ಮಾಸಾಂತ್ಯಕ್ಕೆ ದಸರಾ ಆನೆಗಳ ಪಟ್ಟಿ ಸಿದ್ಧ: ಮಾಲತಿಪ್ರಿಯಾ


Team Udayavani, Jul 20, 2023, 1:28 PM IST

ಮಾಸಾಂತ್ಯಕ್ಕೆ ದಸರಾ ಆನೆಗಳ ಪಟ್ಟಿ ಸಿದ್ಧ: ಮಾಲತಿಪ್ರಿಯಾ

ಮೈಸೂರು: ಮೈಸೂರು ದಸರಾ ಉತ್ಸವದಲ್ಲಿ ಪಾಲ್ಗೊಳ್ಳುವ ಆನೆಗಳ ಆಯ್ಕೆ ಪ್ರಕ್ರಿಯೆ ಆರಂಭವಾಗಿದ್ದು ಈ ತಿಂಗಳ ಅಂತ್ಯದ ಒಳಗಾಗಿ ದಸರೆಯಲ್ಲಿ ಪಾಲ್ಗೊಳ್ಳುವ ಆನೆಗಳ ಪಟ್ಟಿ ಸಿದ್ಧವಾಗಲಿದೆ. ಮೈಸೂರು ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಡಾ. ಮಾಲತಿಪ್ರಿಯಾ ಅವರು ಬುಧವಾರ ಇಲ್ಲಿ ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು.

ಆನೆಗಳ ಸಂಪೂರ್ಣ ಅಪಾಸಣೆ: ಅರಣ್ಯ ಇಲಾಖೆಯ ಮೂವರು ಅಧಿಕಾರಿಗಳು ಈಗಾಗಲೇ ಮತ್ತಿಗೋಡು ಆನೆ ಶಿಬಿರಕ್ಕೆ ಭೇಟಿ ನೀಡಿ 9 ಆನೆಗಳನ್ನು ಪರಿಶೀಲಿಸಿದ್ದಾರೆ. ಆನೆಗಳ ಸಂಪೂರ್ಣ ಆರೋಗ್ಯದ ತಪಾಸಣೆ ನಡೆಯುತ್ತಿದೆ. ಆನೆಗಳು ಈಗ ಶಿಬಿರದಲ್ಲಿವೆ. ಕಾಡಿನ ಆನೆಗಳನ್ನು ನಾಡಿಗೆ ಸಾಗಿಸುವಾಗ ಅಗತ್ಯವಾದ ಎಲ್ಲ ಎಚ್ಚರಿಕೆಗಳನ್ನು ಕೈಗೊಳ್ಳಬೇಕಾಗುತ್ತದೆ. ಆನೆಗಳ ವಯಸ್ಸು, ಅವುಗಳ ಪಾದ ಹೇಗಿವೆ? ಹೆಣ್ಣು ಆನೆಗಳು ಗರ್ಭ ಧರಿಸಿವೆಯೇ? ಈ ಕುರಿತು ಪರೀಕ್ಷಿಸ ಬೇಕಾಗುತ್ತದೆ. ಉತ್ತಮ ಆರೋಗ್ಯವಿರುವ ಆನೆಗಳನ್ನು ಮೈಸೂರು ದಸರಾ ಉತ್ಸವಕ್ಕೆ ಆಯ್ಕೆ ಮಾಡಲಾಗುತ್ತದೆ ಎಂದು ಡಾ.ಮಾಲತಿಪ್ರಿಯಾ ತಿಳಿಸಿದರು.

ಕಳೆದ ಬಾರಿಯ ನಾಲ್ಕು ಆನೆಗಳು ಈ ಬಾರಿ ಇಲ್ಲ: ಮೈಸೂರು ದಸರೆ ಎಂದರೆ ಆನೆಗಳ ಆಯ್ಕೆ ಮಾಡುವುದೇ ಮೊಟ್ಟ ಮೊದಲ ಕಾರ್ಯವಾಗಿದೆ. ಕಳೆದ ಬಾರಿ ಮೈಸೂರು ದಸರಾದಲ್ಲಿ ಪಾಲ್ಗೊಂಡ ಆನೆಗಳಲ್ಲಿ ನಾಲ್ಕು ಆನೆಗಳು ಈ ಬಾರಿ ದಸರೆಯಲ್ಲಿ ಇರುವುದಿಲ್ಲ. ಕಳೆದ ಬಾರಿಯಂತೆ ಈ ಬಾರಿಯೂ 14 ಆನೆಗಳು ದಸರಾ ಉತ್ಸವದಲ್ಲಿ ಪಾಲ್ಗೊಳ್ಳಬಹುದು. ಕಳೆದ ಬಾರಿ ರಾಮಾಪುರ ಕ್ಯಾಂಪ್‌ನ ಆನೆ ಲಕ್ಷ್ಮೀ ಮೈಸೂರಿಗೆ ಬಂದ ನಂತರ ಗಂಡು ಮರಿಗೆ ಜನ್ಮ ನೀಡಿತ್ತು. ಹೀಗಾಗಿ, ಹೆಣ್ಣು ಆನೆಗಳು ಗರ್ಭ ಧರಿಸಿರುವ ಕುರಿತು ಈ ಬಾರಿ ಪರೀಕ್ಷಿಸಲಾಗುತ್ತಿದೆ. ಈ ಕುರಿತು ಉನ್ನತ ಅಧಿಕಾರಿಗಳು ಸ್ಪಷ್ಟ ನಿರ್ದೇಶನ ನೀಡಿದ್ದಾರೆ. ಈ ತಿಂಗಳ ಅಂತ್ಯಕ್ಕೆ ದಸರಾ ಆನೆಗಳ ಪಟ್ಟಿ ಸಿದ್ಧವಾಗುತ್ತದೆ ಎಂದು ತಿಳಿಸಿದರು.

ಮೈಸೂರು ದಸರಾ ಉತ್ಸವದಲ್ಲಿ ಈ ಬಾರಿ ಅರ್ಜುನನಿಗೆ ವಯಸ್ಸಾದ ಕಾರಣ ಪಾಲ್ಗೊಳ್ಳುತ್ತಿಲ್ಲ. ಗೋಪಾಲಸ್ವಾಮಿ ಆನೆ ಕಾಡಾನೆ ದಾಳಿಯಿಂದ ಮೃತಪಟ್ಟಿದೆ.

ಟಾಪ್ ನ್ಯೂಸ್

Udupi: ಸ್ಕ್ಯಾನಿಂಗ್‌, ಎಂಆರ್‌ಐ ಸೇವೆ ಪುನರಾರಂಭ

Udupi: ಸ್ಕ್ಯಾನಿಂಗ್‌, ಎಂಆರ್‌ಐ ಸೇವೆ ಪುನರಾರಂಭ

illegal sand mining: ಉಳಿಯ ದ್ವೀಪ ಉಳಿಸಲು ಪಾದಯಾತ್ರೆ

illegal sand mining: ಉಳಿಯ ದ್ವೀಪ ಉಳಿಸಲು ಪಾದಯಾತ್ರೆ

Mysore-Sidda

MUDA Case: ನ್ಯಾಯ ನನ್ನ ಪರವಿದೆ, ರಾಜಕೀಯ ಪ್ರೇರಿತ ಕೇಸ್‌ ಎದುರಿಸಿ ಗೆಲ್ಲುವೆ: ಸಿಎಂ

HDK (3)

Lokayukta ಪೊಲೀಸರ ಮುಂದೆ ವಿಚಾರಣೆಗೆ ಹಾಜರಾದ ಎಚ್ ಡಿಕೆ

1-cantar

Kunigal; ಬೈಕ್ ಗೆ ಕ್ಯಾಂಟರ್ ಡಿಕ್ಕಿ:ಇಬ್ಬರು ಯುವಕರು ಸ್ಥಳದಲ್ಲೇ ಮೃ*ತ್ಯು

1-male

India vs Bangladesh 2 ನೇ ಟೆಸ್ಟ್ ಪಂದ್ಯದ ಮೊದಲ ದಿನ ಮಳೆ ಅಡ್ಡಿ

Gadinadu-Award

Award: 2023-24, 2024-25ನೇ ಸಾಲಿನ “ಗಡಿನಾಡ ಚೇತನ” ಪ್ರಶಸ್ತಿ ಪ್ರಕಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mysore-Sidda

MUDA Case: ನ್ಯಾಯ ನನ್ನ ಪರವಿದೆ, ರಾಜಕೀಯ ಪ್ರೇರಿತ ಕೇಸ್‌ ಎದುರಿಸಿ ಗೆಲ್ಲುವೆ: ಸಿಎಂ

CM-Mysore1

MUDA Scam: ಇಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತದಲ್ಲಿ ಎಫ್ಐಆರ್‌ ಸಾಧ್ಯತೆ

Mysuru-Dasara

Mysuru Dasara: ಎದೆ ಝಲ್‌ ಎನ್ನಿಸಿದ ಶಬ್ದಕ್ಕೂ ಜಗ್ಗದ ಗಜಪಡೆ

2

Hunsur: ಶುಂಠಿಹೊಲದಲ್ಲಿ ಗಾಂಜಾ ಬೆಳೆದಿದ್ದ ಆರೋಪಿ ಬಂಧನ

Mysore Dasara: ಜನ ಸಾಮಾನ್ಯರಿಗೆ ದುಬಾರಿಯಾದ ದಸರೆ

Mysore Dasara: ಜನ ಸಾಮಾನ್ಯರಿಗೆ ದುಬಾರಿಯಾದ ದಸರೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Udupi: ಸ್ಕ್ಯಾನಿಂಗ್‌, ಎಂಆರ್‌ಐ ಸೇವೆ ಪುನರಾರಂಭ

Udupi: ಸ್ಕ್ಯಾನಿಂಗ್‌, ಎಂಆರ್‌ಐ ಸೇವೆ ಪುನರಾರಂಭ

illegal sand mining: ಉಳಿಯ ದ್ವೀಪ ಉಳಿಸಲು ಪಾದಯಾತ್ರೆ

illegal sand mining: ಉಳಿಯ ದ್ವೀಪ ಉಳಿಸಲು ಪಾದಯಾತ್ರೆ

Aranthodu: ಕಾಡಾನೆ ಹಾವಳಿ; ಕೃಷಿಗೆ ಹಾನಿ

Aranthodu: ಕಾಡಾನೆ ಹಾವಳಿ; ಕೃಷಿಗೆ ಹಾನಿ

4

Malpe: ಬೋಟಿನಲ್ಲಿ ಅಡುಗೆ ಮಾಡುವ ವೇಳೆ ಬಾಣಲೆಗೆ ಬಿದ್ದು ಮೀನುಗಾರ ಸಾವು

Mysore-Sidda

MUDA Case: ನ್ಯಾಯ ನನ್ನ ಪರವಿದೆ, ರಾಜಕೀಯ ಪ್ರೇರಿತ ಕೇಸ್‌ ಎದುರಿಸಿ ಗೆಲ್ಲುವೆ: ಸಿಎಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.