![Mangaluru ವಸತಿ ಯೋಜನೆ: 4 ವರ್ಷಗಳಿಂದ ದ.ಕ.ಕ್ಕೆ ಮನೆಯೇ ಸಿಕ್ಕಿಲ್ಲ!](https://www.udayavani.com/wp-content/uploads/2024/07/dinesh-rao-415x191.jpg)
ಚಾಂಡಿ ಕ್ಷೇತ್ರದಿಂದ ಅವರ ಕುಟುಂಬದವರೇ ಅಭ್ಯರ್ಥಿ: ಕಾಂಗ್ರೆಸ್ ಸ್ಪಷ್ಟ ನುಡಿ
ಅಭ್ಯರ್ಥಿ ಯಾರಾಗಬೇಕು ಎಂಬುದನ್ನು ಪಕ್ಷ ನಿರ್ಧರಿಸುವುದಿಲ್ಲ
Team Udayavani, Jul 23, 2023, 3:47 PM IST
![1-asdasds-d](https://www.udayavani.com/wp-content/uploads/2023/07/1-asdasds-d-620x391.jpg)
ಕೊಚ್ಚಿ: ಕೇರಳ ಮಾಜಿ ಮುಖ್ಯಮಂತ್ರಿ ದಿವಂಗತ ಉಮ್ಮನ್ ಚಾಂಡಿ ಅವರು 53 ವರ್ಷಗಳಿಂದ ಪ್ರತಿನಿಧಿಸುತ್ತಿದ್ದ ಪುತ್ತುಪ್ಪಲ್ಲಿ ಕ್ಷೇತ್ರದಿಂದ ಅವರ ಕುಟುಂಬದ ಯಾರಾದರು ಒಬ್ಬರು ಪಕ್ಷದ ಅಭ್ಯರ್ಥಿಯಾಗಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಕೆ. ಸುಧಾಕರನ್ ಅವರು ಭಾನುವಾರ ಹೇಳಿದ್ದಾರೆ.
ಕ್ಷೇತ್ರದ ಕುರಿತು ಊಹಾಪೋಹಗಳು ಪ್ರಾರಂಭವಾದ ಕೆಲವೇ ಗಂಟೆಗಳ ನಂತರ, ಹಿರಿಯ ನಾಯಕನ ಕ್ಷೇತ್ರದ ಪ್ರತಿನಿಧಿಯ ಕುರಿತು ಕಾಂಗ್ರೆಸ್ ಈ ಸ್ಪಷ್ಟನೆ ನೀಡಿದೆ.
ಸಂಸದ ಸುಧಾಕರನ್ ಮಾತನಾಡಿ, ಅಭ್ಯರ್ಥಿ ಯಾರಾಗಬೇಕು ಎಂಬ ಬಗ್ಗೆ ಅನಧಿಕೃತವಾಗಿ ಚರ್ಚೆ ಆರಂಭವಾಗಿದ್ದು, ಒಂದೆರಡು ದಿನಗಳ ನಂತರ ಅಧಿಕೃತವಾಗಲಿದೆ. ಆದರೆ, ಅದು ಚಾಂಡಿ ಅವರ ಕುಟುಂಬದವರು ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಸುದ್ದಿಗಾರರಿಗೆ ಹೇಳಿದರು.
”ಅಭ್ಯರ್ಥಿ ಯಾರಾಗಬೇಕು ಎಂಬುದನ್ನು ಚಾಂಡಿ ಅವರ ಕುಟುಂಬದವರು ನಿರ್ಧರಿಸುತ್ತಾರೆ ಹೊರತು ಪಕ್ಷವಲ್ಲ.ಕೇರಳದ ಆಡಳಿತಾರೂಢ ಎಲ್ಡಿಎಫ್ಗೆ ಗೌರವವಿದ್ದರೆ, ಅವರು ಪುತ್ತುಪ್ಪಲ್ಲಿ ಕ್ಷೇತ್ರದಿಂದ ಅಭ್ಯರ್ಥಿ ಕಣಕ್ಕಿಳಿಸುವುದರಿಂದ ದೂರವಿರಬೇಕು ಎಂದು ಸುಧಾಕರನ್ ಹೇಳಿದರು.ಕಾಂಗ್ರೆಸ್ ಅಂತಹ ವಿನಂತಿಯನ್ನು ಮಾಡುವ ಅಗತ್ಯವಿಲ್ಲ. ಉಮ್ಮನ್ ಚಾಂಡಿ ಅವರ ಬಗ್ಗೆ ಅವರಿಗೆ ಗೌರವವಿದ್ದರೆ ಎಲ್ಡಿಎಫ್ ಅದನ್ನು ಸ್ವಂತವಾಗಿ ಮಾಡಬೇಕು”ಎಂದರು. ಜುಲೈ 18 ರಂದು ಚಾಂಡಿ ಅವರು ಬೆಂಗಳೂರಿನಲ್ಲಿ ನಿಧನ ಹೊಂದಿದ್ದರು.
ಟಾಪ್ ನ್ಯೂಸ್
![Mangaluru ವಸತಿ ಯೋಜನೆ: 4 ವರ್ಷಗಳಿಂದ ದ.ಕ.ಕ್ಕೆ ಮನೆಯೇ ಸಿಕ್ಕಿಲ್ಲ!](https://www.udayavani.com/wp-content/uploads/2024/07/dinesh-rao-415x191.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![TN-BSP-Armstrong](https://www.udayavani.com/wp-content/uploads/2024/07/TN-BSP-Armstrong-150x90.jpg)
Tamil Nadu: ಬಿಎಸ್ಪಿ ಮುಖ್ಯಸ್ಥ ಆರ್ಮ್ಸ್ಟ್ರಾಂಗ್ ಹತ್ಯೆ
![suicide](https://www.udayavani.com/wp-content/uploads/2024/07/suicide-1-150x84.jpg)
Chhattisgarh; ಎರಡು ಪ್ರತ್ಯೇಕ ಅವಘಡದಲ್ಲಿ ಬಾವಿಗೆ ಬಿದ್ದು 9 ಮಂದಿ ಮೃತ್ಯು
![Sudhamurthy](https://www.udayavani.com/wp-content/uploads/2024/07/Sudhamurthy-1-150x90.jpg)
Sudha Murthy 30 ವರ್ಷದಿಂದ ಒಂದೂ ಸೀರೆ ಖರೀದಿಸಿಲ್ಲವೇಕೆ ಗೊತ್ತಾ?
![ಚುನಾವಣೆಗೆ ಸಿದ್ದರಾಗಿ… ಕೇಂದ್ರ ಸರ್ಕಾರ ಪತನವಾಗಲಿದೆ…: ಲಾಲು ಪ್ರಸಾದ್ ಯಾದವ್](https://www.udayavani.com/wp-content/uploads/2024/07/lalu-150x83.jpg)
RJD: ಚುನಾವಣೆಗೆ ಸಿದ್ದರಾಗಿ… ಕೇಂದ್ರ ಸರ್ಕಾರ ಪತನವಾಗಲಿದೆ…: ಲಾಲು ಪ್ರಸಾದ್ ಯಾದವ್
![1-aaaa](https://www.udayavani.com/wp-content/uploads/2024/07/1-aaaa-150x84.jpg)
Mumbai; ಟೀಮ್ ಇಂಡಿಯಾ ಸ್ವಾಗತ ಮೆರವಣಿಗೆ ಬಳಿಕ ಭಾರೀ ಕಸ ಸಂಗ್ರಹ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.