ಸುತ್ತು ನಿಧಿಗೆ ಸುತ್ತಿ ಸುಸ್ತಾದ ಯುವಕ ಸಂಘಗಳು!


Team Udayavani, Jul 23, 2023, 4:00 PM IST

tdy-17

ಚಿಕ್ಕಬಳ್ಳಾಪುರ: ದೇವರು ವರ ಕೊಟ್ಟರೂ ಪೂಜಾರಿ ಕೊಡಲ್ಲ ಎನ್ನುವ ಗಾದೆ ಮಾತು ಇದಕ್ಕೆ ಹೇಳಿರಬೇಕು, ರಾಜ್ಯ ಸರ್ಕಾರ ಸ್ವಾಮಿ ವಿವೇಕಾನಂದ ಯುವಕ ಬಾದ್ಯತಾ ಸಂಘಗಳಿಗೆ ತಲಾ 10 ಸಾವಿರ ರೂ, ಸುತ್ತು ನಿಧಿ ಬಿಡುಗಡೆಗೊಳಿಸಿ ತಿಂಗಳೇ ಕಳೆದರೂ ಇಲ್ಲಿಯವರೆಗೂ ಜಿಲ್ಲೆಯಲ್ಲಿನ ಯುವಕರ ಸಂಘಗಳಿಗೆ ತಲುಪದೇ ಸಂಘದ ಪ್ರತಿನಿಧಿಗಳು ನಿತ್ಯ ಬ್ಯಾಂಕ್‌ಗಳತ್ತ ಸುತ್ತಿ ಸುಸ್ತಾಗುತ್ತಿದ್ದಾರೆ.

ಹೌದು, ಈ ಹಿಂದಿನ ಬಿಜೆಪಿ ಸರ್ಕಾರ ಸ್ತ್ರೀ ಶಕ್ತಿ ಸಂಘಗಳ ಮಾದರಿಯಲ್ಲಿ ಗ್ರಾಮೀಣ ಭಾಗದ ಯುವ ಜನರ ಸಬಲೀಕರಣಕ್ಕಾಗಿ ಸ್ವಾಮಿ ವಿವೇಕಾನಂದರ ಹೆಸರಲ್ಲಿ ಯುವಕರ ಜಂಟಿ ಬಾಧ್ಯತಾ ಸಂಘಗಳನ್ನು ರಚಿಸಿ ಸಂಘಗಳಿಗೆ ಆರ್ಥಿಕ ಬಲ ನೀಡಲು ತಲಾ 10 ಸಾವಿರ ರೂ., ಸುತ್ತಿ ನಿಧಿ ಬಿಡುಗಡೆಗೊಳಿಸಿದೆ. ಆದರೆ, ಜಿಲ್ಲಾ ಯುವ ಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸುತ್ತುನಿಧಿ ಬಿಡುಗಡೆಗೂ ಹಿಂದೆ ಮುಂದೆ ನೋಡುತ್ತಿದೆ. 290 ಗುಂಪುಗಳ ರಚನೆ: ಜಿಲ್ಲೆಯಲ್ಲಿ ಪ್ರತಿ ಗ್ರಾಪಂಗೆ ತಲಾ ಎರಡಂತೆ ಒಟ್ಟು 157 ಗ್ರಾಪಂಗಳ ವ್ಯಾಪ್ತಿಯಲ್ಲಿ ಈಗಾಗಲೇ 314 ಸ್ವಾಮಿ ವಿವೇಕಾನಂದ ಯುವಕರ ಜಂಟಿ ಬಾಧ್ಯತಾ ಸಂಘಗಳನ್ನು ರಚಿಸಬೇಕು. ಆದರೆ, ಇಲ್ಲಿಯವರೆಗೂ 290 ಸಂಘಗಳನ್ನು ಮಾತ್ರ ರಚಿಸಲಾಗಿದೆ.

ಪ್ರತಿ ಸಂಘಕ್ಕೂ ತಲಾ 10 ಸಾವಿರ ರೂ., ಸುತ್ತುನಿಧಿ ಜಿಲ್ಲಾ ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಅಧಿಕಾರಿಗಳ ಖಾತೆಗೆ ಬಿದ್ದಿದೆ. ಆದರೆ, ಸುತ್ತು ನಿಧಿ ಕೊಡಲು ಅಧಿಕಾರಿಗಳು ಇಲಾಖೆಗಳಿಗೆ ಸುತ್ತಿಸಿಕೊಳ್ಳುತ್ತಿರುವುದು ಸ್ವಾಮಿ ವಿವೇಕಾನಂದ ಯುವಕರ ಜಂಟಿ ಬಾಧ್ಯತಾ ಸಮಿತಿಗಳ ಆಕ್ರೋಶಕ್ಕೆ ಕಾರಣವಾಗಿದೆ.

ಈಗಾಗಲೇ ಸಂಘಗಳು ರಚನೆಯಾಗಿ ಪ್ರತಿ ಸಂಘವೂ ಬ್ಯಾಂಕ್‌ ಖಾತೆ ತೆರೆದು ಅದರ ವಿವರಗಳನ್ನು ಜಿಲ್ಲಾ ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಗೆ ಸಲ್ಲಿಸಿದರೂ ಸುತ್ತು ನಿಧಿಯು ಸಂಘಗಳ ಬ್ಯಾಂಕ್‌ ಖಾತೆಗೆ ತಲುಪದೇ ಇರುವುದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.

ಚರ್ಚೆಗೆ ಗ್ರಾಸ: ಈ ಹಿಂದಿನ ಬಿಜೆಪಿ ಸರ್ಕಾರ ಯುವ ಜನರ ಸಬಲೀಕರಣಗೊಳಿಸುವ ದಿಕ್ಕಿನಲ್ಲಿ ಸ್ವ ಉದ್ಯೋಗದ ಜತೆಗೆ ಯುವ ಜನರಲ್ಲಿ ಕೌಶಲ್ಯಾಭಿವೃದ್ಧಿ ಚಟುವಟಿಕೆಗಳನ್ನು ಸಕ್ರಿಯಗೊಳಿಸಿ ಆ ಮೂಲಕ ಆರ್ಥಿಕ ಸಬಲೀಕರಣಗೊಳಿಸುವ ಮಹತ್ವಾಕಾಂಕ್ಷೆಯನ್ನು ಹೊತ್ತು ಸ್ವಾಮಿ ವಿವೇಕಾನಂದ ಯುವಕರ ಜಂಟಿ ಬಾದ್ಯತಾ ಸಂಘಗಳನ್ನು ರಚಿಸಿ ಪ್ರತಿ ಸಂಘಕ್ಕೆ ತಲಾ 10 ಸಾವಿರ ಬಿಡುಗಡೆಗೊಳಿಸಿದ್ದರೂ ಜಿಲ್ಲೆಯ ಅನುಷ್ಠಾನ ಇಲಾಖೆ ಆಗಿರುವ ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಅಧಿಕಾರಿಗಳು ಸಕಾಲದಲ್ಲಿ ಸುತ್ತಿನಿಧಿ ಬಿಡುಗಡೆಗೊಳಿಸದೇ ಇರುವುದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.

ಈಗಾಗಲೇ 34 ಯುವಕ ಸಂಘಗಳಿಗೆ ತಲಾ 10 ಸಾವಿರ ರೂ., ಸುತ್ತು ನಿಧಿಯನ್ನು ಬಿಡುಗಡೆಗೊಳಿಸಲಾಗಿದೆ. ಉಳಿದ ಸಂಘಗಳಿಗೆ ಸುತ್ತು ನಿಧಿ ಬಿಡುಗಡೆ ಮಾಡಲು ರಾಜ್ಯ ಕಚೇರಿಯಿಂದ ಸೂಚನೆ ಬಂದಿಲ್ಲ. ಸೋಮವಾರ ಸಭೆ ಇದ್ದು ಈ ಬಗ್ಗೆ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು. ●ವಿಜಯಕುಮಾರ್‌, ಉಪ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ

-ಕಾಗತಿ ನಾಗರಾಜಪ್ಪ

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ

Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ

MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್‌

MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್‌

chintamai-Murder

Chintamani: ಹಿಂಬಾಲಿಸಿ ಬಂದು ವ್ಯಕ್ತಿಯೊಬ್ಬರ ಹ*ತ್ಯೆಗೈದ ದುಷ್ಕರ್ಮಿಗಳು! 

10-gudibanda

Gudibanda: ವಿವಿಧ ಪ್ರಕರಣಗಳ ಕಳ್ಳನ ಬಂಧನ, 152 ಗ್ರಾಂ ಬಂಗಾರ ವಶ

Sudhakar–sandeep-Reddy

BJP Rift: ಸಂಸದ ಕೆ.ಸುಧಾಕರ್‌ ಚಿಕ್ಕಬಳ್ಳಾಪುರ ಜಿಲ್ಲೆಗೆ ಶಾಪ: ಸಂದೀಪ ರೆಡ್ಡಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.