ಮಂಡ್ಯ ಕಸಾಪ ಸಮ್ಮೇಳನಕ್ಕೆ ಬರೋಬ್ಬರಿ 25 ಕೋ.ರೂ.ಗೆ ಮನವಿ

- 3 ದಿನಗಳ ಕಾರ್ಯಕ್ರಮಕ್ಕೆ ಇಷ್ಟು ಮೊತ್ತ ಯಾಕೆ - ಜಾಲತಾಣದಲ್ಲಿ ಸಾಹಿತಿ, ಚಿಂತಕರಿಂದ ಚರ್ಚೆ

Team Udayavani, Jul 21, 2023, 7:31 AM IST

kannada

ಬೆಂಗಳೂರು: ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸರಕಾರ ಈ ಬಾರಿ ಬಜೆಟ್‌ನಲ್ಲಿ ಅನುದಾನ ಮೀಸಲಿಟ್ಟಿಲ್ಲ. ಈ ಹಿಂದೆ ಸಾಹಿತ್ಯ ಸಮ್ಮೇಳನಕ್ಕಾಗಿ 25 ಕೋಟಿ ರೂ.ಮೀಸಲಿಡುವಂತೆ ಪರಿಷತ್ತಿನ ಅಧ್ಯಕ್ಷ ಮಹೇಶ ಜೋಷಿ ಸರಕಾರಕ್ಕೆ ಪತ್ರ ಬರೆದು ಮನವಿ ಮಾಡಿದ್ದು, ಅದಕ್ಕೆ ಸರಕಾರದಿಂದ ಪುರಸ್ಕಾರ ಸಿಕ್ಕಲಿಲ್ಲ.

ಎಲ್ಲ ಬೆಳವಣಿಗೆ ನಡುವೆ ಫೇಸ್‌ಬುಕ್‌ ಜಾಲತಾಣದಲ್ಲಿ ಕೆಲವು ಸಾಹಿತಿಗಳು, ಪ್ರಗತಿಪರ ಚಿಂತಕರು ಮತ್ತು ಯುವ ಬರಹಗಾರರು 3 ದಿನಗಳ ಕಾರ್ಯಕ್ರಮಕ್ಕೆ 25 ಕೋಟಿ ರೂ. ಯಾಕೆ ಎಂಬ ಪ್ರಶ್ನೆ ಮುಂದಿಟ್ಟು ಚರ್ಚೆಗೆ ಮುನ್ನುಡಿ ಬರೆದಿದ್ದಾರೆ. ಅನಗತ್ಯ ವೈಭವ, ದುಂದುವೆಚ್ಚ ಕೈಬಿಟ್ಟು ಸರಳ ಸಮಾರಂಭ ಮಾಡಬೇಕು. ಸರಕಾರ ಸಾಹಿತ್ಯ ಸಮ್ಮೇಳನಕ್ಕೆ ಕೋಟ್ಯಂತರ ರೂ. ಖರ್ಚು ಮಾಡುವುದಕ್ಕಿಂತಲೂ ಸಾಹಿತ್ಯ ಸಮ್ಮೇಳನ ಘೋಷಣೆ ಆಗಿರುವ ಜಿಲ್ಲೆಗಳ ನೂರು ಕನ್ನಡ ಶಾಲೆಗಳ ಅಭಿವೃದ್ಧಿ ಕಾಯಕದಲ್ಲಿ ತೊಡಗಲಿ ಎಂಬ ಸಲಹೆಗಳನ್ನು ನೀಡಿದ್ದಾರೆ.

ಸಾರ್ಥಕ ಸಮ್ಮೇಳನಗಳನ್ನು ಆಯೋಜಿಸಲಿ
ಇತ್ತೀಚೆಗೆ ಕನ್ನಡ ಶಾಲೆಗಳಲ್ಲಿ ಶೌಚಾಲಯ ಮತ್ತು ಕುಡಿಯುವ ನೀರಿನ ವ್ಯವಸ್ಥೆ ಇಲ್ಲದ ಕಾರಣದಿಂದಾಗಿ ಹೈಕೋರ್ಟ್‌ ಸರಕಾರಕ್ಕೆ ಛೀಮಾರಿ ಹಾಕಿದೆ. ಸಾಹಿತ್ಯ ಸಮ್ಮೇಳನಕ್ಕೆ ಕೋಟ್ಯಂತರ ರೂ. ಖರ್ಚು ಮಾಡುವ ಬದಲು ಇದೇ ಹಣದಿಂದ ವರ್ಷಕ್ಕೆ ಕನಿಷ್ಠ ಸಾವಿರ ಕನ್ನಡ ಶಾಲೆಗಳಿಗೆ ಮೂಲ ಸೌಕರ್ಯಗಳನ್ನು ಒದಗಿಸಬಹುದು. ಇದು ನಿಜವಾದ ಕನ್ನಡದ ಅಭಿವೃದ್ಧಿಯ ಕೆಲಸ ಎಂದು ಸಾಹಿತಿ ಜಗದೀಶ ಕೊಪ್ಪ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದಾರೆ. ಮಂಡ್ಯ ಸಾಹಿತ್ಯ ಸಮ್ಮೇಳನಕ್ಕೆ 5 ಕೋಟಿ ರೂ.ಗಿಂತ ಹೆಚ್ಚು ಖರ್ಚು ಮಾಡುವುದಾದರೆ, ಸಮ್ಮೇಳನ ಬೇಡ ಎಂದಿದ್ದಾರೆ.

ಇದಕ್ಕೆ ಸಹಮತ ವ್ಯಕ್ತಪಡಿಸಿರುವ ಹಿರಿಯ ಸಾಹಿತಿ ರಾಘವೇಂದ್ರ ಪಾಟೀಲ್‌, ಕನ್ನಡ ಸಾಹಿತ್ಯ ಪರಿಷತ್ತು ಈ ಸಂದರ್ಭವನ್ನು ಬಳಸಿಕೊಂಡು ಹೊಸ ಸ್ವರೂಪದ ಸಾರ್ಥಕ ಸಾಹಿತ್ಯ ಸಮ್ಮೇಳನಗಳನ್ನು ಆಯೋಜಿಸಲಿ. ಮಹಾರಾಷ್ಟ್ರದಲ್ಲಿ ನಡೆಯುವ ಸ್ವಾಭಿಮಾನಿ ಸಾಹಿತ್ಯ ಸಮ್ಮೇಳನಗಳ ಸ್ವರೂಪದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳಗಳ ಆಯೋಜನೆಯ ಬಗೆಗೆ ಚಿಂತಿಸುವಂತಾಗಲಿ. ಸರಕಾರವು ಈ ಬಗೆಗಿನ ತನ್ನ ನಿಲುವಿನಿಂದ ಹಿಂದೆ ಸರಿಯಬಾರದು ಎಂದು ಆಗ್ರಹಿಸಿದ್ದಾರೆ.
ಅಧ್ಯಕ್ಷರ ಸಚಿವ ಪದವಿ ರದ್ದಾಗಬೇಕು

ಈ ಹಿಂದೆ ಕಸಾಪ ಅಧ್ಯಕ್ಷರಾಗಿದ್ದ ಯಾರೂ ಸಚಿವ ದರ್ಜೆ ಸ್ಥಾನಮಾನ ಕೇಳಿರಲಿಲ್ಲ. ಆ ಹಿನ್ನೆಲೆಯಲ್ಲಿ ಈಗಿನ ಅಧ್ಯಕ್ಷರಿಗೆ ಸರಕಾರ ನೀಡಿರುವ ಸಚಿವ ಪದವಿಯ ಸವಲತ್ತುಗಳು ರದ್ದಾಗಬೇಕು ಮತ್ತು ಘಟಕಗಳ ಸ್ವಾಯತ್ತತೆ ಉಳಿಯುವಂತಾಗಬೇಕು. ಹಿಂದಿನಂತೆ ಸಾಧಾರಣ ಚಪ್ಪರದಡಿ ಆ ಸಾಧಾರಣ ವ್ಯಕ್ತಿಗಳ ಮೌಲ್ಯಯುತ ಭಾಷಣ, ಚರ್ಚೆಸಾಕು ಎಂದು ಹಿರಿಯ ಸಾಹಿತಿ ಜಿ. ರಾಮಕೃಷ್ಣ ಹೇಳುತ್ತಾರೆ.

ಕೊಪ್ಪಳ ಕಸಾಪದ ಜಿಲ್ಲಾಧ್ಯಕ್ಷರು ಯಾರನ್ನಾದರೂ ಆಹ್ವಾನಿಸಿ ಭಾಷಣ ಮಾಡಿಸಬೇಕು ಎಂದಾದರೆ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರ ಅನುಮತಿ ಕೇಳಬೇಕಾದ ಪರಿಸ್ಥಿತಿ ಇದೆಯಂತೆ. ಬೆಂಗಳೂರು ನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಚಾಮರಾಜಪೇಟೆಯ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ಆವರಣದ ಕಚೇರಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ನೀವು ಬೇರೆ ಕಡೆ ಹೋಗಿ ಎಂದು ಹೇಳಲಾಗುತ್ತಿದೆ. ಅವರು ಎಲ್ಲಿಗೆ ಹೋಗಬೇಕು ಹಾಗೂ ಯಾಕೆ ಹೋಗಬೇಕು ಎಂದು ಪ್ರಶ್ನೆ ಮಾಡುತ್ತಾರೆ.

ಯಾವ ಸಮ್ಮೇಳನಕ್ಕೆ ಎಷ್ಟು ಅನುದಾನ?
ಈ ಹಿಂದೆ ಹಾವೇರಿಯಲ್ಲಿ ನಡೆದ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸರಕಾರ 20 ಕೋಟಿ ರೂ., ಮೈಸೂರಿನಲ್ಲಿ ನಡೆದಿದ್ದ 83ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ 8 ಕೋಟಿ ರೂ., ಧಾರವಾಡದಲ್ಲಿ ನಡೆದಿದ್ದ 84ನೇ ಸಾಹಿತ್ಯ ಸಮ್ಮೇಳನಕ್ಕೆ 10 ಕೋಟಿ ರೂ., ಕಲಬುರಗಿಯಲ್ಲಿ ನಡೆದಿದ್ದ 85ನೇ ಸಮ್ಮೇಳನಕ್ಕೆ 10 ಕೋಟಿ ರೂ. ಬಿಡುಗಡೆ ಮಾಡಿತ್ತು.

ಸರ್ವಾಧಿಕಾರಿಗಳನ್ನು ಪ್ರಶ್ನಿಸಬೇಕಾದ ಸಂಸ್ಥೆಯೇ ಈಗ ಸರ್ವಾಧಿಕಾರ ಧೋರಣೆ ತೋರಿದರೆ ಹೇಗೆ? ಸ್ವಯಂ ಸೇವಾ ಮಾದರಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಕಾರ್ಯ ನಿರ್ವಹಿಸಬೇಕು. ಈ ಹಿಂದೆ ಜಿ. ನಾರಾಯಣ ಅಂಥವರು ಉತ್ತಮ ಕೆಲಸ ಮಾಡಿದ್ದಾರೆ. ಅವರನ್ನು ಮಾದರಿಯಾಗಿ ತೆಗೆದುಕೊಂಡು ಕೆಲಸ ಮಾಡಬೇಕಾಗಿದೆ.
– ಜಿ.ರಾಮಕೃಷ್ಣ, ಹಿರಿಯ ಸಾಹಿತಿ

ದೇವೇಶ ಸೂರಗುಪ್ಪ

ಟಾಪ್ ನ್ಯೂಸ್

1-tirupati-laddu

Tirupati laddu ಅಪವಿತ್ರ: ಎಸ್ ಐಟಿ ತನಿಖೆಗೆ ಆಗ್ರಹಿಸಿ ಸುಪ್ರೀಂನಲ್ಲಿ ಪಿಐಎಲ್ ಸಲ್ಲಿಕೆ

1-pavan

Tirupati laddu; ಪ್ರಾಯಶ್ಚಿತ ಎಂಬಂತೆ 11 ದಿನಗಳ ಉಪವಾಸ ಕೈಗೊಳ್ಳಲಿರುವ ಪವನ್ ಕಲ್ಯಾಣ್

Pushpa 2: ಅಲ್ಲು ಅರ್ಜುನ್‌ ʼಪುಷ್ಪ-2ʼನಲ್ಲಿ ಕ್ರಿಕೆಟಿಗ ಡೇವಿಡ್‌ ವಾರ್ನರ್?‌- ಫೋಟೋ ವೈರಲ್

Pushpa 2: ಅಲ್ಲು ಅರ್ಜುನ್‌ ʼಪುಷ್ಪ-2ʼನಲ್ಲಿ ಕ್ರಿಕೆಟಿಗ ಡೇವಿಡ್‌ ವಾರ್ನರ್?‌- ಫೋಟೋ ವೈರಲ್

ಟಿಟಿಡಿಯಿಂದ ನಂದಿನಿ ತುಪ್ಪಕ್ಕೆ ಮತ್ತೆ ಬೇಡಿಕೆ:‌ ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್

LadduCase; ಟಿಟಿಡಿಯಿಂದ ನಂದಿನಿ ತುಪ್ಪಕ್ಕೆ ಮತ್ತೆಬೇಡಿಕೆ:‌ ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್

Kadur: ಅಪ್ರಾಪ್ತ ವಯಸ್ಕ ಬಾಲಕಿಗೆ ಸಲೂನ್‌ ನಲ್ಲಿ ಲೈಂಗಿಕ ಕಿರುಕುಳ ಆರೋಪ

Kadur: ಅಪ್ರಾಪ್ತ ವಯಸ್ಕ ಬಾಲಕಿಗೆ ಸಲೂನ್‌ ನಲ್ಲಿ ಲೈಂಗಿಕ ಕಿರುಕುಳ ಆರೋಪ

ಹಿಂದೂ ಕಾರ್ಯಕ್ರಮಗಳಿಗೆ ಹಿಂದೂ ಕಾರ್ಯಕರ್ತರಿಂದ ಕತ್ತಿ ಹಿಡಿದು ಕಾವಲು: ಶ್ರೀರಾಮಸೇನೆ

ಹಿಂದೂ ಕಾರ್ಯಕ್ರಮಗಳಿಗೆ ಹಿಂದೂ ಕಾರ್ಯಕರ್ತರಿಂದಲೇ ಕತ್ತಿ ಹಿಡಿದು ಕಾವಲು: ಶ್ರೀರಾಮಸೇನೆ

Karki Movie Review: ಪ್ರೀತಿ ಅರಮನೆಯಲ್ಲಿ ಜಾತಿ ಸಂಘರ್ಷ

Karki Movie Review: ಪ್ರೀತಿ ಅರಮನೆಯಲ್ಲಿ ಜಾತಿ ಸಂಘರ್ಷ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

R. Ashok: “ಮುಸ್ಲಿಂ ಭಯೋತ್ಪಾದಕರಿಗೆ ಸರಕಾರದಿಂದಲೇ ಕುಮ್ಮಕ್ಕು’

R. Ashok: “ಮುಸ್ಲಿಂ ಭಯೋತ್ಪಾದಕರಿಗೆ ಸರಕಾರದಿಂದಲೇ ಕುಮ್ಮಕ್ಕು’

Suspend

Nagamangala ಗಲಭೆ: ಡಿವೈಎಸ್ಪಿ ಅಮಾನತು

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

R.Ashok, ಶೋಭಾ ಕರಂದ್ಲಾಜೆ ವಿರುದ್ಧ ಎಫ್‌ಐಆರ್‌ ದಾಖಲು

R.Ashok, ಶೋಭಾ ಕರಂದ್ಲಾಜೆ ವಿರುದ್ಧ ಎಫ್‌ಐಆರ್‌ ದಾಖಲು

Nagamangala ಗಲಭೆಗೆ ಕೇರಳ, ಪಿಎಫ್‌ಐ ನಂಟಿನ ಮಾಹಿತಿ ಇಲ್ಲ: ಎಸ್ಪಿNagamangala ಗಲಭೆಗೆ ಕೇರಳ, ಪಿಎಫ್‌ಐ ನಂಟಿನ ಮಾಹಿತಿ ಇಲ್ಲ: ಎಸ್ಪಿ

Nagamangala ಗಲಭೆಗೆ ಕೇರಳ, ಪಿಎಫ್‌ಐ ನಂಟಿನ ಮಾಹಿತಿ ಇಲ್ಲ: ಎಸ್ಪಿ

MUST WATCH

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

ಹೊಸ ಸೇರ್ಪಡೆ

1-dddasasa

Paris; ಸಂಗೀತ ಕಾರ್ಯಕ್ರಮದಲ್ಲಿ ಭಾರತೀಯ ಗಾಯಕನ ಮೇಲೆ ಮೊಬೈಲ್ ಎಸೆತ!

POlice

Huvina Hadagali: ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪ; ಪ್ರಕರಣ ದಾಖಲು

1-tirupati-laddu

Tirupati laddu ಅಪವಿತ್ರ: ಎಸ್ ಐಟಿ ತನಿಖೆಗೆ ಆಗ್ರಹಿಸಿ ಸುಪ್ರೀಂನಲ್ಲಿ ಪಿಐಎಲ್ ಸಲ್ಲಿಕೆ

14

Kannada Sahitya Ranga: ಅಮೆರಿಕದಲ್ಲಿ ವಸಂತೋತ್ಸವ; ಕನ್ನಡ‌ ಸಾಹಿತ್ಯ ರಂಗದ ಸಾರ್ಥಕ ಸೇವೆ

Thirthahalli: ಮೇಲಿನಕುರುವಳ್ಳಿ ಪಡಿತರ ನ್ಯಾಯಬೆಲೆ ಅಂಗಡಿಯಲ್ಲಿ ಸಿಬ್ಬಂದಿ ದರ್ಪ !

Thirthahalli: ಮೇಲಿನಕುರುವಳ್ಳಿ ಪಡಿತರ ನ್ಯಾಯಬೆಲೆ ಅಂಗಡಿಯಲ್ಲಿ ಸಿಬ್ಬಂದಿ ದರ್ಪ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.