ಚರಂಡಿ ಸೇರುತ್ತಿದೆಯೇ ಕಬ್ಬಿನ ಹಾಲು?


Team Udayavani, Jul 22, 2023, 3:38 PM IST

ಚರಂಡಿ ಸೇರುತ್ತಿದೆಯೇ ಕಬ್ಬಿನ ಹಾಲು?

ಮಂಡ್ಯ: ಪ್ರಸ್ತುತ ಸಾಲಿನಲ್ಲಿ ಮೈಷುಗರ್‌ ಕಾರ್ಖಾನೆಯು ನಿಗದಿತ ಗುರಿಯ ಕಬ್ಬನ್ನು ನಿರಂತರವಾಗಿ ಅರೆದು ನಷ್ಟದಿಂದ ಹೊರಬರಲಿದೆ ಎಂಬ ನಿರೀಕ್ಷೆ ಮತ್ತೆ ಯಾಕೋ ಹುಸಿಯಾದಂತಾಗಿದೆ. ಕಳೆದ 15 ದಿನಗಳಿಂದ ವಿದ್ಯುತ್‌, ತಾಂತ್ರಿಕ ಕಾರಣಗಳಿಂದ ಪದೇ ಪದೆ ಕಬ್ಬು ಅರೆಯುವಿಕೆ ಸ್ಥಗಿತಗೊಳ್ಳುತ್ತಿದೆ. ಅಲ್ಲದೆ, ಅರೆದ ಕಬ್ಬಿನ ಹಾಲನ್ನು ಹೆಬ್ಟಾಳ ನಾಲೆಗೆ ಬಿಡುತ್ತಿದ್ದಾರೆ ಎಂಬ ಆರೋಪದ ನಡುವೆಯೂ ವಿಡಿಯೋ ಕೂಡ ಹರಿದಾಡುತ್ತಿದೆ.

ಗುರುವಾರವೂ ಮಧ್ಯಾಹ್ನ 2 ಗಂಟೆಯವರೆಗೂ ಕಬ್ಬು ಅರೆಯುವಿಕೆ ಸ್ಥಗಿತಗೊಳಿಸಲಾಗಿತ್ತು. ಇದುವರೆಗೂ 28 ಸಾವಿರಕ್ಕೂ ಹೆಚ್ಚು ಟನ್‌ ಕಬ್ಬು ಅರೆಯಲಾಗಿದೆ. ಆದರೆ, ನಿಗದಿತ ಪ್ರಮಾಣದಲ್ಲಿ ಸಕ್ಕರೆ ಉತ್ಪಾದನೆಯಾಗಿಲ್ಲ ಎನ್ನಲಾಗುತ್ತಿದೆ. ಮೈಷುಗರ್‌ ಕಾರ್ಖಾನೆಯದ್ದೇ ಎನ್ನಲಾದ ಅರೆದ ಕಬ್ಬಿನ ರಸವನ್ನು ಸಂಗ್ರಹ ಮಾಡಿಟ್ಟುಕೊಳ್ಳಲಾಗದೆ, ಚರಂಡಿ ಮೂಲಕ ಹೆಬ್ಟಾಳ ನಾಲೆಗೆ ಹರಿಸಲಾಗಿದೆ ಎಂಬ ವಿಡಿಯೋ ವೈರಲ್‌ ಆಗಿದೆ. ಅರೆದ ಕಬ್ಬಿನ ಹಾಲನ್ನು 24 ಗಂಟೆಯೊಳಗೆ ಹೀಟ್‌ ಮಾಡಿ ಸಕ್ಕರೆ ಉತ್ಪಾದನೆಗೆ ಬಳಸಬೇಕಾಗಿದೆ. ಆದರೆ, ಯಾವ ಕಾರಣಕ್ಕೆ ನಾಲೆಗೆ ಹರಿಯಲು ಬಿಟ್ಟಿದ್ದಾರೋ ಗೊತ್ತಿಲ್ಲ.

ನೀರಿನ ಜೊತೆ ಕಬ್ಬಿನ ಹಾಲು ಚರಂಡಿಗೆ: ಕಾರ್ಖಾನೆಯಿಂದ ಚರಂಡಿಗೆ ಹೋಗುವ ನೀರಿನ ಜೊತೆಯಲ್ಲಿಯೇ ಕಬ್ಬಿನ ಹಾಲು ಸಹ ಹರಿಯುತ್ತಿರುವ ದೃಶ್ಯ ಸೆರೆಯಾಗಿದೆ. ಕಡಿಮೆ ಪ್ರಮಾಣದಲ್ಲಿ ಕಬ್ಬು ಅರೆದಾಗ ಸಕ್ಕರೆ ತಯಾರಿಸಲು ತೊಡಕಾಗಲಿದೆ. ಆದ್ದರಿಂದ ಕಬ್ಬಿನ ಹಾಲನ್ನು ಸಂಗ್ರಹಿಸಿಟ್ಟುಕೊಳ್ಳಲು ಸಾಧ್ಯವಾಗದ ಹಿನ್ನೆಲೆಯಲ್ಲಿ ರಾತ್ರೋ ರಾತ್ರಿ ಚರಂಡಿ ಮೂಲಕ ಹೆಬ್ಟಾಳ ನಾಲೆಗೆ ಹರಿಸಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಮೈಷುಗರ್‌ ಕಾರ್ಖಾನೆಯ ಚರಂಡಿಗೆ ನೀರಿನ ಜೊತೆ ಅರೆದಿರುವ ಕಬ್ಬಿನ ಹಾಲು ಹರಿಯುತ್ತಿರುವ ಎರಡು ಸೆಕೆಂಡ್‌ನ‌ ವಿಡಿಯೋ ಹರಿದಾಡುತ್ತಿದೆ.

ಸಕ್ಕರೆ ಉತ್ಪಾದನೆ, ಇಳುವರಿ ಕುಂಠಿತ: ಕಳೆದ ವರ್ಷ ಪ್ರಾಯೋಗಿಕವಾಗಿ ಕಾರ್ಖಾನೆ ನಡೆಸಲಾಗುತ್ತಿದೆ ಎಂದು ಬಿಜೆಪಿ ಸರ್ಕಾರ ಹೇಳಿತ್ತು. ಆದರೆ, ಈ ವರ್ಷ ಕಾಂಗ್ರೆಸ್‌ ಸರ್ಕಾರ 50 ಕೋಟಿ ರೂ. ಅನುದಾನ ನೀಡಿ ನಿಗದಿತ ಸಮಯದಲ್ಲಿ ಕಬ್ಬು ಅರೆಯುವಿಕೆ ಪ್ರಾರಂಭಿಸಿದರೂ ಪದೇ ಪದೆ ಕಬ್ಬು ಅರೆಯುವಿಕೆ ಸ್ಥಗಿತವಾಗುತ್ತಿದೆ. ಅಲ್ಲದೆ, ಅರೆದಿರುವ ಕಬ್ಬಿನ ಹಾಲನ್ನು ಈ ರೀತಿ ನಾಲೆಗೆ ಹರಿಸಿದರೆ ನಿಗದಿತ ಪ್ರಮಾಣದಲ್ಲಿ ಸಕ್ಕರೆ ಉತ್ಪಾದನೆ, ಇಳುವರಿ ಕುಂಠಿತವಾಗಲಿದೆ. ಇದರಿಂದ ಕಾರ್ಖಾನೆ ಲಾಭದಲ್ಲಿ ಹೇಗೆ ನಡೆಯಲಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಪದೇ ಪದೆ ಕಬ್ಬು ಅರೆಯುವಿಕೆ ಸ್ಥಗಿತ ಹಾಗೂ ನಿಧಾನಗತಿಯ ಯಂತ್ರಗಳ ಚಾಲನೆ ಹಿನ್ನೆಲೆಯಲ್ಲಿ ಕಾರ್ಖಾನೆಯ ಕಬ್ಬು ಯಾರ್ಡ್‌ ಹಾಗೂ ಕಾರ್ಖಾನೆಯ ಹೊರಗಡೆ ಕಬ್ಬು ತುಂಬಿದ ಲಾರಿ, ಟ್ರ್ಯಾಕ್ಟರ್‌ ಹಾಗೂ ಎತ್ತಿನಗಾಡಿಗಳು ಸಾಲುಗಟ್ಟಿ ನಿಂತಿವೆ. ಇದರಿಂದ ಆ ರಸ್ತೆಯಲ್ಲಿ ವಾಹನ ಸಂಚಾರ ದಟ್ಟಣೆ ಉಂಟಾಗುತ್ತಿದೆ.

ಒಣಗುತ್ತಿದೆ ಸಾವಿರಾರು ಟನ್‌ ಕಬ್ಬು: ಕಾರ್ಖಾನೆಗೆ ಕಬ್ಬು ತಂದರೂ ನಿಗದಿತವಾಗಿ ತೂಕ ಮಾಡಿ ತೆಗೆದುಕೊಳ್ಳದೆ ವಿಳಂಬ ಮಾಡಲಾಗುತ್ತಿದೆ. ತಾಂತ್ರಿಕ ಸಮಸ್ಯೆಯಿಂದಾಗಿ ಪದೇ ಪದೆ ಕಬ್ಬು ನುರಿಯುವ ಕಾರ್ಯ ನಿಲ್ಲುತ್ತಿರುವುದರಿಂದ ಕಬ್ಬು ಬಂದರೂ ಸಮಸ್ಯೆಯಾಗುತ್ತಿದೆ. ನಿರಂತರವಾಗಿ ಕಾರ್ಖಾನೆ ಕಬ್ಬು ನುರಿಸದ ಪರಿಣಾಮ ಗದ್ದೆಗಳಲ್ಲಿ ಕಟಾವಾಗಿರುವ ಸಾವಿರಾರು ಟನ್‌ ಕಬ್ಬು ಒಣಗುತ್ತಿದೆ. ಫ್ಯಾಕ್ಟರಿ ಬಳಿ ಒಂದು ಲೋಡ್‌ ನಿಂತಿದ್ದರೆ, ಗದ್ದೆಯಲ್ಲಿ ಮೂರ್ನಾಲ್ಕು ಲೋಡ್‌ ಒಣಗುವ ದುಸ್ಥಿತಿ ಎದುರಾಗಿದೆ. ಇದರಿಂದ ಪ್ರತೀ 10 ಟನ್‌ಗೆ ಅರ್ಧದಿಂದ ಒಂದು ಟನ್‌ ಇಳುವರಿ ಕುಸಿತವಾಗಲಿದೆ ಎಂದು ರೈತರು ಅಳಲು ತೋಡಿಕೊಳ್ಳುತ್ತಿದ್ದಾರೆ.

ಚಾಲಕರಿಗೆ ನರಕಯಾತನೆ: ರೈತರಿಗೆ ಕಬ್ಬಿನ ಇಳುವರಿ, ನಷ್ಟದ ಸಮಸ್ಯೆಯಾದರೆ ಕಬ್ಬು ಸರಬರಾಜು ಮಾಡುವ ಚಾಲಕರಿಗೆ ನರಕಯಾತನೆಯಾಗಿದೆ. ಮೂರ್ನಾಲ್ಕು ದಿನ ಲಾರಿ, ಟ್ರ್ಯಾಕ್ಟರ್‌ ಹಾಗೂ ಎತ್ತಿನಗಾಡಿಯಲ್ಲೇ ಕಾಲಕಳೆಯಬೇಕಾದ ದುಸ್ಥಿತಿ ಎದುರಾಗಿದೆ. ಶೌಚಾಲಯದ ವ್ಯವಸ್ಥೆಯೂ ಇಲ್ಲದೆ ಪರದಾಡುವಂತಾಗಿದೆ. ಒಂದೇ ದಿನಕ್ಕೆ ಕಬ್ಬು ತೆಗೆದುಕೊಂಡರೆ ತೊಂದರೆ ಆಗುವುದಿಲ್ಲ. ಸರಿಯಾಗಿ ಕಬ್ಬು ನುರಿಸದಿರುವುದರಿಂದ ತುಂಬಾ ತೊಂದರೆ ಆಗುತ್ತಿದೆ. ಬೇರೆ ಕಾರ್ಖಾನೆಗಳಲ್ಲಿ ಈ ರೀತಿ ಸಮಸ್ಯೆ ಆಗುವುದಿಲ್ಲ ಎಂದು ಚಾಲಕರು ಹೇಳುತ್ತಾರೆ.

ಮೌನ ವಹಿಸಿದ ಜನಪ್ರತಿನಿಧಿಗಳು: ಕಾರ್ಖಾನೆಯು ಪದೇ ಪದೆ ಕಬ್ಬು ಅರೆಯುವಿಕೆ ಸ್ಥಗಿತಗೊಳಿಸುತ್ತಿದ್ದರೂ ಜಿಲ್ಲೆಯ ಜನಪ್ರತಿನಿಧಿಗಳು ಮೌನ ವಹಿಸಿದ್ದಾರೆ. ಪ್ರಧಾನ ವ್ಯವಸ್ಥಾಪಕರಾಗಿರುವ ಅಪರ ಜಿಲ್ಲಾಧಿಕಾರಿ ಡಾ.ಎಚ್‌.ಎಲ್‌.ನಾಗರಾಜು ಕಾರ್ಖಾನೆಗೆ ಭೇಟಿ ನೀಡಿ, ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಕ್ರಮ ವಹಿಸುವ ಕೆಲಸ ಮಾಡುತ್ತಿದ್ದರೂ ಪದೇ ಪದೆ ಸಮಸ್ಯೆ ಕಾಣಿಸಿಕೊಳ್ಳುತ್ತಿದೆ. ಆದರೆ, ಇದುವರೆಗೂ ಯಾವುದೇ ಜನಪ್ರತಿನಿಧಿಗಳು ಭೇಟಿ ನೀಡಿ ಸಮಸ್ಯೆ ಆಲಿಸುವ ಕೆಲಸ ಮಾಡಿಲ್ಲ. ಕಬ್ಬು ಅರೆಯುವಿಕೆಗೆ ಚಾಲನೆ ಕೊಟ್ಟು ಹೋದ ನಂತರ ಕಾರ್ಖಾನೆಯತ್ತ ತಿರುಗಿಯೂ ನೋಡಿಲ್ಲ ಎಂಬ ಆರೋಪಗಳು ಕೇಳಿ ಬರುತ್ತಿವೆ.

ಟಾಪ್ ನ್ಯೂಸ್

Udupi ಗೀತಾರ್ಥ ಚಿಂತನೆ-45: ನಮ್ಮ ದಾಖಲೆ ಶುದ್ಧವಾಗಿರುವುದು ಮುಖ್ಯ

Udupi ಗೀತಾರ್ಥ ಚಿಂತನೆ-45: ನಮ್ಮ ದಾಖಲೆ ಶುದ್ಧವಾಗಿರುವುದು ಮುಖ್ಯ

Siddu-Cong

Congress: ಶಾಸಕಾಂಗ ಪಕ್ಷದ ಸಭೆ ಇಲ್ಲ: ಸಿಎಂ ಸಿದ್ದರಾಮಯ್ಯ ಇಂದು ಕೇರಳಕ್ಕೆ

Udupi: ಕೃಷಿ ಪಂಪ್‌ಸೆಟ್‌ಗೆ ಶೇ.99 ಆಧಾರ್‌ ಜೋಡಣೆ

Udupi: ಕೃಷಿ ಪಂಪ್‌ಸೆಟ್‌ಗೆ ಶೇ.99 ಆಧಾರ್‌ ಜೋಡಣೆ

Rain: ಚುರುಕಾದ ಮುಂಗಾರು; ವಿವಿಧೆಡೆ ಮಳೆ

Rain: ಚುರುಕಾದ ಮುಂಗಾರು; ವಿವಿಧೆಡೆ ಮಳೆ

Udupi: ಕಸ್ತೂರಿ ರಂಗನ್‌ ವರದಿ ಬಡವರ ಮೇಲಿನ ದಾಳಿ

Udupi: ಕಸ್ತೂರಿ ರಂಗನ್‌ ವರದಿ ಬಡವರ ಮೇಲಿನ ದಾಳಿ

Udupi: ಸಂತೆಕಟ್ಟೆ ಓವರ್‌ಪಾಸ್‌ ಕಾಮಗಾರಿ; ಸಂಸದ ಕೋಟ ಭೇಟಿ

Udupi: ಸಂತೆಕಟ್ಟೆ ಓವರ್‌ಪಾಸ್‌ ಕಾಮಗಾರಿ; ಸಂಸದ ಕೋಟ ಭೇಟಿ

BJP-protest

MUDA Scam: ಹೈಕೋರ್ಟ್‌ ತೀರ್ಪು ಬೆನ್ನಲ್ಲೇ ರಾಜ್ಯಾದ್ಯಂತ ಬಿಜೆಪಿ ವತಿಯಿಂದ ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HDK-1

MUDA Case: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ನಾನು ಒತ್ತಾಯಿಸಲ್ಲ: ಕೇಂದ್ರ ಸಚಿವ ಎಚ್‌ಡಿಕೆ 

Pandavapura ಸಾಲ ಬಾಧೆ ತಾಳಲಾರದೇ ರೈತ ಆತ್ಮಹತ್ಯೆ

Pandavapura ಸಾಲ ಬಾಧೆ ತಾಳಲಾರದೇ ರೈತ ಆತ್ಮಹತ್ಯೆ

Nagamangala ಕಿರಣ್‌ ಅಂತಿಮ ದರ್ಶನ ಪಡೆದ ನಿಖಿಲ್‌ ಕುಮಾರಸ್ವಾಮಿ

Nagamangala ಕಿರಣ್‌ ಅಂತಿಮ ದರ್ಶನ ಪಡೆದ ನಿಖಿಲ್‌ ಕುಮಾರಸ್ವಾಮಿ

R. Ashok: “ಮುಸ್ಲಿಂ ಭಯೋತ್ಪಾದಕರಿಗೆ ಸರಕಾರದಿಂದಲೇ ಕುಮ್ಮಕ್ಕು’

R. Ashok: “ಮುಸ್ಲಿಂ ಭಯೋತ್ಪಾದಕರಿಗೆ ಸರಕಾರದಿಂದಲೇ ಕುಮ್ಮಕ್ಕು’

Suspend

Nagamangala ಗಲಭೆ: ಡಿವೈಎಸ್ಪಿ ಅಮಾನತು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Udupi ಗೀತಾರ್ಥ ಚಿಂತನೆ-45: ನಮ್ಮ ದಾಖಲೆ ಶುದ್ಧವಾಗಿರುವುದು ಮುಖ್ಯ

Udupi ಗೀತಾರ್ಥ ಚಿಂತನೆ-45: ನಮ್ಮ ದಾಖಲೆ ಶುದ್ಧವಾಗಿರುವುದು ಮುಖ್ಯ

Siddu-Cong

Congress: ಶಾಸಕಾಂಗ ಪಕ್ಷದ ಸಭೆ ಇಲ್ಲ: ಸಿಎಂ ಸಿದ್ದರಾಮಯ್ಯ ಇಂದು ಕೇರಳಕ್ಕೆ

Udupi: ಕೃಷಿ ಪಂಪ್‌ಸೆಟ್‌ಗೆ ಶೇ.99 ಆಧಾರ್‌ ಜೋಡಣೆ

Udupi: ಕೃಷಿ ಪಂಪ್‌ಸೆಟ್‌ಗೆ ಶೇ.99 ಆಧಾರ್‌ ಜೋಡಣೆ

Kasaragod ಇಲಿ ಜ್ವರ: ಜಾಗ್ರತೆ ಪಾಲಿಸಿ : ಜಿಲ್ಲಾ ವೈದ್ಯಾಧಿಕಾರಿ

Kasaragod ಇಲಿ ಜ್ವರ; ಜಾಗ್ರತೆ ಪಾಲಿಸಿ : ಜಿಲ್ಲಾ ವೈದ್ಯಾಧಿಕಾರಿ

Rain: ಚುರುಕಾದ ಮುಂಗಾರು; ವಿವಿಧೆಡೆ ಮಳೆ

Rain: ಚುರುಕಾದ ಮುಂಗಾರು; ವಿವಿಧೆಡೆ ಮಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.