Dandeli: ಮೊಹರಂ ಹಬ್ಬದ ನಿಮಿತ್ತ ಶಾಂತಿ ಸಭೆ
Team Udayavani, Jul 21, 2023, 1:21 PM IST
ದಾಂಡೇಲಿ: ಮೊಹರಂ ಹಬ್ಬವನ್ನು ನಗರದಲ್ಲಿ ಶಾಂತಿ, ಸೌಹಾರ್ದತೆಯಿಂದ ಆಚರಿಸಿಕೊಳ್ಳಬೇಕೆಂಬ ಸದುದ್ದೇಶದಿಂದ ನಗರ ಪೊಲೀಸ್ ಠಾಣೆಯ ಆಶ್ರಯದಡಿ ನಗರ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ಶಾಂತಿ ಪಾಲನಾ ಸಭೆಯನ್ನು ಏರ್ಪಡಿಸಲಾಗಿತ್ತು.
ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಪೊಲೀಸ್ ವೃತ್ತ ನಿರೀಕ್ಷಕ ಬಿ.ಎಸ್.ಲೋಕಾಪುರ, ದಾಂಡೇಲಿಯ ಜನ ಶಾಂತಿ, ಸೌಹಾರ್ತತೆಗೆ ವಿಶೇಷವಾದ ಒತ್ತನ್ನು ಕೊಡುತ್ತಿರುವುದು ಶ್ಲಾಘನೀಯ. ಪೊಲೀಸ್ ಇಲಾಖೆಯೊಂದಿಗೆ ಅತ್ಯುತ್ತಮವಾದ ಸಂಬಂಧವನ್ನು ಇಲ್ಲಿನ ಜನತೆ ಇಟ್ಟುಕೊಂಡಿದ್ದಾರೆ. ಮುಂಬರುವ ಮೊಹರಂ ಹಬ್ಬವನ್ನು ಅತ್ಯಂತ ಶಿಸ್ತು ಬದ್ದವಾಗಿ ಮತ್ತು ಶಾಂತಿ, ಸೌಹಾರ್ದತೆಯಿಂದ ನಡೆಸುವಂತೆ ವಿನಂತಿಸಿದರು.
ನಗರದಲ್ಲಿ ಶಾಂತಿ ಕಾಪಾಡಲು ಇಲಾಖೆಯೊಂದಿಗೆ ನಗರದ ನಾಗರಿಕರು ಕೈ ಜೋಡಿಸಬೇಕು. ಯಾವುದೇ ಸಮಸ್ಯೆಗಳಿದ್ದರೂ ನಗರದ ಜನತೆ ಮುಕ್ತವಾಗಿ ಸಂಪರ್ಕಿಸಬಹುದೆಂದು ಹೇಳಿದರು.
ನಗರ ಸಭೆಯ ಪೌರಾಯುಕ್ತ ಆರ್.ಎಸ್. ಪವಾರ್, ವಲಯಾರಣ್ಯಾಧಿಕಾರಿ ಅಪ್ಪರಾವ್ ಕಲಶೆಟ್ಟಿ ಮತ್ತು ಹೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ದೀಪಕ್ ನಾಯಕ ತಮ್ಮ ತಮ್ಮ ಇಲಾಖೆಗಳ ಬಗ್ಗೆ ವಿವರಿಸಿ, ಸಹಕಾರದ ಭರವಸೆ ನೀಡಿ, ನಿಯಾಮವಳಿಗಳನ್ನು ಪಾಲಿಸುವಂತೆ ಕರೆ ನೀಡಿದರು.
ಸಭೆಯನ್ನು ನಿವೃತ್ತ ಪ್ರಾಚಾರ್ಯ ಯು.ಎಸ್.ಪಾಟೀಲ್ ಮಾತನಾಡಿದರು. ಸಭೆಯಲ್ಲಿ ನಗರದ ವಿವಿಧ ಮೊಹರಂ ಕಮೀಟಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raju Talikote: ಗುಬ್ಬಿ ಗೂಡು ಕಟ್ಟುವಂತೆ ರಂಗಾಯಣ ಕಟ್ಟುವೆವು
Dandeli: ಭಾರೀ ಮಳೆಗೆ ಮನೆಯ ಮೇಲೆ ಉರುಳಿದ ಬೃಹತ್ ಮರ… ಅಪಾರ ಹಾನಿ
Uttara Kannada: ಭೂ, ಗುಡ್ಡ ಕುಸಿತ ತಡೆಗೆ 100 ಕೋಟಿ ರೂ. ಪ್ರಸ್ತಾವನೆ: ಡಿಸಿ
Uttarakannada DC: ದಾಂಡೇಲಿಗೆ ಆಗಮಿಸಿದ ಜಿಲ್ಲಾಧಿಕಾರಿ… ಆಸ್ಪತ್ರೆ, ಶಾಲೆಗಳಿಗೆ ಭೇಟಿ
Dandeli: ಸಮರ್ಪಕ ಬೀದಿ ದೀಪ ನಿರ್ವಹಣೆಗೆ ಆಗ್ರಹಿಸಿ ಬಿಜೆಪಿ ನಗರಸಭಾ ಸದಸ್ಯರಿಂದ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.