ಮಹಾರಾಷ್ಟ್ರ, ಉತ್ತರಾಖಂಡ ಸೇರಿ 7 ರಾಜ್ಯದಲ್ಲಿ ಭಾರಿ ಮಳೆ ಸಾಧ್ಯತೆ… ಇಲಾಖೆ ಎಚ್ಚರಿಕೆ
Team Udayavani, Jul 21, 2023, 10:12 AM IST
ನವದೆಹಲಿ: ಮಹಾರಾಷ್ಟ್ರ, ಉತ್ತರಾಖಂಡ, ಹಿಮಾಚಲ, ಗುಜರಾತ್, ಛತ್ತೀಸ್ಗಢ, ತೆಲಂಗಾಣ ಮತ್ತು ಒಡಿಶಾ ಸೇರಿದಂತೆ ದೇಶದ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಭಾರಿ ಮಳೆಯಾಗುವ ಹಿನ್ನೆಲೆಯಲ್ಲಿ ಶುಕ್ರವಾರ ಉತ್ತರಾಖಂಡಕ್ಕೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಈ ನಡುವೆ ಹಿಮಾಚಲ ಪ್ರದೇಶದಲ್ಲಿ ಜುಲೈ 22 ರವರೆಗೆ ‘ಯೆಲ್ಲೋ’ ಅಲರ್ಟ್ ಘೋಷಿಸಿದ್ದು ಭಾರೀ ಮಳೆಯಾಗುವ ಎಚ್ಚರಿಕೆ ನೀಡಿದೆ.
ಹವಾಮಾನ ಇಲಾಖೆಯ ಪ್ರಕಾರ ಜುಲೈ 22 ರವರೆಗೆ ಮಧ್ಯಪ್ರದೇಶ ಮತ್ತು ಛತ್ತೀಸ್ಗಢದಲ್ಲಿ ಭಾರೀ ಮಳೆಯಾಗುವ ಎಚ್ಚರಿಕೆಯನ್ನು ನೀಡಿದೆ.
ಅದರಂತೆ ಮುಂದಿನ ಐದು ದಿನಗಳಲ್ಲಿ ಮಹಾರಾಷ್ಟ್ರ ಮತ್ತು ಮುಂದಿನ ಮೂರು ದಿನಗಳಲ್ಲಿ ಗುಜರಾತ್ನಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಪುಣೆ, ರಾಯಗಡ, ಪಾಲ್ಘರ್ ಮತ್ತು ಥಾಣೆ ಸೇರಿದಂತೆ ಮಹಾರಾಷ್ಟ್ರದ ನಾಲ್ಕು ಜಿಲ್ಲೆಗಳಲ್ಲಿ ಶುಕ್ರವಾರ ಭಾರಿ ಮಳೆಯಾಗುವ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಿಸಿದೆ.
ಮುಂಬೈ ಸೇರಿದಂತೆ ಮಹಾರಾಷ್ಟ್ರದ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದ್ದ ಪರಿಣಾಮ ತಗ್ಗು ಪ್ರದೇಶಗಳು ಜಲಾವೃತಗೊಂಡಿತ್ತು, ಬಾರಿ ಮಳೆಯಿಂದ ಜನಜೀವನದ ಮೇಲೆ ಪರಿಣಾಮ ಬೀರಿದೆ. ಮುಂದಿನ ಎರಡು ದಿನಗಳ ಕಾಲ ಥಾಣೆ ಮತ್ತು ಪಾಲ್ಘರ್ನಲ್ಲಿರುವ ಎಲ್ಲಾ ಶಾಲೆ ಮತ್ತು ಕಾಲೇಜುಗಳನ್ನು ಮುಚ್ಚಲು ಆದೇಶಿಸಲಾಗಿದೆ.
ಇದನ್ನೂ ಓದಿ: ಮಣಿಪುರ: ಮಹಿಳೆಯರ ಬೆತ್ತಲೆ ಮೆರವಣಿಗೆ ಪ್ರಕರಣ… ಗ್ರಾಮಸ್ಥರಿಂದ ಆರೋಪಿಯ ಮನೆಗೆ ಬೆಂಕಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ
PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ
Tirupati: ಲಡ್ಡಿಗೆ ಪ್ರಾಣಿ ಕೊಬ್ಬು: ಟಿಟಿಡಿ ಹೇಳಿದ್ದೇನು? ತನಿಖೆಗೆ ನಿರ್ಧಾರ
Tirupati Laddus row;ತಪ್ಪಿತಸ್ಥರನ್ನು ಸುಮ್ಮನೆ ಬಿಡಲು ಸಾಧ್ಯವೇ?: ಸಿಎಂ ನಾಯ್ಡು ಪ್ರಶ್ನೆ
Ambani;1,000 ಕೋಟಿಯ ವಿಮಾನ ಖರೀದಿಸಿದ ಮುಕೇಶ್ ಅಂಬಾನಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ
Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು
Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ
Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್ ಇಸ್ರೇಲ್ ದಾಳಿಯಲ್ಲಿ ಸಾವು
Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.