![1-maya](https://www.udayavani.com/wp-content/uploads/2024/07/1-maya-415x233.jpg)
ರಿಯಾಯಿತಿ ದರದಲ್ಲಿ ಸಸಿಗಳ ಮಾರಾಟಕ್ಕೆ ಸರಕಾರ ಆದೇಶ: ಗಮನ ಸೆಳೆದಿದ್ದ ಉದಯವಾಣಿ ವರದಿ
Team Udayavani, Jul 20, 2023, 6:36 AM IST
![PLANT](https://www.udayavani.com/wp-content/uploads/2023/07/PLANT-620x372.jpg)
ಉಡುಪಿ: ಅರಣ್ಯ ಇಲಾಖೆಯು ಸಾರ್ವಜನಿಕರಿಗೆ ವಿತರಿಸುವ ಗಿಡಗಳಿಗೆ ಇತ್ತೀಚೆಗೆ ರಿಯಾಯಿತಿಯನ್ನು ಕಡಿತಗೊಳಿಸಿತ್ತು. ಇದಕ್ಕೆ ವಿರೋಧ ವ್ಯಕ್ತಗೊಂಡ ಹಿನ್ನೆಲೆಯಲ್ಲಿ ದರ ಕಡಿಮೆ ಮಾಡಿ ಸರಕಾರ ಆದೇಶ ಹೊರಡಿಸಿದೆ.
ಈ ಹಿಂದೆ ಸಸಿಗಳಿಗೆ ಇದ್ದ ಶೇ. 80ರಿಂದ 90ರಷ್ಟು ರಿಯಾಯಿತಿ ದರವನ್ನು ಶೇ. 50ಕ್ಕೆ ಇಳಿಸಲಾಗಿತ್ತು. ವಿವಿಧ ಅಳತೆಗೆ ಸಂಬಂಧಿಸಿ 1 ರೂ., 3 ರೂ. ದರಕ್ಕೆ ಸಿಗುತ್ತಿದ್ದ ಗಿಡಗಳಿಗೆ ಇನ್ನೂ 5 ರೂ., 6 ರೂ., 23 ರೂ. ಹೆಚ್ಚಿಸಲಾಗಿತ್ತು. ಮಳೆಗಾಲದಲ್ಲಿ ಗಿಡ ನೆಡುವ ರೈತರು ಮತ್ತು ಇತರ ಸಾರ್ವಜನಿಕರು ರಿಯಾಯಿತಿ ದರ ಕಡಿತಗೊಳಿಸಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದರು. ಉದಯವಾಣಿಯಲ್ಲಿ ಮೇ 22ರಂದು “ಅರಣ್ಯ ಇಲಾಖೆ ಸಸಿಗಳಿಗೆ ರಿಯಾಯಿತಿ ಕಡಿತ’ ಶೀರ್ಷಿಕೆಯಡಿ ವಿಸ್ತೃತ ವರದಿ ಪ್ರಕಟಿಸಿ ಗಮನ ಸೆಳೆದಿತ್ತು.
ಸಸಿಗಳು ದರ ಹೆಚ್ಚಳಗೊಂ ಡಿರುವ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ವಿವಿಧ ವಲಯ ಗಳಲ್ಲಿರುವ ನರ್ಸರಿ ಮತ್ತು ಸಾಮಾಜಿಕ ಅರಣ್ಯ ಇಲಾಖೆ ವಲಯದ ನರ್ಸರಿಗಳಲ್ಲಿ ಜನರು ಸಸಿಗಳ ಖರೀದಿಗೆ ಹಿಂದೇಟು ಹಾಕುತ್ತಿದ್ದರು. ಗಿಡಗಳನ್ನು ನೆಟ್ಟು ಬೆಳೆಸುವ ಸಾರ್ವಜನಿಕರಿಗೆ ರಿಯಾಯಿತಿ ದರವನ್ನು ಮುಂದುವರಿಸಿ ಪ್ರೋತ್ಸಾಹ ನೀಡಬೇಕು ಎಂಬ ಆಗ್ರಹ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಸಸಿಗಳ ಉತ್ಪಾದನ ವೆಚ್ಚಕ್ಕೆ ಶೇಕಡವಾರು ರಿಯಾಯಿತಿ ನಿಗದಿಪಡಿಸಲು ರಾಜ್ಯ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಅವರು ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರು.
ಪ್ರಸ್ತಾವನೆ ಪರಿಶೀಲಿಸಿದ ಸರಕಾರ ಉತ್ಪಾದನೆ ವೆಚ್ಚದ ಮೇಲೆ ಶೇ. 70ರಿಂದ 80ರಷ್ಟು ರಿಯಾಯಿತಿ ನೀಡಿದ್ದು, ಅರಣ್ಯ, ಪರಿಸರ ಇಲಾಖೆ ಅಧೀನ ಕಾರ್ಯದರ್ಶಿ ಅವರು ಆದೇಶ ಹೊರಡಿಸಿದ್ದಾರೆ.
ಸಾರ್ವಜನಿಕರು, ರೈತರ ಬೇಡಿಕೆಯಂತೆ ಅರಣ್ಯ ಇಲಾಖೆ ಸಸಿಗಳ ಮಾರಾಟ ದರವನ್ನು ಪರಿಷ್ಕರಿಸಿ ಸರಕಾರ ಆದೇಶಿಸಿದೆ. ಸಾರ್ವಜನಿಕರಿಗೆ ಇಲಾಖೆಯ ನರ್ಸರಿಗಳಲ್ಲಿ ಪರಿಷ್ಕೃತ ದರದಲ್ಲಿ ಮಾರಾಟ ಮಾಡಲಾಗುತ್ತಿದ್ದು, ಕಡಿಮೆ ದರದಲ್ಲಿ ಸಸಿಗಳನ್ನು ಖರೀದಿಸಬಹುದಾಗಿದೆ.
– ಉದಯ ನಾಯ್ಕ, ಡಿಎಫ್ಒ, ಕುಂದಾಪುರ ಉಪ ವಿಭಾಗ
– ಕ್ಲಿಫರ್ಡ್ ಲೋಬೊ, ಡಿಎಫ್ಒ, ಸಾಮಾಜಿಕ ಅರಣ್ಯವಿಭಾಗ, ಉಡುಪಿ ಜಿಲ್ಲೆ
ಟಾಪ್ ನ್ಯೂಸ್
![1-maya](https://www.udayavani.com/wp-content/uploads/2024/07/1-maya-415x233.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![1-maya](https://www.udayavani.com/wp-content/uploads/2024/07/1-maya-150x84.jpg)
K Armstrong; ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಇಲ್ಲ: ಮಾಯಾವತಿ ಆಕ್ರೋಶ
![1hatharas](https://www.udayavani.com/wp-content/uploads/2024/07/1hatharas-150x84.jpg)
Hathras ಕಾಲ್ತುಳಿತ: ವಿಷಕಾರಿ ದ್ರವವನ್ನು ಹೊಂದಿದ್ದ ಕ್ಯಾನ್ಗಳನ್ನು ತಂದಿದ್ದರೆ?
![Assam: ಜೋರು ಮಾಡಿದ್ದಕ್ಕೆ ತರಗತಿಯಲ್ಲೇ ಶಿಕ್ಷಕನನ್ನು ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿ](https://www.udayavani.com/wp-content/uploads/2024/07/4-7-150x90.jpg)
Assam: ಜೋರು ಮಾಡಿದ್ದಕ್ಕೆ ತರಗತಿಯಲ್ಲೇ ಶಿಕ್ಷಕನನ್ನು ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿ
![Siruguppa ಅನೈತಿಕ ಚಟುವಟಿಕೆಗಳ ತಾಣವಾದ ಸರ್ಕಾರಿ ಅತಿಥಿ ಗೃಹ](https://www.udayavani.com/wp-content/uploads/2024/07/government-guest-house-150x81.jpg)
Siruguppa ಅನೈತಿಕ ಚಟುವಟಿಕೆಗಳ ತಾಣವಾದ ಸರ್ಕಾರಿ ಅತಿಥಿ ಗೃಹ
![Team India; ಏಕದಿನ, ಟೆಸ್ಟ್ ನಾಯಕತ್ವದಿಂದ ರೋಹಿತ್ ಗೆ ಕೊಕ್?; ಸ್ಪಷ್ಟನೆ ನೀಡಿದ ಜಯ್ ಶಾ](https://www.udayavani.com/wp-content/uploads/2024/07/jay-150x83.jpg)
Team India; ಏಕದಿನ, ಟೆಸ್ಟ್ ನಾಯಕತ್ವದಿಂದ ರೋಹಿತ್ ಗೆ ಕೊಕ್?; ಸ್ಪಷ್ಟನೆ ನೀಡಿದ ಜಯ್ ಶಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.