Vande Mataram ; ಎಸ್ ಪಿ ಶಾಸಕ ಅಬು ಅಜ್ಮಿ ವಿವಾದಾತ್ಮಕ ಹೇಳಿಕೆ
ವಿಧಾನಸಭೆಯಲ್ಲಿ ತೀವ್ರ ಕೋಲಾಹಲ, ಶಾಸಕರ ಆಕ್ರೋಶ
Team Udayavani, Jul 19, 2023, 2:41 PM IST
ಮುಂಬಯಿ : ಮಹಾರಾಷ್ಟ್ರ ವಿಧಾನ ಸಭೆಯಲ್ಲಿ ಸಮಾಜವಾದಿ ಪಕ್ಷದ ಶಾಸಕ ಬುಧವಾರ ನೀಡಿದ ಹೇಳಿಕೆ ತೀವ್ರ ಕೋಲಾಹಲಕ್ಕೆ ಕಾರಣವಾಗಿದ್ದು, ಬಿಜೆಪಿ, ಶಿವಸೇನೆ ಸೇರಿ ಶಾಸಕರು ತೀವ್ರ ಆಕ್ರೋಶ ಹೊರಹಾಕಿ ಕ್ಷಮೆ ಯಾಚನೆಗೆ ಪಟ್ಟು ಹಿಡಿದಿದ್ದಾರೆ. ಶಾಸಕ ಅಬು ಅಜ್ಮಿ ”ನಾವು ವಂದೇ ಮಾತರಂ ಹೇಳುವುದಿಲ್ಲ, ನಾವು ಅಲ್ಲಾನಲ್ಲಿ ನಂಬಿಕೆಯುಳ್ಳವರು” ಎಂದು ವಿವಾದಕ್ಕೆ ಕಾರಣವಾದರು.
ಅಧಿವೇಶನದಲ್ಲಿ ಮಾತನಾಡಿದ ಅಬು ಅಜ್ಮಿ ”ಅಫ್ತಾಬ್ ಪೂನಾವಾಲಾ ತಪ್ಪು ಮಾಡಿದ್ದಾರೆ, ಆದರೆ ದೇಶದೆಲ್ಲೆಡೆ ಮುಸ್ಲಿಮರ ವಿರುದ್ಧ ಘೋಷಣೆಗಳನ್ನು ಕೂಗಲಾಗುತ್ತಿದೆ. ಹಿಂದೂ ಪರ ಸಂಘಟನೆಗಳು ಮಹಾರಾಷ್ಟ್ರದ ವಿವಿಧ ಜಿಲ್ಲೆಗಳಲ್ಲಿ ರ್ಯಾಲಿ ನಡೆಸಿ ಮುಸ್ಲಿಮರಿಗೆ ತೀವ್ರ ಅವಮಾನ ಮಾಡಿದ್ದಾರೆ” ಎಂದರು.
”ಔರಂಗಾಬಾದ್ ನ ರಾಮ ಮಂದಿರದ ಬಳಿ ಈ ದೇಶದಲ್ಲಿ ನೀವು ಉಳಿಯಬೇಕಾದರೆ ವಂದೇ ಮಾತರಂ ಹೇಳಬೇಕು ಎಂದು ಮೂವರು ಘೋಷಣೆಗಳನ್ನು ಕೂಗಿದ್ದಾರೆ. ನಾವು ಅಲ್ಲಾ ನಲ್ಲಿ ನಂಬಿಕೆ ಉಳ್ಳವರು. ಅಲ್ಲಾಹು ಹೊರತು ಪಡಿಸಿ ಬೇರೆಯವರಿಗೆ ತಲೆ ಬಾಗುವುದಿಲ್ಲ” ಎಂದರು.
ಡಿಸಿಎಂ ದೇವೇಂದ್ರ ಫಡ್ನವಿಸ್ ಮಾತನಾಡಿ” ಈ ದೇಶದಲ್ಲಿ ಕೋಟ್ಯಂತರ ಮಂದಿ ವಂದೇ ಮಾತರಂ ರೇ ಗೌರವ ನೀಡುತ್ತಾರೆ. ಯಾವುದೇ ಧರ್ಮ ತಾಯಿಯನ್ನು ನಿಂದಿಸಲು ಹೇಳುವುದಿಲ್ಲ. ವಂದೇ ಮಾತರಂ ಧಾರ್ಮಿಕ ಗೀತೆಯಲ್ಲ. ದೇಶ ಭಕ್ತಿ ಗೀತೆ” ಎಂದು ತಿರುಗೇಟು ನೀಡಿದರು. ಬಿಜೆಪಿ ಮತ್ತು ಶಿವಸೇನೆ ಶಾಸಕರು ಅಜ್ಮಿ ಹೇಳಿಕೆಗೆ ವ್ಯಾಪಕ ಆಕ್ರೋಶ ಹೊರ ಹಾಕಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್ ಪಾಲು
CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ
J&K ಸಂಸದ ಇಂಜಿನಿಯರ್ ರಶೀದ್ ಗೆ ಕೈಕೊಟ್ಟು ಎನ್ ಸಿ ಸೇರಿದ ಅಭ್ಯರ್ಥಿ!
Modi 100 days; ಮುಂದಿನ 1000 ವರ್ಷಗಳ ಅಭಿವೃದ್ಧಿಗೆ ತಳಹದಿ ಸಿದ್ಧಪಡಿಸಲಾಗುತ್ತಿದೆ
J-K ಉಗ್ರವಾದ ಯಾರೂ ಪುನರುಜ್ಜೀವನಗೊಳಿಸುವ ಧೈರ್ಯ ತೋರದಂತೆ ಸಮಾಧಿ: ಶಾ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.