BJP ಜತೆ JDS ಮೈತ್ರಿಯ ಪ್ರಶ್ನೆಯೇ ಇಲ್ಲ: ಜಿ.ಟಿ. ದೇವೇಗೌಡ
Team Udayavani, Jul 22, 2023, 6:55 AM IST
ಮೈಸೂರು: ಬಿಜೆಪಿ ಜತೆ ಜೆಡಿಎಸ್ ವಿಲೀನ ಅಥವಾ ಮೈತ್ರಿಯ ಪ್ರಶ್ನೆಯೇ ಇಲ್ಲ ಎಂದು ಜೆಡಿಎಸ್ ಹಿರಿಯ ನಾಯಕ, ಶಾಸಕ ಜಿ.ಟಿ.ದೇವೇಗೌಡ ತಿಳಿಸಿದರು.
ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಗುರುವಾರ ನಡೆದ ಜೆಡಿಎಸ್ ಪಕ್ಷದ ಶಾಸಕಾಂಗ ಸಭೆಯಲ್ಲಿ ಜೆಡಿಎಸ್ ಪಕ್ಷವನ್ನು ಪುನರ್ ಸಂಘಟಿಸುವಂತೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಕರೆ ನೀಡಿದ್ದಾರೆ. ಬಿಜೆಪಿ ಜತೆ ಮೈತ್ರಿ ಅಥವಾ ವಿಲೀನ ಕುರಿತು ಸಭೆಯಲ್ಲಿ ಚರ್ಚೆಯಾಗಿಲ್ಲ. ಏಕಾಂಗಿಯಾಗಿ ಚುನಾವಣೆ ಎದುರಿಸಲು ಜೆಡಿಎಸ್ ಪಕ್ಷವನ್ನು ಸಜ್ಜುಗೊಳಿಸುತ್ತೇವೆ ಎಂದರು.
ಈ ಬಾರಿಯ ಅಧಿವೇಶನದಲ್ಲಿ ಬಿಜೆಪಿಯ 10 ಶಾಸಕರನ್ನು ಸದನದಿಂದ ಅಮಾನತು ಮಾಡಿದ್ದು ಕಪ್ಪು ಚುಕ್ಕೆ ಎನಿಸಿದೆ. ತಾವು ನೋಡಿದ ಹಾಗೇ ಈ ಮೊದಲು ಇಂತಹ ಘಟನೆ ವಿಧಾನಸಭೆಯಲ್ಲಿ ನಡೆದಿರಲಿಲ್ಲ.
ಶಾಸಕರು ಪ್ರತಿಗಳನ್ನು ಹರಿದು ಹಾಕಿ ಪ್ರತಿಭಟಿಸಿದ ಬಳಿಕ ಎಲ್ಲರನ್ನೂ ಆಹ್ವಾನಿಸಿ ಸ್ಪೀಕರ್ ಮಾತನಾಡಬಹುದಿತ್ತು. ಮಾತುಕತೆ ಮೂಲಕವೇ ಎಲ್ಲವನ್ನೂ ಸರಿಪಡಿಸಬಹುದಿತ್ತು. ಆದರೆ ಆ ರೀತಿ ಮಾಡದೆ ಏಕಾಏಕಿ ಅಮಾನತು ಮಾಡಿದ್ದು ಸರಿಯಲ್ಲ. ಸ್ಪೀಕರ್ ನಿಲುವು ವಿರೋಧಿಸಿ ಬಿಜೆಪಿ-ಜೆಡಿಎಸ್ ಜಂಟಿಯಾಗಿ ಅವಿಶ್ವಾಸ ನಿರ್ಣಯ ಮಂಡನೆ ಮಾಡಿದ್ದೇವೆ ಎಂದು ಅವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.