ಗೃಹಲಕ್ಷ್ಮೀ ನೊಂದಣಿಗೆ ಸರ್ವರ್‌ ಸಮಸ್ಯೆ


Team Udayavani, Jul 22, 2023, 10:21 AM IST

ಗೃಹಲಕ್ಷ್ಮೀ ನೊಂದಣಿಗೆ ಸರ್ವರ್‌ ಸಮಸ್ಯೆ

ದೇವನಹಳ್ಳಿ: ಕುಟುಂಬದ ಯಜಮಾನಿಗೆ 2,000 ನೀಡುವ ಗೃಹಲಕ್ಷ್ಮೀ ಯೋಜನೆ ನೋಂದಣಿ ಕಾರ್ಯ ಆರಂಭಗೊಂಡಿದ್ದು, ಸರ್ವರ್‌ ಸಮಸ್ಯೆಯಿಂದ ನೋಂದಣಿ ಸುಗಮವಾಗಿ ನಡೆಯಲಿಲ್ಲ. ಪಡಿತರ ಚೀಟಿ, ಆಧಾರ್‌ ಕಾರ್ಡ್‌, ಪತಿ ಆಧಾರ್‌ ಕಾರ್ಡ್‌ ಸಂಖ್ಯೆ ಮತ್ತು ಬ್ಯಾಂಕ್‌ ಖಾತೆಯ ಪಾಸ್‌ ಪುಸ್ತಕ ಮಾಹಿತಿಯೊಂದಿಗೆ ಮಹಿಳೆಯರು ತೆರಳಿದರು.

ಬೆಳಗ್ಗೆಯಿಂದಲೂ ಸರ್ವ ಸಮಸ್ಯೆ ಕಾಡಿತ್ತು. ಜಿಲ್ಲಾದ್ಯಂತ ಗೃಹಲಕ್ಷ್ಮೀ ಯೋಜನೆಯ ನೋಂದಣಿ ಕೇಂದ್ರಗಳಲ್ಲಿ ಸರ್ವರ್‌ ಸಮಸ್ಯೆಯಿಂದ ಮಹಿಳೆಯರು ಪರಿತಪಿ ಸುವಂತೆ ಆಯಿತು. ದೇವನಹಳ್ಳಿ ಪುರಸಭೆ ವ್ಯಾಪ್ತಿಯ 3 ಕೇಂದ್ರಗಳಲ್ಲಿ ಬೆಳಗ್ಗೆಯಿಂದ ಮಧ್ಯಾಹ್ನ ಎರಡು ಗಂಟೆವರೆಗೆ ತಾಂತ್ರಿಕ ದೋಷ ಕಂಡು ಬಂತು. ಎರಡು ಗಂಟೆ ನಂತರ ಎರಡು ಮೂವತ್ತ ರವರೆಗೆ ಸುಮಾರು ಐದು ಅರ್ಜಿಗಳು ಸಲ್ಲಿಕೆ ಆಗಿದ್ದವು.ನಂತರ 2:30ನಂತರವೂ ಸರ್ವರ್‌ ಸಮಸ್ಯೆ ಕಾಡುತ್ತಿತ್ತು.

ನೋಂದಣಿ ಕಾರ್ಯಕ್ಕೆ ಸಮಸ್ಯೆ: ಕಾಂಗ್ರೆಸ್‌ ನೇತೃತ್ವದ ಸರ್ಕಾರವು 5 ಗ್ಯಾರಂಟಿ ಯೋಜನೆಗಳಲ್ಲಿ ಇದು ಪ್ರಮುಖ ಯೋಜನೆಯಾಗಿದೆ. ವೃದ್ಧ ಮಹಿಳೆಯರು ಕೂಡ ದಾಖಲೆಗಳನ್ನು ಹಿಡಿದುಕೊಂಡು ಬಂದಿದ್ದರು. ಸರ್ವರ್‌ ಸಮಸ್ಯೆಯಿಂದಾಗಿ ನೋಂದಣಿ ಸಮರ್ಪ ಕವಾಗಿ ನಡೆಯಲಾಗದೆ ಸೇವಾ ಕೇಂದ್ರದವರು ಅಸಹಾಯಕರಾದರು. ಆಗೊಮ್ಮೆ-ಈಗೊಮ್ಮೆ ಸರ್ವರ್‌ ಸಿಗುತ್ತಾದರೂ, ಒಬ್ಬರು ಅಥವಾ ಇಬ್ಬರು ನೋಂದಣಿ ಮಾಡುವಷ್ಟರಲ್ಲಿ ಮತ್ತೆ ಕೈ ಕೊಡುತ್ತಿತ್ತು. ಗೃಹಲಕ್ಷ್ಮೀ ಯೋಜನೆ ನೋಂದಣಿಗೆ ಮಹಿಳೆಯರು ಕಾಯುವಂತೆ ಆಗಿತ್ತು.

ಯಾವುದೇ ಶುಲ್ಕವಿಲ್ಲದೆ ಅರ್ಜಿ ಸಲ್ಲಿಕೆ: ದಿನಕ್ಕೆ 60 ಮಂದಿ ನಿಗದಿಪಡಿಸಿದಾದರೂ, ಮೊದಲ ಮತ್ತು ಎರಡನೇ ದಿನ ನಿಗದಿಪ ಡಿಸಿದಷ್ಟು ಜನ ಕೇಂದ್ರಗಳಿಗೆ ಬರಲಿಲ್ಲ. ಸರ್ವರ್‌ ಸಮಸ್ಯೆಯಿಂದ ಮಹಿಳೆಯರು ಸೇವಾ ಕೇಂದ್ರಗಳಲ್ಲಿ ಕಾದು ಕುಳಿತಿದ್ದ ದೃಶ್ಯಗಳು ಕಂಡುಬಂದವು. ಪಟ್ಟಣ ದಲ್ಲಿ ಅನೇಕ ಖಾಸಗಿ ಸೇವಾ ಕೇಂದ್ರಗಳಿವೆ. ಆದರೂ ಸಹ ಪುರಸಭೆಯ ವ್ಯಾಪ್ತಿಯ ಈಗಾಗಲೇ ಬರುವ ಫ‌ಲಾನುಭವಿಗಳಿಗೆ ಯಾವುದೇ ಶುಲ್ಕವಿಲ್ಲದೆ ಅರ್ಜಿಗಳನ್ನು ಪಡೆದು ನೋಂದಣಿ ಮಾಡಲಾಗುತ್ತಿದೆ.

ಗಂಟೆಗಟ್ಟಲೆ ಕಾದು ಸುಸ್ತಾದ ಮಹಿಳೆಯರು: ಸರ್ಕಾರದ ಪ್ರತಿ ಯೋಜನೆಯಂತೆಯೇ ಈ ಯೋಜನೆಯ ನೋಂದಣಿ ಎಲ್ಲೂ ಕೂಡ ಮೊದಲ ಮತ್ತು ಎರಡನೆ ದಿನ ಸರ್ವರ್‌ ಸಮಸ್ಯೆ ತಲೆ ದೂರಿದೆ. ಗೃಹಲಕ್ಷ್ಮೀಯರು ಅದು ಗಂಟೆಗಟ್ಟಲೆ ಕಾದು ಸುಸ್ತಾಗಿ ಸರ್ಕಾರಕ್ಕೆ ಇಡೀ ಶಾಪ ಹಾಕುತ್ತಾ ಹೋಗುವಂತಾಗಿದೆ. ಗಂಟೆಗಟ್ಟಲೆ ಕಾದರೂ ಇದೇ ಸಮಸ್ಯೆ ಮುಂದುವರಿದಿತ್ತು. ಕಡೆಗೆ ಇವತ್ತು ಆಗುವುದಿಲ್ಲ ನಾಳೆ ಬನ್ನಿ ಎಂದು ಹೇಳಿದಾಗ ಮಹಿಳೆಯರು ಗೊಣಗುತ್ತಲೆ ಅಲ್ಲಿಂದ ಜಾಗ ಖಾಲಿ ಮಾಡಿದರು. ಫ‌ಲಾನುಭವಿಗಳು ಯಾವುದೇ ನಿರ್ದಿಷ್ಟ ಸಮಯ ಮತ್ತು ಅವಧಿ ಇಲ್ಲದೆ ನೋಂದಣಿ ಕಾರ್ಯಯನ್ನು ಮಾಡಿಸಿಕೊಳ್ಳಬಹುದು.

ಗೃಹಲಕ್ಷ್ಮೀ ಯೋಜನೆಯನ್ನು ಸರ್ಕಾರ ಜಾರಿಗೆ ತಂದಿದಾದರೂ, ನೋಂದಣಿಗೆ ಸರ್ವರ್‌ ಸಮಸ್ಯೆಯಿಂದ ಕಾಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಆಗೊಮ್ಮೆ-ಇನ್ನೊಮ್ಮೆ ಬಂದು ಹೋಗುತ್ತದೆ. ಕೆಲಸ, ಕಾರ್ಯ ಬಿಟ್ಟು ಕಾಯುವ ಪರಿಸ್ಥಿತಿ ಎದುರಾಗಿದೆ. ● ಶಶಿಕಲಾ, ಗೃಹಲಕ್ಷ್ಮೀ ಫ‌ಲಾನುಭವಿ

ಬೆಳಗ್ಗೆ ಒಂಭತ್ತು ಗಂಟೆಯಿಂದ 11:30ವರೆಗೆ ಗೃಹಲಕ್ಷ್ಮೀ ನೋಂದಣಿಯು ತಂತ್ರಾಂಶವು ವೇಗವಾಗಿ ಕಾರ್ಯ ನಿರ್ವಹಿಸುತ್ತಿದ್ದು. ನಂತರ ಸರ್ವರ್‌ ಸಮಸ್ಯೆ ಕಾಡಿದೆ. ಸಮಸ್ಯೆಗೆ ಸಂಬಂಧಪಟ್ಟಂತೆ ತಾಂತ್ರಿಕ ದೋಷದ ಬಗ್ಗೆ ಸರ್ಕಾರದ ಗಮನಕ್ಕೆ ತರಲಾಗಿದೆ. ● ನಟರಾಜ್‌, ಉಪ ನಿರ್ದೇಶಕ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ

ಟಾಪ್ ನ್ಯೂಸ್

Congress: ತುಷ್ಟೀಕರಣದಿಂದ ಮತಾಂಧ ಶಕ್ತಿಗಳಿಗೆ ಶಕ್ತಿ; ಜೋಶಿ ಕಿಡಿ

Congress: ತುಷ್ಟೀಕರಣದಿಂದ ಮತಾಂಧ ಶಕ್ತಿಗಳಿಗೆ ಶಕ್ತಿ; ಜೋಶಿ ಕಿಡಿ

Nandini

Thirupathi Laddu: ತಿರುಪತಿಗೆ ತೆರಳುವ ನಂದಿನಿ ತುಪ್ಪದ ಟ್ಯಾಂಕರ್‌ಗೆ ಜಿಪಿಎಸ್‌ ಕಣ್ಗಾವಲು!

MP Yaduveer Wadiyar: ಭಾವನೆಗೆ ಧಕ್ಕೆಯಾಗದಂತೆ ಮಹಿಷಾ ದಸರಾ ಆಚರಿಸಲಿ

Yaduveer Wadiyar: ಭಾವನೆಗೆ ಧಕ್ಕೆಯಾಗದಂತೆ ಮಹಿಷಾ ದಸರಾ ಆಚರಿಸಲಿ

1-asasa

Lingayat ಪಂಚಮಸಾಲಿ 2A ಹೋರಾಟ: ವಕೀಲರ ಸಮಾವೇಶದಲ್ಲಿ 3 ನಿರ್ಣಯ ಅಂಗೀಕಾರ

mbಆಡಳಿತದಲ್ಲಿ ರಾಜ್ಯಪಾಲರ ಹಸ್ತಕ್ಷೇಪ ಸಲ್ಲ: ಸಚಿವ ಎಂ.ಬಿ.ಪಾಟೀಲ್‌ಆಡಳಿತದಲ್ಲಿ ರಾಜ್ಯಪಾಲರ ಹಸ್ತಕ್ಷೇಪ ಸಲ್ಲ: ಸಚಿವ ಎಂ.ಬಿ.ಪಾಟೀಲ್‌

Minister MB Patil: ಆಡಳಿತದಲ್ಲಿ ರಾಜ್ಯಪಾಲರ ಹಸ್ತಕ್ಷೇಪ ಸಲ್ಲ

PSI Parshuram ಕುಟುಂಬಕ್ಕೆ ಪರಿಹಾರ ಕೊಡಿ: ಛಲವಾದಿ ಆಗ್ರಹ

PSI Parshuram ಕುಟುಂಬಕ್ಕೆ ಪರಿಹಾರ ಕೊಡಿ: ಛಲವಾದಿ ಆಗ್ರಹ

Rain: ಸೆ.23 ರಂದು ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಬೀಳುವ ಸಾಧ್ಯತೆ

Rain: ಸೆ.23 ರಂದು ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಬೀಳುವ ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ayodhya: 30 ಲಕ್ಷ ರೂ. ವೆಚ್ಚದ ಬಸ್‌ನಲ್ಲಿ ಬಸವನ ಅಯೋಧ್ಯೆ ಯಾತ್ರೆ

Ayodhya: 30 ಲಕ್ಷ ರೂ. ವೆಚ್ಚದ ಬಸ್‌ನಲ್ಲಿ ಬಸವನ ಅಯೋಧ್ಯೆ ಯಾತ್ರೆ

14-ragi-crop

Devanahalli: ಕೈಕೊಟ್ಟ ಮಳೆ: ಮೊಳಕೆಯಲ್ಲೇ ಒಣಗುತ್ತಿದೆ ರಾಗಿ

Doddaballapura ಮಳೆಗಾಗಿ ಪ್ರಾರ್ಥಿಸಿ ಮಕ್ಕಳಿಗೆ ಮದುವೆ

Doddaballapura ಮಳೆಗಾಗಿ ಪ್ರಾರ್ಥಿಸಿ ಮಕ್ಕಳಿಗೆ ಮದುವೆ

Anekal: ದೌರ್ಜನ್ಯ; ಕುಡುಕನ ನಗ್ನಗೊಳಿಸಿ ಥಳಿತ

Anekal: ದೌರ್ಜನ್ಯ; ಕುಡುಕನ ನಗ್ನಗೊಳಿಸಿ ಥಳಿತ

Crime: 56 ಕೇಸ್‌; ರೌಡಿಶೀಟರ್‌ಗೆ 2ನೇ ಬಾರಿ ಗುಂಡೇಟು

Crime: 56 ಕೇಸ್‌; ರೌಡಿಶೀಟರ್‌ಗೆ 2ನೇ ಬಾರಿ ಗುಂಡೇಟು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

4

Hiriydaka: ಹೃದಯಾಘಾತದಿಂದ ಗ್ರಾಮ ಪಂಚಾಯತ್ ಸದಸ್ಯ ಮೃತ್ಯು

Court-1

Udupi: ಚೆಕ್‌ ಅಮಾನ್ಯ ಪ್ರಕರಣ; ಆರೋಪಿ ಖುಲಾಸೆ

Congress: ತುಷ್ಟೀಕರಣದಿಂದ ಮತಾಂಧ ಶಕ್ತಿಗಳಿಗೆ ಶಕ್ತಿ; ಜೋಶಿ ಕಿಡಿ

Congress: ತುಷ್ಟೀಕರಣದಿಂದ ಮತಾಂಧ ಶಕ್ತಿಗಳಿಗೆ ಶಕ್ತಿ; ಜೋಶಿ ಕಿಡಿ

Nandini

Thirupathi Laddu: ತಿರುಪತಿಗೆ ತೆರಳುವ ನಂದಿನಿ ತುಪ್ಪದ ಟ್ಯಾಂಕರ್‌ಗೆ ಜಿಪಿಎಸ್‌ ಕಣ್ಗಾವಲು!

MP Yaduveer Wadiyar: ಭಾವನೆಗೆ ಧಕ್ಕೆಯಾಗದಂತೆ ಮಹಿಷಾ ದಸರಾ ಆಚರಿಸಲಿ

Yaduveer Wadiyar: ಭಾವನೆಗೆ ಧಕ್ಕೆಯಾಗದಂತೆ ಮಹಿಷಾ ದಸರಾ ಆಚರಿಸಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.