ಇಳಕಲ್ಲ: ಹುನಗುಂದ-ಇಳಕಲ್ಲ ಬರ ಪೀಡಿತವೆಂದು ಘೋಷಿಸಿ

ಮುಂಗಾರು ಮಳೆ ವಿಫಲವಾಗಿ ರೈತರು ಬೆಳೆದ ಬೆಳೆಗಳು ಒಣಗಿವೆ

Team Udayavani, Jul 20, 2023, 11:00 AM IST

ಇಳಕಲ್ಲ: ಹುನಗುಂದ-ಇಳಕಲ್ಲ ಬರ ಪೀಡಿತವೆಂದು ಘೋಷಿಸಿ

ಇಳಕಲ್ಲ: ಹುನಗುಂದ ಮತ್ತು ಇಳಕಲ್ಲ ಅವಳಿ ತಾಲೂಕುಗಳಲ್ಲಿ ಮುಂಗಾರು ಮಳೆ ವಿಫಲವಾದ ಹಿನ್ನೆಲೆಯಲ್ಲಿ ತಾಲೂಕಿನ ರೈತರ ಬೆಳೆಗಳು ಒಣಗುತ್ತಿದ್ದು, ತಾಲೂಕನ್ನು ಬರಗಾಲ ಪ್ರದೇಶ ಎಂದು ಘೋಷಣೆ ಮಾಡಿ ರೈತರಿಗೆ ಸಹಾಯಧನ ಮಂಜೂರು ಮಾಡಬೇಕೆಂದು ಆಗ್ರಹಿಸಿ ರೈತ ಸಂಘ ಹಾಗೂ ಹಸಿರು ಸೇನೆಯ ಪದಾಧಿಕಾರಿಗಳು ಪ್ರತಿಭಟನೆ ನಡೆಸಿ ತಹಶೀಲ್ದಾರ್‌
ಬಸವರಾಜ ಮೆಳವಂಕಿ ಅವರಿಗೆ ಮನವಿ ಸಲ್ಲಿಸಿದರು.

ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾ ಉಪಾಧ್ಯಕ್ಷ ಶಶಿಕಾಂತ ಬಂಡರಗಲ್ಲ ಮಾತನಾಡಿ, ಇಳಕಲ್ಲ ತಾಲೂಕು ಸಂಪೂರ್ಣ
ನೀರಾವರಿ ವ್ಯಾಪ್ತಿಗೆ ಒಳಪಡಬೇಕು. ಅವಳಿ ತಾಲೂಕಿನ ಕೆರೆಗಳ ಅಭಿವೃದ್ಧಿಪಡಿಸಿ ನೀರು ತುಂಬಿಸಬೇಕು, ಹೊಲಗಳಿಗೆ ಹೋಗುವ ರಸ್ತೆ ಸುಧಾರಣೆ ಮಾಡಬೇಕು, ಅವಳಿ ತಾಲೂಕಿನ ರೈತರ ಪಂಪಸೆಟ್‌ ಗಳಿಗೆ ಹಗಲು ಸಮಯದಲ್ಲಿ ಗುಣಮಟ್ಟದ ತ್ರಿಫೇಸ್‌ 10 ತಾಸು ವಿದ್ಯುತ್‌ ಪೂರೈಸಬೇಕು. ಇಳಕಲ್ಲ ತಾಲೂಕಿನಲ್ಲಿ ಪೂರ್ಣಾವಧಿಯ ನ್ಯಾಯಾಲಯ ಸ್ಥಾಪಿಸಿ ಜನರಿಗೆ ಶೀಘ್ರವಾಗಿ ನ್ಯಾಯ ದೊರಕಿಸಿಕೊಡಲು ಅನುಕೂಲ ಮಾಡಿಕೊಡಬೇಕು, ಈ ಮೊದಲಿನ ಸರಕಾರ ಜಾರಿಗೆ ತಂದ ಕೃಷಿ ಕಾನೂನು ವಾಪಸ್‌ ಪಡೆಯಬೇಕು. ರೈತರ ಜಮೀನಿನ ಪಹಣಿ ಪತ್ರಿಕೆ ಪಡೆಯಲು ಈಗ 25 ರೂ.ಗಳನ್ನು ಮಾಡಿದ್ದು ಅದನ್ನು ಹಿಂದಿನಂತೆ ರೂ.10 ಗಳಿಗೆ ಇಳಿಕೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯಾಧ್ಯಕ್ಷ ಗುರು ಗಾಣಿಗೇರ ಮಾತನಾಡಿ, ಜಿಲ್ಲೆಯ ಇಳಕಲ್ಲ ಹುನಗುಂದ ತಾಲೂಕಿನಲ್ಲಿ
ಮುಂಗಾರು ಮಳೆ ವಿಫಲವಾಗಿ ರೈತರು ಬೆಳೆದ ಬೆಳೆಗಳು ಒಣಗಿವೆ. ಸಾಲ ಸೂಲ ಮಾಡಿ ಭರವಸೆ ಇಟ್ಟುಕೊಂಡು ಬೀಜಗಳನ್ನು ಖರೀದಿಸಿ ಹೊಲಗಳಲ್ಲಿ ಬಿತ್ತನೆ ಮಾಡಿದ್ದು, ಆ ಭರವಸೆ ಈಡೇರುವಂತೆ ಕಾಣುತ್ತಿಲ್ಲ. ಅದಕ್ಕಾಗಿ ರೈತರ ಸಂಕಷ್ಟ ಅರಿತು ಬರಗಾಲ ಪ್ರದೇಶ ಎಂದು ಘೋಷಣೆ ಮಾಡಿ ಸಹಾಯಧನ ನೀಡಬೇಕು. ರೈತರ ಮನವಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ತಲುಪಿಸಿ ಶೀಘ್ರ ರೈತರಿಗೆ ಸಹಾಯಧನ ನೀಡಬೇಕು ಎಂದು ಮನವಿ ಮಾಡಿದರು.

ವಿಜಯ ಮಹಾಂತೇಶ ದಾಸೋಹ ಭವನದಿಂದ ರೈತರು ಮೆರವಣಿಗೆ ಮೂಲಕ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ
ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು. ಮೆರವಣಿಗೆಯಲ್ಲಿ ಇಳಕಲ್ಲ ತಾಲೂಕು ಅಧ್ಯಕ್ಷ ಮೋಹಶಿನ್‌ ನಧಾಪ್‌, ಹುನಗುಂದ ಅಧ್ಯಕ್ಷ
ಬಸನಗೌಡ ಪೈಲ್‌, ಸದಸ್ಯರಾದ ಎಂ.ಆರ್‌.ಪಾಟೀಲ, ರಸೂಲ್‌ ಸಾಬ್‌ ತಶಿಲ್ದಾರ್‌, ಮಹಾಲಿಂಗಪ್ಪ ಅವಾರಿ, ಬಸವರಾಜ ಹುಡೆದಮನಿ, ಬಸನಗೌಡ ಪಾಟೀಲ ಕಿಲಾ. ಅಜಯಕುಮಾರ. ಹಾಲಗಂಗಾಧರಮಠ.ಮುತ್ತುರಾಜ ಕರಡಿ. ಉಸ್ಮಾನಾಬ ಹುಣಚಗಿ. ಹನಮಂತಪ್ಪ ಕರಕಪ್ಪ ತೊಪಲಕಟ್ಟಿ, ಕನಸಾವಿ, ವೆಂಕಣ್ಣ ತೆಗ್ಗಿಮನೆ, ರಾಜಮಹ್ಮದ ನದಾಫ, ವಿಷ್ಣು ರಜಪೂತ ಹಾಗೂ ಮುಖಂಡರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

ಬಾಗಲಕೋಟೆ:ಕೋಟೆಕಲ್ಲದಲ್ಲೊಂದು ಅಪೂರ್ವ ಜ್ಞಾನದೇಗುಲ-ಉಲ್ಲಾಸದ ವಾತಾವರಣ

ಬಾಗಲಕೋಟೆ:ಕೋಟೆಕಲ್ಲಲ್ಲೊಂದು ಅಪೂರ್ವ ಜ್ಞಾನದೇಗುಲ-ಉಲ್ಲಾಸದ ವಾತಾವರಣ

2-mudhol

Mudhola: ಮೆಕ್ಕೆಜೋಳಕ್ಕೂ ಕುತ್ತು; ರೈತರ ಆರ್ಥಿಕತೆಗೆ ಮಾರಕ ಹೊಡೆತ

ದೇಗುಲ ಕಟ್ಟಡಕ್ಕೆ ಭಕ್ತರ ದೇಣಿಗೆ ಮಾತ್ರ ಬಳಕೆ: ಗುಡಗುಂಟಿಮಠ

ದೇಗುಲ ಕಟ್ಟಡಕ್ಕೆ ಭಕ್ತರ ದೇಣಿಗೆ ಮಾತ್ರ ಬಳಕೆ: ಗುಡಗುಂಟಿಮಠ

11-mudhol

ಕ್ಷೇತ್ರದ ಅಭಿವೃದ್ಧಿಗೆ ಶಕ್ತಿಮೀರಿ‌‌ ಪ್ರಯತ್ನಿಸುವೆ: ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪುರ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

mantrika kannada movie

Kannada Cinema; ಮಾಂತ್ರಿಕ ಆಟ ಶುರು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

3-aranthodu

Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.