![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Jul 21, 2023, 11:32 PM IST
ಮಂಗಳೂರು : ಪಣಂಬೂರು ಬೀಚ್ ಗೆ ಒಟ್ಟೊಟ್ಟಿಗೆ ತೆರಳಿದ್ದ ವಿದ್ಯಾರ್ಥಿಗಳನ್ನು ಹಿಂಬಾಲಿಸಿ ಬಂದು ಕೆಲ ಯುವಕರು ಅವರಲ್ಲೊಬ್ಬನ ಮೇಲೆ ಹಲ್ಲೆ ನಡೆಸಿದ ಘಟನೆ ನಗರದ ಬಿಜೈ ಕಾಪಿಕಾಡ್ ಬಳಿ ಶುಕ್ರವಾರ ರಾತ್ರಿ ನಡೆದಿದೆ.
ನಗರದ ಕಾಲೇಜೊಂದರ ಇಬ್ಬರು ವಿದ್ಯಾರ್ಥಿಗಳು, ನಾಲ್ವರು ವಿದ್ಯಾರ್ಥಿನಿಯರು ಪಣಂಬೂರು ಬೀಚ್ ಗೆ ತೆರಳಿದ್ದರು. ಈ ಬಗ್ಗೆ ಮಾಹಿತಿ ಪಡೆದ ಯುವಕರ ತಂಡವೊಂದು ಬೈಕ್ ಅನ್ನು ಬೆನ್ನತ್ತಿಬಂದಿದೆ. ಬಿಜೈ ಕಾಪಿಕಾಡ್ ಬಳಿ ವಿದ್ಯಾರ್ಥಿಯೊಬ್ಬನ ಬೈಕನ್ನು ತಡೆದು ನಿಲ್ಲಿಸಿ ಹಲ್ಲೆ ನಡೆಸಲಾಗಿದೆ. ಗಾಯಗೊಂಡ ವಿದ್ಯಾರ್ಥಿ ಉರ್ವ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.
You seem to have an Ad Blocker on.
To continue reading, please turn it off or whitelist Udayavani.