. ನಗರದಲ್ಲಿ ಭಯ-ಭೀತಿಯ ವಾತಾವರಣ ನಿರ್ಮಾಣವಾಗಿದೆ.ಕಾರುಗಳನ್ನು ಬೆನ್ನಟ್ಟುತ್ತಾರೆ, ಹೆದರಿಸುತ್ತಾರೆ, ಬೆದರಿಸುತ್ತಾರೆ ಇದಕ್ಕೆ ಎಲ್ಲರ ಆಡಳಿತ ಜವಾಬ್ದಾರಿ. ಬೆಂಗಳೂರು ಉಳಿಸಬೇಕಾಗಿದೆ. ಹೊರಗಡೆಯಿಂದ ಬಂದವರಿಂದ ಕೊಲೆ, ಸುಲಿಗೆ ಆಗುತ್ತಿದೆ. ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಪ್ರಾಮಾಣಿಕವಾಗಿ ಚಿಂತನೆ ಮಾಡಬೇಕು” ಎಂದರು.
ಸುರಂಗ ಬಹಳ ಕೆಟ್ಟದ್ದು
”ಡಿ.ಕೆ.ಶಿವಕುಮಾರ್ ಅವರು ಬೆಂಗಳೂರು ಬಹಳ ಅಭಿವೃದ್ಧಿ ಮಾಡುತ್ತೇವೆ ಅಂತ ಹೊರಟಿದ್ದಾರೆ. ಸುರಂಗ ಮಾಡುತ್ತೇವೆ ಎಂದು ಹೇಳಿದ್ದಾರೆ. ಸುರಂಗ ಮಾಡಬೇಡಿ, ಅದರಿಂದ ಬಹಳ ಅಪಾಯ ಇದೆ. ಸುರಂಗ ಬಹಳ ಕೆಟ್ಟದ್ದು, ಅದನ್ನು ಮಾಡಕೂಡದು” ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು
ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಸಿಗುವ ವಿಶ್ವಾಸವಿದೆ ಇಲ್ಲದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ
ನನ್ನಂತ ದಲಿತರಿಗೆ ಒಳ್ಳೆಯದಾಗದಿದ್ದರೆ ಮುಂದೆ ಯಾವ ದಲಿತರಿಗೂ ಒಳ್ಳೆದಾಗಲ್ಲ: ಜಿಗಜಿಣಗಿ ಭಾವುಕ
ಅ*ತ್ಯಾಚಾರ ಪ್ರಕರಣ:ಶಾಸಕ ಮುನಿರತ್ನ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ-14 ದಿನ ನ್ಯಾಯಾಂಗ ಬಂಧನ
ಕೇಂದ್ರದಿಂದ ರಾಜ್ಯ ಸರ್ಕಾರದ ಅಸ್ಥಿರ ಪ್ರಯತ್ನ ಎಂಬುದು ಕಾಂಗ್ರೆಸ್ ನ ಭ್ರಮೆ: ಸಂಸದ ಜಿಗಜಿಣಗಿ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
IFFI: ಗೋವಾದಲ್ಲಿ 55ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ನ.20ರಿಂದ ಆರಂಭ
PM: ಕಾಂಗ್ರೆಸ್ ಡ್ರಗ್ಸ್ ದಂಧೆ ಹಣ ಚುನಾವಣೆ ಗೆಲ್ಲಲು ಬಳಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ
Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು
IFFI: ನವೆಂಬರ್ 20ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ
Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್ ಹಾದಿ ಹೀಗಿದೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.