ಸರ್ವೆ ಕಾರ್ಯಕ್ಕೆ ಕಾದಿವೆ 702 ಮುಜರಾಯಿ ದೇಗುಲ


Team Udayavani, Jul 19, 2023, 3:56 PM IST

ಸರ್ವೆ ಕಾರ್ಯಕ್ಕೆ ಕಾದಿವೆ 702 ಮುಜರಾಯಿ ದೇಗುಲ

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಮುಜರಾಯಿ ಇಲಾಖೆಗೆ ಸೇರಿದ ದೇವಾಲಯಗಳ ಆಸ್ತಿ, ಪಾಸ್ತಿ ಸಂರಕ್ಷಣೆಗೆ ನಡೆಸುತ್ತಿರುವ ದೇಗುಲಗಳ ಸರ್ವೆ ಕಾರ್ಯ ಜಿಲ್ಲೆಯಲ್ಲಿ ಕುಂಟುತ್ತಾ ಸಾಗಿದ್ದು, ಇನ್ನೂ 702 ದೇವಾಲಯಗಳ ಸರ್ವೆ ಕಾರ್ಯ ಬಾಕಿ ಇದೆ.

ಮುಜರಾಯಿ ಇಲಾಖೆಗೆ ಸೇರಿದ ಸಾವಿರಾರು ದೇವಾಲಯಗಳು ಪ್ರತಿ ಗ್ರಾಮದಲ್ಲಿ ಇದ್ದರೂ ಅವುಗಳನ್ನು ಇಲಾಖೆ ಎ, ಬಿ ಹಾಗೂ ಸಿ ಎಂದು ವರ್ಗವಾಗಿ ವಿಂಗಡಿಸಿದೆ. ಜಿಲ್ಲೆಯಲ್ಲಿ ಎ ವರ್ಗಕ್ಕೆ ಸೇರುವ ದೇವಾಲಯಗಳು ಕೇವಲ 3 ಇದ್ದು, ಬಿ ವರ್ಗಕ್ಕೆ 4, ಸಿ ವರ್ಗಕ್ಕೆ ಸೇರುವ ಒಟ್ಟು 1102 ದೇವಾಲಯಗಳು ಇವೆ.

ಇವುಗಳಲ್ಲಿ ಎ ವರ್ಗಕ್ಕೆ ಸೇರಿದ ದೇವಾಲಯಗಳಿಗೆ ವಾರ್ಷಿಕ ಲಕ್ಷಾಂತರ ರೂ. ಆದಾಯ ಇದ್ದು, ಬಿ ವರ್ಗಕ್ಕೆ ಸೇರಿದ ದೇವಾಲಯಗಳಲ್ಲಿ ಆದಾಯ ಕಡಿಮೆ ಇದ್ದು, ಸಿ ವರ್ಗದ ದೇವಾಲಯಗಳಿಗೆ ಸರ್ಕಾರವೇ ಹಣ ಕೊಡುತ್ತದೆ. ಆದರೆ ಜಿಲ್ಲೆಯಲ್ಲಿ ಮುಜರಾಯಿ ಇಲಾಖೆಗೆ ಸೇರಿದ ದೇವಾಲಯಗಳನ್ನು ಸಂರಕ್ಷಿಸಿ ದೇಗುಲಕ್ಕೆ ಸೇರಿದ ಜಮೀನು ಮತ್ತಿತರ ಬೆಲೆ ಬಾಳುವ ಜಾಗ, ಆವರಣ, ಕಲ್ಯಾಣಿ, ಕಲ್ಯಾಣ ಮಂಟಪ ಹೀಗೆ ಏನಾದರೂ ಇದ್ದಲ್ಲಿ ಸಮರ್ಪಕವಾಗಿ ಸರ್ವೆ ಕಾರ್ಯ ನಡೆಸಿ ದೇವಾಲಯಕ್ಕೆ ಸೇರಿದ ಜಮೀನುಗಳನ್ನು ಪಹಣಿಗೆ ಸೇರಿಸಿ ದಾಖಲಿಸುವ ನಿಟ್ಟಿನಲ್ಲಿ ಸರ್ವೆ ಕಾರ್ಯ ನಡೆಸಲಾಗುತ್ತಿದೆ. ಆದರೆ, ಜಿಲ್ಲೆಯಲ್ಲಿ ನಿರೀಕ್ಷಿತ ಮಟ್ಟದಲ್ಲಿ ಸರ್ವೆ ಕಾರ್ಯ ನಡೆಯದೇ ಇರುವುದು ಎದ್ದು ಕಾಣುತ್ತಿದೆ.

ವಿಧುರಾಶ್ವತ್ಥ ಮಾತ್ರ ಶ್ರೀಮಂತ ದೇವಾಲಯ: ಇಡೀ ಜಿಲ್ಲೆಯ ಪೈಕಿ ಮುಜರಾಯಿ ದೇವಾಲಯಗಳಲ್ಲಿ ಅತ್ಯಂತ ಶ್ರೀಮಂತ ದೇಗುಲ ಇದ್ದರೆ ಜಿಲ್ಲೆಯ ಗೌರಿಬಿದನೂರು ತಾಲೂಕಿನ ವಿಧುರಾಶ್ವತ್ಥದ ದೇಗುಲ ಮಾತ್ರ. ಅಲ್ಲಿ ವಾರ್ಷಿಕವಾಗಿ ಲಕ್ಷಾಂತರ ರೂ. ಹಣ ಹುಂಡಿ ಮೂಲಕ ಭಕ್ತರಿಂದ ಸಂಗ್ರಹವಾಗುತ್ತದೆ. ಕಳೆದ ವರ್ಷ 17 ಲಕ್ಷ ರೂ. ಸಂಗ್ರಹವಾಗಿತ್ತು. ಈ ಬಾರಿ ಹುಂಡಿ ಎಣಿಕೆ ಮಾಡಿಲ್ಲ ಎಂದು ಮುಜರಾಯಿ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಉಳಿದಂತೆ ನಂದಿ, ರಂಗಸ್ಥಳ, ಕೈವಾರ ಅಮರನಾರೇಯಣ ಸ್ವಾಮಿ ದೇವಾಲಯಗಳಿದ್ದು ಹುಂಡಿ ಮೂಲಕ ಭಕ್ತರ ಕಾಣಿಕೆ ಸಂಗ್ರಹ ಅಷ್ಟಕಷ್ಟೇ.

ಜಿಲ್ಲೆಯಲ್ಲಿ ಮುಜರಾಯಿ ಇಲಾಖೆ ವ್ಯಾಪ್ತಿಗೆ ಬರುವ ದೇವಾಲಯಗಳ ಆಸ್ತಿ, ಪಾಸ್ತಿಗಳನ್ನು ಸಂರಕ್ಷಿಸಲು ಸರ್ವೆ ಕಾರ್ಯ ನಡೆಯುತ್ತಿದ್ದು, ಇಲ್ಲಿವರೆಗೂ ಒಟ್ಟು 411 ದೇವಾಲಯಗಳನ್ನು ಸರ್ವೆ ಮಾಡಿಸಿ ಆಸ್ತಿ ಗುರುತಿಸಿ ಪಹಣಿಗೆ ಸೇರಿಸಲಾಗಿದೆ. ಉಳಿಕೆ 702 ದೇವಾಲಯಗಳ ಸರ್ವೆ ಕಾರ್ಯ ಪ್ರಗತಿಯಲ್ಲಿದೆ. ●ಸೌಭಾಗ್ಯಮ್ಮ, ಮುಜರಾಯಿ, ತಹಶೀಲ್ದಾರ್‌, ಚಿಕ್ಕಬಳ್ಳಾಪುರ

-ಕಾಗತಿ ನಾಗರಾಜಪ್ಪ

ಟಾಪ್ ನ್ಯೂಸ್

BBK-11: ಬಿಗ್ ಬಾಸ್ ಮನೆಗೆ ಹೋದ ಕೊನೆಯ ಮೂವರು ಸ್ಪರ್ಧಿಗಳು ಇವರೇ…

BBK-11: ಬಿಗ್ ಬಾಸ್ ಮನೆಗೆ ಹೋದ ಕೊನೆಯ ಮೂವರು ಸ್ಪರ್ಧಿಗಳು ಇವರೇ…

CM-Ashokapuram

Mysuru: ನಾನು ಹೆದರುವ, ಜಗ್ಗುವ, ಬಗ್ಗುವ ಪ್ರಶ್ನೆಯೇ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

Chaitra-Kundapur

BBK11: ಬಿಗ್ ಬಾಸ್ ಸೀಸನ್ 10 ಜೈಲಲ್ಲಿ ವೀಕ್ಷಿಸಿ, 11ರ ಸ್ಪರ್ಧಿಯಾದ ಚೈತ್ರಾ

gold-suresh-bigg-boss

BBK-11: ಬಾಡಿಗಾರ್ಡ್ ಗಳೊಂದಿಗೆ ಬಿಗ್ ಬಾಸ್ ಬಂದ ‘ಗೋಲ್ಡ್ ಸುರೇಶ್’

1-lll

UK ಸಂಸತ್ತಿನಲ್ಲಿ ಕನ್ನಡದಲ್ಲಿ ಮಾತನಾಡಿದ ರಾಜ್ಯದ ಅದಿಶ್ ರಜಿನಿಶ್ ವಾಲಿ

BBK-11: ಬಿಗ್ ಬಾಸ್ ಮನೆಗೆ ನಟಿ ಹಂಸಾ, ಮಾನಸಾ ಎಂಟ್ರಿ: ಯಾರಿವರು

BBK-11: ಬಿಗ್ ಬಾಸ್ ಮನೆಗೆ ನಟಿ ಹಂಸಾ, ಮಾನಸಾ ಎಂಟ್ರಿ: ಯಾರಿವರು

1-PT

PT Usha ತಿರುಗೇಟು; ಸ್ವಾರ್ಥ ಮತ್ತು ವಿತ್ತೀಯ ಲಾಭದ ಮೇಲೆ ಹೆಚ್ಚು ಗಮನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

0421472757

Nandi Hills: ವಿಶ್ವ ವಿಖ್ಯಾತ ನಂದಿಬೆಟ್ಟಕ್ಕೆ ಪ್ರವಾಸಿಗರ ಪ್ರವಾಹ

Chikkaballapur: ಸ್ವಂತ ಕಟ್ಟಡ ಇಲ್ಲದೇ ಶಿಕ್ಷಣ ತರಬೇತಿಗೆ ಡಯಟ್‌ ಪರದಾಟ!

Chikkaballapur: ಸ್ವಂತ ಕಟ್ಟಡ ಇಲ್ಲದೇ ಶಿಕ್ಷಣ ತರಬೇತಿಗೆ ಡಯಟ್‌ ಪರದಾಟ!

Chikkaballapura; ಎಸ್ಎಫ್ ಐ ರಾಜ್ಯ ಸಮ್ಮೇಳನಕ್ಕೆ ಚಾಲನೆ

Chikkaballapura; ಎಸ್ಎಫ್ ಐ ರಾಜ್ಯ ಸಮ್ಮೇಳನಕ್ಕೆ ಚಾಲನೆ

Police

Government Order: ಪೊಲೀಸರಿಗೆ ಅರ್ಧ ಕೋಟಿ ರೂ. ಜೀವವಿಮೆ! ವಿಮಾ ಮೊತ್ತ ಇಲಾಖೆಯಿಂದಲೇ ಪಾವತಿ

Tragedy: ಕೆಟ್ಟು ನಿಂತಿದ್ದ ಟ್ರ್ಯಾಕ್ಟರ್ ಗೆ ಬೈಕ್ ಡಿಕ್ಕಿ: ಮೂವರು ವಿದ್ಯಾರ್ಥಿಗಳು ಮೃತ್ಯು

Tragedy: ಕೆಟ್ಟು ನಿಂತಿದ್ದ ಟ್ರ್ಯಾಕ್ಟರ್ ಗೆ ಬೈಕ್ ಡಿಕ್ಕಿ: ಮೂವರು ವಿದ್ಯಾರ್ಥಿಗಳು ಮೃತ್ಯು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-ddee

Kanpur Test: ಪಂದ್ಯ ಡ್ರಾ ಹಾದಿಯತ್ತ

BBK-11: ಬಿಗ್ ಬಾಸ್ ಮನೆಗೆ ಹೋದ ಕೊನೆಯ ಮೂವರು ಸ್ಪರ್ಧಿಗಳು ಇವರೇ…

BBK-11: ಬಿಗ್ ಬಾಸ್ ಮನೆಗೆ ಹೋದ ಕೊನೆಯ ಮೂವರು ಸ್ಪರ್ಧಿಗಳು ಇವರೇ…

CM-Ashokapuram

Mysuru: ನಾನು ಹೆದರುವ, ಜಗ್ಗುವ, ಬಗ್ಗುವ ಪ್ರಶ್ನೆಯೇ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

Chaitra-Kundapur

BBK11: ಬಿಗ್ ಬಾಸ್ ಸೀಸನ್ 10 ಜೈಲಲ್ಲಿ ವೀಕ್ಷಿಸಿ, 11ರ ಸ್ಪರ್ಧಿಯಾದ ಚೈತ್ರಾ

byndoor

Udupi: ಕಾರುಗಳ ಢಿಕ್ಕಿ; ಮೂವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.