ಮಡಸೂರು ರೈತರ ಜೈಲು ಪ್ರಕರಣ; ಹಾಲಪ್ಪ ವ್ಯಂಗ್ಯಕ್ಕೆ ಕಾಗೋಡು ಕಿಡಿ
ಹೇಳಿಕೆಯನ್ನು ತೀವ್ರವಾಗಿ ಖಂಡಿಸುತ್ತೇನೆ...
Team Udayavani, Jul 23, 2023, 4:19 PM IST
ಸಾಗರ: ಶಾಸಕರಾಗಿದ್ದಾಗ ಹಾಲಪ್ಪ ಹರತಾಳು ರೈತರಿಗೆ ಸಾಗುವಳಿ ಚೀಟಿ ಕೊಡದೆ ಈಗ ನನ್ನ ಮೇಲೆ ತಪ್ಪು ಅಭಿಪ್ರಾಯ ಬರುವಂತೆ ಮಾಡಿರುವುದು ಅವರಿಗೆ ಶೋಭೆ ತರುವುದಿಲ್ಲ. ಮಡಸೂರು ಗ್ರಾಮದ ಏಳು ಜನ ರೈತರು ಜೈಲಿಗೆ ಹೋಗಿರುವುದಕ್ಕೆ ನಾನೇ ಕಾರಣ ಎನ್ನುವ ರೀತಿಯಲ್ಲಿ ಅವರುನೀಡಿರುವ ಹೇಳಿಕೆಯನ್ನು ತೀವ್ರವಾಗಿ ಖಂಡಿಸುತ್ತೇನೆ ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಕಿಡಿಕಾರಿದ್ದಾರೆ.
ಭಾನುವಾರ ಮಡಸೂರು ಗ್ರಾಮಕ್ಕೆ ಭೇಟಿ ನೀಡಿ ಗ್ರಾಮಸ್ಥರ ಜೊತೆ ಮಾತುಕತೆ ನಡೆಸಿದ ಅವರು, ರೈತರನ್ನು ಜೈಲಿಗೆ ಕಳಿಸಿರುವುದು ನನಗೆ ತಡವಾಗಿ ಗೊತ್ತಾಯಿತು. ವಿಷಯ ಗೊತ್ತಾದ ತಕ್ಷಣ ಶಾಸಕ ಗೋಪಾಲಕೃಷ್ಣ ಬೇಳೂರಿಗೆ ಫೋನ್ ಮಾಡಿ ರೈತರ ಸಮಸ್ಯೆ ಬಗೆಹರಿಸಲು ಸೂಚನೆ ನೀಡಿದ್ದೇನೆ ಎಂದು ಹೇಳಿದರು.
ನಾನು ಸಚಿವನಾಗಿದ್ದ ಸಂದರ್ಭದಲ್ಲಿಯೇ ಮಡಸೂರು ಗ್ರಾಮದ ರೈತರಿಗೆ ಭೂಮಿ ಮಂಜೂರು ಮಾಡಿಸಿದ್ದೇನೆ. ಅವರು ಸಾಗುವಳಿ ಚೀಟಿ ಪಡೆಯದೆ ಇರುವುದು ನನಗೆ ಗೊತ್ತಿಲ್ಲ. ಈಚೆಗೆ ಅಧಿಕಾರಿಗಳು ಗ್ರಾಮಕ್ಕೆ ಹೋದಾಗ ಸಣ್ಣಪುಟ್ಟ ಮಾತಿನ ಚಕಮಕಿ ನಡೆದಿದೆ. ಅಧಿಕಾರಿಗಳ ಮೇಲೆ ಕೊಲೆಯತ್ನ ನಡೆದಿಲ್ಲ. ಒಬ್ಬ ರೈತ ಗಲಾಟೆ ನಡುವೆ ಕತ್ತಿ ತಾಗಬಹುದು ಎಂದು ಸೊಂಟದಲ್ಲಿದ್ದ ಕತ್ತಿಯನ್ನು ತೆಗೆದು ಕೈನಲ್ಲಿ ಇರಿಸಿಕೊಂಡಿದ್ದಾನೆ ಎನ್ನಲಾಗಿದೆ. ಆಗ ತಹಶೀಲ್ದಾರ್ ಜನರಿಂದ ಸಾಕಷ್ಟು ದೂರದಲ್ಲಿದ್ದರು. ಎಲ್ಲೋ ತಪ್ಪು ಭಾವನೆಯಿಂದ ದೂರು ದಾಖಲಾಗಿರಬಹುದು. 7 ಜನ ರೈತರು 13 ದಿನದಿಂದ ಜೈಲಿನಲ್ಲಿದ್ದಾರೆ. ಬಹುಶಃ ನಾಳೆ ರೈತರು ಹೊರಗೆ ಬರಬಹುದು. ಪ್ರಕರಣ ದಾಖಲಾಗಿರುವುದರಿಂದ ಸರ್ಕಾರದ ಹಂತದಲ್ಲಿ ರೈತರ ಮೇಲೆ ಹಾಕಿರುವ ಕೇಸ್ ಹಿಂದಕ್ಕೆ ತೆಗೆಸಲು ಪ್ರಯತ್ನ ನಡೆಸಲಾಗುತ್ತದೆ ಎಂದು ಹೇಳಿದರು.
ಹಾಲಪ್ಪ ಅಧಿಕಾರದಲ್ಲಿದ್ದಾಗ ನಾನು ಆಡಳಿತದಲ್ಲಿ ಹಸ್ತಕ್ಷೇಪ ಮಾಡಿಲ್ಲ. ಮಾಡಬೇಕಾದ ಕೆಲಸ ಮಾಡದೆ ಈಗ ನನ್ನನ್ನು ಪ್ರಕರಣದಲ್ಲಿ ಎಳೆದು ತರುವುದು ಸರಿಯಲ್ಲ. ಇಂತಹ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳದೆ ಪರಿಹಾರ ಕಂಡುಕೊಳ್ಳುವ ಪ್ರಯತ್ನ ಎಲ್ಲರೂ ಸೇರಿ ಮಾಡಬೇಕು. ಅದನ್ನು ಬಿಟ್ಟು ಬೇರೆಯವರ ಕಡೆ ಬೊಟ್ಟು ತೋರಿಸಬಾರದು ಎಂದು ಅವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Court: ರಾಜ್ಯಕ್ಕೆ ಖನಿಜ ತೆರಿಗೆ ಅಧಿಕಾರ: ಪರಿಶೀಲನ ಅರ್ಜಿ ಸುಪ್ರೀಂ ವಜಾ
Bandipur ಸಫಾರಿ ವೀಕ್ಷಿಸಿದ CJI ಡಿ.ವೈ.ಚಂದ್ರಚೂಡ್: ಕಾಡಾನೆಗಳ ದರ್ಶನ
Dasara: ಶ್ರೀರಂಗಪಟ್ಟಣ ದಸರಾಗೆ ಯಾವುದೇ ತಡವಾಗಿಲ್ಲ: ಸಚಿವ ಚಲುವರಾಯಸ್ವಾಮಿ
Mangaluru: ಒಂದೂವರೆ ಕೋಟಿಗೂ ಅಧಿಕ ಬಿಜೆಪಿ ಸದಸ್ಯತ್ವ ಗುರಿ: ಧೀರಜ್ ಮುನಿರಾಜು
PDOಗಳ ಅನಿರ್ದಿಷ್ಟಾವಧಿ ಧರಣಿ: ರಾಜ್ಯಾದ್ಯಂತ ಗ್ರಾ.ಪಂ. ಸೇವೆ ಸ್ಥಗಿತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.