Maamannan: ವಡಿವೇಲು‌,ಉದಯನಿಧಿ ಅಭಿನಯದ “ಮಾಮಣ್ಣನ್” ಓಟಿಟಿ ತೆರೆಗೆ ಡೇಟ್‌ ಫಿಕ್ಸ್


Team Udayavani, Jul 18, 2023, 12:22 PM IST

Maamannan: ವಡಿವೇಲು‌,ಉದಯನಿಧಿ ಅಭಿನಯದ “ಮಾಮಣ್ಣನ್” ಓಟಿಟಿ ತೆರೆಗೆ ಡೇಟ್‌ ಫಿಕ್ಸ್

ಚೆನ್ನೈ: ಮಾರಿ ಸೆಲ್ವರಾಜ್ ಅವರ “ಮಾಮಣ್ಣನ್” ಈ ವರ್ಷ ಕಾಲಿವುಡ್‌ ರಂಗದಲ್ಲಿ ಹೆಸರು ಮಾಡಿದ ಸಿನಿಮಾಗಳಲ್ಲೊಂದು. ಬಾಕ್ಸ್‌ ಆಫೀಸ್‌ ನಲ್ಲಿ ಭರ್ಜರಿ ಕಲೆಕ್ಷನ್‌ ಕಂಡು ಪ್ರೇಕ್ಷಕರ ಮನಗೆದ್ದ ಸಿನಿಮಾ ಇದೀಗ ಓಟಿಟಿಯಲ್ಲಿ ಸ್ಟ್ರೀಮ್‌ ಆಗಲು ಡೇಟ್‌ ಫಿಕ್ಸ್‌ ಆಗಿದೆ.

“ಮಾಮಣ್ಣನ್” ಒಂದು ಪೊಲಿಟಿಕಲ್‌ ಥ್ರಿಲ್ಲರ್‌ ಡ್ರಾಮಾ ಸಿನಿಮಾವಾಗಿದ್ದು, ಜೂ.29 ರಂದು ಥಿಯೇಟರ್‌ ನಲ್ಲಿ ರಿಲೀಸ್‌ ಆಗಿತ್ತು. ಕೆಳ ಜಾತಿಯ ಒಬ್ಬ ಎಂಎಲ್‌ ಎ(ವಡಿವೇಲು) ಅವರ ಮಗ ಅತಿವೀರನ್ (ಉದಯನಿಧಿ ಸ್ಟಾಲಿನ್) ಹಾಗೂ  ಉನ್ನತ ಜಾತಿಯ ಒಬ್ಬ ರಗಡ್ ರಾಜಕಾರಣಿ ರತ್ನವೇಲು (ಫಾಹದ್ ಫಾಸಿಲ್) ನಡುವೆ ಸಿನಿಮಾದ ಕಥೆ ಸಾಗುತ್ತದೆ. ಒಬ್ಬ ಎಂಎಲ್‌  ಎ ಆಗಿಯೂ ಉನ್ನತ ಜಾತಿಯವರ ಮುಂದೆ ಕೈಕಟ್ಟಿ ತಲೆಬಾಗಿ ನಿಂತುಕೊಂಡೇ ಇರುವ ನಿಯಮದ ವಿರುದ್ಧ ರಾಜಕೀಯವಾಗಿಯೇ ಹೋರಾಟವನ್ನು ಮಾಡುವ ಕಥೆಯನ್ನು ಬಹಳ ಎಂಗೇಜ್‌ ಆಗಿ ನಿರ್ದೇಶಕರು ಹೇಳಿದ್ದಾರೆ.

ಇಡೀ ಸಿನಿಮಾ ಒಂದು ಹಳ್ಳಿಯ ಹಿಂದಿನ ಕಾಲದ ಕಥೆ, ಪ್ರಸ್ತುತ ರಾಜಕೀಯ ಪ್ರತಿಷ್ಠೆ ಹಾಗೂ ಜಾತಿ ವ್ಯವಸ್ಥೆಯ ಸ್ಥಿತಿಯನ್ನು ತೋರಿಸುತ್ತದೆ. ವಡಿವೇಲು, ಫಾಹದ್‌ ಹಾಗೂ ಉದಯನಿಧಿ ಸ್ಟಾಲಿನ್ ಈ ಮೂರು ಜನರ ಪಾತ್ರಗಳು ಪ್ರೇಕ್ಷಕರ ಮನಗೆಲ್ಲುತ್ತದೆ.

ಇದನ್ನೂ ಓದಿ: B’town: ನಾನಿನ್ನೂ ಗರ್ಭಿಣಿಯಾಗಿಲ್ಲ.. ಮದುವೆ ಪ್ರಶ್ನೆಗೆ‌ ನಟಿ ತಾಪ್ಸಿ ಕೊಟ್ಟ ಉತ್ತರ ವೈರಲ್

ಸಿನಿಮಾ ಓಟಿಟಿಯಲ್ಲಿ ಪರದೆಯಲ್ಲಿ ಬರಲು ರೆಡಿಯಾಗಿದ್ದು, ಇದೇ ಜು.27 ರಂದು ನೆಟ್‌ ಫ್ಲಿಕ್ಸ್‌ ನಲ್ಲಿ ಸಿನಿಮಾ ಸ್ಟ್ರೀಮ್‌ ಆಗಲಿದೆ. ತಮಿಳು, ತೆಲುಗು, ಕನ್ನಡ ಹಾಗೂ ಮಲಯಾಳಂ ಭಾಷೆಯಲ್ಲಿ ಸಿನಿಮಾ ಸ್ಟ್ರೀಮ್‌ ಆಗಲಿದೆ.

ಸಿನಿಮಾ ಜಾತಿ ತಾರತಮ್ಯದ ಕಥೆಯನ್ನು ಒಳಗೊಂಡಿದ್ದು, ಸಿನಿಮಾ ತೆರೆಗೆ ಬಂದ ಬಳಿಕ ತಮಿಳುನಾಡಿನಲ್ಲಿ ರಾಜಕೀಯವಾಗಿಯೂ ಚರ್ಚೆಯಾಗಿತ್ತು. ಸ್ವತಃ ಯುವಜನ ಕಲ್ಯಾಣ ಮತ್ತು ಕ್ರೀಡಾ ಅಭಿವೃದ್ಧಿ ಸಚಿವರಾಗಿರುವ ಉದಯನಿಧಿ ಸ್ಟ್ಯಾಲಿನ್‌ ಅವರಿಗೆ ನಿರ್ದೇಶಕ ಪಾ ರಂಜಿತ್ ಅವರು “ತಮ್ಮದೇ ಪಕ್ಷದಲ್ಲಿನ ಜಾತಿ ಪಕ್ಷಪಾತವನ್ನು ಮೊದಲು ಪರಿಶೀಲಿಸಿ” ಎಂದು ಹೇಳಿದ್ದರು. ಇದಕ್ಕೆ”ಎಲ್ಲಾ ರಾಜಕೀಯ ಪಕ್ಷಗಳಿಂದ ಜಾತಿ ತಾರತಮ್ಯವನ್ನು ತೊಡೆದುಹಾಕಬೇಕು ಮತ್ತು “ಡಿಎಂಕೆ ಸರ್ಕಾರವು ಅಧಿಕಾರದಲ್ಲಿದ್ದಾಗ, ವಿವಿಧ ಕಾನೂನುಗಳು ಮತ್ತು ಕಾರ್ಯಕ್ರಮಗಳ ಮೂಲಕ ನಿರಂತರವಾಗಿ ಸಾಮಾಜಿಕ ನ್ಯಾಯವನ್ನು ರಕ್ಷಿಸಿದೆ” ಎಂದು ಉದಯಂದಿ ಪ್ರತಿಕ್ರಿಯಿಸಿದ್ದರು.

“ಮಾಮಣ್ಣನ್” ಸಿನಿಮಾಕ್ಕೆ ಎಆರ್ ರೆಹಮಾನ್ ಅವರು ಮ್ಯೂಸಿಕ್‌ ನೀಡಿದ್ದು, ವಡಿವೇಲು ಹಾಡಿದ “ರಾಸ ಕಣ್ಣು” ಹಾಡು ಗಮನ ಸೆಳೆದಿತ್ತು.

 

View this post on Instagram

 

A post shared by Netflix India (@netflix_in)

 

ಟಾಪ್ ನ್ಯೂಸ್

1-deee

Bidar; ತೊಗರಿ ಹೊಲದಲ್ಲಿ 700ಕ್ಕೂ ಹೆಚ್ಚು ಗಾಂಜಾ ಗಿಡಗಳು!; ಪೊಲೀಸ್ ದಾಳಿ

1-ind-a

ICC Womens T20 World Cup; ಪಾಕಿಸ್ಥಾನ ವಿರುದ್ಧ ಗೆಲುವಿನ ನಗೆ ಬೀರಿದ ಭಾರತ

Cycle Ride: ಸಾಗುತ  ದೂರ ದೂರ… ಬೆಂಗಳೂರು ಟು ಗೋವಾ ಸೈಕಲ್‌ ಸವಾರಿ

Cycle Ride: ಸಾಗುತ  ದೂರ ದೂರ… ಬೆಂಗಳೂರು ಟು ಗೋವಾ ಸೈಕಲ್‌ ಸವಾರಿ

15

Kamanur village: ದಾರಿ ತೋರುವ ಮಾದರಿ ಗ್ರಾಮ 

Bigg Boss: ಬಿಗ್‌ ಬಾಸ್‌ ಮಾಜಿ ಸ್ಪರ್ಧಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ

Bigg Boss: ಬಿಗ್‌ ಬಾಸ್‌ ಮಾಜಿ ಸ್ಪರ್ಧಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ

1-sj

EAM Jaishankar; ರಷ್ಯಾ ಮತ್ತು ಉಕ್ರೇನ್ ನಡುವೆ ಮಾತುಕತೆ ಮೋದಿಯಂತ ನಾಯಕರಿಂದ ಸಾಧ್ಯ

GP-Protest

Udupi: ಗ್ರಾ.ಪಂ. ನೌಕರರ ಮುಷ್ಕರಕ್ಕೆ ಸ್ಪಂದಿಸದ ಸರಕಾರ; ನಾಳೆಯಿಂದ ಪ್ರತಿಭಟನೆ ಮುಂದುವರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Alia Bhatt: ಆಕ್ಷನ್‌ ಅವತಾರದಲ್ಲಿ ಆಲಿಯಾ

Alia Bhatt: ಆಕ್ಷನ್‌ ಅವತಾರದಲ್ಲಿ ಆಲಿಯಾ

Shaitan 2

Shaitan 2: ಬರಲಿದೆ ಶೈತಾನ್‌ -2

vidya balan in bhool bhulaiya 3

Vidya Balan; ಮತ್ತೆ ಬಂದಳು ಮಂಜುಳಿಕಾ!

8

Mallika Sherawat: ಮೀಟೂ ವಿವಾದಕ್ಕೆ ನಟಿ ಮಲ್ಲಿಕಾ ಶೆರಾವತ್‌ ಧ್ವನಿ; ಹೀರೋ ಮೇಲೆ ಆರೋಪ

Actor Govinda: ಕಾಲಿಗೆ ಗುಂಡು ತಗುಲಿ ಆಸ್ಪತ್ರೆಗೆ ದಾಖಲಾಗಿದ್ದ ನಟ ಗೋವಿಂದ ಡಿಸ್ಚಾರ್ಜ್

Actor Govinda: ಕಾಲಿಗೆ ಗುಂಡು ತಗುಲಿ ಆಸ್ಪತ್ರೆಗೆ ದಾಖಲಾಗಿದ್ದ ನಟ ಗೋವಿಂದ ಡಿಸ್ಚಾರ್ಜ್

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-deee

Bidar; ತೊಗರಿ ಹೊಲದಲ್ಲಿ 700ಕ್ಕೂ ಹೆಚ್ಚು ಗಾಂಜಾ ಗಿಡಗಳು!; ಪೊಲೀಸ್ ದಾಳಿ

1-ind-a

ICC Womens T20 World Cup; ಪಾಕಿಸ್ಥಾನ ವಿರುದ್ಧ ಗೆಲುವಿನ ನಗೆ ಬೀರಿದ ಭಾರತ

11(1)

Ambewadi ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಬೀಟೆ ಮರ ಕಡಿಯುತ್ತಿದ್ದ ಓರ್ವನ ಬಂಧನ

Cycle Ride: ಸಾಗುತ  ದೂರ ದೂರ… ಬೆಂಗಳೂರು ಟು ಗೋವಾ ಸೈಕಲ್‌ ಸವಾರಿ

Cycle Ride: ಸಾಗುತ  ದೂರ ದೂರ… ಬೆಂಗಳೂರು ಟು ಗೋವಾ ಸೈಕಲ್‌ ಸವಾರಿ

15

Kamanur village: ದಾರಿ ತೋರುವ ಮಾದರಿ ಗ್ರಾಮ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.