CM Siddaramaiah ಭೇಟಿ ಮಾಡಿದ ಮಹಾಲಿಂಗಪುರ ತಾಲೂಕು ಹೋರಾಟ ನಿಯೋಗ
Team Udayavani, Jul 21, 2023, 8:57 PM IST
ಮಹಾಲಿಂಗಪುರ : 2023ರಲ್ಲಿ ನಮ್ಮ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಮಹಾಲಿಂಗಪುರ ಪಟ್ಟಣವನ್ನು ತಾಲೂಕು ಕೇಂದ್ರವನ್ನಾಗಿ ಮಾಡುತ್ತೇವೆ ಎಂದು ಕಳೆದ ವರ್ಷದ ಸೆಪ್ಟೆಂಬರ್ ತಿಂಗಳಲ್ಲಿ ಭರವಸೆ ನೀಡಿದ್ದ ಇಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಭರವಸೆದಾಯಕ ಹೇಳಿಕೆಯಂತೆ ತಾಲೂಕು ಹೋರಾಟ ಸಮಿತಿಯು ಅಧಿವೇಶನದ ಕೊನೆಯ ದಿನವಾದ ಶುಕ್ರವಾರ ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬೆಂಗಳೂರಿನ ಗೃಹ ಕಚೇರಿ ಕೃಷ್ಣಾದಲ್ಲಿ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಅಬಕಾರಿ ಹಾಗೂ ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಆರ್ ಬಿ.ತಿಮ್ಮಾಪೂರ, ಜಿಪಂ ಮಾಜಿ ಅಧ್ಯಕ್ಷೆ ವೀಣಾ ಕಾಶಪ್ಪನವರ ನೇತೃತ್ವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ನಿಯೋಗವು, ನಮ್ಮ ಹೋರಾಟವು 464 ದಿನ ಪೂರೈಸಿ ಹೋರಾಟ ಮುಂದುವರೆದಿದೆ.
ಶೀಘ್ರದಲ್ಲೇ ಮಹಾಲಿಂಗಪುರ ತಾಲೂಕು ಘೋಷಿಸಿ, ಕಳೆದ 30 ವರ್ಷಗಳ ನಮ್ಮ ಬೇಡಿಕೆಯನ್ನು ಈಡೇರಿಸಬೇಕೆಂದು ನಿಯೋಗ ಸದಸ್ಯರು ಸಿಎಂ ಅವರಿಗೆ ಒತ್ತಾಯಿಸಿದರು.
ನಿಯೋಗದಿಂದ ಮನವಿ ಸ್ವೀಕರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆಲ ದಿನಗಳ ಕಾಲಾವಕಾಶ ಕೋರಿ ತಾಂತ್ರಿಕ ವಿಷಯಗಳನ್ನು ಗಮನಕ್ಕೆ ತೆಗೆದುಕೊಂಡು ತಾಲೂಕು ಘೋಷಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ಹೋರಾಟ ಸಮಿತಿಯವರು ಉದಯವಾಣಿಗೆ ಮಾಹಿತಿ ನೀಡಿದ್ದಾರೆ.
ನಿಯೋಗದಲ್ಲಿ ತೇರದಾಳ ಮತಕ್ಷೇತ್ರದ ಕಾಂಗ್ರೆಸ್ ಮುಖಂಡ ಸಿದ್ದು ಕೊಣ್ಣೂರ, ತಾಲೂಕು ಹೋರಾಟ ಸಮಿತಿ ಅಧ್ಯಕ್ಷ ಸಂಗಪ್ಪ ಹಲ್ಲಿ,ಧರೆಪ್ಪ ಸಾಂಗ್ಲಿಕರ, ಯಲ್ಲನಗೌಡ ಪಾಟೀಲ್, ರಂಗಣ್ಣಗೌಡ ಪಾಟೀಲ, ಮಹಾದೇವ ಮಾರಾಪೂರ, ನಿಂಗಪ್ಪ ಬಾಳಿಕಾಯಿ, ಶಿವಲಿಂಗ ಟಿರಕಿ, ಸಿದ್ದು ಶಿರೋಳ, ವಿರೇಶ ಆಸಂಗಿ, ಎಸ್ ಎಂ.ಪಾಟೀಲ್, ಬಸವರಾಜ ಕೊಕಟನೂರ, ಚೇತನ ಕಲಾಲ, ಆನಂದ ಚಮಕೇರಿ, ಡಾ.ಕುಳ್ಳೋಳ್ಳಿ ಸೇರಿದಂತೆ ಹಲವರು ಇದ್ದರು.
ಮಹಾಲಿಂಗಪುರ ತಾಲೂಕಿಗಾಗಿ ನಡೆದ ಹೋರಾಟವು ಶನಿವಾರ 465 ದಿನಕ್ಕೆ ಕಾಲಿಡಲಿದೆ. ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇಲ್ಲಿಯವರೆಗಿನ ಹೋರಾಟ ಮತ್ತು ತಾಲೂಕು ರಚನೆಯ ಭೌಗೋಳಿಕ ಮಾಹಿತಿಯನ್ನು ನೀಡಿ ಮನವಿ ಮಾಡಿದ್ದೇವೆ.ಕೂಲಂಕೂಷ ವಿಚಾರಣೆಗೆ ಅವರು ಕಾಲಾವಕಾಶ ಕೋರಿದ್ದಾರೆ. ಇದಕ್ಕೂ ಮುನ್ನ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರಿಗೂ ಸಂಪೂರ್ಣ ಮಾಹಿತಿಯೊಂದಿಗೆ ಮನವಿ ನೀಡಿ ಒತ್ತಾಯಿಸಿದ್ದೇವೆ.
-ಸಂಗಪ್ಪ ಹಲ್ಲಿ, ಧರೆಪ್ಪ ಸಾಂಗ್ಲಿಕರ ತಾಲೂಕು ಹೋರಾಟ ಸಮಿತಿ ಮುಖಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaladgi:ಜೆಸಿಬಿಚಾಲಕನ ನಿರ್ಲಕ್ಷ್ಯ ಕಾಮಗಾರಿ;ಪೈಪ್ ಲೈನ್ ಒಡೆದು ಸಾಕಷ್ಟು ಪ್ರಮಾಣದ ನೀರುಪೋಲು
Mudhol: ಕಾರು ಅಪಘಾತ… ಜಾನಪದ ಕಲಾವಿದ ಗುರುರಾಜ ಹೊಸಕೋಟಿ ಅವರಿಗೆ ಗಾಯ
Gram panchayat: ಸ್ಥಾನ ಬಿಟ್ಟುಕೊಡದ ಉಪಾಧ್ಯಕ್ಷೆ ವಿರುದ್ದ ಕೆಂಡಾಮಂಡಲಳಾದ ಸದಸ್ಯೆ
MUDA Case: ವಿಪಕ್ಷಗಳಿಂದ ಸಿಎಂ ಶಕ್ತಿ ಜನಪ್ರಿಯತೆ ಕುಗ್ಗಿಸುವ ಪ್ರಯತ್ನ: ಉಮಾಶ್ರೀ
Muda ಸೈಟ್ ಹಿಂತಿರುಗಿಸಿರುವ ಸಿದ್ದರಾಮಯ್ಯ ಪತ್ನಿಯ ಕ್ರಮಕ್ಕೆ ತಿಮ್ಮಾಪುರ ಪ್ರತಿಕ್ರಿಯೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Haryana: ಸೋಲಿನ ಬೆನ್ನಲ್ಲೇ ಕಾಂಗ್ರೆಸ್ ಮೈತ್ರಿಕೂಟದಲ್ಲಿ ತಲ್ಲಣ
Women’s T20 World Cup: ಸ್ಮತಿ, ಹರ್ಮನ್ ಭರ್ಜರಿ ಆಟ, ಲಂಕಾ ವಿರುದ್ಧ ಭಾರತಕ್ಕೆ ಗೆಲುವು
T20 Cricket: ಬಾಂಗ್ಲಾದೇಶಕ್ಕೆ 86 ರನ್ ಸೋಲು… 2-0 ಮುನ್ನಡೆ; ಭಾರತಕ್ಕೆ ಟಿ20 ಸರಣಿ
Multan Test : ಪಾಕಿಸ್ಥಾನಕ್ಕೆ ಇಂಗ್ಲೆಂಡ್ ತಿರುಗೇಟು… ರೂಟ್, ಬ್ರೂಕ್ ಅಜೇಯ
Munirathna Case: ಭದ್ರತೆ ಕೊಟ್ಟರೆ ಮಾಜಿ ಸಿಎಂಗಳ ಹನಿಟ್ರ್ಯಾಪ್ ಬಹಿರಂಗ: ಸಂತ್ರಸ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.