ಸುಳ್ಳು ಸಾಲದ ಆ್ಯಪ್‌ ಬಲೆಗೆ ಬೀಳದಿರಿ: ಪೊಲೀಸ್‌ ಎಚ್ಚರಿಕೆ


Team Udayavani, Jul 22, 2023, 7:18 AM IST

ಸುಳ್ಳು ಸಾಲದ ಆ್ಯಪ್‌ ಬಲೆಗೆ ಬೀಳದಿರಿ: ಪೊಲೀಸ್‌ ಎಚ್ಚರಿಕೆ

ಮಂಗಳೂರು: ಸಾಮಾಜಿಕ ಜಾಲ ತಾಣಗಳಲ್ಲಿ ಪ್ರದರ್ಶಿಸಲಾದ ಸುಳ್ಳು ಸಾಲದ ಆ್ಯಪ್‌ ಗಳಿಂದ ವಂಚನೆಗೊಳಗಾಗಿ ಸಾರ್ವಜನಿಕರು ಸಂಕಷ್ಟಕ್ಕೆ ಸಿಲುಕಿದ್ದು, ಯಾವುದೇ ಕಾರಣಕ್ಕೂ ಇಂತಹ ಆ್ಯಪ್‌ಗಳ ಬಲೆಗೆ ಬೀಳಬಾರದು ಎಂದು ಮಂಗಳೂರು ಪೊಲೀಸ್‌ ಆಯುಕ್ತರು ಎಚ್ಚರಿಸಿದ್ದಾರೆ.

ಇಂತಹ ಮೋಸದ ಆ್ಯಪ್‌ಗಳನ್ನು ಪರಿಶೀಲನೆ ನಡೆಸದೆ ಡೌನ್‌ಲೋಡ್‌ ಮಾಡಿಕೊಳ್ಳುವುದು ಅಪಾಯಕಾರಿ. ಆ್ಯಪ್‌ನಲ್ಲಿ ಕಡಿಮೆ ದರದಲ್ಲಿ ಮತ್ತು ಆಕರ್ಷಕ ಬಡ್ಡಿ ದರದಲ್ಲಿ ಸುಲಭ ಮರುಪಾವತಿಯ ಆಸೆ ತೋರಿಸಿ ಸಾಲದ ಭರವಸೆ ನೀಡುತ್ತಾರೆ. ಪತ್ತೆಯಾಗದ ಮೂಲಗಳಿಂದ ಮಾಡಿದ ವಿಡಿಯೋ ಕಾಲ್‌ ಹಾಗೂ ಇಂಟರ್‌ನೆಟ್‌ ಕರೆಗಳ ಮೂಲಕ ಸಾರ್ವಜನಿಕರನ್ನು ಈ ಜಾಲಕ್ಕೆ ಸೆಳೆಯಲಾಗುತ್ತದೆ. ತಮಗೆ ಬರುವಂತಹ ಕಾಲ್‌ಗ‌ಳು ಪ್ರತಿಷ್ಠಿತ ಹಣಕಾಸು ಸಂಸ್ಥೆಗಳಿಂದ ಬರಲಾಗಿದೆ ಎಂಬ ಭರವಸೆಯನ್ನು ನೀಡಲಾಗುತ್ತದೆ.

ನೊಂದವರ ಬ್ಯಾಂಕ್‌ ಖಾತೆಯ ವಿವರ ಹಾಗೂ ಅವರ ವೈಯಕ್ತಿಕ ವಿವರ ಭಾವಚಿತ್ರಗಳ ಸಮೇತ ಲೋನ್‌ ಪ್ರಕ್ರಿಯೆಯನ್ನು ಪೂರೈಸುವ ನೆಪದಲ್ಲಿ ಪಡೆಯಲಾಗುತ್ತದೆ. ನಂತರ ಕೇಳಿದ ಸಾಲವನ್ನು ಅವರು ನೀಡಿದ ಬ್ಯಾಂಕ್‌ ಖಾತೆಗೆ ಜಮಾ ಮಾಡಲಾಗುತ್ತದೆ. ಅಂದಿನಿಂದಲೇ ಈ ಕರಾಳ ಸಾಲದ ಸುಳಿ ಪ್ರಾರಂಭವಾಗುತ್ತದೆ. ಇಂತಹ ಸೈಬರ್‌ ವಂಚಕರು ಪೀಡಿತರಿಗೆ ಸಾಲ ಮರುಪಾವತಿಯ ನೆಪದಲ್ಲಿ ಬ್ಲಾಕ್‌ಮೇಲ್ ಮಾಡಲು ಪ್ರಾರಂಭಿಸುತ್ತಾರೆ. ಅವರ ಬಳಿ ಇರುವ ಭಾವಚಿತ್ರಗಳು ಅಶ್ಲೀಲ ರೀತಿಯಲ್ಲಿ ಪ್ರಕಟಸುವ ಬೆದರಿಕೆಯನ್ನು ನೀಡುತ್ತಾರೆ. ಮತ್ತು ಪ್ರಕಟಿಸಿ ಕೂಡಾ ಅವರಿಗೆ ಮಾನಸಿಕ ಹಿಂಸೆಯನ್ನು ನೀಡುತ್ತಾರೆ. ಇಂತಹ ಲೋನ್‌ ಆ್ಯಪ್‌ಗಳನ್ನು ನಡೆಸುವವರು ಕಾನೂನು ಬಾಹಿರ ರೀತಿಯಲ್ಲಿ ನೊಂದವರ ವೈಯಕ್ತಿಕ ಮಾಹಿತಿಯನ್ನು ದುರುಪಯೋಗ ಪಡಿಸಿ ಸಾಲ ವಸೂಲು ಮಾಡುತ್ತಾರೆ. ನೊಂದವರ ಜೀವಕ್ಕೆ ಬೆದರಿಕೆಯನ್ನು ಕೂಡಾ ನೀಡಲು ಹಿಂಜರಿಯುವುದಿಲ್ಲ. ಇಂತಹ ಜಾಲದಲ್ಲಿ ಸಿಲುಕಿದ ವ್ಯಕ್ತಿಯು ತಾನು ಪಡೆದ ಸಾಲಕ್ಕಿಂತ ಸಾಕಷ್ಟು ಜಾಸ್ತಿ ಹಣವನ್ನು ಇಂತಹ ಸೈಬರ್‌ ವಂಚಕರಿಗೆ ನೀಡುತ್ತಾರೆ.

ರುಪೀ ಹಿಯರ್‌, ಲೆಂಡ್‌ಕರ್‌, ಹೋಪ್‌ಲೋನ್‌, ಪಂಚ್‌ಲೋನ್‌, ರಾಕಾನ್‌, ಲೋನು, ಕ್ಯಾಶ್‌ಫುಲ್‌ ಮೊದಲಾದ ಚೀನಾ ಮೂಲದ ಆ್ಯಪ್‌ಗಳು ಕಾರ್ಯಾಚರಿಸುತ್ತಿವೆ. ಈಗಾಗಲೇ ಇಂತಹ 600 ಆ್ಯಪ್‌ಗಳನ್ನು ನಿಷೇಧಿಸಲಾಗಿದೆ. ಆದರೂ ಕೂಡ ಪ್ರತಿನಿತ್ಯ ಯಾವುದಾದರೂ ಹೊಸದೊಂದು ಲೋನ್‌ ಆ್ಯಪ್‌ಗಳು ಸಾಮಾಜಿಕ ಜಾಲತಾಣದಲ್ಲಿ ಬರುತ್ತವೆ.

ಸಾರ್ವಜನಿಕರು ಇಂತಹ ಆ್ಯಪ್‌ಗಳನ್ನು ತಮ್ಮ ಮೊಬೈಲ್‌ಗ‌ಳಲ್ಲಿ ಡೌನ್‌ಲೋಡ್‌ ಮಾಡದೇ ಇರಲು ವಿನಂತಿಸಿದೆ. ತಮಗೆ ಆರ್ಥಿಕ ಸಾಲ ಬೇಕಾದಲ್ಲಿ ಅಧಿಕೃತ ಬ್ಯಾಂಕ್‌ ಮತ್ತು ಹಣಕಾಸು ಸಂಸ್ಥೆಗಳಿಂದ ಸಾಲವನ್ನು ಪಡೆಯುವುದು ಸೂಕ್ತ. ಇಂತಹ ಯಾವುದಾದರೂ ಆ್ಯಪ್‌ಗಳ ಬಗ್ಗೆ ಮಾಹಿತಿ ಹೊಂದಿದಲ್ಲಿ ಕೂಡಲೇ ಆ ಮಾಹಿತಿಯನ್ನು ಪೊಲೀಸ್‌ ಇಲಾಖೆಗೆ ನೀಡಬೇಕು ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-siddu-aa

TB Dam; ಮೈತುಂಬಿಕೊಂಡ ತುಂಗಭದ್ರೆಗೆ ಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ

Parvati Nair: ಮನೆ ಕೆಲಸದವನ ಮೇಲೆ ಹಲ್ಲೆ ಆರೋಪ; ನಟಿ ಪಾರ್ವತಿ ನಾಯರ್‌ ವಿರುದ್ಧ ಕೇಸ್‌

Parvati Nair: ಮನೆ ಕೆಲಸದವನ ಮೇಲೆ ಹಲ್ಲೆ ಆರೋಪ; ನಟಿ ಪಾರ್ವತಿ ನಾಯರ್‌ ವಿರುದ್ಧ ಕೇಸ್‌

1-tirupati-laddu

Tirupati laddu ಅಪವಿತ್ರ: ಎಸ್ ಐಟಿ ತನಿಖೆಗೆ ಆಗ್ರಹಿಸಿ ಸುಪ್ರೀಂನಲ್ಲಿ ಪಿಐಎಲ್ ಸಲ್ಲಿಕೆ

1-pavan

Tirupati laddu; ಪ್ರಾಯಶ್ಚಿತ ಎಂಬಂತೆ 11 ದಿನಗಳ ಉಪವಾಸ ಕೈಗೊಳ್ಳಲಿರುವ ಪವನ್ ಕಲ್ಯಾಣ್

Pushpa 2: ಅಲ್ಲು ಅರ್ಜುನ್‌ ʼಪುಷ್ಪ-2ʼನಲ್ಲಿ ಕ್ರಿಕೆಟಿಗ ಡೇವಿಡ್‌ ವಾರ್ನರ್?‌- ಫೋಟೋ ವೈರಲ್

Pushpa 2: ಅಲ್ಲು ಅರ್ಜುನ್‌ ʼಪುಷ್ಪ-2ʼನಲ್ಲಿ ಕ್ರಿಕೆಟಿಗ ಡೇವಿಡ್‌ ವಾರ್ನರ್?‌- ಫೋಟೋ ವೈರಲ್

ಟಿಟಿಡಿಯಿಂದ ನಂದಿನಿ ತುಪ್ಪಕ್ಕೆ ಮತ್ತೆ ಬೇಡಿಕೆ:‌ ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್

LadduCase; ಟಿಟಿಡಿಯಿಂದ ನಂದಿನಿ ತುಪ್ಪಕ್ಕೆ ಮತ್ತೆಬೇಡಿಕೆ:‌ ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್

Kadur: ಅಪ್ರಾಪ್ತ ವಯಸ್ಕ ಬಾಲಕಿಗೆ ಸಲೂನ್‌ ನಲ್ಲಿ ಲೈಂಗಿಕ ಕಿರುಕುಳ ಆರೋಪ

Kadur: ಅಪ್ರಾಪ್ತ ವಯಸ್ಕ ಬಾಲಕಿಗೆ ಸಲೂನ್‌ ನಲ್ಲಿ ಲೈಂಗಿಕ ಕಿರುಕುಳ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಿಂದೂ ಕಾರ್ಯಕ್ರಮಗಳಿಗೆ ಹಿಂದೂ ಕಾರ್ಯಕರ್ತರಿಂದ ಕತ್ತಿ ಹಿಡಿದು ಕಾವಲು: ಶ್ರೀರಾಮಸೇನೆ

ಹಿಂದೂ ಕಾರ್ಯಕ್ರಮಗಳಿಗೆ ಹಿಂದೂ ಕಾರ್ಯಕರ್ತರಿಂದಲೇ ಕತ್ತಿ ಹಿಡಿದು ಕಾವಲು: ಶ್ರೀರಾಮಸೇನೆ

Mangaluru: ಕೆಪಿಟಿ ಬಳಿ ಅಪಘಾತ; ಬೈಕ್ ಸವಾರ ಪವಾಡ ಸದೃಶ ಪ್ರಾಣಾಪಾಯದಿಂದ ಪಾರು

Mangaluru: ಕೆಪಿಟಿ ಬಳಿ ಅಪಘಾತ; ಬೈಕ್ ಸವಾರ ಪವಾಡಸದೃಶ ರೀತಿ ಪ್ರಾಣಾಪಾಯದಿಂದ ಪಾರು

mlr-mangalore

Nervous Disease: ಕರಾವಳಿಯಲ್ಲೂ ಬ್ರೈನ್‌ ಹೆಲ್ತ್‌ ಕ್ಲಿನಿಕ್‌ ಕಾರ್ಯಾರಂಭ

Moodbidri: ಸರ ಕಳ್ಳತನ; ಇಬ್ಬರು ಆರೋಪಿಗಳ ಸೆರೆ

Moodbidri: ಸರ ಕಳ್ಳತನ; ಇಬ್ಬರು ಆರೋಪಿಗಳ ಸೆರೆ

Mangaluru: ಮಹಿಳೆಯ ದೇಹ 29 ತುಂಡು ಮಾಡಿದ ಪ್ರಕರಣ; ನಾಳೆ ಶಿಕ್ಷೆ ಪ್ರಕಟ

Mangaluru: ಮಹಿಳೆಯ ದೇಹ 29 ತುಂಡು ಮಾಡಿದ ಪ್ರಕರಣ; ನಾಳೆ ಶಿಕ್ಷೆ ಪ್ರಕಟ

MUST WATCH

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

ಹೊಸ ಸೇರ್ಪಡೆ

1-siddu-aa

TB Dam; ಮೈತುಂಬಿಕೊಂಡ ತುಂಗಭದ್ರೆಗೆ ಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ

Parvati Nair: ಮನೆ ಕೆಲಸದವನ ಮೇಲೆ ಹಲ್ಲೆ ಆರೋಪ; ನಟಿ ಪಾರ್ವತಿ ನಾಯರ್‌ ವಿರುದ್ಧ ಕೇಸ್‌

Parvati Nair: ಮನೆ ಕೆಲಸದವನ ಮೇಲೆ ಹಲ್ಲೆ ಆರೋಪ; ನಟಿ ಪಾರ್ವತಿ ನಾಯರ್‌ ವಿರುದ್ಧ ಕೇಸ್‌

1-dddasasa

Paris; ಸಂಗೀತ ಕಾರ್ಯಕ್ರಮದಲ್ಲಿ ಭಾರತೀಯ ಗಾಯಕನ ಮೇಲೆ ಮೊಬೈಲ್ ಎಸೆತ!

POlice

Huvina Hadagali: ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪ; ಪ್ರಕರಣ ದಾಖಲು

1-tirupati-laddu

Tirupati laddu ಅಪವಿತ್ರ: ಎಸ್ ಐಟಿ ತನಿಖೆಗೆ ಆಗ್ರಹಿಸಿ ಸುಪ್ರೀಂನಲ್ಲಿ ಪಿಐಎಲ್ ಸಲ್ಲಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.