ಪರವಾನಿಗೆ ನೆಪದಲ್ಲಿ ವಿಜಯನಗರ ಕಾಲುವೆ ದುರಸ್ಥಿ ಕಾರ್ಯಕ್ಕೆ ಅರಣ್ಯ ಇಲಾಖೆ ಮತ್ತೊಮ್ಮೆ ಅಡ್ಡಿ

ಕಾಮಗಾರಿ ಸ್ಥಗಿತಕ್ಕೆ ರೈತರಿಂದ ಆಕ್ರೋಶ

Team Udayavani, Jul 18, 2023, 4:35 PM IST

ಪರವಾನಿಗೆ ನೆಪದಲ್ಲಿ ವಿಜಯನಗರ ಕಾಲುವೆ ದುರಸ್ಥಿ ಕಾರ್ಯಕ್ಕೆ ಅರಣ್ಯ ಇಲಾಖೆ ಮತ್ತೊಮ್ಮೆ ಅಡ್ಡಿ

ಗಂಗಾವತಿ: ತಾಲೂಕಿನ ಆನೆಗುಂದಿ ಭಾಗದಲ್ಲಿರುವ ವಿಜಯನಗರ ಪುರಾತನ ಕಾಲುವೆಗಳ ಶಾಶ್ವತ ದುರಸ್ಥಿ ಕಾಮಗಾರಿ ಹನುಮನಹಳ್ಳಿ ಹಿರೇ ಉದ್ದಿ ಹತ್ತಿರ ನಡೆಯುತ್ತಿದ್ದು ಸೂಕ್ತ ಪರವಾನಿಗೆ ಇಲ್ಲ.ರಿಸರ್ವ್ ಫಾರೆಸ್ಟ್ ನಲ್ಲಿದ್ದ ಕಾಮಗಾರಿ ನಡೆಸಿದಂತೆ ಅರಣ್ಯ ಇಲಾಖೆಯ ಎಸಿಎಫ್ ಸೂಚನೆ ಮೇರೆಗೆ ಅರಣ್ಯ ಇಲಾಖೆಯ ಸಿಬ್ಬಂದಿಯವರು ಕಾಲುವೆ ದುರಸ್ಥಿ ಕಾರ್ಯ ನಡೆಸದಂತೆ ತಡೆಯೊಡ್ಡಿದ್ದನ್ನು ಖಂಡಿಸಿ ಆನೆಗೊಂದಿ ಭಾಗದ ರೈತರು ಅರಣ್ಯ ಇಲಾಖೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಏಷಿಯಾ ಅಭಿವೃದ್ಧಿ ಬ್ಯಾಂಕ್ ಆರ್ಥಿಕ ನೆರವಿನೊಂದಿಗೆ ವಿಜಯನಗರ ಕಾಲುವೆಗಳ ದುರಸ್ಥಿ ಕಾಮಗಾರಿ ಕಳೆದ ಒಂದುವರೆ ವರ್ಷದಿಂದ ನಡೆಯುತ್ತಿದೆ.ಈಗಾಗಲೇ ಗಂಗಾವತಿ ಕೆಳ ಮತ್ತು ಮೇಲ್ಭಾಗದಲ್ಲಿರುವ ವಿಜಯನಗರ ಕಾಲುವೆಗಳ ದುರಸ್ಥಿಕಾರ್ಯ ಮುಗಿದಿದ್ದು ಸಾಣಾಪೂರದಿಂದ ಸಂಗಾಪೂರ ವರೆಗಿನ ವಿಜಯನಗರ ಕಾಲುವೆ ದುರಸ್ಥಿ ಕಾರ್ಯಕ್ಕೆ ಅರಣ್ಯ ಇಲಾಖೆಯವರು ಪದೇ ಪದೇ ಆಕ್ಷೇಪಣೆ ಮಾಡುವ ಮೂಲಕ ಕಾಮಗಾರಿ ಪೂರ್ಣಗೊಳ್ಳಲು ಬಿಡುತ್ತಿಲ್ಲ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದರು.

ಸದ್ಯ ಹನುಮನಹಳ್ಳಿ ಹಿರೆ ಉದ್ದಿಯ ಹತ್ತಿರ ಕಾಮಗಾರಿ ನಡೆಯುತ್ತಿದೆ. ಮಂಗಳವಾರ ಕಾಮಗಾರಿ ಸ್ಥಳಕ್ಕೆ ಅರಣ್ಯ ಇಲಾಖೆಯ ಎಸಿಎಫ್ ಮಾರ್ಕಂಡೇಯ ಭೇಟಿ ನೀಡಿ ರಿಸರ್ವ್ ಫಾರೆಸ್ಟ್ ನಲ್ಲಿ ಕಾಮಗಾರಿ ಮಾಡಬಾರದು. ಇಲ್ಲಿ ಗಿಡ,ಮರಗಳು,ಕಲ್ಲು ಮತ್ತು ಮಣ್ಣು ಕಾಮಗಾರಿ ಪರಿಣಾಮ ನಾಶವಾಗುತ್ತಿದೆ. ಕಾಮಗಾರಿ ನಿಲ್ಲಿಸುವಂತೆ ಸೂಚನೆ ಹಿನ್ನೆಲೆಯಲ್ಲಿ ಕಾಮಗಾರಿ ಸ್ಥಗಿತಗೊಳಿಸಲಾಗಿದೆ. ಕಾಮಗಾರಿ ಸ್ಥಗಿತ ಮಾಹಿತಿ ಹಿನ್ನೆಲೆಯಲ್ಲಿ ಆನೆಗೊಂದಿ ರೈತರ ಸಂಘದ ಮುಖಂಡರು ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿ ಸ್ಥಗಿತದಿಂದ ಮುಂದೆ ಭತ್ತ ನಾಟಿ ಕಾರ್ಯಕ್ಕೆ ವಿಳಂಬವಾಗಲಿದೆ.

ಸುಮಾರು 500 ಕೋಟಿ ಸರಕಾರ ಟೆಂಡರ್ ಕರೆದು ಕಾಮಗಾರಿ ನಡೆಸುತ್ತಿದ್ದು ಇನ್ನೂ ಶೇ.20 ರಷ್ಟು ಕಾಮಗಾರಿ ಬಾಕಿ ಇರುವಾಗ ಪರವಾನಿಗೆ ಇಲ್ಲ ಎಂದು ಕಾಮಗಾರಿ ಸ್ಥಗಿತಗೊಳಿಸಿರುವುದು ಅನುಮಾನಗಳಿಗೆ ಕಾರಣವಾಗಿದೆ. ಕೂಡಲೇ ಜಲಸಂಪನ್ಮೂಲ ಇಲಾಖೆಯವರು ಅರಣ್ಯ ಇಲಾಖೆಯ ತಗಾದೆ ಕುರಿತು ಸರಕಾರದ ಗಮನಕ್ಕೆ ತಂದು ಕಾಮಗಾರಿ ಪೂರ್ಣಗೊಳಿಸುವಂತೆ ಒತ್ತಾಯಿಸಿದ್ದಾರೆ.

ಈ ಸಂದರ್ಭದಲ್ಲಿ ರೈತಸಂಘದ ಸುದರ್ಶನ ವರ್ಮಾ,ರಾಮಕೃಷ್ಣ ಇಲ್ಲೂರು,ಮಹೆಬೂಬ ಹುಸೇನ್, ಶರೀಫ್ ಪಟುವಾರಿ, ಹರಿಹರ ದೇವರಾಯಲು ಇದ್ದರು.

ವಿಜಯನಗರ ಕಾಮಗಾರಿ ನಡೆಯುತ್ತಿರುವ ಸ್ಥಳದಲ್ಲಿ ರಿಸರ್ವ್ ಫಾರೆಸ್ಟ್ ಇದ್ದು ಅಮೂಲ್ಯ ಗಿಡ,ಮರ,ಮಣ್ಣು ನಾಶ ಮಾಡಲಾಗಿದೆ ಮತ್ತು ಅರಣ್ಯ ಇಲಾಖೆಯ ಪರವಾನಿಗೆ ಪಡೆದಿಲ್ಲ.ಆದ್ದರಿಂದ ಕಾಲುವೆ ಕಾಮಗಾರಿಗೆ ಅವಕಾಶ ನೀಡುವುದಿಲ್ಲ. ಈ ಕುರಿತು ಅರಣ್ಯ ಇಲಾಖೆಯ ಕಚೇರಿಗೆ ಬಂದರೆ ಕಾಮಗಾರಿಯ ಸ್ಥಗಿತಕ್ಕೆ ಕಾರಣಗಳ ಕುರಿತು ಹೆಚ್ಚಿನ‌ ಮಾಹಿತಿ ನೀಡಲಾಗುತ್ತದೆ.
-ಮಾರ್ಕಂಡೇಯ ಎಸಿಎಫ್

ಈಗಾಗಲೇ ಎಲ್ಲಾ ಪರವಾನಿಗೆ ಸಿಕ್ಕ ನಂತರವೇ ಕಾಮಗಾರಿ ಟೆಂಡರ್ ಕರೆದು ಮುಕ್ಕಾಲು ಭಾಗ ಕಾಮಗಾರಿ ಪೂರ್ಣವಾಗಿದೆ.ರೈತರು ಬೇಸಿಗೆ ಬೆಳೆ ಬೆಳೆಯದೇ ಕಾಲುವೆ ದುರಸ್ಥಿಗೆ ಅವಕಾಶ ನೀಡಿದ್ದಾರೆ. ಇದೀಗ ಏಕಾಏಕಿ ಅರಣ್ಯ ಇಲಾಖೆಯವರು ಪರವಾನಿಗೆ ಇಲ್ಲ ಕೆಲಸ ನಿಲ್ಲಿಸುವಂತೆ ಸೂಚನೆ ನೀಡಿದ್ದಾರೆ ಇದನ್ನು ಮೇಲಾಧಿಕಾರಿಗಳಿಗೆ ತಿಳಿಸಲಾಗಿದೆ.
-ಅಮರೇಶ ಜೆಇ ಜಲಸಂಪನ್ಮೂಲ ಇಲಾಖೆ

ಟಾಪ್ ನ್ಯೂಸ್

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೊಪ್ಪಳ: ಅದಾಲತ್‌ನಲ್ಲಿ ಒಂದಾದ 14 ಜೋಡಿ ಇತ್ಯರ್ಥವಾದ 35,721 ಪ್ರಕರಣಗಳು

ಕೊಪ್ಪಳ: ಅದಾಲತ್‌ನಲ್ಲಿ ಒಂದಾದ 14 ಜೋಡಿ ಇತ್ಯರ್ಥವಾದ 35,721 ಪ್ರಕರಣಗಳು

Koppala: ಮುನಿರತ್ನ ವಿಚಾರದಲ್ಲಿ ಯಾವುದೇ ರಾಜಕೀಯ ಇಲ್ಲ: ಸಚಿವ ಶಿವರಾಜ ತಂಗಡಗಿ

Koppala: ಮುನಿರತ್ನ ವಿಚಾರದಲ್ಲಿ ಯಾವುದೇ ರಾಜಕೀಯ ಇಲ್ಲ: ಸಚಿವ ಶಿವರಾಜ ತಂಗಡಗಿ

ಗಂಗಾವತಿ: ಮೀಸಲು ಅರಣ್ಯದಲ್ಲಿ ಅವ್ಯಾಹತ ಮರಳು ದಂಧೆ – ಹದಗೆಟ್ಟ ರಸ್ತೆ

Darshan, ಸುದೀಪ್‌ ಹಾಡಿಗಾಗಿ ವಾಗ್ವಾದ, ಗಣೇಶ ಮೂರ್ತಿ ವಿಸರ್ಜನೆ ಮೊಟಕು

Darshan, ಸುದೀಪ್‌ ಹಾಡಿಗಾಗಿ ವಾಗ್ವಾದ, ಗಣೇಶ ಮೂರ್ತಿ ವಿಸರ್ಜನೆ ಮೊಟಕು

Kustagi: ಗಣೇಶ ವಿಸರ್ಜನೆ ವೇಳೆ ಪಟಾಕಿ ಸಿಡಿದು ಕಣ್ಣು ಕಳೆದುಕೊಂಡ ವ್ಯಕ್ತಿ

Kustagi: ಗಣೇಶ ವಿಸರ್ಜನೆ ವೇಳೆ ಪಟಾಕಿ ಸಿಡಿದು ಕಣ್ಣು ಕಳೆದುಕೊಂಡ ವ್ಯಕ್ತಿ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.